ಕೊರಳ ತುಂಬಾ ಕಾಸು


Team Udayavani, Mar 14, 2018, 7:07 PM IST

4.jpg

ನಾಣ್ಯಗಳನ್ನು ಮಾಲೆಯಲ್ಲಿ ಪೋಣಿಸಿ ಸರ ಮಾಡಿ ಕತ್ತಿಗೆ ಹಾಕಿಕೊಳ್ಳುವ ಶೈಲಿ ಇಂದು ನೆನ್ನೆ ಶುರುವಾಗಿದ್ದಲ್ಲ!
ಚಿನ್ನ, ಬೆಳ್ಳಿ, ತಾಮ್ರ, ಕಂಚು… ಹೀಗೆ ಬಗೆಬಗೆಯ ನಾಣ್ಯಗಳ ಸರವನ್ನು ಪುರುಷರು, ಮಹಿಳೆಯರು ತೊಡುತ್ತಾ ಬಂದಿದ್ದಾರೆ. ಮದುವೆಗಳಲ್ಲಿ ವಧು ಚಿನ್ನದ ಕಾಸಿನ ಸರ ತೊಟ್ಟರೆ ಎಲ್ಲರ ಬಾಯಲ್ಲಿ ಅದೇ ಮಾತು. ಕೇವಲ ಭಾರತದಲ್ಲಷ್ಟೇ ಅಲ್ಲ, ಬೇರೆ ದೇಶಗಳಲ್ಲೂ ಮಹಿಳೆಯರು ಡಾಲರ್‌ ಚೈನ್‌ ಧರಿಸಿರುವುದನ್ನು ನೀವು ನೋಡಿರಬಹುದು. ಇದೇ ಕಾರಣಕ್ಕೆ ಲಕ್ಷ್ಮಿ ಪೆಂಡೆಂಟ್‌ ಅನ್ನೂ ಡಾಲರ್‌ ಎಂದು ಕರೆಯಲಾಗುತ್ತಿತ್ತು. ಈ ಶೈಲಿ ಮತ್ತೆ ಫ್ಯಾಷನ್‌ ಲೋಕವನ್ನು ಪ್ರವೇಶಿಸಿದೆ. 

ನಿಜಕ್ಕೂ ಇದು ಕಾಸಿನ ಸರ ಟ್ರೆಂಡ್‌ನ‌ಲ್ಲಿರುವ ಈ ಆಭರಣಗಳು ಚಿನ್ನ, ಬೆಳ್ಳಿಯ ಡಾಲರ್‌ಗಳಲ್ಲ. ಬದಲಿಗೆ ಹಿಂದೆ ಚಾಲ್ತಿಯಲ್ಲಿದ್ದ 5, 10, 25, 50 ಪೈಸೆಯ ನಾಣ್ಯಗಳು! ಈ ನಾಣ್ಯಗಳಿಗೆ ವಿಭಿನ್ನ ಆಕಾರಗಳಿದ್ದವು. ಆದ್ದರಿಂದಲೇ ಇವು ಮಾಲೆಯಲ್ಲಿ ವಿಶಿಷ್ಟವಾಗಿ ಕಾಣಿಸುತ್ತವೆ. ಹಿಂದೆ ಬಳಕೆಯಲ್ಲಿದ್ದ ನಾಣ್ಯಗಳು ಇವಾಗ ಎಲ್ಲಿ ಸಿಗುತ್ತವೋ ಏನೋ ಎಂದು ಚಿಂತೆ ಮಾಡದಿರಿ. ಮಾರುಕಟ್ಟೆಯಲ್ಲಿ ಲಭ್ಯ ಇರುವ ಸರಗಳಲ್ಲಿ ಬಹುತೇಕ ಡಾಲರ್‌ಗಳು ಇಮಿಟೇಷನ್‌ (ಅನುಕರಣೆ ಮಾಡಿದ) ನಾಣ್ಯಗಳಾಗಿರುತ್ತವೆ. ಅಲ್ಯುಮಿನಿಯಂ, ಹಿತ್ತಾಳೆ ಮುಂತಾದ ಲೋಹದಿಂದ ತಯಾರಿಸಲಾದ ನಾಣ್ಯಗಳಾಗಿರುತ್ತವೆ. ಈ ಒಡವೆಗಳನ್ನು ಪ್ಲಾಸ್ಟಿಕ್‌, ಗಾಜು, ಹಾಗೂ ಮರದ ತುಂಡಿನಿಂದಲೂ ತಯಾರಿಸಲಾಗುತ್ತಿದೆ! ಅಮ್ಮ, ಅಜ್ಜಿ ತೊಡುತ್ತಿದ್ದ ಕಾಸಿನ ಸರ ಮೇಕ್‌ ಓವರ್‌ ಪಡೆದಿದೆ. 

