“ಅಂಧ’ ಚೆಂದದ ಹಾಡು


Team Udayavani, Mar 8, 2018, 4:20 PM IST

hadu.jpg

ಅಲ್ಲಿ ಯಾರಿಗೂ ಕಣ್ಣಿಲ್ಲ. ಸ್ವರಸಾಗರದಲ್ಲಿ ಮಿಂದೇಳಲು ಕಣ್ಣು ಬೇಕಂತಲೂ ಇಲ್ಲ. ರಾಗಗಳಲ್ಲಿಯೇ ಜಗವ ತೋರಿಸುವ ಜಾದೂ ಕಲೆ ಅದು ಎನ್ನುವುದನ್ನು ಬಲ್ಲವರು ರಾಧಿಕಾ ಆರ್‌.ಕಾಂತನವರ್‌. ರಾಯಚೂರಿನ ಮಾಣಿಕ್‌ ಪ್ರಭು ಅಂಧಮಕ್ಕಳ ಶಾಲೆಗೆ ಹೋದರೆ ಅಲ್ಲಿವರು, ಲೋಕ ನೋಡದ ಜೀವಗಳೆದುರು ರಾಗಾಲಾಪದಲ್ಲಿ ತಲ್ಲೀನರು.

ಸತತ 17 ವರ್ಷಗಳಿಂದ ಅಂಧ ಮಕ್ಕಳಿಗೆ ಉಚಿತ ಸಂಗೀತ ಕಲಿಸುತ್ತಿದ್ದಾರೆ, ರಾಧಿಕಾ. ಕೀಲುನೋವಿನಿಂದ ಹಾಸಿಗೆ ಹಿಡಿದು, ಖನ್ನತೆಗೆ ಜಾರಿದ್ದ ಇವರನ್ನು ಮತ್ತೆ ಚೈತನ್ಯಶೀಲರನ್ನಾಗಿಸಿದ್ದು ಕೂಡ ಇದೇ ಸಂಗೀತವೇ. ತಮ್ಮಿಂದ ಏನೂ ಸಾಧಿಸಲಾಗದು ಎಂದು ಕೈಕಟ್ಟಿ ಕುಳಿತಾಗ, ಪತಿ ರಾಘವೇಂದ್ರ ವಿ. ಕಾಂತನವರ್‌, “ಅಸಹಾಯಕ ಸ್ಥಿತಿಯಲ್ಲೂ ನೀನು ಸಾಧಿಸಬಲ್ಲೆ’ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದೇ, ಇವರ ಬದುಕಿನ ಟರ್ನಿಂಗ್‌ ಪಾಯಿಂಟ್‌. ಮನೆಯಲ್ಲಿನ ಸಂಗೀತದ ವಾತಾವರಣ ಅವರ ಕೈಹಿಡಿಯಿತು. ಮೂಲತಃ ಹುಬ್ಬಳ್ಳಿಯ ರಾಧಿಕಾ, ಹಿಂದೂಸ್ಥಾನಿ ಸಂಗೀತದಲ್ಲಿ ವಿದ್ವತ್‌ ಸಾಧಿಸಿದಾಕೆ. ಅಂಧ ಮಕ್ಕಳಿಗೆ ನಯಾಪೈಸೆ ಗುರುದಕ್ಷಿಣೆ ಪಡೆಯದೇ, ಸಂಗೀತ ಹೇಳಲು ನಿರ್ಧರಿಸಿಬಿಟ್ಟರು.

ಅಂದಹಾಗೆ, ರಾಧಿಕಾ ದಂಪತಿ ತಮಗೆ ಮಕ್ಕಳೇ ಬೇಡವೆಂದು, ಈ ಅಂಧಮಕ್ಕಳನ್ನೇ ಸ್ವಂತ ಮಕ್ಕಳಂತೆ ಕಾಣುತ್ತಿದ್ದಾರೆ. ಸಂಗೀತದಲ್ಲಿ ವಿದ್ವತ್‌ ಪಡೆದ ರಾಧಿ ಕಾ ಅವರು ದೊಡ್ಡ ಸಂಗೀತ ಸಾಧಕಿಯಾಗುವ ಕನಸು ಹೊತ್ತಿದ್ದರು. ಅವರ ಕನಸನ್ನು ಅವರ ಶಿಷ್ಯರು ಈಡೇರಿಸುವ ಹಾದಿಯಲ್ಲಿದ್ದಾರೆ. 22 ಅಂಧ ಮಕ್ಕಳು ಜ್ಯೂನಿಯರ್‌ ಪರೀಕ್ಷೆ ಪಾಸಾದರೆ, ಒಬ್ಬ ವಿದ್ಯಾರ್ಥಿ ಸೀನಿಯರ್‌ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ್ದಾನೆ.

– ಸಿದ್ಧಯ್ಯಸ್ವಾಮಿ ಕುಕನೂರು, ರಾಯಚೂರು

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.