ರಂಜಿನಿಯ ರಾಗವು


Team Udayavani, Dec 2, 2018, 6:00 AM IST

s-2.jpg

ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ  ಪುಟ್ಟ ಗೌರಿ ಮದುವೆ ಧಾರಾವಾಹಿ ನೋಡಿದವರಿಗೆ ಖಂಡಿತ ಈ ಹುಡುಗಿಯ ಮುಖ ಪರಿಚಯ ಇದ್ದೇ ಇರುತ್ತದೆ. ಹೌದು, ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ಗೌರಿ ಪಾತ್ರದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಪ್ರೇಕ್ಷಕರನ್ನು ಟಿವಿ ಮುಂದೆ ತನ್ನ ಅಭಿನಯದ ಮೂಲಕ ಹಿಡಿದು ಕೂರಿಸಿ, ರಂಜಿಸಿದ್ದ ಈ ಚೆಲುವೆಯ ಹೆಸರು ರಂಜನಿ ರಾಘವನ್‌. ಸದ್ಯ ಪುಟ್ಟ ಗೌರಿ ಮದುವೆ ಧಾರಾವಾಹಿಯಲ್ಲಿ ಹೊಸ ಕಥಾಹಂದರವೊಂದು ಸೇರ್ಪಡೆಯಾಗಿದ್ದು, ಜೊತೆಗೆ ಧಾರಾವಾಹಿಗೆ ಕೆಲವೊಂದು ತಿರುವುಗಳು ಸಿಕ್ಕು ಒಂದಷ್ಟು ಬದಲಾವಣೆಗಳಾಗಿರುವುದರಿಂದ, ಇನ್ನು ಮುಂದೆ ಈ ಧಾರಾವಾಹಿಯಲ್ಲಿ ಗೌರಿ ಪಾತ್ರದಲ್ಲಿ ರಂಜನಿ ರಾಘವನ್‌ ಕಾಣಿಸಿಕೊಳ್ಳುತ್ತಿಲ್ಲ. ಇದೇ ವೇಳೆ ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡಿರುವ ರಂಜನಿ ಮುಂದಿನ ದಿನಗಳಲ್ಲಿ ದೊಡ್ಡ ಪರದೆಯಲ್ಲಿ ಸೆಕೆಂಡ್‌ ಇನ್ನಿಂಗ್ಸ್‌ ಆರಂಭಿಸುವ ಖುಷಿಯಲ್ಲಿದ್ದಾರೆ.

ಬೆಂಗಳೂರು ಮೂಲದ ರಂಜನಿ ರಾಘವನ್‌ ಸಂಪ್ರದಾಯಸ್ಥ ಕುಟುಂಬದ ಹುಡುಗಿ. ತಂದೆ ಪ್ರತಿಷ್ಠಿತ ಬಿಇಎಲ್‌ ಸಂಸ್ಥೆಯ ಉದ್ಯೋಗಿ. ತಾಯಿ ಗೃಹಿಣಿ. ತಂಗಿ ಇನ್ನೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಲಾ ವಿದರ ಕುಟುಂಬದ ಹಿನ್ನೆಲೆ ಇಲ್ಲದಿದ್ದರೂ, ಮನೆಯಲ್ಲಿ ಯಾರೂ ಕಲಾವಿದರಲ್ಲದಿದ್ದರೂ ಅಭಿನಯದ ಕಡೆಗಿದ್ದ ಆಸಕ್ತಿ ರಂಜನಿ ಅವರನ್ನು ಕಿರುತೆರೆಗೆ ಕರೆದುತಂದಿತು. ಒಮ್ಮೆ ಕಾಲೇಜ್‌ಗೆ ಹೋಗುತ್ತಿದ್ದಾಗ ಕಾಲೇಜ್‌ ಹತ್ತಿರವೇ ಹಿರಿಯ ನಿರ್ದೇಶಕ ಟಿ. ಎಸ್‌. ನಾಗಾಭರಣ ಅವರ ಧಾರಾವಾಹಿಯೊಂದಕ್ಕೆ ಪಬ್ಲಿಕ್‌ ಆಡಿಷನ್‌ ನಡೆಯುತ್ತಿತ್ತು. ಯಾರೂ ಬೇಕಾದರೂ ಈ ಆಡಿಷನ್‌ನಲ್ಲಿ ಭಾಗವಹಿಸಬಹುದಾಗಿದ್ದರಿಂದ, ಸ್ನೇಹಿತರ ಒತ್ತಾಯದ ಮೇರೆಗೆ ರಂಜನಿ ಕೂಡ ಆಡಿಷನ್‌ನಲ್ಲಿ ಭಾಗವಹಿಸಿದ್ದರು. ಅವಕಾಶ ಸಿಗಬಹುದೋ, ಇಲ್ಲವೋ… ಎಂಬ ಅನುಮಾನದಿಂದಲೇ ಆಡಿಷನ್‌ನಲ್ಲಿ ಭಾಗವಹಿಸಿದ್ದ ರಂಜನಿ ಆ ಧಾರಾವಾಹಿಯ ಪಾತ್ರವೊಂದಕ್ಕೆ ಆಯ್ಕೆಯಾದರು. ಹೀಗೆ ಅಭಿನಯಕ್ಕೆ ಅಡಿಯಿಟ್ಟ ರಂಜನಿಗೆ ದೊಡ್ಡ ಹೆಸರು ಮತ್ತು ಖ್ಯಾತಿ ತಂದು ಕೊಟ್ಟಿದ್ದು ಪುಟ್ಟ ಗೌರಿ ಮದುವೆ.

