ಮೊಟ್ಟೆ ಸಮೋಸಾ


Team Udayavani, Oct 11, 2017, 12:35 PM IST

11-32.jpg

ಈರುಳ್ಳಿ ಸಮೋಸಾ, ಆಲೂಗೆಡ್ಡೆ ಸಮೋಸಾದ ಬಗ್ಗೆ ಎಲ್ಲರಿಗೂ ಗೊತ್ತು. ಮೊಟ್ಟೆ ಸಮೋಸಾದ ಬಗ್ಗೆ ಗೊತ್ತುಂಟಾ? ಹಸಿ ಹಾಗೂ ಬೇಯಿಸಿದ ಮೊಟ್ಟೆಯನ್ನು ಬಳಸಿ ರುಚಿರುಚಿಯಾದ ಸಮೋಸಾ ತಯಾರಿಸುವುದು ಹೇಗೆ ಎಂಬುದರ ವಿವರಣೆ ಇಲ್ಲಿದೆ. ಒಟ್ಟು ಮೂರು ವಿಭಿನ್ನ ವಿಧಾನಗಳಲ್ಲಿ ಮೊಟ್ಟೆ ಸಮೋಸವನ್ನು ತಯಾರಿಸಬಹುದು. ಆ ಮೂರೂ ವಿಧಾನಗಳೂ ಇಲ್ಲಿವೆ…

1)
ಬೇಕಾದ ಸಾಮಗ್ರಿಗಳು:
3 ತಾಜಾ ಹಸಿ ಮೊಟ್ಟೆಗಳು, 2 ದೊಡ್ಡ ಗಾತ್ರದ ಈರುಳ್ಳಿ, ಚಿಟಿಕೆ ಉಪ್ಪು, ಅರ್ಧ ಸ್ಪೂನ್‌ ಖಾರಪುಡಿ, 200 ಗ್ರಾಂ ಮೈದಾಹಿಟ್ಟು, 5 ಗ್ರಾಂ ಶೇಂಗಾ ಎಣ್ಣೆ, 3ಗ್ರಾಂ ಜೀರಿಗೆ, 3 ಗ್ರಾಂ ಸಾಸಿವೆ, ಕರಿಯಲು 1ಲೀಟರ್‌ ಎಣ್ಣೆ .

ಮಾಡುವ ವಿಧಾನ:
ಮೊಟ್ಟೆಗಳನ್ನು ಒಡೆದು ರಸವನ್ನು ಬಾಣಲೆಯಲ್ಲಿ ಸಂಗ್ರಹಿಸಿ ಚೆನ್ನಾಗಿ ಕಟೆದುಕೊಳ್ಳಿ. ಈರುಳ್ಳಿಗಳನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಬಾಣಲೆಯಲ್ಲಿ ಶೇಂಗಾ ಎಣ್ಣೆ ಕಾಯಿಸಿ ಅದಕ್ಕೆ ಜೀರಿಗೆ ಸಾಸಿವೆ ಒಗ್ಗರಣೆ ಹಾಕಿ. ಅವು ಸಿಡಿಯತೊಡಗಿದಾಗ, ಹೆಚ್ಚಿಕೊಂಡ ಈರುಳ್ಳಿ ತುಂಡುಗಳನ್ನು ಹಾಕಿ  ಮೆತ್ತಗಾಗುವವರೆಗೆ ಬಾಡಿಸಿ. ಅದಕ್ಕೆ ಮೊಟ್ಟೆರಸ ಸೇರಿಸಿ ಚೆನ್ನಾಗಿ ಕದಡಿ. ಮೊಟ್ಟೆಯ ಅಂಶ ಗಟ್ಟಿಯಾಗುವವರೆಗೆ ತಿರುವಿಕೊಳ್ಳಿ. ಮೈದಾಹಿಟ್ಟನ್ನು ನೀರು ಸೇರಿಸಿ ಪೂರಿಯ ಹದಕ್ಕೆ ನಾದಿಕೊಳ್ಳಿ. ನಂತರ ಹಿಟ್ಟನ್ನು ಉಂಡೆ ಮಾಡಿ ಪೂರಿಯ ಅಗಲಕ್ಕೆ ಲಟ್ಟಿಸಿಕೊಂಡು ಅದರಲ್ಲಿ ಮೇಲೆ ತಯಾರಿಸಿದ ಮೊಟ್ಟೆ ರಸಾಯನವನ್ನು ಇಟ್ಟು ಸಮೋಸಾ ರೀತಿಯಲ್ಲಿ ತ್ರಿಕೋನಾಕಾರದಲ್ಲಿ ಮಡಚಿಕೊಳ್ಳಿ. ಅಗಲವಾದ ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಅದರಲ್ಲಿ ಸಮೋಸಾಗಳನ್ನು ಹದವಾಗಿ ಕರಿದುಕೊಳ್ಳಿ. ತಯಾರಿಸಿದ ಸಮೋಸಾಗಳನ್ನು ಪುದೀನ ಚಟ್ನಿಯೊಂದಿಗೆ ಸಾಯಂಕಾಲದ ಚಹದೊಂದಿಗೆ ಸವಿಯಿರಿ.

