ಪಾರುಲ್‌ ಬಟರ್‌ಫ್ಲೈ ಕನಸು


Team Udayavani, Oct 7, 2018, 6:00 AM IST

1.jpg

ಪಾರುಲ್‌ ಯಾದವ್‌ ಅವರ ಸಿನೆಮಾ ಬಿಡುಗಡೆಯಾಗಿ ಎರಡು ವರ್ಷ ಕಳೆದಿದೆ. ಜೆಸ್ಸಿ  ನಂತರ ಪಾರುಲ್‌ ನಟನೆಯ ಯಾವ ಕನ್ನಡ ಚಿತ್ರವೂ ಬಿಡುಗಡೆಯಾಗಿರಲಲ್ಲ. ಈಗ ಪಾರುಲ್‌ ದೊಡ್ಡ ಮಟ್ಟದಲ್ಲಿ ಕನ್ನಡಕ್ಕೆ ಬರಲು ಸಿದ್ಧರಾಗಿದ್ದಾರೆ. ಅದು ಬಟರ್‌ಫ್ಲೈ ಮೂಲಕ. ಪಾರುಲ್‌ ಯಾದವ್‌ ಬಟರ್‌ಫ್ಲೈ ಎಂಬ ಸಿನೆಮಾ ಒಪ್ಪಿಕೊಂಡಿರೋದು ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಹಿಂದಿಯಲ್ಲಿ ಯಶಸ್ಸು ಕಂಡ ಕ್ವೀನ್‌ ಚಿತ್ರದ ರೀಮೇಕ್‌ ಇದಾಗಿದ್ದು, ಕಂಗನಾ ಮಾಡಿದ ಪಾತ್ರವನ್ನು ಪಾರುಲ್‌ ಮಾಡುತ್ತಿದ್ದಾರೆ. ಬಟರ್‌ಫ್ಲೈ ಚಿತ್ರದ ಮೇಲೆ ಪಾರುಲ್‌ಗೆ ಸಿಕ್ಕಾಪಟ್ಟೆ ಪ್ರೀತಿ. ಅದಕ್ಕೆ ಎರಡು ಕಾರಣ. ಮೊದಲನೆಯದಾಗಿ ತುಂಬಾ ಭಿನ್ನವಾದ ಪಾತ್ರ ಪಾರುಲ್‌ಗೆ ಸಿಕ್ಕಿರುವುದು ಒಂದಾದರೆ, ಪಾರುಲ್‌ ಈ ಚಿತ್ರದ ಸಹ ನಿರ್ಮಾಪಕಿ ಕೂಡ. ಈ ಎಲ್ಲಾ ಕಾರಣಗಳಿಂದ ಪಾರುಲ್‌ ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಬಟರ್‌ಫ್ಲೈಗೆ ಸಮಯ ನೀಡಿದ್ದಾರೆ. 

ಎಲ್ಲಾ ಓಕೆ, ಪಾರುಲ್‌ ಬಟರ್‌ಫ್ಲೈ ಬಿಟ್ಟು ಬೇರೆ ಯಾವ ಸಿನೆಮಾವೂ ಯಾಕೆ ಒಪ್ಪಿಕೊಳ್ಳಲಿಲ್ಲ ಎಂದು ನೀವು ಕೇಳಬಹುದು. ಪಾರುಲ್‌ ಈ ಸಿನೆಮಾ ಒಪ್ಪಿಕೊಳ್ಳುವಾಗಲೇ ಒಂದು ವಿಚಾರದಲ್ಲಿ ಪಕ್ಕಾ ಆಗಿದ್ದರಂತೆ. ಅದು ಬೇರೆ ಸಿನೆಮಾಗಳಿಗೆ ತೊಂದರೆ ಆಗಬಾರದೆಂದು. “ನಾನು ಯಾವುದಾದರೂ ಬೇರೆ ಸಿನೆಮಾವನ್ನು ಒಪ್ಪಿಕೊಂಡರೆ ಅವರು ಕೇಳಿದಾಗ ಡೇಟ್ಸ್‌ ಕೊಡಬೇಕು, ಶೂಟಿಂಗ್‌ಗೆ ಹೋಗಬೇಕು. ಇಲ್ಲದಿದ್ದರೆ ಅವರಿಗೆ ತೊಂದರೆಯಾಗುತ್ತದೆ. ನನ್ನಿಂದ ಯಾರೂ ತೊಂದರೆ ಅನುಭವಿಸೋದು ನನಗೆ ಇಷ್ಟವಿಲ್ಲ. ಆ ಕಾರಣದಿಂದಲೇ ಬಟರ್‌ಫ್ಲೈ ಮುಗಿಯುವವರೆಗೆ ಯಾವ ಚಿತ್ರವನ್ನು ಒಪ್ಪಿಕೊಳ್ಳಲಿಲ್ಲ’ ಎನ್ನುವುದು ಪಾರುಲ್‌ ಕೊಡುವ ಸ್ಪಷ್ಟನೆ.

ಬಟರ್‌ಫ್ಲೈ ಚಿತ್ರದಲ್ಲಿ ಪಾರುಲ್‌, ಪಾರ್ವತಿ ಎಂಬ ಪಾತ್ರ ಮಾಡಿದ್ದಾರೆ. ಗೋಕರ್ಣದ ಹುಡುಗಿಯಾಗಿ ಕಾಣಿಸಿಕೊಂಡಿರುವ ಪಾರುಲ್‌ಗೆ, ಈ ಚಿತ್ರ ಅದ್ಭುತ ಅನುಭವ ನೀಡಿತಂತೆ. ಇವತ್ತಿನ ಕಾಲದ ಎಲ್ಲಾ ಹೆಣ್ಣುಮಕ್ಕಳ ಪ್ರತೀಕವಾಗಿ ಪಾರ್ವತಿ ಪಾತ್ರ ಕಾಣಿಸಿಕೊಳ್ಳಲಿದೆ ಎಂಬುದು ಪಾರುಲ್‌ ಮಾತು. ಆರಂಭದಲ್ಲಿ ಈ ಚಿತ್ರವನ್ನು ಕನ್ನಡಕ್ಕೆ ತರುವಾಗ ತಾನು ನಾಯಕಿಯಾಗುತ್ತೇನೆಂಬುದು ಪಾರುಲ್‌ಗೆ ಗೊತ್ತಿರಲಿಲ್ಲವಂತೆ. ಆದರೆ, ನಿರ್ದೇಶಕ ರಮೇಶ್‌ ಅರವಿಂದ್‌ ಹಾಗೂ ತಂಡ ಹೇಳಿದ ಮೇಲೆ ನಟಿಸಲು ಒಪ್ಪಿದರಂತೆ ಪಾರುಲ್‌. ಸದ್ಯ ಪಾರುಲ್‌ ಬಟರ್‌ಫ್ಲೈ ಧ್ಯಾನದಲ್ಲಿದ್ದಾರೆ. ಇದೇ ತಿಂಗಳು ಚಿತ್ರದ ಪೋಸ್ಟರ್‌ ಬಿಡುಗಡೆಯಾಗಲಿದೆ. ಆ ನಂತರ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.