ಸದ್ದು ಮಾಡುತ್ತೆ…
ಇವುಗಳು ಜಂಕ್‌ ಜ್ಯುವೆಲರಿಗಳ ಸಾಲಿಗೆ ಸೇರುತ್ತವೆ. ಆದ್ದರಿಂದ ಇವುಗಳನ್ನು ಲಂಗ, ಪ್ಯಾಂಟ್‌, ಸೀರೆ, ಶಾರ್ಟ್ಸ್, ಗೌನ್‌, ಚೂಡಿದಾರ ಯಾವುದರ ಜೊತೆಗೂ ತೊಡಬಹುದಾಗಿದೆ! ಇವುಗಳನ್ನು ಪೂಜೆ, ಮದುವೆ, ಹಬ್ಬ, ಆಫೀಸ್‌, ಕಾಲೇಜು, ಶಾಪಿಂಗ್‌, ಹಾಲಿಡೇ… ಎಲ್ಲಿಗೆ ಬೇಕಾದರೂ ಧರಿಸಿಕೊಂಡು ಹೋಗಬಹುದು. ಅಷ್ಟು ವರ್ಸಟೈಲ್‌ ಈ ಹೊಸ ಕಾಸಿನ ಸರ! ಗೆಜ್ಜೆಯಂಥ ಹ್ಯಾಂಗಿಂಗ್ಸ್ ಮತ್ತು ಟ್ಯಾಸೆಲ್ಸ… ಇರುವ ಕಾಸಿನ ಸರ ಸದ್ದು ಮಾಡುತ್ತೆ. ಬಣ್ಣ ಬಣ್ಣದ ದಾರಗಳಿಂದ ಈ ನಾಣ್ಯಗಳನ್ನು ಪೋಣಿಸಿ ಉಟ್ಟ ಉಡುಪಿಗೆ ತಕ್ಕಂತೆ ಮ್ಯಾಚ್‌ ಮಾಡಿಕೊಳ್ಳುವ ಆಯ್ಕೆಯೂ ಇದೆ. ನಾಣ್ಯಗಳ ಸುತ್ತ ಮಣಿ, ಮುತ್ತು, ಕನ್ನಡಿ ಮತ್ತು ಕಲ್ಲುಗಳನ್ನು ಅಂಟಿಸಿ ಪುಷ್ಪ, ಸೂರ್ಯ, ಚಂದ್ರ, ನಕ್ಷತ್ರದಂಥ ರೂಪ ನೀಡಬಹುದು. 

ವಿವಿಧ ಆಕಾರದಲ್ಲಿ…
ನಾಣ್ಯಗಳನ್ನು ವೃತ್ತಾಕಾರಕ್ಕೆ ಸೀಮಿತವಾಗಿಸದೆ ಅವುಗಳನ್ನು ಚೌಕ, ಪಂಚಕೋನಾಕೃತಿ, ಷಟ್ಕೊನ, ಅಷ್ಟಭುಜ, ಹಾರ್ಟ್‌
ಶೇಪ್‌ (ಹೃದಯಾಕಾರ), ಮನೆಯ ಚಿತ್ರ, ಝೊಡಿಯಾಕ್‌ ಸೈನ್‌ (ರಾಶಿ ಚಿಹ್ನೆ), ಹಾವು, ಮಿಂಚಿನ ಆಕೃತಿ, ಬಲ್ಬ…, ಬಲೂನ್‌ (ಪುಗ್ಗೆ), ಬೀಗ ಅಥವಾ ಬೀಗದ ಕೈ, ಪಾದರಕ್ಷೆ, ಮುಂತಾದ ಆಕಾರಗಳಲ್ಲೂ ತಯಾರಿಸಲಾಗುತ್ತಿದೆ. ಇಂಥ ಭಿನ್ನ ಭಿನ್ನ ಆಕೃತಿಯ ಕಾಸಿನ ಸರಗಳು ಅಂಗಡಿ ಮಳಿಗೆ ಮತ್ತು ಆನ್‌ ಲೈನ್‌ನಲ್ಲಿ ಸಿಗುತ್ತವೆ. ಒಂದು ವೇಳೆ ನಿಮ್ಮ ಬಳಿ ಚಿನ್ನ ಅಥವಾ ಬೆಳ್ಳಿಯ ಕಾಸಿನ ಸರ
ಈಗಾಗಲೇ ಇದ್ದರೆ, ಅದಕ್ಕೆ ಬೇಕಾದ ಹೊಸ ವಿನ್ಯಾಸ, ಆಕೃತಿ ನೀಡಿ ಹೊಸ ಲುಕ್‌ ಪಡೆಯಬಹುದು. ಆಗ ಕಾಸಿನ ಸರ ತೊಡುವುದು ಬೋರಿಂಗ್‌ ಆಗಿರಲಾರದು.

ಇನ್ಯಾಕೆ ತಡ? ನೀವು ಸಾಂಪ್ರದಾಯಿಕ ಕಾಸಿನ ಸರಕ್ಕೆ ಹೊಸ ಟ್ವಿಸ್ಟ್ ನೀಡಿ ಅದನ್ನು ತೊಟ್ಟು ಸ್ಟೈಲ್‌ ಸ್ಟೇಟ್‌ಮೆಂಟ್‌ ಮಾಡಿ!

 ಅದಿತಿಮಾನಸ ಟಿ.ಎಸ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.