2)
ಬೇಕಾದ ಸಾಮಗ್ರಿಗಳು: ಬೇಯಿಸಿ ಸಿಪ್ಪೆ ತೆಗೆದ 3 ಮೊಟ್ಟೆಗಳು, 2 ಮಧ್ಯಮ ಗಾತ್ರದ ಈರುಳ್ಳಿಗಳು, 3 ಹಸಿಮೆಣಸಿನಕಾಯಿ, 5 ಗ್ರಾಂ ಶೇಂಗಾ ಎಣ್ಣೆ, 3ಗ್ರಾಂ ಜೀರಿಗೆ, ರುಚಿಗೆ ತಕ್ಕಷ್ಟು ಉಪ್ಪು, 200ಗ್ರಾಂ ಮೈದಾಹಿಟ್ಟು, ಕರಿಯಲು ಎಣ್ಣೆ.

ಮಾಡುವ ವಿಧಾನ: ಮೊಟ್ಟೆ ಮತ್ತು ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಹಸಿಮೆಣಸಿನಕಾಯಿಗಳನ್ನು ಹೆಚ್ಚಿ ಅದರ ಬೀಜ ತೆಗೆಯಿರಿ. ಮೈದಾ ಹಿಟ್ಟನ್ನು ಪೂರಿಯ ಹದಕ್ಕೆ ನಾದಿಕೊಳ್ಳಿ. ಶೇಂಗಾ ಎಣ್ಣೆಯನ್ನು ಕಾಯಲು ಇಟ್ಟು ಕಾದ ನಂತರ ಜೀರಿಗೆ ಒಗ್ಗರಣೆ ಹಾಕಿ. ಅದಕ್ಕೆ ಹೆಚ್ಚಿಕೊಂಡ ಮೊಟ್ಟೆ, ಈರುಳ್ಳಿ ಸೇರಿಸಿ ಉಪ್ಪು ಹಾಕಿ ಹದವಾಗಿ ಬೇಯಿಸಿ.
ಮೈದಾ ಹಿಟ್ಟನ್ನು ಪೂರಿ ಆಕಾರಕ್ಕೆ ಲಟ್ಟಿಸಿ ಅದರ ಮೇಲೆ ಬೇಯಿಸಿದ ಮೊಟ್ಟೆ ರಸಾಯನವನ್ನು ಇಟ್ಟು ಸಮೋಸದ ಆಕಾರದಲ್ಲಿ ಮಡಚಿ ಅಗಲವಾದ ತಟ್ಟೆಯಲ್ಲಿ ಎಣ್ಣೆ ಕಾಯಿಸಿ ಅದರಲ್ಲಿ ಸಮೋಸಗಳನ್ನು ಕರಿಯಿರಿ.

3)
ಬೇಕಾದ ಸಾಮಗ್ರಿಗಳು:
ಬೇಯಿಸಿ ಸಿಪ್ಪೆ ತೆಗೆದ 3 ಮೊಟ್ಟೆಗಳು, 5ಗ್ರಾಂ ಖಾರಪುಡಿ, 2 ದೊಡ್ಡ ಗಾತ್ರದ ಈರುಳ್ಳಿಗಳು, 5 ಗ್ರಾಂ ಶೇಂಗಾ ಎಣ್ಣೆ, 3 ಗ್ರಾಂ ಜೀರಿಗೆ, ರುಚಿಗೆ ತಕ್ಕಷ್ಟು ಉಪ್ಪು, 250ಗ್ರಾಂ ಮೈದಾ ಹಿಟ್ಟು, ಕರಿಯಲು ಎಣ್ಣೆ.

ಮಾಡುವ ವಿಧಾನ:
ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಮೊಟ್ಟೆಗಳನ್ನು ಎಗ್‌ ಸ್ಲೆ„ಸರ್‌ನಲ್ಲಿ ಸ್ಲೆ„ಸ್‌ ಮಾಡಿಕೊಳ್ಳಿ. ಮೈದಾ ಹಿಟ್ಟನ್ನು ಪೂರಿ ಹದಕ್ಕೆ ನಾದಿಕೊಳ್ಳಿ. ಶೇಂಗಾ ಎಣ್ಣೆಯನ್ನು ಕಾಯಿಸಿ ಜೀರಿಗೆ ಒಗ್ಗರಣೆ ಹಾಕಿ ಅದಕ್ಕೆ ಹೆಚ್ಚಿದ ಈರುಳ್ಳಿ, ಖಾರಪುಡಿ, ಉಪ್ಪು ಸೇರಿಸಿ ಹದವಾಗಿ ಬೇಯಿಸಿ ಈರುಳ್ಳಿ ಪಲ್ಯ ತಯಾರಿಸಿರಿ. ನಾದಿಕೊಂಡ ಮೈದಾ ಹಿಟ್ಟನ್ನು ಪೂರಿಯ     ಆಕಾರಕ್ಕೆ ಲಟ್ಟಿಸಿಕೊಳ್ಳಿ. ಅದರ ಮೇಲೆ ಸ್ವಲ್ಪ ಈರುಳ್ಳಿ ಪಲ್ಯ ಹರಡಿ, ಅದರ ಮೇಲೆ ಮೊಟ್ಟೆ ಸ್ಲೆ„ಸ್‌ ಇಡಿ. ಅದರ ಮೇಲೆ ಮತ್ತೆ ಸ್ವಲ್ಪ ಈರುಳ್ಳಿ ಪಲ್ಯ ಹರಡಿ ಸಮೋಸಾ ಆಕಾರಕ್ಕೆ ಮಡಚಿ ಎಣ್ಣೆಯಲ್ಲಿ ಕಾಯಿಸಿ. ಆನಂತರ ಕಾದ ಎಣ್ಣೆಯಲ್ಲಿ ಸಮೋಸಾಗಳನ್ನು ಗರಿಗರಿಯಾಗಿ ಕರಿಯಿರಿ.

ಶರಣಾಂಬಾ ಬ. ಹುಡೇದಗಡ್ಡಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.