ಪುಟ್ಟ ಕತೆ: ನೆರಳು


Team Udayavani, Oct 21, 2018, 6:00 AM IST

7.jpg

ಆ ಸಂತನ ದರ್ಶನ ಮಾತ್ರದಿಂದಲೇ ದೇವತೆಗಳಿಗೂ ಆನಂದವಾಗುತ್ತಿತ್ತು. ಅವನ ಉದಾತ್ತ ವ್ಯಕ್ತಿತ್ವ ಹೀಗಿತ್ತು. ಯಾವನೇ ವ್ಯಕ್ತಿಯ ಹಿಂದಿನ ಕೃತ್ಯಗಳನ್ನು ಮರೆಯುತ್ತಿದ್ದ, ಈಗ ಅವರು ಹೇಗಿದ್ದಾರೆಂಬುದನ್ನಷ್ಟೆ  ಗಮನಿಸುತ್ತಿದ್ದ. ಪ್ರತಿಯೊಬ್ಬರ ತೋರ್ಪಡಿಕೆಯ ಮೂಲಕ್ಕಿಳಿದು ಮುಗ್ಧತೆ ವಿರಾಜಿಸುತ್ತಿದ್ದ ಅವರ ಅಸ್ತಿತ್ವದ ಕೇಂದ್ರವನ್ನಷ್ಟೇ ಗಮನಕ್ಕೆ ತೆಗೆದುಕೊಳ್ಳುತ್ತಿದ್ದ. ಹೀಗಾಗಿ ತಾನು ಕಂಡ ಪ್ರತಿಯೊಬ್ಬನನ್ನೂ ಪ್ರೀತಿಸುತ್ತಿದ್ದ ಹಾಗೂ ಕ್ಷಮಿಸುತ್ತಿದ್ದ. ಇದನ್ನೆಲ್ಲ ಅವನು ಮಹಾಕಾರ್ಯ ವೆಂದು ಭಾವಿಸಿಯೂ ಇರಲಿಲ್ಲ. ಅವನಿದ್ದುದೇ ಹಾಗೆ !

ಒಂದು ದಿನ ಒಬ್ಬ ದೇವತೆ ಅವನ ಮುಂದೆ ಪ್ರತ್ಯಕ್ಷಳಾಗಿ, “”ದೇವರು ನನ್ನನ್ನು ಕಳಿಸಿ ಕೊಟ್ಟಿದ್ದಾನೆ. ಯಾವುದಾದರೂ ವರ ಕೇಳಿಕೋ. ರೋಗ ಪರಿಹಾರದ ವರ ಕೊಡಲಾ?” ಎಂದು ಕೇಳಿದಳು.

