ದೇವರಿಗೆ ಮುತ್ತು ಕೊಟ್ಟರೆ ಮನಸ್ಸು ಹಗುರ


Team Udayavani, Jan 10, 2018, 4:48 PM IST

10-46.jpg

(ಪ್ರತಿ ಹೆಣ್ಣೂ ಅಂತರಂಗದಲ್ಲಿ ವಿಶ್ವಸುಂದರಿ! ಆ ಸೌಂದರ್ಯವನ್ನು ಪ್ರತಿಬಿಂಬಿಸುವ ಕನ್ನಡಿ ಎಲ್ಲೋ ಗೋಡೆಗೆ ನೇತುಹಾಕಿರುವುದಿಲ್ಲ. ಅದು ನಮ್ಮೊಳಗೆ ಇದೆ. ಅಂತರಂಗದ ಆ ಕನ್ನಡಿಯನ್ನು ಕಂಡುಕೊಳ್ಳುವ ಕಲೆಯೇ ಬದುಕು. ಅದೇ ಹೆಣ್ಣಿನ ಅಧ್ಯಾತ್ಮ. ಆ ಖುಷಿ, ಈ ಯಶಸ್ಸು- ಇವೆರಡನ್ನೂ ಹಳಿಮಾಡಿಕೊಂಡು ಸಾಗುವ ಗುಟ್ಟುಗಳು ಈ ಹೊಸ ಅಂಕಣದಲ್ಲಿ ಪ್ರತಿವಾರ ತೆರೆದುಕೊಳ್ಳಲ್ಲಿ)

ದೇವರು! ಹಾಗಂದ ತಕ್ಷಣ ನಮ್ಮ ಮನಸ್ಸಿನಲ್ಲಿ ಭಯವೊಂದು ಹಾದು ಹೋಗುತ್ತದೆ. ಮೊದಲಿನಿಂದಲೂ ನಮಗೆ ಕಲಿಸಿದ್ದು ಹಾಗೆ. ದೇವರೆಂದರೆ ಭಯಪಡಬೇಕು ಎಂದು. ಆದರೆ, ದೇವರ ವಿಚಾರದಲ್ಲಿ ನಾನು ಉಳಿದವರಿಗಿಂತ ಸ್ವಲ್ಪ$ಭಿನ್ನವಾಗಿ ಯೋಚನೆ ಮಾಡುತ್ತೇನೆ. ನನಗೆ ದೇವರೆಂದರೆ ಭಯವಿಲ್ಲ. ನಾನು ದೇವರನ್ನು ತುಂಬಾ ಪ್ರೀತಿಸುತ್ತೇನೆ! 

ನಾವು ದಿನನಿತ್ಯ ಒಂದಿಲ್ಲೊಂದು ಬೇಡಿಕೆಯನ್ನು ಪ್ರಾರ್ಥನೆಯ ಮೂಲಕ ದೇವರ ಮುಂದಿಡುತ್ತೇವೆ. ಉತ್ತಮ ಆರೋಗ್ಯಕ್ಕಾಗಿಯೋ, ತುಂಬಾ ಹಣಕ್ಕಾಗಿಯೋ, ನಿಜವಾದ ಪ್ರೀತಿ ಸಿಗಲಿ ಎಂಬುದೋ, ಇನ್ನು ಕೆಲವೊಮ್ಮೆ ಪರೀಕ್ಷೆಯಲ್ಲಿ ಜಾಸ್ತಿ ಅಂಕಕ್ಕಾಗಿಯೂ ದೇವರನ್ನು ಪ್ರಾರ್ಥಿಸುತ್ತೇವೆ. ನೆಚ್ಚಿನ ಉಡುಪನ್ನು ಧರಿಸಲು ಆಗದೇ ಇದ್ದಾಗ “ನನ್ನನ್ನು ಒಂದಿಂಚು ಸಣ್ಣಗೆ ಮಾಡಪ್ಪಾ…’ ಎಂದು ನಾನು ದೇವರನ್ನು ಬೇಡಿಕೊಂಡಿದ್ದೂ ಇದೆ. 

ದೇವರನ್ನು ಪ್ರಾರ್ಥಿಸುವುದಕ್ಕೂ ಅನೇಕ ರೀತಿ- ನೀತಿಗಳಿವೆ. ಗಂಭೀರವಾದ ಪ್ರಾರ್ಥನೆ, ಒಮ್ಮೆ ಮಾಡುವ ಪ್ರಾರ್ಥನೆ, ನಾನು ನಿನ್ನನ್ನು ಪರೀಕ್ಷಿಸುತ್ತೇನೆ ಎಂಬ ಪ್ರಾರ್ಥನೆ, ಬಾಲಿಶ ಪ್ರಾರ್ಥನೆ  - ಹೀಗೆ ಮುಗಿಯದ ಪಟ್ಟಿಗಳೇ ಇವೆ. ಧಾರ್ಮಿಕ ಸ್ಥಳಗಳಲ್ಲಿ ಮಂಡಿಯೂರಿ ಪ್ರಾರ್ಥಿಸುವ ಜನರು, ದೇವರನ್ನು ಹೂವು ಮತ್ತು ಆಭರಣಗಳಿಂದ ಸಿಂಗರಿಸುವುದು, ಮೇಜು ಅಥವಾ ಹಾಸಿಗೆ ಮೇಲೆ ಕುಳಿತು ಪ್ರಾರ್ಥಿಸುವುದು- ಹೀಗೆ ಯಾವುದರಲ್ಲಿ ಧನಾತ್ಮಕ ಫ‌ಲಿತಾಂಶವನ್ನು ಬೇಗನೆ ನೀವು ನೋಡುತ್ತಿರಾ..?

