ಒಂದೇ ಎಲೆಯುಳ್ಳ ಪುಟ್ಟ ಮೂಲಿಕಾ ಸಸ್ಯ…ಒಂದೆಲಗ ರುಚಿ ಹಲವು


Team Udayavani, Nov 30, 2020, 5:28 PM IST

coocking.jpg

ಮಲೆನಾಡು ಮತ್ತು ಕರಾವಳಿಯ ಅಡಕೆ ತೋಟಗಳಲ್ಲಿ, ಗದ್ದೆಯ ಬದುವಿನಲ್ಲಿ, ಅಂಗಳದಲ್ಲಿ… ಹೀಗೆ ನೀರಿನ ಲಭ್ಯತೆ ಇರುವಲ್ಲಿ ಹುಲುಸಾಗಿ ಬೆಳೆಯುವ, ಉರುಟಾದ ಒಂದೇ ಎಲೆಯುಳ್ಳ ಪುಟ್ಟ ಮೂಲಿಕಾ ಸಸ್ಯ ಒಂದೆಲಗ’. ಇದಕ್ಕೆ ಬ್ರಾಹ್ಮಿ, ಉರಗೆ ಎಂಬ ಹೆಸರುಗಳೂ ಇವೆ.

ಒಂದೆಲಗದ ಅಡುಗೆಗಳು ಬಾಯಿಗೆ ರುಚಿ, ಶರೀರಕ್ಕೆ ತಂಪು ಹಾಗೂ ಬೇಸಗೆಯಲ್ಲಿ ಆರೋಗ್ಯಕ್ಕೆ ಹಿತಕಾರಿ. ಕೆಲವೊಮ್ಮೆ ಸೊಪ್ಪು ಮಾರುವವರ ಬಳಿ ಒಂದೆಲಗ ಸಿಗುತ್ತದೆ. ಮನೆಯಲ್ಲಿಯೇ ಕುಂಡಗಳಲ್ಲೂ ಒಂದೆಲಗ ಬೆಳೆಸಬಹುದು. ಒಂದೆಲಗದಿಂದ ತಯಾರಿಸಬಹುದಾದ ಕೆಲವು ತಿನಿಸುಗಳ ರೆಸಿಪಿ ಇಲ್ಲಿದೆ.

1.ಒಂದೆಲಗದ ಚಟ್ನಿ
ಬೇಕಾಗುವ ಸಾಮಗ್ರಿ: ತೊಳೆದು ಶುಚಿಗೊಳಿಸಿದ ಒಂದೆಲಗದ ಸೊಪ್ಪು- ಒಂದು ಹಿಡಿ, ತೆಂಗಿನತುರಿ- ಅರ್ಧ ಕಪ್‌, ಹಸಿಮೆಣಸು-2, ಕಾಳುಮೆಣಸಿನ ಪುಡಿ- ಅರ್ಧ ಚಮಚ, ಜೀರಿಗೆ- ಅರ್ಧ ಚಮಚ, ಕಡಲೇಬೇಳೆ-ಒಂದು ಚಮಚ, ಹುಣಸೇಹಣ್ಣು-ಸಣ್ಣ ಗೋಲಿಯಷ್ಟು, ರುಚಿಗೆ ತಕ್ಕಷ್ಟು ಉಪ್ಪು, ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಒಣಮೆಣಸು, ಕರಿಬೇವಿನ ಸೊಪ್ಪು.

ತಯಾರಿಸುವ ವಿಧಾನ: ಮಸಾಲೆ ವಸ್ತುಗಳನ್ನು ಬಾಣಲೆಗೆ ಹಾಕಿ ಸುವಾಸನೆ ಬರುವಷ್ಟು ಹುರಿಯಿರಿ. ಸಾಮಾನ್ಯವಾಗಿ ಒಂದೆಲಗವನ್ನು ಹಸಿಯಾಗಿ ಬಳಸುವುದು ರೂಢಿ. ಬೇಕೆನಿಸಿದರೆ, ಬಾಣಲೆಗೆ ಹಾಕಿ ಸ್ವಲ್ಪ ಬಾಡಿಸಿಕೊಳ್ಳಬಹುದು. ಹುರಿದ ಮಸಾಲೆಗೆ ತುರಿದ ತೆಂಗಿನಕಾಯಿ, ಹಸಿಮೆಣಸು, ಒಂದೆಲಗದ ಸೊಪ್ಪು, ಹುಣಸೆಹಣ್ಣು ಮತ್ತು ಉಪ್ಪು ಸೇರಿಸಿ, ಬೇಕಾದರೆ ಸ್ವಲ್ಪ ನೀರನ್ನು ಸೇರಿಸಿ ಗಟ್ಟಿಯಾಗಿ ರುಬ್ಬಿ. ಕರಿಬೇವು, ಸಾಸಿವೆ ಹಾಕಿ ಒಗ್ಗರಣೆ ಕೊಟ್ಟರೆ ಹಸಿರು ಬಣ್ಣದ ಒಂದೆಲಗದ ಚಟ್ನಿ ಸಿದ್ಧ.

