ಸೆಪ್ಟೆಂಬರ್‌2: ವಿಶ್ವ ತೆಂಗಿನಕಾಯಿ ದಿನ !


Team Udayavani, Sep 2, 2018, 6:00 AM IST

1.jpg

ದಕ್ಷಿಣ ಭಾರತದ ಹೆಚ್ಚಿನ ಅಡುಗೆ ಮನೆಗಳಲ್ಲಿ ಖಾಯಂ ಸ್ಥಾನ ಪಡೆದಿರುವ ತೆಂಗಿನಕಾಯಿಯ ಹಿರಿಮೆ ಬಲು ದೊಡ್ಡದು. ಬೇಕರಿ ತಿನಿಸುಗಳ ಕಲ್ಪನೆಯೇ ಇಲ್ಲದಿದ್ದ ನಮ್ಮ ಬಾಲ್ಯದ ದಿನಗಳಲ್ಲಿ, ಅಮ್ಮಂದಿರು ಒಂದಿಷ್ಟು ಕಾಯಿ ತುರಿಗೆ ಬೆಲ್ಲ ಬೆರೆಸಿ ಸಿಹಿ ಅವಲಕ್ಕಿ ಅಥವಾ  ಉಪ್ಪು-ಖಾರ-ಒಗ್ಗರಣೆ ಬೆರೆಸಿದ ಖಾರದ ಅವಲಕ್ಕಿ ಬೆರೆಸಿ ಕೊಡುತ್ತಿದ್ದರು.  ಅದ್ಬುತವಾದ ರುಚಿಯುಳ್ಳ ತಾಜಾ ತಿನಿಸು ಕೆಲವೇ ನಿಮಿಷದಲ್ಲಿ ಸಿದ್ಧವಾಗುತ್ತಿತ್ತು. ಆ ದಿನಗಳಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭೋರ್ಗರೆಯುವ ಮಳೆಗಾಲದ ದಿನಗಳಲ್ಲಿ ತರಕಾರಿ ಸಿಗದಿದ್ದರೆ  ಅಡುಗೆ ಮಾಡಲು ಚಿಂತೆ ಇರುತ್ತಿರಲಿಲ್ಲ.  ತೆಂಗಿನಕಾಯಿ ತುರಿಗೆ ಆಯ್ಕೆಗೆ ತಕ್ಕಂತೆ ಒಣಮೆಣಸಿನಕಾಯಿ, ಹಸಿರುಮೆಣಸಿನಕಾಯಿ, ಉಪ್ಪು, ಹುಳಿ ಸೇರಿಸಿ ಗಟ್ಟಿಯಾಗಿ ರುಬ್ಬಿ ಒಗ್ಗರಣೆ ಕೊಟ್ಟರೆ ರುಚಿಯಾದ ಚಟ್ನಿ ಸಿದ್ಧ. ಲಭ್ಯತೆಗೆ ತಕ್ಕಂತೆ ಮಾವಿನಕಾಯಿ, ಶುಂಠಿ, ಈರುಳ್ಳಿ, ಕರಿಬೇವಿನಸೊಪ್ಪು, ಹೀರೆಕಾಯಿ, ಹುರಿದ ಕಡಲೇಬೇಳೆ, ಹುರುಳಿಕಾಳು…ಹೀಗೆ ಯಾವುದಾದರೂ ಒಂದನ್ನು ಸೇರಿಸಿದರೆ ಇನ್ನೂ ಸೊಗಸು. ಬಿಸಿಬಿಸಿ ಕುಸುಬಲಕ್ಕಿ ಗಂಜಿಯೊಂದಿಗೆ ಖಾರ ಚಟ್ನಿ, ತುಪ್ಪ ಸೇರಿಸಿ ಉಂಡರೆ ಕರಾವಳಿಗರಿಗೆ ಸ್ವರ್ಗಕ್ಕೆ ಮೂರೇ ಗೇಣು. ಹೀಗೆ ಬಹುವಿಧದ ಸಿಹಿ, ಖಾರ ಅಡುಗೆಗಳಿಗೆ ಹೊಂದಿಕೊಳ್ಳುವ ತೆಂಗಿನಕಾಯಿಂದಾಗಿ “ಇಂಗು - ತೆಂಗು ಇದ್ದರೆ ಮಂಗುವೂ ಅಡುಗೆ ಮಾಡುತ್ತದೆ’ ಎಂಬ ಗಾದೆ  ಸೃಷ್ಟಿಯಾಗಿರಬೇಕು.

