ನಕ್ಷತ್ರ ಕೃತಿಕಾ !


Team Udayavani, Sep 9, 2018, 6:00 AM IST

x-1.jpg

“ಬಿಗ್‌ ಬಾಸ್‌’ನಿಂದ ಹೊರಬಂದು ಎರಡು ವರ್ಷಗಳಾಗಿವೆ. ಆದರೂ ರಾಧಾ ಕಲ್ಯಾಣ ಖ್ಯಾತಿಯ ಕೃತಿಕಾ ರವೀಂದ್ರ ಯಾವೊಂದು ಸಿನೆಮಾದಲ್ಲೂ ಕಾಣಿಸಿಕೊಳ್ಳಲಿಲ್ಲ. ಇನ್ನು “ಬಿಗ್‌ ಬಾಸ್‌’ ಮನೆಗೆ ಹೋಗುವ ಮುನ್ನ ಅವರು ಒಪ್ಪಿದ್ದ  ಕೆಂಗುಲಾಬಿ ಎಂಬ ಮಹಿಳಾ ಪ್ರಧಾನ ಸಿನೆಮಾ ಸಹ ಬಿಡುಗಡೆಯಾಗಲಿಲ್ಲ. ಸಹಜವಾಗಿಯೇ ಕೃತಿಕಾ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗಳು ಕಾಡಿದ್ದು ಸುಳ್ಳಲ್ಲ. ಈಗ ಆ ಎಲ್ಲಾ ಪ್ರಶ್ನೆಗಳಿಗೆ ಕೃತಿಕಾ ಕೊನೆಗೂ ಉತ್ತರ ಕೊಟ್ಟಿದ್ದಾರೆ.

ಕೃತಿಕಾ ಇದೀಗ ಸದ್ದಿಲ್ಲದೆ ಎರಡು ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಚಿತ್ರಗಳು ಬಿಡುಗಡೆಯಾಗುವುದಕ್ಕೆ ಅಣಿಯಾಗುತ್ತಿವೆ. ಮೊದಲನೆಯದು ಕಿರಣ್‌ ಗೋವಿ ನಿರ್ದೇಶನದ ಯಾರಿಗುಂಟು ಯಾರಿಗಿಲ್ಲ. ಒರಟ ಪ್ರಶಾಂತ್‌ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಕೃತಿಕಾ ಮೊದಲ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆಗೆ ಲೇಖಚಂದ್ರ ಮತ್ತು ಅದಿತಿ ರಾವ್‌ ಸಹ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಕೃತಿಕಾ, ಶಾರ್ದೂಲ ಎಂಬ ಚಿತ್ರದಲ್ಲೂ ನಟಿಸಿದ್ದಾರೆ.  ಶಾರ್ದೂಲ ಚಿತ್ರವನ್ನು ಅರವಿಂದ್‌ ಕೌಶಿಕ್‌ ನಿರ್ದೇಶಿಸಿದ್ದು, ಈ ಚಿತ್ರದ ಚಿತ್ರೀಕರಣವೂ ಮುಗಿದು, ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ನಡೆಯುತ್ತಿವೆ. ಇನ್ನು ಹಲವಾರು ಸಮಸ್ಯೆಗಳನ್ನೆದುರಿಸಿದ ಕೆಂಗುಲಾಬಿ ಚಿತ್ರ ಮುಗಿದಿದ್ದು, ಅದೂ ಸಹ ಬಿಡುಗಡೆಯ ಹಂತದಲ್ಲಿದೆ. ಎಲ್ಲ ಅಂದುಕೊಂಡಂತೆ ಆದರೆ, ಮುಂದಿನ ಆರು ತಿಂಗಳುಗಳಲ್ಲಿ ಕೃತಿಕಾ ಅಭಿನಯದ ಮೂರು ಚಿತ್ರಗಳು ಬಿಡುಗಡೆಯಾಗುತ್ತವೆ.

