ಬಾಳೆ ವೈವಿಧ್ಯ


Team Udayavani, Oct 25, 2017, 12:00 PM IST

cooking-rasayana.jpg

ಹಸಿವು ನೀಗಬೇಕಾದರೆ, ಜೀರ್ಣಕ್ರಿಯೆ ಸುಲಲಿತ ಆಗಬೇಕಾದರೆ ದಿನವೂ ಒಂದೆರಡು ಬಾಳೆಹಣ್ಣು ತಿನ್ನಬೇಕು. ಬೆಳಗ್ಗಿನ ವೇಳೆ ಚಳಿ ಇರುತ್ತೆ. ಆಗ ಬಾಳೆಹಣ್ಣು ತಿನ್ನಲು ಬೋರ್‌ ಅನ್ನುವವರು ಶಿರಾ ಮಾಡಿಕೊಂಡು, ಬನಾನಾ ಪೂರಿ ಮಾಡಿಕೊಂಡು “ಬಾಳೆಯೊಂದಿಗೆ ಬಾಳ್ವೆ’ ನಡೆಸಬಹುದು. ಬಿಸಿಲಿನ ಸಂದರ್ಭದಲ್ಲಾದರೆ ಬಾಳೆಹಣ್ಣಿನ ರಸಾಯನ ಅಥವಾ ಬಾಳೆಹಣ್ಣಿನ ಮಿಲ್ಕ್ಶೇಕ್‌ ಮಾಡಿಕೊಂಡು ಸಂಭ್ರಮಿಸಬಹುದು. 

1. ಬಾಳೆಹಣ್ಣಿನ ಮಿಲ್ಕ್ಶೇಕ್‌
ಬೇಕಾಗುವ ಸಾಮಗ್ರಿ: ಬಾಳೆಹಣ್ಣು – 2,  ಸಕ್ಕರೆ- ಅರ್ಧ ಕಪ್‌, ಏಲಕ್ಕಿ ಪುಡಿ ಅರ್ಧ ಚಮಚ, ಹಾಲು- 3 ಕಪ್‌

ಮಾಡುವ ವಿಧಾನ: ಬಾಳೆಹಣ್ಣನ್ನು ತುಂಡುಗಳನ್ನಾಗಿ ಮಾಡಿ ಹಾಲು, ಏಲಕ್ಕಿ ಪುಡಿ, ಸಕ್ಕರೆ ಸೇರಿಸಿ ಗ್ರೈಂಡ್‌ ಮಾಡಿ. ಐಸ್‌ಕ್ಯೂಬ್‌ ಹಾಕಿ ಕುಡಿಯಿರಿ. 

2. ಬಾಳೆಹಣ್ಣಿನ ಶಿರಾ
ಬೇಕಾಗುವ ಸಾಮಗ್ರಿ:
 ರವೆ- 1 ಕಪ್‌, ಬಾಳೆಹಣ್ಣು- 2, ಸಕ್ಕರೆ- 1 ಕಪ್‌, ದ್ರಾಕ್ಷಿ, ಗೋಡಂಬಿ-2 ಚಮಚ, ಬಾದಾಮಿ- 10, ಕೇಸರಿ ಬಣ್ಣ- 2 ಚಿಟಿಕೆ, ತುಪ್ಪ- 2 ಕಪ್‌, ಏಲಕ್ಕಿಪುಡಿ- ಅರ್ಧ ಚಮಚ.

ಮಾಡುವ ವಿಧಾನ: ಬಾಣಲೆಯಲ್ಲಿ ತುಪ್ಪ ಹಾಕಿ ರವೆಯನ್ನು ಘಮ್‌ ಎನ್ನುವವರೆಗೆ ಹುರಿದುಕೊಳ್ಳಿ. ಅದಕ್ಕೆ, ಹೆಚ್ಚಿದ ಬಾಳೆಹಣ್ಣಿನ ತುಂಡುಗಳನ್ನು ಹಾಕಿ, ಅದಕ್ಕೆ ಬಿಸಿನೀರು, ದ್ರಾಕ್ಷಿ-ಗೋಡಂಬಿ- ಬಾದಾಮಿ ಹಾಕಿ ಚೆನ್ನಾಗಿ ಕುದಿಸಿ. ಮಿಶ್ರಣಕ್ಕೆ ಸಕ್ಕರೆ ಸೇರಿಸಿ ಸಣ್ಣ ಉರಿಯಲ್ಲಿ 2 ನಿಮಿಷ ಕುದಿಸಿ. ಈ ಮಿಶ್ರಣಕ್ಕೆ ಕೇಸರಿಯನ್ನು ಸೇರಿಸಿ. ಕಡಿಮೆ ಉರಿಯಲ್ಲಿ ಐದು ನಿಮಿಷ ಬೇಯಿಸಿದರೆ ಶಿರಾ ರೆಡಿ.

