ಆಶಿಕಾ ಕೇ ಲಿಯೇ


Team Udayavani, Sep 23, 2018, 6:00 AM IST

s-1.jpg

ಆಶಿಕಾ ರಂಗನಾಥ್‌ ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ತಾಯಿಗೆ ತಕ್ಕ ಮಗ ಸಿನೆಮಾ. ಹೌದು, ಆಶಿಕಾ, ತಾಯಿಗೆ ತಕ್ಕ ಮಗ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ಹಾಡೊಂದರಲ್ಲಿ ಆಶಿಕಾ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದು, ಈಗ ಆ ಹಾಡಿನ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿದೆ. ಜಯಂತ್‌ ಕಾಯ್ಕಿಣಿ ಸಾಹಿತ್ಯದಲ್ಲಿ ಮೂಡಿಬಂದ ಹೃದಯಕೆ ಹೆದರಿಕೆ… ಹೀಗೆ ನೋಡಿದರೆ… ಹುಡುಕುತಾ ಬರುವೆಯಾ ಹೇಳದೇ ಹೋದರೆ… ಎಂಬ ಹಾಡಿಗೆ ವ್ಯಕ್ತವಾಗುತ್ತಿರುವ ಮೆಚ್ಚುಗೆಯಿಂದ ಆಶಿಕಾ ಖುಷಿಯಾಗಿದ್ದಾರೆ. ಈ ಹಿಂದೆ ಶರಣ್‌ ನಾಯಕರಾಗಿದ್ದ “ರ್‍ಯಾಂಬೋ-2′ ಚಿತ್ರದಲ್ಲೂ ಆಶಿಕಾ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದರು. ಈಗ ತಾಯಿಗೆ ತಕ್ಕ ಮಗನ ಸರದಿ.  ವಿಲ್ಲಾವೊಂದರಲ್ಲಿ ಈ ಹಾಡನ್ನು ಚಿತ್ರೀಕರಿಸಲಾಗಿದೆ. ಶಶಾಂಕ್‌ ನಿರ್ದೇಶನದ ಈ ಚಿತ್ರದಲ್ಲಿ ಅಜೇಯ್‌ ರಾವ್‌ ನಾಯಕರಾಗಿದ್ದಾರೆ. ಈಗಾಗಲೇ ಈ ಜೋಡಿಯ ಹಿಂದಿನ ಸಿನೆಮಾಗಳು ಹಿಟ್‌ ಆಗಿರುವ ಮೂಲಕ ತಾಯಿಗೆ ತಕ್ಕ ಮಗ ಬಗ್ಗೆಯೂ ನಿರೀಕ್ಷೆ ಇದೆ. ಅದೇ ನಿರೀಕ್ಷೆಯಲ್ಲಿ ಆಶಿಕಾ ಕೂಡ ಎದುರು ನೋಡುತ್ತಿದ್ದಾರೆ.

ಕ್ರೇಜಿಬಾಯ್‌ ಚಿತ್ರದ ಮೂಲಕ ನಾಯಕಿಯಾದ ಆಶಿಕಾ ಆ ನಂತರ ಕನ್ನಡದಲ್ಲಿ ಮಾಸ್‌ ಲೀಡರ್‌, ಮುಗುಳುನಗೆ, ರಾಜು ಕನ್ನಡ ಮೀಡಿಯಂ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ತಾಯಿಗೆ ತಕ್ಕ ಮಗನ ಸರದಿ. ಕ್ರೇಜಿಬಾಯ್‌ ನಂತರ ತನಗೆ ಒಂದೆರಡು ಸಿನೆಮಾ ಸಿಗಬಹುದಷ್ಟೇ ಎಂದುಕೊಂಡಿದ್ದರಂತೆ ಆಶಿಕಾ. ಕ್ರೇಜಿಬಾಯ್‌ ಆದ ಮೇಲೆ ಒಂದು ಸಿನೆಮಾ ಸಿಗಬಹುದೇನೋ ಅಂದುಕೊಂಡಿದ್ದೆ. ಆದರೆ, ಈಗ ಒಳ್ಳೆಯ ಅವಕಾಶಗಳು ಸಿಗುತ್ತಿವೆ. ಒಂದೊಂದು ಅವಕಾಶಗಳ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕೆಂಬ ಆಸೆ ನನ್ನದು. ರಾತ್ರೋರಾತ್ರಿ ಬರುವ ಯಶಸ್ಸು ಶಾಶ್ವತವಲ್ಲ ಎಂದು ನಂಬಿದವಳು ನಾನು ಎಂದು ತಮ್ಮ ಜರ್ನಿ ಬಗ್ಗೆ ಹೇಳುತ್ತಾರೆ ಆಶಿಕಾ. ಆಶಿಕಾಗೆ ಅವರ  ವಯಸ್ಸಿಗೆ ತಕ್ಕುದಾದ ಪಾತ್ರಗಳೇ ಬರುತ್ತಿವೆಯಂತೆ. ಕಾಲೇಜು ಹುಡುಗಿ, ತರಲೆ, ತಮಾಷೆಯ ಪಾತ್ರಗಳು ಸಿಗುತ್ತಿರುವುದರಿಂದ ಆಶಿಕಾ ಕೂಡ ಖುಷಿಯಾಗಿದ್ದಾರೆ. ಕೆಲವು ನಟ-ನಟಿಯರು ಸಿನೆಮಾಕ್ಕೆ ಬರಬೇಕೆಂದು ಪ್ರಯತ್ನಿಸಿ ಬರುತ್ತಾರೆ. ಇನ್ನು ಕೆಲವರು ಸಿಗುವ ಅವಕಾಶವನ್ನು ಮಿಸ್‌ ಮಾಡಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಬರುತ್ತಾರೆ. ಅದೇ ರೀತಿ ಆಶಿಕಾಗೆ ಅವಕಾಶ ಸಿಕ್ಕಿ ಬಂದವರು. ಒಂದು ವೇಳೆ ಚಿತ್ರರಂಗಕ್ಕೆ ಬರದಿದ್ದರೆ ಆಶಿಕಾ ಏನಾಗುತ್ತಿದ್ದರು ಎಂದರೆ ಡಾಕ್ಟರ್‌ ಎಂಬ ಉತ್ತರ ಅವರಿಂದ ಬರುತ್ತದೆ.  ಅವರಿಗೆ ಡಾಕ್ಟರ್‌ ಆಗಬೇಕೆಂಬ ಆಸೆ ಇತ್ತಂತೆ. ಒಂದು ವೇಳೆ ಅದು ಸಾಧ್ಯವಾಗದೇ ಇದ್ದರೆ ಡ್ಯಾನ್ಸ್‌ ಕ್ಷೇತ್ರದಲ್ಲೆ ಏನಾದರೂ ಮಾಡಿಕೊಂಡು ಇರುತ್ತಿದ್ದರಂತೆ. 

“ನನಗೆ ಡ್ಯಾನ್ಸ್‌ ಎಂದರೆ ತುಂಬಾ ಇಷ್ಟ. ಬೇರೆ ಬೇರೆ ಡ್ಯಾನ್ಸ್‌ ಪ್ರಕಾರಗಳನ್ನು ಕಲಿಯೋದೆಂದರೆ ನನಗೆ ತುಂಬಾ ಇಷ್ಟ’ ಎನ್ನುವ ಆಶಿಕಾ, ಸದ್ಯ ತಾಯಿಗೆ ತಕ್ಕ ಮಗ ನಿರೀಕ್ಷೆಯಲ್ಲಿರುವುದು ಸುಳ್ಳಲ್ಲ. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.