ಎಳೆ ಹಲಸು ರುಚಿ ಸೊಗಸು 


Team Udayavani, Jan 17, 2018, 2:25 PM IST

17-39.jpg

ಸಾಮಾನ್ಯವಾಗಿ ಚಳಿಗಾಲದ ಆರಂಭದಲ್ಲಿ ಎಳೆ ಹಲಸಿನಕಾಯಿಗಳು ಸಿಗುತ್ತವೆ. ಈ ಹಂತದಲ್ಲಿ ಅದನ್ನು “ಗುಜ್ಜೆ’ ಅನ್ನುತ್ತಾರೆ. ಕರಾವಳಿ ಮತ್ತು ಮಲೆನಾಡಿನ ಜನರಿಗೆ ಹಲಸಿನಕಾಯಿಯ ಅಡುಗೆಗಳು ಅಚ್ಚುಮೆಚ್ಚು. ಗುಜ್ಜೆಯ ಅಡುಗೆಯ ಸವಿ  ಹಾಗೂ ಅದನ್ನು ಹೆಚ್ಚಲು ಬೇಕಾದ ಕುಶಲತೆ ಎರಡನ್ನೂ ಬಲ್ಲವರೇ ಬಲ್ಲರು. ಗುಜ್ಜೆಯನ್ನು ಬಳಸಿ ತಯಾರಿಸುವ ಕೆಲವು ಅಡುಗೆಗಳ ರೆಸಿಪಿ ಇಲ್ಲಿವೆ:

1. ಗುಜ್ಜೆ ಪಲ್ಯ 
ಬೇಕಾಗುವ ಸಾಮಗ್ರಿ: ಹೆಚ್ಚಿದ ಗುಜ್ಜೆಯ ಹೋಳು-4 ಕಪ್‌, ಖಾರ ಪುಡಿ- 1/2 ಚಮಚ, ಅರಿಶಿನಪುಡಿ-ಚಿಟಿಕೆಯಷ್ಟು, ಉಪ್ಪು- ರುಚಿಗೆ ತಕ್ಕಷ್ಟು, ಬೆಲ್ಲ- ಸಣ್ಣ ತುಂಡು (ಬೇಕಿದ್ದರೆ ಮಾತ್ರ) ,ತೆಂಗಿನ ತುರಿ – ಒಂದು ಕಪ್‌. ಒಗ್ಗರಣೆಗೆ: ಉದ್ದಿನಬೇಳೆ, ಸಾಸಿವೆ, ಒಣಮೆಣಸಿನಕಾಯಿ, ಎಣ್ಣೆ, ಕರಿಬೇವು    

ಮಾಡುವ ವಿಧಾನ: ಗುಜ್ಜೆಯ ಹೋಳುಗಳಿಗೆ ಉಪ್ಪು, ಖಾರಪುಡಿ, ಅರಿಶಿನಪುಡಿ ಮತ್ತು ಸ್ವಲ್ಪ ನೀರು ಹಾಕಿ ಕುಕ್ಕರಿನಲ್ಲಿ  ಬೇಯಿಸಿ. ಬಾಣಲೆಯಲ್ಲಿ ಉದ್ದಿನಬೇಳೆ, ಸಾಸಿವೆ, ಒಣಮೆಣಸು ಮತ್ತು ಕರಿಬೇವು ಹಾಕಿ ಒಗ್ಗರಣೆ ಸಿದ್ಧಪಡಿಸಿ. ಅದಕ್ಕೆ ಬೆಂದ ಹೋಳುಗಳನ್ನು ಸೇರಿಸಿ, ಸೌಟಿನಲ್ಲಿ ಕೈಯಾಡಿಸಿ. ಪಲ್ಯದಲ್ಲಿ  ಹೆಚ್ಚು ನೀರಿದ್ದರೆ, ಸಣ್ಣ ಉರಿಯಲ್ಲಿ ಇಂಗಿಸಿ, ತೆಂಗಿನ ತುರಿಯನ್ನು ಸೇರಿಸಿ ಪುನಃ ಬೆರೆಸಿದಾಗ ಗುಜ್ಜೆಯ ಪಲ್ಯ ಸಿದ್ಧ. ಅನ್ನ ಹಾಗೂ ಚಪಾತಿ ಜೊತೆಗೆ ಈ ಪಲ್ಯ ಇದ್ದರೆ ಬಲು ಚೆನ್ನ. 