3. ಬಾಳೆಹಣ್ಣಿನ ರಸಾಯನ
ಬೇಕಾಗುವ ಸಾಮಗ್ರಿ: ಬಾಳೆಹಣ್ಣು -2, ಬೆಲ್ಲ-1 ಕಪ್‌, ಏಲಕ್ಕಿಪುಡಿ- ಅರ್ಧ ಚಮಚ, ಕಾಯಿತುರಿ- 1 ಕಪ್‌.

ಮಾಡುವ ವಿಧಾನ: ಬಾಳೆಹಣ್ಣನ್ನು ಸಣ್ಣಗೆ ಹೆಚ್ಚಿಕೊಳ್ಳಿ. ಅದಕ್ಕೆ ಬೆಲ್ಲದ ಪುಡಿ, ಏಲಕ್ಕಿಪುಡಿ ಸೇರಿಸಿ ಕೂಡಿಸಿ. ನಂತರ ಅದಕ್ಕೆ ಕಾಯಿತುರಿಯನ್ನು ಸೇರಿಸಿ ಸವಿಯಿರಿ. ಬೇಕಿದ್ದರೆ ಇದಕ್ಕೆ ಗೋಡಂಬಿ, ಬಾದಾಮಿಯನ್ನು ಹಾಕಬಹುದು.

4. ಬನಾನಾ ಪೂರಿ
ಬೇಕಾಗುವ ಸಾಮಗ್ರಿ: ಬಾಳೆಹಣ್ಣು – 2, ಸಕ್ಕರೆ- ಅರ್ಧ ಕಪ್‌, ಗೋಧಿ ಹಿಟ್ಟು- 1 ಕಪ್‌, ಮೈದಾಹಿಟ್ಟು- 1 ಕಪ್‌, ತುಪ್ಪ- 2 ಚಮಚ, ಗಟ್ಟಿ ಮೊಸರು- ಅರ್ಧ ಕಪ್‌, ಉಪ್ಪು ಚಿಟಿಕೆ, ಕರಿಯಲು ಎಣ್ಣೆ

ಮಾಡುವ ವಿಧಾನ: ಮೊದಲು ಬಾಳೆಹಣ್ಣಿನ ತುಂಡುಗಳನ್ನು ಸಕ್ಕರೆಯೊಂದಿಗೆ ಚೆನ್ನಾಗಿ ಬೆರೆಸಿ. ಇದಕ್ಕೆ ಮೈದಾ- ಗೋಧಿಹಿಟ್ಟು, ಮೊಸರು, ತುಪ್ಪ, ಉಪ್ಪು ಹಾಕಿ ಚೆನ್ನಾಗಿ ಕಲಸಿ ನಾದಿಕೊಳ್ಳಿ. ಈ ಹಿಟ್ಟನ್ನು 2 ಗಂಟೆಗಳ ಕಾಲ ಹಾಗೇ ಬಿಡಿ. ನಂತರ ಮತ್ತೆ ಚೆನ್ನಾಗಿ ನಾದಿಕೊಳ್ಳಿ. ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಳ್ಳಿ. ಒಂದೊಂದೇ ಹಿಟ್ಟಿನ ಉಂಡೆಯನ್ನು ಪೂರಿ ಹಾಳೆಯಂತೆ ಲಟ್ಟಿಸಿ, ಕಾದ ಎಣ್ಣೆಯಲ್ಲಿ ಕೆಂಪಗೆ ಗರಿಗರಿಯಾಗಿ ಕರಿಯಿರಿ.

– ಶ್ರುತಿ ಕೆ.ಎಸ್‌., ತುರುವೇಕೆರೆ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.