2.ಒಂದೆಲಗದ ತಂಬುಳಿ 
ಬೇಕಾಗುವ ಸಾಮಗ್ರಿ:
ಒಂದೆಲಗದ ಚಟ್ನಿ- ಅರ್ಧ ಕಪ್‌, ಮೊಸರು/ಮಜ್ಜಿಗೆ-2 ಕಪ್‌, ರುಚಿಗೆ ತಕ್ಕಷ್ಟು ಉಪ್ಪು

ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಒಣಮೆಣಸು, ಕರಿಬೇವಿನ ಸೊಪ್ಪು

ತಯಾರಿಸುವ ವಿಧಾನ: ಮೊದಲು ಒಂದೆಲಗದ ಚಟ್ನಿ ತಯಾರಿಸಿ. ಅರ್ಧ ಕಪ್‌ನಷ್ಟು ಚಟ್ನಿಗೆ 2 ಕಪ್‌ ಮೊಸರು ಅಥವಾ ಮಜ್ಜಿಗೆ ಬೆರೆಸಿ ಕದಡಿ. ಬೇಕಿದ್ದರೆ ಹೆಚ್ಚುವರಿ ನೀರು ಮತ್ತು ಉಪ್ಪು ಸೇರಿಸಿ ತಂಬುಳಿಯ ಹದಕ್ಕೆ ಬೆರೆಸಿ.  ಈ ಮಿಶ್ರಣಕ್ಕೆ ಸಾಸಿವೆ, ಕರಿಬೇವು ಸೇರಿಸಿದ ಒಗ್ಗರಣೆ ಕೊಟ್ಟರೆ ಒಂದೆಲಗದ ತಂಬುಳಿ ತಯಾರಾಗುತ್ತದೆ. ಇದಕ್ಕೆ ಬೇಕೆನಿಸಿದರೆ ಬೆಳ್ಳುಳ್ಳಿಯ ಒಗ್ಗರಣೆಯನ್ನೂ ಕೊಡಬಹುದು.

3. ಒಂದೆಲಗದ ತಿಳಿಸಾರು
ಬೇಕಾಗುವ ಸಾಮಗ್ರಿಗಳು:
ಒಂದೆಲಗದ ಚಟ್ನಿ-ಅರ್ಧ ಕಪ್‌ , ಟೊಮ್ಯಾಟೋ-2,ಸಾರಿನ ಪುಡಿ-ಒಂದು ಚಮಚ, ಬೆಂದ ತೊಗರಿಬೇಳೆ-ಕಾಲು ಕಪ್‌, ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಚಿಟಿಕೆ ಬೆಲ್ಲ, ಹೆಚ್ಚಿದ ಕೊತ್ತಂಬರಿ ಸೊಪ್ಪು ಸ್ವಲ್ಪ, ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಕರಿಬೇವು, ಆಯ್ಕೆಗೆ ತಕ್ಕಂತೆ ಇಂಗು ಅಥವಾ ಬೆಳ್ಳುಳ್ಳಿ.