ತೆಂಗಿನಕಾಯಿಯ ಎಳನೀರು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಎಳೆಯ ಮಕ್ಕಳಿಗೂ, ಅಶಕ್ತರಿಗೂ ಉತ್ತಮ ಆಹಾರ. ಬೆಳೆದ ಕಾಯಿಯು ಅಡುಗೆಗೆ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ ಆಚರಣೆಗಳಲ್ಲಿ ಹಬ್ಬಹರಿದಿನಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. 
ನೆರೆಯ ರಾಜ್ಯ ಕೇರಳದ ಪ್ರಮುಖ ಆಹಾರ ಹಾಗೂ ವಾಣಿಜ್ಯ ಬೆಳೆ ತೆಂಗು. ಮಲಯಾಳಂ ಭಾಷೆಯಲ್ಲಿ “ಕೇರ’ಎಂದರೆ  ತೆಂಗಿನಮರ ಹಾಗೂ “ಅಲಂ’ ಎಂದರೆ ನಾಡು. ಈ ರಾಜ್ಯವು ತನ್ನ ಭೂಮಿಯಲ್ಲಿ ಬಹಳಷ್ಟು ತೆಂಗಿನ ಮರಗಳನ್ನು ಹೊಂದಿರುವುದ,  ಕೇರಳ’ ಎಂಬ ಹೆಸರು ಪಡೆಯಿತು. ತೆಂಗಿನ ಮರದ ಕಾಂಡ, ಗರಿ, ಕಾಯಿ, ನಾರು, ಕರಟಗಳನ್ನು ಬಳಸಿ  ತಯಾರಿಸುವ ಆಕರ್ಷಕ ಕರಕುಶಲ ಉತ್ಪನ್ನಗಳು ಕೇರಳದಲ್ಲಿ ಪ್ರಸಿದ್ಧ. ಉದಾಹರಣೆಗೆ, ಪೆನ್‌ ಸ್ಟ್ಯಾಂಡ್‌,  ಗೃಹಾಲಂಕಾರ ವಸ್ತುಗಳು,   ವಿವಿಧ ಕಲಾಕೃತಿಗಳು,  ಹುರಿಹಗ್ಗ, ಕಾಲೊರೆಸುವ ಚಾಪೆಗಳು, ಚೀಲಗಳು, ಕರಟದ   ಚಿಪ್ಪಿನ ಆಭರಣಗಳು, ಕ್ಲಿಪ್‌ ಗಳು ಇತ್ಯಾದಿ  ಕೇರಳದ ಅಡುಗೆಗಳಿಗೆ ತೆಂಗಿನೆಣ್ಣೆಯನ್ನೇ ಬಳಸುತ್ತಾರೆ. ತೆಂಗಿನೆಣ್ಣೆಯಲ್ಲಿ ಸಂತೃಪ್ತ  ಕೊಬ್ಬಿನ ಅಂಶ ಜಾಸ್ತಿ ಇದೆಯೆಂದೂ, ಅದು ಹೃದಯಾಘಾತವನ್ನು ಹೆಚ್ಚಿಸುತ್ತದೆಯೆಂದೂ ಇತರ ಖಾದ್ಯತೈಲ ಉತ್ಪಾದಕ ಸಂಸ್ಥೆಗಳು ಪ್ರಚಾರಮಾಡುತ್ತಿವೆ. ಇದರಲ್ಲಿ ಸತ್ಯಾಂಶಕ್ಕಿಂತಲೂ ವ್ಯಾವಹಾರಿಕ ದೃಷ್ಟಿಕೋನವೇ ಹೆಚ್ಚು ಎಂಬುದು ಇತ್ತೀಚೆಗೆ ವೇದ್ಯವಾಗುತ್ತಿದೆ. ತೆಂಗಿನೆಣ್ಣೆಯು ಚರ್ಮದ ಶುಷ್ಕತೆಯನ್ನು ಕಡಿಮೆಮಾಡುವುದರೊಂದಿಗೆ ಕೆಲವು ಸೋಂಕುಗಳನ್ನೂ ನಿವಾರಿಸುವ ಸಾಮರ್ಥ್ಯ ಹೊಂದಿದೆ. ಕೇರಳದ ಹೆಚ್ಚಿನ ಮಂದಿ ಅಡುಗೆಗೂ, ತಲೆ-ಮೈಗೆ ಹಚ್ಚಿಕೊಳ್ಳಲೂ ತೆಂಗಿನ ಎಣ್ಣೆಯನ್ನೇ ಬಳಸಿ ಆರೋಗ್ಯದಿಂದಿರುವುದು ಇದಕ್ಕೆ ಸಾಕ್ಷಿ.