2. ಗುಜ್ಜೆಯ ಜೀರಿಗೆ ಹುಳಿ 
ಬೇಕಾಗುವ ಸಾಮಗ್ರಿ: ಗುಜ್ಜೆ ಹೋಳು- 4 ಕಪ್‌,  ಖಾರದ ಪುಡಿ-ಅರ್ಧ ಚಮಚ , ಅರಿಶಿನಪುಡಿ-ಕಾಲು ಚಮಚ , ಹುಣಸೆಹಣ್ಣು -ಸಣ್ಣ ಗೋಲಿಯಷ್ಟು,  ಉಪ್ಪು-ರುಚಿಗೆ ತಕ್ಕಷ್ಟು, ತೆಂಗಿನ ತುರಿ – ಒಂದು ಕಪ್‌, ಜೀರಿಗೆ- ಒಂದು ಚಮಚ , ಹಸಿರು ಮೆಣಸು – 2. ಒಗ್ಗರಣೆಗೆ:
ಸಾಸಿವೆ,  ಒಣಮೆಣಸಿನಕಾಯಿ, ಎಣ್ಣೆ, ಕರಿಬೇವು.;    

ಮಾಡುವ ವಿಧಾನ:  ಹಲಸಿನ ಹೋಳುಗಳಿಗೆ ಉಪ್ಪು, ಖಾರಪುಡಿ, ಅರಿಶಿನಪುಡಿ ಮತ್ತು ಸ್ವಲ್ಪ ನೀರು ಹಾಕಿ ಕುಕ್ಕರ್‌ನಲ್ಲಿ  ಬೇಯಿಸಿ. ತೆಂಗಿನ ತುರಿ, ಜೀರಿಗೆ, ಹಸಿ ಮೆಣಸಿನಕಾಯಿ ಮತ್ತು ಹುಣಸೇಹಣ್ಣನ್ನು ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಬೆಂದ ಹೋಳುಗಳಿಗೆ  ರುಬ್ಬಿದ ಮಿಶ್ರಣ ಸೇರಿಸಿ, ಬೇಕಿದ್ದರೆ ನೀರು ಸೇರಿಸಿ, ಮಂದವಾಗಿ ಕುದಿಸಿ. ಇದಕ್ಕೆ ಸಾಸಿವೆ, ಒಣಮೆಣಸು ಮತ್ತು ಕರಿಬೇವು ಹಾಕಿದ ಒಗ್ಗರಣೆ ಸೇರಿಸಿದರೆ ಹಲಸಿನಕಾಯಿಯ ಜೀರಿಗೆ ಹುಳಿ ರೆಡಿ. 

3. ಗುಜ್ಜೆ ಸಾಂಬಾರು
ಬೇಕಾಗುವ ಸಾಮಗ್ರಿ: ಹೆಚ್ಚಿದ ಗುಜ್ಜೆ ಹೋಳು-4 ಕಪ್‌, ಅರಿಶಿನ ಪುಡಿ-ಚಿಟಿಕೆಯಷ್ಟು, ಉಪ್ಪು-ರುಚಿಗೆ ತಕ್ಕಷ್ಟು, ಮಸಾಲೆಗೆ: ಬ್ಯಾಡಗಿ ಒಣಮೆಣಸಿನಕಾಯಿ-4,  ದನಿಯಾ-1 ಚಮಚ, ಉದ್ದಿನಬೇಳೆ-ಅರ್ಧ ಚಮಚ, ಜೀರಿಗೆ- ಕಾಲು ಚಮಚ, ಮೆಂತ್ಯೆ-ಕಾಲು ಚಮಚ, ಇಂಗು- ಚಿಟಿಕೆಯಷ್ಟು, ಹುಣಸೆಹಣ್ಣು-ಸಣ್ಣ ಗೋಲಿಯಷ್ಟು,  ತೆಂಗಿನ ತುರಿ-ಒಂದು ಕಪ್‌ (ಬೇಕಿದ್ದರೆ: ಬೇಯಿಸಿದ ತೊಗರಿಬೇಳೆ ಅರ್ಧ ಕಪ್‌). ಒಗ್ಗರಣೆಗೆ: ಸಾಸಿವೆ, ಒಣಮೆಣಸಿನಕಾಯಿ, ಎಣ್ಣೆ, ಕರಿಬೇವು. 