ತಯಾರಿಸುವ ವಿಧಾನ: ಒಂದೆಲಗದ ಚಟ್ನಿ, ಹೆಚ್ಚಿದ ಟೊಮ್ಯಾಟೊ, ಬೆಂದ ತೊಗರಿಬೇಳೆ, ಸಾರಿನ ಪುಡಿ ಎಲ್ಲವನ್ನೂ ಸೇರಿಸಿ, ಬೇಕಾದಷ್ಟು ನೀರು ಸೇರಿಸಿ ಚೆನ್ನಾಗಿ ಕುದಿಸಿ. ರುಚಿಗೆ ತಕ್ಕಷ್ಟು ಉಪ್ಪು, ಬೇಕೆನಿಸಿದರೆ ಚಿಟಿಕೆ ಬೆಲ್ಲ ಸೇರಿಸಿ ಪುನ: ಕುದಿಸಿ. ಹೆಚ್ಚಿದ ಕೊತ್ತಂಬರಿ ಸೊಪ್ಪು ಸೇರಿಸಿ. ಆಯ್ಕೆಗೆ ತಕ್ಕಂತೆ ಸಾಸಿವೆ, ಕರಿಬೇವು, ಇಂಗು ಅಥವಾ  ಬೆಳ್ಳುಳ್ಳಿ ಸೇರಿಸಿದ ಒಗ್ಗರಣೆ ಕೊಟ್ಟರೆ  ಒಂದೆಲಗದ ತಿಳಿಸಾರು ತಯಾರಾಗುತ್ತದೆ.

4. ಒಂದೆಲಗದ ಚಿತ್ರಾನ್ನ
ಬೇಕಾಗುವ ಸಾಮಗ್ರಿ:
ಒಂದಲಗದ ಚಟ್ನಿ-ಅರ್ಧ ಕಪ್‌,  ಉದುರಾದ ಅನ್ನ- 2 ಕಪ್‌,  ರುಚಿಗೆ ತಕ್ಕಷ್ಟು ಉಪ್ಪು, ಲಿಂಬೆಹಣ್ಣು-1, ಹೆಚ್ಚಿದ  ಕೊತ್ತಂಬರಿ ಸೊಪ್ಪು ಸ್ವಲ್ಪ, ಒಗ್ಗರಣೆಗೆ: ಸ್ವಲ್ಪ ಎಣ್ಣೆ, ಸಾಸಿವೆ, ಕರಿಬೇವು, ಕಡಲೇಕಾಯಿ, ಉದ್ದಿನಬೇಳೆ, ಕಡಲೇಬೇಳೆ.

ತಯಾರಿಸುವ ವಿಧಾನ: ಒಂದೆಲಗದ ಚಟ್ನಿ ಮತ್ತು ಅನ್ನವನ್ನು ತಯಾರಿಸಿಟ್ಟುಕೊಳ್ಳಿ. ಬಾಣಲಿಯಲ್ಲಿ ಎಣ್ಣೆ, ಸಾಸಿವೆ, ಉಪ್ಪಿನಬೇಳೆ, ಕಡಲೇಬೇಳೆ, ಕಡಲೇಕಾಯಿ, ಕರಿಬೇವು ಹಾಕಿ ಒಗ್ಗರಣೆ ಮಾಡಿ, ಅದಕ್ಕೆ ಅನ್ನ ಮತ್ತು ಒಂದೆಲಗದ ಚಟ್ನಿ ಬೆರೆಸಿ. ಚಟ್ನಿಯಲ್ಲಿ  ಉಪ್ಪು, ಹುಳಿ  ಇರುವುದರಿಂದ ಅಗತ್ಯವಿದ್ದರೆ ಮಾತ್ರ ಹೆಚ್ಚುವರಿ ಉಪ್ಪು,  ನಿಂಬೆಹಣ್ಣಿನ ರಸ ಸೇರಿಸಿ ಪುನ: ಬೆರೆಸಿ. ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಹಸಿರು ಬಣ್ಣದ  ಒಂದೆಲಗದ ಚಿತ್ರಾನ್ನ ಸಿದ್ಧ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ಸಲ್ಮಾನ್‌ ಖಾನ್‌ ಟು ಸಿಧು ಮೂಸೆವಾಲ: ಗುಂಡಿನ ದಾಳಿಗೆ ಬೆದರಿದ ಸೆಲೆಬ್ರಿಟಿಗಳಿವರು

ರೋಮಾಂಚನಗೊಳಿಸುವ ಡಿಸ್ನಿ ಲೋಕ…. ; ಇಲ್ಲಿ ಎಲ್ಲವೂ ಕಣ್ಣೆದುರಿಗೆ

Disneyland: ರೋಮಾಂಚನಗೊಳಿಸುವ ಡಿಸ್ನಿ ಲೋಕ….ಇಲ್ಲಿ ಎಲ್ಲವೂ ಕಣ್ಣೆದುರಿಗೆ…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.