 ಹೀಗೆ ತೆಂಗಿನಮರದ ಪ್ರತಿ ಭಾಗಗಳೂ, ಪ್ರತಿಹಂತದಲ್ಲಿಯೂ  ಉಪಯುಕ್ತವಾಗಿದ್ದು, ಬಯಸಿದ್ದನ್ನೆಲ್ಲ ಕೊಡುವ ಮರ ಎಂಬ ಅರ್ಥದಲ್ಲಿ  ಕಲ್ಪವೃಕ್ಷವೆಂದೂ ಕರೆಯಲ್ಪಡುತ್ತದೆ.  ಏಷ್ಯಾದ ವಿವಿಧ ದೇಶಗಳ  ಆರ್ಥಿಕ ಬೆಳವಣಿಗೆಗೆ ತೆಂಗಿನಕಾಯಿ ಬೆಳೆಯನ್ನು ಪೋ›ತ್ಸಾಹಿಸುವ ನಿಟ್ಟಿನಲ್ಲಿ  ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ,  ಏಷ್ಯಾ-ಫೆಸಿಫಿಕ್‌  ದೇಶಗಳ ತೆಂಗಿನಕಾಯಿ ಸಮುದಾಯ ಮಂಡಳಿಯನ್ನು ರಚಿಸಿ, ಸೆಪ್ಟೆಂಬರ್‌ 2 ರಂದು “ವಿಶ್ವ ತೆಂಗಿನಕಾಯಿ ದಿನ’ ಎಂದು ಘೋಷಿಸಿದ್ದಾರೆ. ಭಾರತದಲ್ಲಿ, ಮುಂಬಯಿ, ಕೊಂಕಣ ಸೀಮೆಗಳ ಸಮುದ್ರ ತೀರದಲ್ಲಿ ವಾಸಿಸುವ ಜನರು, ಶ್ರಾವಣ ಮಾಸದ ಪ್ರಥಮ ಹುಣ್ಣಿಮೆ ದಿನದಂದು, “ನಾರಿಯಲ್‌ ಪೂರ್ಣಿಮಾ’ ಎಂಬ ಹೆಸರಿನಲ್ಲಿ ಸಮುದ್ರವನ್ನು ಪೂಜಿಸಿ ಹೂವು, ಅಕ್ಕಿ ಹಾಗೂ ತೆಂಗಿನಕಾಯಿಗಳನ್ನು ಅರ್ಪಿಸಿ, “ತೆಂಗಿನಕಾಯಿ ದಿನ’ವನ್ನು ಆಚರಿಸುತ್ತಾರೆ.

ಹೇಮಮಾಲಾ ಬಿ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.