ವೆರೈಟಿ ಆಸ್ವಾದ


Team Udayavani, May 2, 2018, 12:35 PM IST

cooking.jpg

ಬೆಳಗ್ಗೆ ರವರವ ಬಿಸಲು, ಸಂಜೆ ತಂಪೆರೆವ ಮಳೆ- ಇಂಥ ವಾತಾವರಣ ಜೊತೆಗಿರುವ ದಿನಗಳಿವು. ಬೇಸಿಗೆಯ ಕಾರಣಕ್ಕೆ ದಾಹ-ಹಸಿವು ಎರಡೂ ಹೆಚ್ಚಿರುತ್ತದೆ. ಇಂಥ ಸಂದರ್ಭದಲ್ಲಿ ಏನಾದರೂ ಹೊಸ ಬಗೆಯ ತಿಂಡಿಗಳನ್ನು ಮಾಡಿಕೊಂಡು ತಿನ್ನುವ ಆಸೆಯಾಗುವುದು ಸಹಜ. ಕಡಿಮೆ ಬೆಲೆ ಹಾಗೂ ಸ್ವಲ್ಪ ಖರ್ಚು ಬೀಳುವ ತಿನಿಸುಗಳ ರೆಸಿಪಿ ಇಲ್ಲಿದೆ.

ಹೆಸರು ಕಾಳಿನ ಕೋಫ್ತಾ
ಬೇಕಾಗುವ ಸಾಮಗ್ರಿ:
2 ಕಪ್‌ ಹೆಸರುಕಾಳು, 4 ಈರುಳ್ಳಿ, 2ಟೊಮೆಟೊ, 7 ಹಸಿಮೆಣಸಿನಕಾಯಿ, 2 ಚಮಚ ಜೀರಿಗೆ ಪುಡಿ, ಧನಿಯ ಪುಡಿ, ಅಚ್ಚ ಖಾರದಪುಡಿ, ಗರಂ ಮಸಾಲ, 1/2 ಕಪ್‌ ಕಾರ್ನ್ ಫ್ಲೋರ್‌ (ಮುಸುಕಿನಜೋಳದ ಹಿಟ್ಟು), ಎಣ್ಣೆ, ಉಪ್ಪು, ಇಂಗು, ಕೊತ್ತಂಬರಿಸೊಪ್ಪು, ಶುಂಠಿ, ಕಸೂರಿ ಮೇತಿ 1/2 ಚಮಚ, ಅರಿಶಿಣ ಪುಡಿ

ಮಾಡುವ ವಿಧಾನ: ಹೆಸರುಕಾಳನ್ನು  ಒಂದು ಗಂಟೆ ನೆನೆಸಿ, ಬಿಸಿನೀರಲ್ಲಿ ಒಂದು ಹದ ಬೇಯಿಸಿ. ನಂತರ ಎರಡು ಹಸಿಮೆಣಸಿನಕಾಯಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ರುಬ್ಬಿ. ಆ ಮಿಶ್ರಣಕ್ಕೆ 1 ಚಮಚ ಜೀರಿಗೆ ಪುಡಿ, 1 ಚಮಚ ಗರಂ ಮಸಾಲ ಹಾಕಿ ಕಲೆಸಿ ಉಂಡೆ ಮಾಡಿ. ಈ ಉಂಡೆಗಳನ್ನು ಕಾರ್ನ್ ಫ್ಲೋರ್‌ ಮೇಲೆ ಉರುಳಿಸಿ ಎಣ್ಣೆಯಲ್ಲಿ ಫ್ರೈ ಮಾಡಿ. 