ಸುಮಾರು ಮೂರೂವರೆ ವರ್ಷಗಳ ಕಾಲ ಗೌರಿ ಪಾತ್ರವನ್ನು ನಿರ್ವಹಿಸಿದ್ದ ರಂಜನಿ, ನಮ್ಮ ಮನೆಮಗಳು ಎನ್ನುವಷ್ಟರ ಮಟ್ಟಿಗೆ ನೋಡುಗರಿಗೆ ಹತ್ತಿರವಾಗಿದ್ದರು. ಈ ಧಾರಾವಾಹಿಯ ನಡುವೆಯೇ ರಾಜಹಂಸ ಎಂಬ ಚಿತ್ರದಲ್ಲಿ ಅಭಿನಯಿಸಿದ್ದ ರಂಜನಿ, ಹಿರಿತೆರೆಯನ್ನೂ ಸಮರ್ಥವಾಗಿ ನಿರ್ವಹಿಸಬಲ್ಲೆ ಎಂಬುದನ್ನು ತೋರಿಸಿದ್ದರು. ರಾಜಹಂಸ ಚಿತ್ರ ಬಾಕ್ಸಾಫೀಸ್‌ನಲ್ಲಿ ಗೆಲ್ಲದಿದ್ದರೂ, ಚಿತ್ರದ ಬಗ್ಗೆ ಮತ್ತು ರಂಜನಿ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯ ಕಿರುತೆರೆಯಿಂದ ಹಿರಿತೆರೆಯತ್ತ ಮುಖ ಮಾಡಿರುವ ರಂಜನಿ, ಟಕ್ಕರ್‌ ಎಂಬ ಚಿತ್ರದಲ್ಲಿ ನಾಯಕ ನಟಿಯಾಗಿ ಅಭಿನಯಿಸುತ್ತಿದ್ದಾರೆ. ಇನ್ನೂ ಒಂದೆರಡು ಚಿತ್ರಗಳು ಮಾತುಕತೆ ಹಂತದಲ್ಲಿದ್ದು, ಇದೇ ವರ್ಷಾಂತ್ಯಕ್ಕೆ ಆ ಚಿತ್ರಗಳೂ ಘೋಷಣೆಯಾಗುವ ಸಾಧ್ಯತೆ ಇದೆ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ  ಮಾತನಾಡುವ ರಂಜನಿ ರಾಘವನ್‌, ಕಿರುತೆರೆ ನನಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟು ನನ್ನನ್ನು ಗುರುತಿಸುವಂತೆ ಮಾಡಿದೆ. ಸದ್ಯ ನನ್ನ ಭವಿಷ್ಯವನ್ನು ಚಿತ್ರರಂಗದಲ್ಲಿ ರೂಪಿಸಿಕೊಳ್ಳುವ ಯೋಚನೆಯಿದೆ. ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.