ಟಾಮ್‌ ಗರ್ಲ್ ಧನ್ಸಿಕಾ


Team Udayavani, Oct 28, 2018, 6:00 AM IST

z-1.jpg

ನೀವು ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಕಬಾಲಿ ಚಿತ್ರವನ್ನು ಏನಾದರೂ ನೋಡಿದ್ದರೆ, ಈಕೆಯನ್ನೂ ನೋಡಿರುತ್ತೀರಿ. ಕಬಾಲಿ  ಚಿತ್ರದಲ್ಲಿ ರಜನೀಕಾಂತ್‌ ಪುತ್ರಿಯಾಗಿ ಟಾಮ್‌ ಗರ್ಲ್ ಲುಕ್‌ನಲ್ಲಿ ಮಿಂಚಿ, ಸಿನಿಪ್ರಿಯರನ್ನು ಸೆಳೆದಿದ್ದ ಈಕೆಯ ಹೆಸರು ಸಾಯಿ ಧನ್ಸಿಕಾ. ತಮಿಳುನಾಡಿನ ತಂಜಾವೂರು ಮೂಲದ ಧನ್ಸಿಕಾ ಕುಟುಂಬ ನಂತರ ಸೆಟಲ್‌ ಆಗಿದ್ದು ಚೆನ್ನೈನಲ್ಲಿ. ಇನ್ನು ಧನ್ಸಿಕಾ ಹುಟ್ಟಿದ್ದು, ಬೆಳೆದದ್ದು, ಓದಿದ್ದು ಎಲ್ಲವೂ ಚೆನ್ನೈನಲ್ಲಿಯೆ. ಇಂತಿಪ್ಪ ಧನ್ಸಿಕಾ ಈಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಅದು ಉದ^ರ್ಷ ಸಿನಿಮಾ ಮೂಲಕ.  ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದ ಈ ಚಿತ್ರದಲ್ಲಿ ಧನ್ಸಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದ್ದು, ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.  ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಕಥಾಹಂದರವಿರುವ ಉದ^ರ್ಷ  ಚಿತ್ರದಲ್ಲಿ ರೇಷ್ಮಾ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಮೊದಲ ಕನ್ನಡ ಚಿತ್ರ ಉದ^ರ್ಷ ದ ಬಗ್ಗೆ ಸಾಕಷ್ಟು ಭರವಸೆಯ ಮಾತುಗಳನ್ನಾಡುತ್ತಿರುವ ಧನ್ಸಿಕಾ, “ಕನ್ನಡ ಚಿತ್ರರಂಗದ ಬಗ್ಗೆ ನನಗೆ ಅಷ್ಟಾಗಿ ಗೊತ್ತಿರಲಿಲ್ಲ. ಇತ್ತೀಚೆಗೆ ಅದರ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ. ಭವಿಷ್ಯದಲ್ಲಿ ಒಳ್ಳೆಯ ಕಥೆ, ಸುನೀಲ್‌ ಕುಮಾರ್‌ ದೇಸಾಯಿ ಅವರಂಥ ಒಳ್ಳೆಯ ನಿರ್ದೇಶಕರು ಸಿಕ್ಕರೆ ಖಂಡಿತ ಇನ್ನಷ್ಟು ಕನ್ನಡ ಚಿತ್ರಗಳಲ್ಲಿ ಅಭಿನಯಿಸುತ್ತೇನೆ’ ಎನ್ನುತ್ತಾರೆ. ಒಟ್ಟಾರೆ ಅರಳು ಹುರಿದಂತೆ ಮಾತನಾಡುವ ಈ ಹುಡುಗಿಯ ಅಭಿನಯ ಕನ್ನಡ ಪ್ರೇಕ್ಷಕರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಎಂದು ಗೊತ್ತಾಗಬೇಕಾದರೆ, ಧನ್ಸಿಕಾ ಮೊದಲ ಚಿತ್ರ ಉದ^ರ್ಷ  ತೆರೆಗೆ ಬರಬೇಕು. 