ನಂತರ ಈರುಳ್ಳಿ, ಟೊಮೆಟೊ, ಹಸಿಮೆಣಸು, ಶುಂಠಿ, ಕಸೂರಿ ಮೇತಿ ಸೇರಿಸಿ ಮಿಕ್ಸಿಯಲ್ಲಿ ನುಣ್ಣಗೆ ರುಬ್ಬಿ. ಆಮೇಲೆ ಬಾಣಲೆಗೆ ಎರಡು ಚಮಚ ಎಣ್ಣೆ, ಒಂದು ಚಮಚ ಅರಿಶಿಣ ಹಾಕಿ, ಎಣ್ಣೆ ಕಾದ ಮೇಲೆ ರುಬ್ಬಿದ ಮಿಶ್ರಣವನ್ನು, ಹಸಿ ವಾಸನೆ ಹೋಗುವ ತನಕ ಚೆನ್ನಾಗಿ ಕುದಿಸಿ.

ಈ ಕುದ್ದ ಗ್ರೇವಿಗೆ 1 ಚಮಚ  ಜೀರಿಗೆ ಪುಡಿ, 1ಚಮಚ  ಧನಿಯ ಪುಡಿ, 1ಚಮಚ ಅಚ್ಚಖಾರದ ಪುಡಿ, ಚಿಟಿಕೆ ಇಂಗು ಮತ್ತು ಉಪ್ಪು ಹಾಕಿ ಎರಡು ನಿಮಿಷ ಕುದಿಸಿ, ಅದರಲ್ಲಿ ಕರಿದಿಟ್ಟ ಹೆಸರುಕಾಳು ಉಂಡೆಗಳನ್ನು ಹಾಕಿ ಐದು ನಿಮಿಷ ಕುದಿಸಿ, ಕೊತ್ತಂಬರಿ ಸೊಪ್ಪನ್ನು ಸಣ್ಣಗೆ ಕತ್ತರಿಸಿ ಅಲಂಕರಿಸಿದರೆ ಕೋಫ್ತಾ ರೆಡಿ. 
* ಸ್ನೇಹಾ ರಮಾಕಾಂತ್‌

*****

ಅಕ್ಕಿತರಿ ಉಂಡೆ
ಬೇಕಾಗುವ ಸಾಮಗ್ರಿ:
ತೊಳೆದು ಬಿಸಿಲಿಗೆ ಹಾಕಿದ ಅಕ್ಕಿಯನ್ನು ತರಿಯಾಗಿ ಬೀಸಿಕೊಳ್ಳಿ (ಅಂಗಡಿಗಳಲ್ಲಿ ಅಕ್ಕಿತರಿ ಸಿದ್ಧರೂಪದಲ್ಲೇ ಸಿಗುತ್ತೆ) ಸಾಸಿವೆ, ಜೀರಿಗೆ, ಮೆಣಸು (ಒಗ್ಗರಣೆಗೆ), ಕಾಯಿ ತುರಿ ಸ್ವಲ್ಪ, ಸಣ್ಣಗೆ ಹೆಚ್ಚಿದ ಹಸಿ ಮೆಣಸಿನಕಾಯಿ, ಅವರೆಕಾಯಿ/ತೊಗರಿಕಾಯಿ, ರುಚಿಗೆ ತಕ್ಕಷ್ಟು ಉಪ್ಪು.

ಮಾಡುವ ವಿಧಾನ: ಅಕ್ಕಿತರಿಯನ್ನು ಸಣ್ಣ ಉರಿಯಲ್ಲಿ ಹುರಿದು ಇಟ್ಟುಕೊಳ್ಳಿ. ಕಾದ ಬಾಣಲೆಗೆ 3 ಚಮಚ ಎಣ್ಣೆ ಹಾಕಿ. ಸಾಸಿವೆ, ಜೀರಿಗೆ, ಮೆಣಸು ಹಾಕಿ ಸಿಡಿಸಿ. ಈಗ ಅದರೊಳಕ್ಕೆ ಹೆಚ್ಚಿಟ್ಟುಕೊಂಡ ಮೆಣಸಿನಕಾಯಿ, ಸಣ್ಣಗೆ ಹೆಚ್ಚಿದ ಕರಿಬೇವಿನ ಎಲೆ ಹಾಕಿ, ಚಿಟಿಕೆ ಇಂಗು ಪುಡಿ ಹಾಕಿ. ಈಗಾಗಲೇ ಬೇಯಿಸಿಟ್ಟುಕೊಂಡ ಕಾಳನ್ನೂ ಹಾಕಿಕೊಳ್ಳಿ. ತಕ್ಕಷ್ಟು ನೀರು ಹಾಕಿ ಮುಚ್ಚಿಡಿ.

