ಬಾಳೆ ವೈವಿಧ್ಯ


Team Udayavani, Oct 25, 2017, 12:00 PM IST

cooking-rasayana.jpg

ಹಸಿವು ನೀಗಬೇಕಾದರೆ, ಜೀರ್ಣಕ್ರಿಯೆ ಸುಲಲಿತ ಆಗಬೇಕಾದರೆ ದಿನವೂ ಒಂದೆರಡು ಬಾಳೆಹಣ್ಣು ತಿನ್ನಬೇಕು. ಬೆಳಗ್ಗಿನ ವೇಳೆ ಚಳಿ ಇರುತ್ತೆ. ಆಗ ಬಾಳೆಹಣ್ಣು ತಿನ್ನಲು ಬೋರ್‌ ಅನ್ನುವವರು ಶಿರಾ ಮಾಡಿಕೊಂಡು, ಬನಾನಾ ಪೂರಿ ಮಾಡಿಕೊಂಡು “ಬಾಳೆಯೊಂದಿಗೆ ಬಾಳ್ವೆ’ ನಡೆಸಬಹುದು. ಬಿಸಿಲಿನ ಸಂದರ್ಭದಲ್ಲಾದರೆ ಬಾಳೆಹಣ್ಣಿನ ರಸಾಯನ ಅಥವಾ ಬಾಳೆಹಣ್ಣಿನ ಮಿಲ್ಕ್ಶೇಕ್‌ ಮಾಡಿಕೊಂಡು ಸಂಭ್ರಮಿಸಬಹುದು. 

1. ಬಾಳೆಹಣ್ಣಿನ ಮಿಲ್ಕ್ಶೇಕ್‌
ಬೇಕಾಗುವ ಸಾಮಗ್ರಿ: ಬಾಳೆಹಣ್ಣು – 2,  ಸಕ್ಕರೆ- ಅರ್ಧ ಕಪ್‌, ಏಲಕ್ಕಿ ಪುಡಿ ಅರ್ಧ ಚಮಚ, ಹಾಲು- 3 ಕಪ್‌

ಮಾಡುವ ವಿಧಾನ: ಬಾಳೆಹಣ್ಣನ್ನು ತುಂಡುಗಳನ್ನಾಗಿ ಮಾಡಿ ಹಾಲು, ಏಲಕ್ಕಿ ಪುಡಿ, ಸಕ್ಕರೆ ಸೇರಿಸಿ ಗ್ರೈಂಡ್‌ ಮಾಡಿ. ಐಸ್‌ಕ್ಯೂಬ್‌ ಹಾಕಿ ಕುಡಿಯಿರಿ. 

2. ಬಾಳೆಹಣ್ಣಿನ ಶಿರಾ
ಬೇಕಾಗುವ ಸಾಮಗ್ರಿ:
 ರವೆ- 1 ಕಪ್‌, ಬಾಳೆಹಣ್ಣು- 2, ಸಕ್ಕರೆ- 1 ಕಪ್‌, ದ್ರಾಕ್ಷಿ, ಗೋಡಂಬಿ-2 ಚಮಚ, ಬಾದಾಮಿ- 10, ಕೇಸರಿ ಬಣ್ಣ- 2 ಚಿಟಿಕೆ, ತುಪ್ಪ- 2 ಕಪ್‌, ಏಲಕ್ಕಿಪುಡಿ- ಅರ್ಧ ಚಮಚ.

ಮಾಡುವ ವಿಧಾನ: ಬಾಣಲೆಯಲ್ಲಿ ತುಪ್ಪ ಹಾಕಿ ರವೆಯನ್ನು ಘಮ್‌ ಎನ್ನುವವರೆಗೆ ಹುರಿದುಕೊಳ್ಳಿ. ಅದಕ್ಕೆ, ಹೆಚ್ಚಿದ ಬಾಳೆಹಣ್ಣಿನ ತುಂಡುಗಳನ್ನು ಹಾಕಿ, ಅದಕ್ಕೆ ಬಿಸಿನೀರು, ದ್ರಾಕ್ಷಿ-ಗೋಡಂಬಿ- ಬಾದಾಮಿ ಹಾಕಿ ಚೆನ್ನಾಗಿ ಕುದಿಸಿ. ಮಿಶ್ರಣಕ್ಕೆ ಸಕ್ಕರೆ ಸೇರಿಸಿ ಸಣ್ಣ ಉರಿಯಲ್ಲಿ 2 ನಿಮಿಷ ಕುದಿಸಿ. ಈ ಮಿಶ್ರಣಕ್ಕೆ ಕೇಸರಿಯನ್ನು ಸೇರಿಸಿ. ಕಡಿಮೆ ಉರಿಯಲ್ಲಿ ಐದು ನಿಮಿಷ ಬೇಯಿಸಿದರೆ ಶಿರಾ ರೆಡಿ.

