ಮಕ್ಕಳನ್ನು ಬೆಳೆಸುವುದು ಹೀಗೆ…..


Team Udayavani, Nov 29, 2017, 6:00 AM IST

makkalu.jpg

ಪ್ರತಿ ಮಗುವಿನ ಬುದ್ಧಿಶಕ್ತಿ, ಗ್ರಹಿಕಾ ಶಕ್ತಿ ಇನ್ನೊಂದು ಮಗುವಿಗಿಂತ ಭಿನ್ನವಾಗಿರುತ್ತದೆ. ಮೆದುಳಿನ ಸಾಮರ್ಥ್ಯದ ವೃದ್ಧಿ ಒಂದೇ ದಿನದಲ್ಲಿ ಆಗುವಂಥ ಕೆಲಸವಲ್ಲ. ಪಾಲಕರು ಮಕ್ಕಳ ಮೆದುಳಿನ ಬೆಳವಣಿಗೆಗೆ ಕೆಲವು ವ್ಯಾಯಾಮಗಳನ್ನು ಮಾಡಿಸಬೇಕು. ಆಗಮಾತ್ರ ಹಂತ ಹಂತವಾಗಿ ಬದಲಾವಣೆ ತರಲು ಸಾಧ್ಯ.                                                       
 1.ದೀರ್ಘ‌ ಉಸಿರಾಟ
ಉಸಿರಾಟ ಕೂಡ ವ್ಯಾಯಾಮವೇ. ಅದನ್ನು ಪಾಲಕರು ಮಕ್ಕಳಿಗೆ ಕಲಿಸಿಕೊಡಬೇಕು. ಅಂದರೆ ಮೂಗಿನಿಂದ ನಿಧಾನವಾಗಿ ಉಸಿರನ್ನು ಒಳಗೆಳೆದುಕೊಂಡು ನಂತರ ಮೆಲ್ಲನೆ ಉಸಿರನ್ನು ಹೊರಬಿಡಲು ಹೇಳಿಕೊಡಬೇಕು. ಇದು ಮಕ್ಕಳ ಮಾನಸಿಕ ಆಯಾಸವನ್ನು ಕಡಿಮೆಗೊಳಿಸುತ್ತದೆ. ಇಂಥ ಸರಳ ಅಭ್ಯಾಸದಿಂದ ಮಕ್ಕಳ ಏಕಾಗ್ರತೆಯೂ ಹೆಚ್ಚುತ್ತದೆ. 

2. ಆಟ ಆಡುವುದು
   ಬರೀ ಓದು, ಓದು ಎಂದು ಮಕ್ಕಳನ್ನು ಪೀಡಿಸುತ್ತಿರಬೇಡಿ. ಮಗು ಶೈಕ್ಷಣಿಕವಾಗಿ ಬೆಳೆಯಲು ಪಠ್ಯೇತರ ಚಟುವಟಿಕೆಗಳೂ ಸಹಕಾರಿ ಎಂಬುದು ನೆನಪಿರಲಿ. ಮಗುವನ್ನು ಹೊರಾಂಗಣ ಆಟಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಸಮಯವಿದ್ದರೆ ಮಕ್ಕಳ ಜೊತೆ ನೀವೂ ಮಗುವಾಗಿ ಆಟವಾಡಿ. ಅದರಿಂದ ಬಾಂಧವ್ಯ ವೃದ್ಧಿಯಾಗುವುದಷ್ಟೇ ಅಲ್ಲದೆ, ಮಗುವಿನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೂ ಆಗುತ್ತದೆ.

 3. ಮೆದುಳಿನ ವ್ಯಾಯಾಮ
   ಮಕ್ಕಳು ಚಿಕ್ಕವರಿದ್ದಾಗಲೇ ತಮ್ಮ ಹೆಸರಿನ ಕಾಗುಣಿತ ಹೇಳುವುದು, ಮನೆಯ ಎಲ್ಲ ಸದಸ್ಯರ ಹೆಸರುಗಳನ್ನು ಹೇಳಿಸುವುದು, ಮನೆಯಲ್ಲಿ ಎಷ್ಟು ಜನರಿದ್ದಾರೆ ಎಂದು ಎಣಿಸಲು ಹೇಳುವುದು, ಮನೆಯ ವಿಳಾಸವನ್ನು ಹೇಳಿಕೊಡುವುದು, ಮೊಬೈಲ್ ಸಂಖ್ಯೆಗಳನ್ನು ನೆನಪಿಡುವಂತೆ ಮಾಡುವುದು…ಹೀಗೆ ಮೆದುಳಿಗೆ ವ್ಯಾಯಾಮವಾಗುವಂಥ ಚಟುವಟಿಕೆಗಳನ್ನು ಮಾಡಿಸಬೇಕು. ಮಕ್ಕಳ ಕಲ್ಪನಾಶಕ್ತಿ ವೃದ್ಧಿಸುವ, ಕುತೂಹಲ ಮೂಡಿಸುವ ಕಥೆಗಳನ್ನೂ ಹೇಳಿಕೊಟ್ಟರೆ ಇನ್ನೂ ಒಳ್ಳೆಯದು. 

4. ದೈಹಿಕ ವ್ಯಾಯಾಮ
  ಚಿಕ್ಕವಯಸ್ಸಿನಲ್ಲಿಯೇ ಮಕ್ಕಳಿಗೆ ವ್ಯಾಯಾಮದ ಮಹತ್ವವನ್ನು ತಿಳಿಸಬೇಕು. ಮುಂಜಾನೆ ಸರಳವಾದ ದೈಹಿಕ ವ್ಯಾಯಾಮಗಳನ್ನು ಮಾಡಿಸಬೇಕು. ಉದಾ: ಬಲಗೈಯನ್ನು ಎಡ ಮೊಣಕಾಲಿಗೆ, ಎಡಕೈಯನ್ನು ಬಲ ಮೊಣಕಾಲಿಗೆ ಬಗ್ಗಿ ಮುಟ್ಟುವುದು ಮತ್ತೆ ಮೇಲೇಳುವುದು..ಈ ರೀತಿ ಕನಿಷ್ಠ 5-10 ನಿಮಿಷದವರೆಗೆ ಮಾಡುವುದರಿಂದ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ. ವಾರದಲ್ಲಿ ಕನಿಷ್ಠ ಎರಡು ದಿನವಾದರೂ ಮಕ್ಕಳನ್ನು ಹತ್ತಿರದ ಪಾರ್ಕ್‌ಗೆ ಕರೆದೊಯ್ಯಿರಿ. ಇಂತಹ ಚಟುವಟಿಕೆಗಳಿಂದ ಮೆದುಳಿನ ಜೀವಕೋಶಗಳು ಗಣನೀಯವಾಗಿ ಬೆಳೆದು ರಕ್ತಸಂಚಲನ ಸರಾಗವಾಗಿ ಬುದ್ಧಿಶಕ್ತಿ ಬೆಳೆಯುತ್ತದೆ.

-ಬಿ.ಎಲ್.ಶಿವರಾಜ್ ದೇವದುರ್ಗ

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.