ಮಾಡುವ ವಿಧಾನ:  ಹಲಸಿನಕಾಯಿಯ ಹೋಳುಗಳಿಗೆ ಉಪ್ಪು, ಖಾರದಪುಡಿ, ಅರಿಶಿನಪುಡಿ , ಹುಣಸೇಹಣ್ಣಿನ ರಸ ಮತ್ತು ಸ್ವಲ್ಪ ನೀರು ಹಾಕಿ ಬೇಯಿಸಿ. ಕೆಲವು ಹಲಸಿನಕಾಯಿಗಳಿಗೆ ಸ್ವಲ್ಪ ಒಗರು ರುಚಿ ಇರುವುದರಿಂದ ಬೇಕಿದ್ದರೆ ಸಣ್ಣ ತುಂಡು ಬೆಲ್ಲವನ್ನೂ ಸೇರಿಸಬಹುದು. ಮಸಾಲೆ ವಸ್ತುಗಳನ್ನು ಬೇರೆ ಬೇರೆಯಾಗಿ ಹುರಿದಿಟ್ಟುಕೊಳ್ಳಿ.  ತೆಂಗಿನ ತುರಿಯೊಂದಿಗೆ ಹುರಿದ ಮಸಾಲೆಯನ್ನು ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಬೆಂದ ಹೋಳುಗಳಿಗೆ ರುಬ್ಬಿದ ಮಿಶ್ರಣ ಸೇರಿಸಿ, ಸಾಂಬಾರಿನ ಹದಕ್ಕೆ ಕುದಿಸಿ. ಗುಜ್ಜೆ ಸಾಂಬಾರಿಗೆ ಸಾಮಾನ್ಯವಾಗಿ ಬೇಯಿಸಿದ ತೊಗರಿಬೇಳೆ ಸೇರಿಸುವುದಿಲ್ಲ. ಬೇಕಿದ್ದರೆ ಸೇರಿಸಬಹುದು. ಜೊತೆಗೆ ಒಗ್ಗರಣೆ ಸೇರಿಸಿದರೆ, ಗುಜ್ಜೆಯ ಸಾಂಬಾರು ಸಿದ್ಧ. 

ಪೂರ್ವ ತಯಾರಿ:  ಹಲಸನ್ನು ಹೆಚ್ಚಲು ನಾಜೂಕಿನ ಚಾಕುಗಳಿಂದ ಬಲು ಕಷ್ಟ. ಇದಕ್ಕೆ ಮೆಟ್ಟುಗತ್ತಿ ಅಥವಾ ಈಳಿಗೆಮಣೆಯೇ ಸರಿ. ಮೇಣ (ಅಂಟು) ನೆಲಕ್ಕೆ ಅಂಟದಂತೆ ದೊಡ್ಡ ಪ್ಲಾಸ್ಟಿಕ್‌, ಅಡಿಕೆಯ ಹಾಳೆ ಅಥವಾ ಬಾಳೆಲೆಯನ್ನು ಹಾಸಿ ಅದರ ಮೇಲೆ ಗುಜ್ಜೆಯನ್ನು ಇರಿಸಿ, ಅರ್ಧ ಮಾಡಬೇಕು. ಕೈಗೆ ಎಣ್ಣೆ  ಸವರಿಕೊಂಡು, ಪೇಪರ್‌ನಲ್ಲೋ, ಬಾಳೆಲೆಯಲ್ಲೋ ಮೇಣವನ್ನು ಒರೆಸಿ, ಮುಳ್ಳುಗಳುಳ್ಳ ಸಿಪ್ಪೆ ಮತ್ತು ದಂಡನ್ನು ಬೇರ್ಪಡಿಸಿ, ದೊಡ್ಡ ತುಂಡುಗಳನ್ನಾಗಿ ಮಾಡಿ  ನೀರಿಗೆ ಹಾಕುವುದು ಮೊದಲ ಹಂತ. ನಂತರ ತರಕಾರಿಯಂತೆಯೇ ಹೆಚ್ಚಿ ಪಲ್ಯ, ಸಾಂಬಾರು, ಜೀರಿಗೆ ಹುಳಿ, ಉಪ್ಪಿನಕಾಯಿ ಇತ್ಯಾದಿಗಳನ್ನು ತಯಾರಿಸಬಹುದು. ಬಜ್ಜಿ, ಪಕೋಡ, ಮಂಚೂರಿ, ಕೂರ್ಮ, ಕಟ್ಲೆಟ್‌….ಇತ್ಯಾದಿ ಹಲವಾರು ತಿನಿಸುಗಳಿಗೂ ಗುಜ್ಜೆ ಸೈ. 

ಹೇಮಮಾಲಾ.ಬಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.