 ಇನ್ನು ಧನ್ಸಿಕಾ ಕುಟುಂಬ ಮೊದಲಿನಿಂದಲೂ ತಮಿಳು ಚಿತ್ರರಂಗದ ಹಲವರೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡಿತ್ತು. “ಬಹುಶಃ ಇದೇ ಕಾರಣದಿಂದಲೊ ಏನೋ ನಾನು 16ನೇ ವಯಸ್ಸಿನಲ್ಲಿರುವಾಗಲೇ, ತಮಿಳಿನ ತಿರುಡಿ, ಮನತೊಂಡು ಮಜೈಕಲಂ ಚಿತ್ರಗಳಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿತು. ಮೊದಲೆರಡು ಚಿತ್ರಗಳೇ ನನಗೆ ಸಾಕಷ್ಟು ಹೆಸರನ್ನು ತಂದುಕೊಟ್ಟವು. ಸಿನಿಮಾರಂಗಕ್ಕೆ ಬರಬೇಕು ಎಂಬುದು ನನ್ನ ಆರಂಭದ ಕನಸಾಗಿರಲಿಲ್ಲ. ಇಲ್ಲಿ ಬಂದಿದ್ದು, ನಟಿಯಾಗಿದ್ದು ಎಲ್ಲವೂ ಆಕಸ್ಮಿಕ. ನಾನು ನಟಿಯಾಗದಿದ್ದರೆ, ಇಷ್ಟೊತ್ತಿಗಾಗಲೇ ಒಳ್ಳೆಯ ಕ್ರೀಡಾಪಟುವಾಗಿರುತ್ತಿದ್ದೆ’ ಎನ್ನುತ್ತಾರೆ ಸಾಯಿ ಧನ್ಸಿಕಾ.

ಒಮ್ಮೆ ಧನ್ಸಿಕಾ “ಚಲನಚಿತ್ರ ಪ್ರದರ್ಶನ’ (ಫಿಲಂ ಎಕ್ಸಿಬಿಷನ್‌) ಕ್ಕೆ ಮನೆಯವರೊಂದಿಗೆ ಚೆನ್ನೈನ ಆಡಿಟೋರಿಯಂ ಒಂದಕ್ಕೆ ಹೋಗಿದ್ದಾಗ, ನಿರ್ದೇಶಕ ಎಸ್‌.ಪಿ ಜನನಾಥನ್‌ ಅವರ ಕಣ್ಣಿಗೆ ಬಿದ್ದರು. ಧನ್ಸಿಕಾ ಅವರ ಚಲನಶೀಲ ಓಡಾಟವನ್ನು ಸೂಕ್ಷ್ಮವಾಗಿ ಗಮನಿಸಿದ ಎಸ್‌. ಪಿ. ಜನನಾಥನ್‌, “ನನ್ನ ಸಿನಿಮಾದಲ್ಲಿ ನಿನಗೊಂದು ಪಾತ್ರವಿದೆ. ಮಾಡುತ್ತೀಯಾ..?’ ಎಂದು ಕೇಳಿದರಂತೆ. ಅದಾಗಲೇ ತಮಿಳು ಚಿತ್ರರಂಗದಲ್ಲಿ ಒಂದಷ್ಟು ಹೆಸರು ಮಾಡಿದ್ದ ಜನನಾಥನ್‌ ಅವರ ಮಾತಿಗೆ ಒಪ್ಪಿದ ಧನ್ಸಿಕಾ ಪೆರನ್‌ಮೈ ಚಿತ್ರದಲ್ಲಿ ಅಭಿನಯಿಸಿದರು. ಈ ಚಿತ್ರದಲ್ಲಿ ಜೆನ್ನಿಫ‌ರ್‌ ಎಂಬ ಪಾತ್ರದಲ್ಲಿ ಅಭಿನಯಿಸಿದ್ದ ಧನ್ಸಿಕಾ ಚಿತ್ರರಂಗದಿಂದ, ಸಿನಿಪ್ರಿಯರಿಂದ ಸಾಕಷ್ಟು ಮೆಚ್ಚುಗೆ ಪಡೆದುಕೊಂಡರು. ಅದಾದ ಬಳಿಕ ನಿಲ್‌ ಗವನಿ ಸೆಲ್ಲಾಟೈ, ಆರವಾನ್‌, ಪರದೇಶಿ, ಯಾಯಾ, ತಿರಂತೀಡು ಸೀಸೈ, ಕಬಾಲಿ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ಧನ್ಸಿಕಾ ಅವರನ್ನು ಹುಡುಕಿಕೊಂಡು ಬಂದವು. ಚಿತ್ರರಂಗಕ್ಕೆ ಕಾಲಿಟ್ಟ ಹನ್ನೆರಡು ವರ್ಷಗಳಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿರುವ ಧನ್ಸಿಕಾ, ಸದ್ಯ ತಮಿಳು ಮಾತ್ರವಲ್ಲದೆ ತೆಲುಗು, ಕನ್ನಡ, ಮಲೆಯಾಳ ಚಿತ್ರಗಳಲ್ಲೂ ನಿಧಾನವಾಗಿ ಬೇಡಿಕೆ ಪಡೆದುಕೊಳ್ಳುತ್ತಿದ್ದಾರೆ. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.