“ಬಿಗ್‌ ಬಾಸ್‌’ ಮನೆಯಿಂದ ಬಂದ ಮೇಲೆ ಕೃತಿಕಾಗೆ ಹಿರಿತೆರೆಗೆ ಹೋಗಬೇಕೋ, ಕಿರುತೆರೆಯಲ್ಲಿ ಮುಂದುವರೆಯಬೇಕೋ ಎಂಬ ಜಿಜ್ಞಾಸೆ ಕಾಡಿತ್ತಂತೆ. ಏಕೆಂದರೆ, ಅಷ್ಟರಲ್ಲಾಗಲೇ ಕೃತಿಕಾ ಕಿರುತೆರೆಯಲ್ಲಿ ದೊಡ್ಡ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ರಾಧಾ ಕಲ್ಯಾಣ ಮತ್ತು ಮನೆ ಮಗಳುವಿನಂಥ ಯಶಸ್ವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲ, ರಾಧೆ ಎಂದೇ ಜನಪ್ರಿಯರಾಗಿದ್ದವರು. ಹೀಗಿರುವಾಗ ಅಂತಹ ಗೊಂದಲ ಕಾಡುವುದು ಸಹಜವೇ. ಕೊನೆಗೆ ಸಾಕಷ್ಟು ಯೋಚನೆ ಮಾಡಿದ ನಂತರ ಅವರು ಹಿರಿತೆರೆಯಲ್ಲೇ ಮುಂದುವರೆಯುವುದಕ್ಕೆ ತೀರ್ಮಾನಿಸಿದ್ದಾರೆ. ಹಾಗೆ ನೋಡಿದರೆ, ಅವರಿಗೆ ಹಿರಿತೆರೆ ಹೊಸದೇನಲ್ಲ. ಕೆಂಗುಲಾಬಿ ಚಿತ್ರಕ್ಕೂ ಕೆಲವು ವರ್ಷಗಳ ಮುನ್ನವೇ ಪಟ್ರೆ ಲವ್ಸ್‌ ಪದ್ಮ ಎಂಬ ಚಿತ್ರದಲ್ಲಿ ಕೃತಿಕಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಆ ನಂತರ ಕಿರುತೆರೆಗೆ ಜಂಪ್‌ ಆಗಿದ್ದರು. ಈಗ ಹಿರಿತೆರೆಯಲ್ಲೇ ಮುಂದುವರೆಯುವುದಕ್ಕೆ ತೀರ್ಮಾನಿಸಿದ್ದಾರೆ.

ಹಾಗಾದರೆ, ಕೃತಿಕಾ ಕಿರುತೆರೆಯಲ್ಲಿ ಕಾಣಿಸಿಕೊಳ್ಳುವುದಿಲ್ಲವಾ? ಸದ್ಯಕ್ಕಿಲ್ಲ ಎಂಬ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಜೊತೆಗೆ ಅಭಿನಯಿಸಿರುವ ಮೂರು ಚಿತ್ರಗಳ ಬಿಡುಗಡೆಗೆ ಅವರು ಎದುರು ನೋಡುತ್ತಿದ್ದಾರೆ. ಈ ಮೂರೂ ಚಿತ್ರಗಳ ಬಗ್ಗೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೆಂಗುಲಾಬಿ ಚಿತ್ರದಲ್ಲಿ ಅವರದ್ದು ಉತ್ತರ ಕರ್ನಾಟಕದ ಹುಡುಗಿಯ ಪಾತ್ರವಂತೆ. ಮೊದಲ ಬಾರಿಗೆ ವಯಸ್ಸಿಗೆ ಮೀರಿದ ಪಾತ್ರವನ್ನು ಅವರು ಆ ಚಿತ್ರದಲ್ಲಿ ನಿರ್ವಹಿಸಿದ್ದಾರೆ. ಇನ್ನು ಉಳಿದ ಎರಡೂ ಚಿತ್ರಗಳು ಬೇರೆ ಬೇರೆ ಬ್ಯಾನರ್‌ಗೆ ಸೇರಿದ್ದವಾಗಿದ್ದು, ಆ ಚಿತ್ರಗಳಲ್ಲೂ ಬಹಳ ಒಳ್ಳೆಯ ಪಾತ್ರಗಳಿವೆಯಂತೆ.

ಪಟ್ರೆ ಲವ್ಸ್‌ ಪದ್ಮ ಚಿತ್ರದ ಮೂಲಕ ಚಿಕ್ಕ ವಯಸ್ಸಿಗೇ ಕನ್ನಡ ಚಿತ್ರರಂಗಕ್ಕೆ ಬಂದ ಕೃತಿಕಾ, ಈಗ ಇಲ್ಲೊಂದಿಷ್ಟು ಹೆಸರು ಮಾಡುವುದಕ್ಕೆ ಎದುರು ನೋಡುತ್ತಿದ್ದಾರೆ. ಅವರ ಆಸೆ, ಕನಸುಗಳೆಲ್ಲಾ ಮೂರು ಚಿತ್ರಗಳ ಮೇಲೆ ನಿಂತಿದೆ. ಅವರ ಕನಸುಗಳೆಲ್ಲಾ ನನಸಾಗುತ್ತದಾ ಎಂಬ ಪ್ರಶ್ನೆ, ಈ ಮೂರು ಚಿತ್ರಗಳು ಬಿಡುಗಡೆಯಾಗುವವರೆಗೂ ಕಾಯಬೇಕು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.