“”ಬೇಡ, ದೇವರೇ ಆ ಕೆಲಸ ಮಾಡಲಿ”.
“”ಪಾಪಿಗಳನ್ನು ಸರಿದಾರಿಗೆ ತರುವ ಸಾಮರ್ಥ್ಯ ಕೊಡಲಾ?”
“”ಬೇಡ, ಮಾನವ ಹೃದಯಗಳನ್ನು ಸ್ಪರ್ಶಿಸುವ ಕೆಲಸ ನನ್ನದಲ್ಲ, ದೇವತೆಗಳದು”
“”ಸದ್ಗುಣದ ಮಾದರಿ ಪುರುಷನಾಗಿ ಇತರರನ್ನು ಪ್ರೇರಿಸುವ ಶಕ್ತಿ?”
“”ಬೇಡ, ಹಾಗಾಗಿ ಬಿಟ್ಟರೆ ನಾನು ಆಕರ್ಷಣೆಯ ಕೇಂದ್ರವಾದೇನು?”
“”ಮತ್ತೇನು ವರ ಕೊಡಲಿ?”
“”ದೇವರ ದಯೆಯಿಂದ ನಾನು ಬಯಸಿದ್ದೆಲ್ಲ ನನಗೆ ಸಿಕ್ಕಿದೆ”.
“”ಅದಾಗದು, ಏನಾದರೂ ಪವಾಡದ ಶಕ್ತಿಗಾಗಿ ಕೇಳಲೇಬೇಕು ನೀನು”- ದೇವತೆ ಒತ್ತಾಯಿಸಿದಳು.
“”ಹಾಗಿದ್ದರೆ, ನನ್ನ ಅರಿವಿಗೆ ಬಾರದಂತೆಯೇ ಇತರರಿಗೆ ಒಳಿತನ್ನೆಸಗುವಂತಾಗಲಿ”.
ಒಪ್ಪಿದ ದೇವತೆ, ಅವನಿಗೆ ಕೊಟ್ಟ ವರ ಬಹಳ ವಿಚಿತ್ರವಾದುದು. ಅವನ ನೆರಳು, ಅದು ಬೆನ್ನ ಹಿಂದೆ ಇರುವಷ್ಟು ಹೊತ್ತು ಅದಕ್ಕೊಂದು ದಿವ್ಯ ಶಕ್ತಿ ಇರುತ್ತಿತ್ತು. ಆ ನೆರಳಿನ ವ್ಯಾಪ್ತಿಯಲ್ಲಿದ್ದ ನೆಲ ಫ‌ಲವತ್ತಾಗುತ್ತಿತ್ತು. ನೆರಳು ಯಾವ ರೋಗಿಗಳ ಮೇಲೆ ಬೀಳುತ್ತಿತ್ತೋ ಅವರು ಗುಣಮುಖರಾಗುತ್ತಿದ್ದರು. ನೆರಳು ಬಿದ್ದಲ್ಲೆಲ್ಲ ನೀರ ಚಿಲುಮೆಗಳು ಚಿಮ್ಮುತ್ತಿದ್ದವು. ದುಃಖೀಗಳ ಮುಖಕ್ಕೆ ಅವನ ನೆರಳು ಬಿದ್ದರೆ ಸಾಕು, ಅವರ ಮುಖದಲ್ಲಿ ಖುಷಿಯ ರಂಗು ಹೊಮ್ಮತೊಡಗುತ್ತಿತ್ತು.

ಆದರೆ, ಈ ಯಾವ ಪವಾಡವೂ ಆ ಸಂತನ ಅರಿವಿಗೆ ಬರಲೇ ಇಲ್ಲ. ಕಾರಣ, ಜನರ ಗಮನ ಕೇವಲ ಸಂತನ ನೆರಳ ಮೇಲಿತ್ತು; ಅವನ ಮೇಲಲ್ಲ. ಅವರು ಅವನ ನೆರಳಿನಿಂದ ಉಪಕೃತರಾದರು. ಅವನನ್ನು ಮಾತ್ರ ಮರೆತೇಬಿಟ್ಟರು. ಅವನು ಬಯಸಿದ್ದುದೂ ಅದೇ ತಾನೆ?

ಎಸ್‌ಎನ್‌

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian paradise flycatcher: ಚೋಟುದ್ದ ಹಕ್ಕಿಗೆ ಮಾರುದ್ದ ಬಾಲ!

Indian paradise flycatcher: ಚೋಟುದ್ದ ಹಕ್ಕಿಗೆ ಮಾರುದ್ದ ಬಾಲ!

Puneeth Rajkumar: ಅಪ್ಪು ಎಂಬ ಅಯಸ್ಕಾಂತ..

Puneeth Rajkumar: ಅಪ್ಪು ಎಂಬ ಅಯಸ್ಕಾಂತ..

Wood pecker Bird: ಹೊಂಬೆನ್ನಿನ ಹಕ್ಕಿಯ  ಜೊತೆ ತಂಪಾದ ಸಂಜೆ

Wood pecker Bird: ಹೊಂಬೆನ್ನಿನ ಹಕ್ಕಿಯ  ಜೊತೆ ತಂಪಾದ ಸಂಜೆ

Empowerment: ಬಾಳು ಬೆಳಗಿದ ಬಾಳೆ!

Empowerment: ಬಾಳು ಬೆಳಗಿದ ಬಾಳೆ!

Facebook: ಅರ್ಧಗಂಟೆಯ ಬಿಕ್ಕಟ್ಟಿಗೆ ಕಾಲ ಸ್ತಂಭಿಸಿತು!

Facebook: ಅರ್ಧಗಂಟೆಯ ಬಿಕ್ಕಟ್ಟಿಗೆ ಕಾಲ ಸ್ತಂಭಿಸಿತು!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.