ನನ್ನ ಬದುಕಿನ ರಹಸ್ಯವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ನಿಮ್ಗೆ ಗೊತ್ತಾ? ದೇವರು ನನ್ನ ಪ್ರತಿಯೊಂದು ಪ್ರಾರ್ಥನೆಗೂ ಉತ್ತರಿಸಿದ್ದಾನೆ! ಯಾವಾಗ ಪ್ರಾರ್ಥನೆ ಮಾಡಲು ಮನಸ್ಸಾಗುತ್ತೋ, ಆಗ ಪ್ರಾರ್ಥಿಸಲು ಕೂರುತ್ತೇನೆ. ಇದಕ್ಕೆ ಯಾವುದೇ ಸ್ಥಳ, ಸಮಯವನ್ನು ನಾನು ನೋಡುವುದಿಲ್ಲ. ಈಗ ದೇವರನ್ನು ಪ್ರಾರ್ಥಿಸಬೇಕು ಎಂದು ಮನಸ್ಸಾದ ತಕ್ಷಣ ಪ್ರಾರ್ಥಿಸುತ್ತೇನೆ ಅಷ್ಟೇ. ಇದಕ್ಕಾಗಿ ನಾನು ಯಾವುದೇ ನಿಯಮವನ್ನಾಗಲಿ, ಪುಸ್ತಕವನ್ನಾಗಲಿ ಅನುಸರಿಸುತ್ತಿಲ್ಲ.

ಪ್ರಾರ್ಥನೆ ಮಾಡಲು ಒಂದು ನಿಯಮವಿದೆ, ಆ ನಿಯಮ ಪಾಲಿಸದಿದ್ದರೆ, ನಮಗೆ ದೇವರು ಶಿಕ್ಷೆ ಕೊಡುತ್ತಾನೆ ಎಂಬುದನ್ನೆಲ್ಲಾ ನಾನು ನಂಬುವುದಿಲ್ಲ. ನನಗೆ ದೇವರೆಂದರೆ ಭಯವಿಲ್ಲ, ನಾನು ದೇವರನ್ನು ಪ್ರೀತಿಸುತ್ತೇನೆ ಅಷ್ಟೇ. ಇನ್ನು ನಾನು ಬೆಳಗ್ಗಿನ ತಿಂಡಿ ತಿನ್ನುವಾಗ ದೇವರಿಗೆ ಹೇಳುತ್ತೇನೆ: “ಕಾರ್ನ್ಫ್ಲೇಕ್ಸ್‌ಗೆ ತಣ್ಣಗಿನ ಹಾಲು ಹಾಕಿಕೊಂಡು ತಿನ್ನು, ಇದರ ರುಚಿ ತುಂಬಾ ಅದ್ಭುತವಾಗಿದೆ’ ಎಂದು. ಕೆಲಸಕ್ಕೆ ಹೋಗುವಾಗ ದೇವರಿಗೊಂದು ಮುತ್ತುಕೊಟ್ಟು ಹೋಗುತ್ತೇನೆ. ದೇವರನ್ನು ಒಬ್ಬ ವ್ಯಕ್ತಿಯನ್ನಾಗಿ ನೋಡುತ್ತೇನೆ. ನಾನು ಹೇಳುವ ಸಣ್ಣ ವಿಷಯವನ್ನು ಅವನು ಅಷ್ಟೇ ಮುತುವರ್ಜಿಯಿಂದ ಕೇಳುತ್ತಾನೆ, ನಾನು ಅತ್ತಾಗ ಅವನೂ ಅಳುತ್ತಾನೆ, ನಾನು ತುಂಬಾ ಖುಷಿಯಾದಾಗ ಅವನೂ ಖುಷಿಯಾಗುತ್ತಾನೆ, ನಾನು ಅವನನ್ನು ಗಾಢವಾಗಿ ಪ್ರೀತಿಸುತ್ತೇನೆ, ನನ್ನೆಲ್ಲ ಪ್ರಶ್ನೆಗಳಿಗೆ ಅವನು ನೀಡುವ ಉತ್ತರಗಳನ್ನು ಯಾವುದೇ ಸಂದೇಹವಿಲ್ಲದೇ, ಒಪ್ಪಿಕೊಳ್ಳುತ್ತೇನೆ. ನಾನು ಯಾವುದೇ ಬೇಸರದಲ್ಲಿದ್ದರೂ ಅವನು ಯಾವತ್ತೂ ನನ್ನನ್ನು ಅಲಕ್ಷಿಸುವುದಿಲ್ಲ… ಹೀಗೆ ದೇವರು ಮತ್ತು ಅವನ ಜತೆಗಿನ ನನ್ನ ಪ್ರೀತಿಯ ನಂಟು ಸಾಗುತ್ತಲೇ ಇರುತ್ತದೆ. ಆದ್ದರಿಂದ, ಮುಂದಿನ ಬಾರಿ ನೀವು ಪ್ರಾರ್ಥನೆ ಮಾಡುವಾಗ ಯಾವುದೇ ಅಜೆಂಡಾವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ. ದೇವರನ್ನು ಪ್ರೀತಿಸಿ, ದೇವರೆಂದರೆ ಭಯಪಡಬೇಡಿ. ದೇವರು ಎಲ್ಲರಿಗೂ ಒಳಿತನ್ನೇ ಮಾಡುತ್ತಾನೆ. 

ಪಟ್‌ಪಟಾಕಿ ಶ್ರುತಿ, ಆರ್‌.ಜೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.