ತಂಬುಳಿ ಸ್ಪೆಶಲ್‌


Team Udayavani, Dec 13, 2017, 1:35 PM IST

13-40.jpg

ಘಮ್ಮೆನ್ನುವ ಒಗ್ಗರಣೆಗೆ ಮಜ್ಜಿಗೆ ಸುರಿದರೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿದರೆ ಸಿದ್ಧವಾಗುವುದೇ ತಂಬುಳಿ. ಬೇಸಿಗೆ, ಮಳೆ, ಚಳಿ- ಈ ಮೂರು ಕಾಲಕ್ಕೂ ಸಲ್ಲುವಂತಿರುವುದು ತಂಬುಳಿಯ ಸ್ಪೆಶಾಲಿಟಿ. ಒಗ್ಗರಣೆಯನ್ನು ಒಂದೆರಡು ಬಗೆಯಲ್ಲಲ್ಲ, ಹತ್ತು ಥರದಲ್ಲೂ ಹಾಕಬಹುದು, ಆ ಮೂಲಕ ತಂಬುಳಿಗೆ ಹಲವು ಬಗೆಯ ರುಚಿ ಪಡೆಯಬಹುದು ಎಂಬ ಪಾಕಶಾಸ್ತ್ರದ ಗುಟ್ಟು ತಿಳಿದುಬರುವುದೂ ತಂಬುಳಿ ಸ್ಪೆಶಲ್‌ ಮಾಡಲು ಹೊರಟಾಗಲೇ…

1. ದಾಸವಾಳದ ಹೂವಿನ ತಂಬುಳಿ
ಬೇಕಾಗುವ ಸಾಮಗ್ರಿ: 
ಕೆಂಪು ಅಥವಾ ಬಿಳಿ ದಾಸವಾಳದ ಹೂವು ಹತ್ತು, ಮಜ್ಜಿಗೆ 2-3 ಕಪ್‌, ಇಂಗು- ಚಿಟಿಕೆ, ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ 3 ಒಣಮೆಣಸಿನಕಾಯಿ, ಉದ್ದಿನ ಬೇಳೆ 1 ಚಮಚ, ತುಪ್ಪ 1 ಚಮಚ. 

ಮಾಡುವ ವಿಧಾನ: 
ದಾಸವಾಳದ ಹೂಗಳನ್ನು ಚಿಕ್ಕದಾಗಿ ಕತ್ತರಿಸಿ. ಮಜ್ಜಿಗೆಗೆ ಇಂಗು ಮತ್ತು ಉಪ್ಪನ್ನು ಹಾಕಿ ಮಿಶ್ರಣ ಮಾಡಿ. ಮಿಶ್ರಣಕ್ಕೆ ದಾಸವಾಳದ ಹೂವುಗಳನ್ನು ಹಾಕಿ. ಬೇಕಿದ್ದರೆ ಮಿಕ್ಸಿಯಲ್ಲಿ ಹಾಕಿ ರುಬ್ಬಿಕೊಳ್ಳಿ. ಈ ಮಿಶ್ರಣಕ್ಕೆ ಸಾಸಿವೆ, ಒಣಮೆಣಸಿನಕಾಯಿ, ಉದ್ದಿನಬೇಳೆ ಹಾಕಿ ತುಪ್ಪದಲ್ಲಿ ಒಗ್ಗರಣೆ ಕೊಡಿ.

2. ದಾಳಿಂಬೆ ಚಿಗುರೆಲೆ ತಂಬುಳಿ
ಬೇಕಾಗುವ ಸಾಮಗ್ರಿ:
 
ದಾಳಿಂಬೆ ಚಿಗುರೆಲೆ ಒಂದು ಹಿಡಿ, ಜೀರಿಗೆ 2 ಚಮಚ, ತುಪ್ಪ 1 ಚಮಚ, ಕಾಳು ಮೆಣಸು 10,  ಮೊಸರು 2 ಕಪ್‌, ಉಪ್ಪು, ರುಚಿಗೆ ತಕ್ಕಷ್ಟು, ಒಗ್ಗರಣೆಗೆ ಒಣಮೆಣಸಿನಕಾಯಿ, ಸಾಸಿವೆ.