3. ಬಾಳೆಹಣ್ಣಿನ ರಸಾಯನ
ಬೇಕಾಗುವ ಸಾಮಗ್ರಿ: ಬಾಳೆಹಣ್ಣು -2, ಬೆಲ್ಲ-1 ಕಪ್‌, ಏಲಕ್ಕಿಪುಡಿ- ಅರ್ಧ ಚಮಚ, ಕಾಯಿತುರಿ- 1 ಕಪ್‌.

ಮಾಡುವ ವಿಧಾನ: ಬಾಳೆಹಣ್ಣನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಅದಕ್ಕೆ ಬೆಲ್ಲದ ಪುಡಿ, ಏಲಕ್ಕಿಪುಡಿ ಸೇರಿಸಿ ಕೂಡಿಸಿ. ನಂತರ ಅದಕ್ಕೆ ಕಾಯಿತುರಿಯನ್ನು ಸೇರಿಸಿ ಸವಿಯಿರಿ. ಬೇಕಿದ್ದರೆ ಇದಕ್ಕೆ ಗೋಡಂಬಿ, ಬಾದಾಮಿಯನ್ನು ಹಾಕಬಹುದು.

4. ಬನಾನಾ ಪೂರಿ
ಬೇಕಾಗುವ ಸಾಮಗ್ರಿ: ಬಾಳೆಹಣ್ಣು – 2, ಸಕ್ಕರೆ- ಅರ್ಧ ಕಪ್‌, ಗೋಧಿ ಹಿಟ್ಟು- 1 ಕಪ್‌, ಮೈದಾಹಿಟ್ಟು- 1 ಕಪ್‌, ತುಪ್ಪ- 2 ಚಮಚ, ಗಟ್ಟಿ ಮೊಸರು- ಅರ್ಧ ಕಪ್‌, ಉಪ್ಪು ಚಿಟಿಕೆ, ಕರಿಯಲು ಎಣ್ಣೆ

ಮಾಡುವ ವಿಧಾನ: ಮೊದಲು ಬಾಳೆಹಣ್ಣಿನ ತುಂಡುಗಳನ್ನು ಸಕ್ಕರೆಯೊಂದಿಗೆ ಚೆನ್ನಾಗಿ ಬೆರೆಸಿ. ಇದಕ್ಕೆ ಮೈದಾ- ಗೋಧಿಹಿಟ್ಟು, ಮೊಸರು, ತುಪ್ಪ, ಉಪ್ಪು ಹಾಕಿ ಚೆನ್ನಾಗಿ ಕಲಸಿ ನಾದಿಕೊಳ್ಳಿ. ಈ ಹಿಟ್ಟನ್ನು 2 ಗಂಟೆಗಳ ಕಾಲ ಹಾಗೇ ಬಿಡಿ. ನಂತರ ಮತ್ತೆ ಚೆನ್ನಾಗಿ ನಾದಿಕೊಳ್ಳಿ. ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ. ಒಂದೊಂದೇ ಹಿಟ್ಟಿನ ಉಂಡೆಯನ್ನು ಪೂರಿ ಹಾಳೆಯಂತೆ ಲಟ್ಟಿಸಿ, ಕಾದ ಎಣ್ಣೆಯಲ್ಲಿ ಕೆಂಪಗೆ ಗರಿಗರಿಯಾಗಿ ಕರಿಯಿರಿ.

– ಶ್ರುತಿ ಕೆ.ಎಸ್‌., ತುರುವೇಕೆರೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.