ಕುದಿಯುತ್ತಿರುವ ನೀರಿಗೆ ಉಪ್ಪು ಹಾಕಿ. ಎರಡು ನಿಮಿಷದ ನಂತರ ತುರಿದ ಕೊಬ್ಬರಿ, ಕೊತ್ತಂಬರಿ ಸೊಪ್ಪು ಹಾಕಿ. ತದನಂತರ ಅಕ್ಕಿತರಿ ಹಾಕಿ 2 ನಿಮಿಷ ಮುಚ್ಚಿಡಿ. ಪೂರ್ತಿ ಬೇಯಿಸಬೇಡಿ. ಈಗ ಒಲೆ ಆರಿಸಿ, ಒಂದು ತಟ್ಟೆಯಲ್ಲಿ ಆರಲು ಹಾಕಿ. ಕೊಂಚ ತಣ್ಣಗಾದ ನಂತರ ಉಂಡೆ ಮಾಡಿ ಎಣ್ಣೆ ಹಚ್ಚಿದ ಇಡ್ಲಿ ತಟ್ಟೆಯಲ್ಲಿ ಇಟ್ಟು ಹಬೆಯಲ್ಲಿ ಬೇಯಿಸಿ. ಈಗ ಅಕ್ಕಿತರಿ ಉಂಡೆ ರೆಡಿ. ಇದನ್ನು ತುಪ್ಪದ ಜೊತೆ ತಿಂದರೆ ರುಚಿ ಹೆಚ್ಚು.
* ಸವಿತಾ ನಾಗೇಶ್‌

*****

ಖರ್ಜೂರದ ಹೋಳಿಗೆ 
ಬೇಕಾಗುವ ಸಾಮಗ್ರಿ:
ಖರ್ಜೂರ 8-10, ಮೈದಾ ಹಿಟ್ಟು-2 ಕಪ್‌, ಚಿರೋಟಿ ರವೆ-1 ಕಪ್‌, ಸಕ್ಕರೆ ಪುಡಿ-2 ಕಪ್‌, ತುರಿದ ಒಣಕೊಬ್ಬರಿ-3/4 ಕಪ್‌, ಗಸಗಸೆ ಪುಡಿ-1/4 ಕಪ್‌, ಏಲಕ್ಕಿ ಪುಡಿ-1/2 ಚಮಚ, ತುಪ್ಪ-1 ಕಪ್‌

ಮಾಡುವ ವಿಧಾನ: ಖರ್ಜೂರದ ಬೀಜ ತೆಗದು ಬೇಯಿಸಿ ರುಬ್ಬಿ. ಅದಕ್ಕೆ ಮೈದಾ ಹಿಟ್ಟು, ಚಿರೋಟಿ ರವೆ ಸೇರಿಸಿ, ಸ್ವಲ್ಪ ಎಣ್ಣೆ ಹಾಕಿ ನೀರಿನೊಂದಿಗೆ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ ಕಣಕ ತಯಾರಿಸಿ, ಒಂದು ಗಂಟೆ ನೆನೆಯಲಿರಿಸಿ. ಬೇಯಿಸಿದ ಖರ್ಜೂರಕ್ಕೆ, ಸಕ್ಕರೆ ಪುಡಿ ಸೇರಿಸಿ ನಾದಿ, ಅದಕ್ಕೆ ಗಸಗಸೆ, ಏಲಕ್ಕಿ ಪುಡಿ, ತುರಿದ ಒಣಕೊಬ್ಬರಿ, ಸ್ವಲ್ಪ ತುಪ್ಪ ಸೇರಿಸಿ ಕಲಸಿ,

