ಟ್ಯಾಂಕ್‌ ಯೂ


Team Udayavani, Apr 18, 2018, 5:06 PM IST

tyanka.jpg

ಟ್ಯಾಂಕ್‌ ಅಂದಕೂಡಲೇ ನೆನಪಾಗುವುದು, ನೀರಿನ ಟ್ಯಾಂಕ್‌ಗಳು. ಆದರೆ, ನಾವಿಲ್ಲಿ ಹೇಳುತ್ತಿರೋದು ನೀರಿನ ಟ್ಯಾಂಕ್‌ಗಳಲ್ಲ; ಬದಲಿಗೆ ನೀರೆಯರನ್ನು ಸೆಳೆಯುವ ಟ್ಯಾಂಕ್‌ಗಳು. ಅಂದರೆ, ಟ್ಯಾಂಕ್‌ ಡ್ರೆಸ್‌ಗಳು. ಬೇಸಿಗೆಗೆ ಹಾಯೆನಿಸುವ ಈ ಒನ್‌ಪೀಸ್‌ ಡ್ರೆಸ್‌ಗಳಲ್ಲಿ ಹತ್ತು ಹಲವು ವೈವಿಧ್ಯಗಳಿವೆ…

ಟ್ಯಾಂಕ್‌ ಡ್ರೆಸ್‌ ಎಂಬುದು ಬಹಳ ಹಿಂದಿನಿಂದಲೂ ಫ್ಯಾಷನ್‌ ಲೋಕದಲ್ಲಿ ಮಿಂಚುತ್ತಿರುವ ಉಡುಪು. ಇದರಲ್ಲಿ ಎರಡು ಪ್ರಕಾರಗಳಿವೆ-ಒಂದು ಬಿಗಿಯಾದ ಟ್ಯಾಂಕ್‌ ಡ್ರೆಸ್‌, ಇನ್ನೊಂದು ಸಡಿಲವಾದ ಡ್ರೆಸ್‌. ಬಿಗಿಯಾದ ಟ್ಯಾಂಕ್‌ ಡ್ರೆಸ್‌ ಧರಿಸಿ ಮಿಂಚಿದ ಗಾಯಕಿಯರು, ಕ್ರೀಡಾಪಟುಗಳು, ನಟಿಯರು, ಹಾಲಿವುಡ್‌ ಬೆಡಗಿಯರ ಫೋಟೊವನ್ನು ನೀವು ನೋಡಿರುತ್ತೀರಿ. ಆದರೆ, ಈಗ ಸಡಿಲ ಟ್ಯಾಂಕ್‌ ಡ್ರೆಸ್‌ಗಳ ಸರದಿ. ಬೇಸಿಗೆಯಲ್ವಾ? ಧರಿಸಲೂ ಸುಲಭ ಮತ್ತು ಸೆಖೆಗೂ ಆರಾಮು. ಮೈ-ಕೈಗೆ ಅಂಟಿಕೊಳ್ಳದೇ ಇರುವ ಕಾರಣದಿಂದ ಈ ಡ್ರೆಸ್‌ ಎಲ್ಲರಿಗೂ ಅಚ್ಚುಮೆಚ್ಚು. 

ಎರಡಲ್ಲ, ಮೂರಲ್ಲ; ಒಂದೇ: ಇದು ಒನ್‌ ಪೀಸ್‌ ಡ್ರೆಸ್‌. ಅಂದರೆ- ಮೇಲಂಗಿ, ಲಂಗ ಅಥವಾ ಪ್ಯಾಂಟ್‌ ಎಂದು ಪ್ರತ್ಯೇಕ ಉಡುಪುಗಳು ಇರುವುದಿಲ್ಲ. ಅಂಗಿಯೇ ಸ್ವಲ್ಪ ಉದ್ದವಾಗಿದ್ದು, ಕಾಲಗಂಟಿನವರೆಗೆ ಬಂದರೆ ಅದೇ ಟ್ಯಾಂಕ್‌ ಡ್ರೆಸ್‌. ಅವುಗಳಿಗೆ ಉದ್ದದ ತೋಳುಗಳೂ ಇರುವುದಿಲ್ಲ. ಸೆಖೆಗೆ ಸ್ಲಿàವ್‌ಲೆಸ್‌ ಉಡುಪು ಹಿತವಾದ್ದರಿಂದ, ಈ ಡ್ರೆಸ್‌ ಈಗ ಹೆಚ್ಚು ಚಾಲ್ತಿಯಲ್ಲಿದೆ. 

ಪಟ್ಟೆ ಪಟ್ಟೆಯ ಪ್ರಿಟ್ಟಿ ಡ್ರೆಸ್‌: ಹಿಂದೆಲ್ಲ ಟ್ಯಾಂಕ್‌ ಡ್ರೆಸ್‌ಗಳು ಸಾಲಿಡ್‌ ಕಲರ್ಡ್‌ ಆಗಿದ್ದವು. ಅಂದರೆ, ಒಂದೇ ಬಣ್ಣದ ಉಡುಪಾಗಿದ್ದವು. ಕ್ರಮೇಣ ಈ ಡ್ರೆಸ್‌ಗಳು ಹೊಸ ಹೊಸ ರೂಪ ಪಡೆಯಿತು. ಸ್ಟ್ರೈಪ್ಸ್‌ ಅಂದರೆ ಪಟ್ಟೆ ಪಟ್ಟೆ ವಿನ್ಯಾಸದ ಟ್ಯಾಂಕ್‌ ಡ್ರೆಸ್‌ಗಳು ಮೊದಲಿಗೆ ಪ್ರಚಲಿತಗೊಂಡವು. ಅವುಗಳಲ್ಲೂ ಅಡ್ಡಪಟ್ಟೆಗಳು ಮೊದಲು. ನಂತರ ಉದ್ದ ಪಟ್ಟೆಗಳ ಪರಿಚಯವಾಯಿತು.