ಮಾಡುವ ವಿಧಾನ: 
ಒಂದು ಬಾಣಲೆಯಲ್ಲಿ ಅರ್ಧ ಟೀ ಚಮಚ ತುಪ್ಪ ಹಾಕಿ ಬಿಸಿ ಮಾಡಿ. ಅದರಲ್ಲಿ ದಾಳಿಂಬೆ ಚಿಗುರೆಲೆ ಹಾಕಿ ಹುರಿದುಕೊಳ್ಳಿ. ಹುರಿದ ಸೊಪ್ಪನ್ನು ತೆಗೆದು, ಅದೇ ಬಾಣಲೆಯಲ್ಲಿ ಅರ್ಧ ಟೀ ಚಮಚ ತುಪ್ಪ ಹಾಕಿ ಕಾಳು ಮೆಣಸು, ಜೀರಿಗೆ ಹಾಕಿ ಹುರಿದುಕೊಳ್ಳಿ. ಹುರಿದ ಪದಾರ್ಥಗಳನ್ನು ಮಿಕ್ಸಿಗೆ ಹಾಕಿ, ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಆ ಮಿಶ್ರಣಕ್ಕೆ ಒಂದು ಟೀ ಚಮಚ ತುಪ್ಪ ಹಾಕಿ, ಸಾಸಿವೆ ಮತ್ತು ಒಣಮೆಣಸಿನಕಾಯಿ ಹಾಕಿ ಒಗ್ಗರಣೆ ಮಾಡಿ.

3. ಮೆಂತೆ ತಂಬುಳಿ
ಬೇಕಾಗುವ ಸಾಮಗ್ರಿ: 

ಮೆಂತೆ 1/2 ಚಮಚ, ತುಪ್ಪ 1/2 ಚಮಚ, ತೆಂಗಿನ ತುರಿ 1/4 ಕಪ್‌, ಮಜ್ಜಿಗೆ 2 ಕಪ್‌, ರುಚಿಗೆ ತಕ್ಕಷ್ಟು ಉಪ್ಪು. ಒಗ್ಗರಣೆಗೆ ಸಾಸಿವೆ, ಒಣ ಮೆಣಸಿನಕಾಯಿ, ಎಣ್ಣೆ ಅಥವಾ ತುಪ್ಪ 1 ಚಮಚ, ಇಂಗು ಚಿಟಿಕೆ

ಮಾಡುವ ವಿಧಾನ: 
ಬಾಣಲೆಗೆ ಮೆಂತೆ ಹಾಕಿ ತುಪ್ಪದಲ್ಲಿ ಹುರಿಯಿರಿ. ಅದನ್ನು ಕಾಯಿ ತುರಿಯೊಂದಿಗೆ ನುಣ್ಣಗೆ ರುಬ್ಬಿ ಮಜ್ಜಿಗೆ, ಉಪ್ಪು ಹಾಕಿ. ಅದಕ್ಕೆ ಸಾಸಿವೆ, ಇಂಗು ಒಗ್ಗರಣೆ ಹಾಕಿ.

4. ಚಿಗುರೆಲೆ ತಂಬುಳಿ
ಬೇಕಾಗುವ ಸಾಮಗ್ರಿ: 
ಕಾಕಿಸೊಪ್ಪಿನ ಚಿಗುರೆಲೆ, ಮೆಣಸಿನ ಸೊಪ್ಪಿನ ಚಿಗುರೆಲೆ, ದಾಳಿಂಬೆ ಸೊಪ್ಪಿನ ಚಿಗುರೆಲೆ, ಲಿಂಬೆ ಚಿಗುರೆಲೆ, ಬ್ರಾಹ್ಮಿ ಅಥವಾ ಒಂದೆಲಗ ಸೊಪ್ಪು, ಹತ್ತಿ ಸೊಪ್ಪಿನ ಚಿಗುರೆಲೆ ಹೀಗೆ ಎಲ್ಲ ಸೇರಿಸಿ 20-30 ಎಲೆಗಳು, ತೆಂಗಿನ ತುರಿ 1/4 ಕಪ್‌, ಜೀರಿಗೆ 1 ಚಮಚ, ಕಾಳು ಮೆಣಸು 1 ಚಮಚ, ಮಜ್ಜಿಗೆ 2 ಕಪ್‌, ತುಪ್ಪ 1 ಚಮಚ, ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ ಸಾಸಿವೆ, ಒಣಮೆಣಸಿನ ಕಾಯಿ, ಎಣ್ಣೆ ಅಥವಾ ತುಪ್ಪ.

ಮಾಡುವ ವಿಧಾನ: 
ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ಅದರಲ್ಲಿ ಕಾಳುಮೆಣಸು, ಜೀರಿಗೆ ಹಾಕಿ ಹುರಿಯಿರಿ. ನಂತರ ಸೊಪ್ಪುಗಳನ್ನು ಹಾಕಿ ಬಾಡಿಸಿ. ಈ ಮಿಶ್ರಣಕ್ಕೆ ಕಾಯಿತುರಿ, ಉಪ್ಪು ಹಾಕಿ ನುಣ್ಣಗೆ ರುಬ್ಬಿ. ಆ ಮಿಶ್ರಣಕ್ಕೆ ಮಜ್ಜಿಗೆ ಬೆರೆಸಿ ನಂತರ ಸಾಸಿವೆ, ಒಣಮೆಣಸಿನಕಾಯಿಯ ಒಗ್ಗರಣೆ ಹಾಕಿ.

ವೇದಾವತಿ ಹೆಚ್‌. ಎಸ್‌.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.