ಹೂರಣ ತಯಾರಿಸಿಟ್ಟುಕೊಳ್ಳಿ. ಕಲಸಿದ ಕಣಕದಿಂದ ಲಿಂಬೆ ಗಾತ್ರದ ಉಂಡೆ ಮಾಡಿ, ಅಂಗೈಯಲ್ಲಿ ತಟ್ಟಿ, ಹೂರಣ ತುಂಬಿಸಿ, ಮೃದುವಾಗಿ ಲಟ್ಟಿಸಿ, ತುಪ್ಪ ಸವರಿ, ಕಾಯಿಸಿದ ಕಾವಲಿಯ ಮೇಲೆ ಹರಡಿ. ಎರಡೂ ಬದಿಯನ್ನು ಹೊಂಬಣ್ಣ ಬರುವವರೆಗೆ ಬೇಯಿಸಿದರೆ ಹೋಳಿಗೆ ತಯಾರು. 

ಬೆಲ್ಲದ ಹೋಳಿಗೆ
ಬೇಕಾಗುವ ಸಾಮಗ್ರಿ:
ಮೈದಾ ಹಿಟ್ಟು-2 ಕಪ್‌, ಚಿರೋಟಿ ರವೆ-1 ಕಪ್‌, ಅಕ್ಕಿ ಹಿಟ್ಟು-2 ಚಮಚ, ಬೆಲ್ಲದ ತುರಿ-2 ಕಪ್‌, ತುರಿದ ಒಣಕೊಬ್ಬರಿ-3/4 ಕಪ್‌, ಗಸಗಸೆ ಪುಡಿ-1/4 ಕಪ್‌, ಏಲಕ್ಕಿ ಪುಡಿ-1/2 ಚಮಚ, ತುಪ್ಪ-1 ಕಪ್‌ 

ಮಾಡುವ ವಿಧಾನ: ಮೈದಾ ಹಿಟ್ಟು, ಚಿರೋಟಿ ರವೆ, ಅಕ್ಕಿ ಹಿಟ್ಟು ಸೇರಿಸಿ, ಸ್ವಲ್ಪ ಎಣ್ಣೆ ಹಾಕಿ ನೀರಿನೊಂದಿಗೆ ಪೂರಿ ಹಿಟ್ಟಿನ ಹದಕ್ಕೆ ಕಲಸಿ, ಒಂದು ಗಂಟೆ ನೆನೆಸಿಡಿ. 1 ಚಮಚ ಮೈದಾ ಹಿಟ್ಟಿಗೆ, ಗಸಗಸೆ ಪುಡಿ, ಬೆಲ್ಲದ ತುರಿ, ಒಣಕೊಬ್ಬರಿ ತುರಿ, ಏಲಕ್ಕಿ ಪುಡಿ, ಸ್ವಲ್ಪ ತುಪ್ಪ ಸೇರಿಸಿ, ಕಲಸಿ, ಹೂರಣ ತಯಾರಿಸಿ. ಕಣಕದಿಂದ ಲಿಂಬೆ ಗಾತ್ರದ ಉಂಡೆ ಮಾಡಿ, ಅಂಗೈಯಲ್ಲಿ ತಟ್ಟಿ, ಹೂರಣ ತುಂಬಿಸಿ, ಮೃದುವಾಗಿ ಲಟ್ಟಿಸಿ, ತುಪ್ಪ ಸವರಿ ಕಾಯಿಸಿದ ಕಾವಲಿಯ ಮೇಲೆ ಹರಡಿ. ಎರಡೂ ಬದಿಯನ್ನು ಹೊಂಬಣ್ಣ ಬರುವವರೆಗೆ ಬೇಯಿಸಿ.
* ಜಯಶ್ರೀ ಕಾಲ್ಕುಂದ್ರಿ            

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.