ಈ ಶೈಲಿ ಕ್ಲಾಸಿಕ್‌ಆಗಿಬಿಟ್ಟಿತು! ಎಲ್ಲರ ವಾರ್ಡ್‌ರೋಬ್‌ನಲ್ಲಿ ಈ ಡ್ರೆಸ್‌ ರಾರಾಜಿಸಿತು. ಸಿನಿಮಾನಟಿಯರ ಫ್ಯಾಶನ್‌ ಟ್ರೆಂಡ್‌ ಅನ್ನು ಫಾಲೋ ಮಾಡುವ ಸಮೂಹಕ್ಕೂ ಈ ಟ್ಯಾಂಕ್‌ ಡ್ರೆಸ್‌ಗಳು ಮೋಡಿ ಮಾಡಿದವು. ಬಿಳಿ-ಕೆಂಪು, ಬಿಳಿ-ನೀಲಿ ಕಾಂಬಿನೇಶನ್‌ನ ಪಟ್ಟೆಗಳಿರುವ ಸಡಿಲ ಟ್ಯಾಂಕ್‌ ಡ್ರೆಸ್‌ಗಳು ನಟಿಯರ ಮತ್ತು ಫ್ಯಾಷನ್‌ಪ್ರಿಯರ ಶಾಪಿಂಗ್‌ ಲಿಸ್ಟ್‌ ಸೇರಿದವು. 

ಹೂವು, ಬಳ್ಳಿ, ಚಿಟ್ಟೆ ಚಿತ್ತಾರ..: ನಂತರ ಈ ಡ್ರೆಸ್‌ಗಳ ಮೇಲೆ ಹೂವು, ಬಳ್ಳಿ, ಚಿಟ್ಟೆ, ಹಣ್ಣು ಮುಂತಾದ ಆಕೃತಿಗಳು ಮೂಡಿದವು. ಕೇವಲ ಕಪ್ಪು, ಬಿಳಿ, ಕಂದು ಮತ್ತು ಬೂದಿ ಬಣ್ಣಗಳಲ್ಲಿಯೇ ಲಭ್ಯವಿದ್ದ ಸಡಿಲ ಟ್ಯಾಂಕ್‌ಡ್ರೆಸ್‌ಗಳು ಈಗ ಬೇರೆ ಬಣ್ಣಗಳಲ್ಲಿಯೂ ಲಭ್ಯ. ಪೇಸ್ಟಲ್‌ ಶೇಡ್ಸ್ ಅಂದರೆ ಬಳಪದ ಕಡ್ಡಿಯ ಬಣ್ಣದಲ್ಲೂ ಈ ಡ್ರೆಸ್‌ ಸಿಗುತ್ತದೆ.

ಹತ್ತಾರು ಆಯ್ಕೆ, ಹತ್ತಾರು ಬಣ್ಣ: ಕ್ಯಾಶುಯಲ್‌ ಉಡುಗೆಯಾಗಿರುವ ಟ್ಯಾಂಕ್‌ ಡ್ರೆಸ್‌ಅನ್ನು ಹಾಲಿಡೇ, ಶಾಪಿಂಗ್‌, ಪಾರ್ಟಿಗಳಿಗೆ ಧರಿಸಿದರೆ ಚೆಂದ. ಆನ್‌ಲೈನ್‌ನಲ್ಲಿ ಕಸ್ಟಮೈಸ್ಡ್ ಟ್ಯಾಂಕ್‌ ಡ್ರೆಸ್‌ಗಳು ಲಭ್ಯವಿದೆ. ದೇಹಕ್ಕೊಪ್ಪುವ ಬಣ್ಣ, ವಿನ್ಯಾಸ ಅಥವಾ ಚಿತ್ರವನ್ನು ಆಯ್ಕೆ ಮಾಡಿ, ವಿನ್ಯಾಸಕರಿಂದ ಅವುಗಳನ್ನು ಉಡುಪಿನ ಮೇಲೆ ಮೂಡಿಸಿಕೊಳ್ಳಬಹುದು.

ಉಡುಪಿನ ಮೇಲೆ ನಕ್ಷತ್ರ ಲೋಕ, ಸಾಗರದ ಅಲೆಗಳು, ಮೀನು-ಮರಳು-ಚಿಪ್ಪು-ಕಲ್ಲು -ಮುತ್ತುಗಳನ್ನೂ ಅವತರಿಸಿಕೊಳ್ಳಿ.  ಕಾಮನಬಿಲ್ಲಿನ ಬಣ್ಣಗಳು, ನವಿಲು ಗರಿಯ ಆಕೃತಿ, ಪೋಲ್ಕಾಡಾಟ್ಸ್‌, ಜ್ಯಾಮಿತೀಯ ಆಕೃತಿಗಳು, ರಂಗೋಲಿ, ಬರಹ, ಭಾವಚಿತ್ರ, ವ್ಯಂಗ್ಯಚಿತ್ರ ಹೀಗೆ ಹತ್ತು ಹಲವು ಆಯ್ಕೆಗಳು ನಿಮ್ಮ ಮುಂದಿವೆ. 

* ಅದಿತಿ ಮಾನಸ ಟಿ.ಎಸ್‌.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.