ಸಪ್ತಪದಿಗೂ ಮುನ್ನ ಓಕುಳಿ


Team Udayavani, May 16, 2018, 12:28 PM IST

saptapadi.jpg

ಜೂಸ್‌ ಕೊಡಲು ಹೋದ ಅಕ್ಕ, ಅದನ್ನು ಹುಡುಗನ ಶರ್ಟ್‌ ಮೇಲೆ ಚೆಲ್ಲಿಬಿಟ್ಟಳು. ಅವನ ಬಿಳಿ ಶರ್ಟ್‌ ಪೂರ್ತಿ ಬಣ್ಣವಾಗಿ ಹೋಯಿತು.

ಭವಿಷ್ಯದ ಕನಸು ಕಣ್ಮುಂದೆ ಕುಳಿತಿದ್ದರೂ ನೆಲವನ್ನೇ ನೋಡುತ್ತಾ ಕುಳಿತಿದ್ದಳು. ಅವಳ ಆತಂಕಕ್ಕೆ ಕೈಯಲ್ಲಿ ಮುದುಡಿದ ಕರವಸ್ತ್ರವೇ ಆಸರೆಯಾಗಿತ್ತು. ಕಿರುಗಣ್ಣಲ್ಲಿ ಒಮ್ಮೆ ನೋಡಿದಾಗ ಆ ಎರಡು ಕಣ್ಣುಗಳು  ತನ್ನನ್ನೇ ನೋಡುತ್ತಿವೆ ಎಂಬುದನ್ನು ಗಮನಿಸಿ ಮತ್ತೆ  ನಾಚಿಕೆಯಿಂದ ಕೆಂಪೇರಿದ ಮುಖ ಬಾಗಿತು.

ಅವಳನ್ನೇ ನೋಡುತ್ತಿದ್ದ ನನಗೂ ಏನೋ ಆತಂಕ. ಅವಳ ಕೈಯಲ್ಲಿ ತಣ್ಣನೇ ಜ್ಯೂಸ್‌ ಹಿಡಿಸಿ ಎಲ್ಲರಿಗೂ ಕೊಡು ಎಂದು ಕೊಟ್ಟಾಗ ನನ್ನ ಹೆದರಿಕೆ ಮತ್ತೂ ಹೆಚ್ಚಿತ್ತು. ನಿನ್ನೆ ತಾನೆ ಅಜ್ಜಿ ಅವಳ ವಧುಪರೀಕ್ಷೆಯ ಕಥೆಯನ್ನು ನನಗೆ ಹಾಗೂ ಅಕ್ಕನಿಗೆ ಹೇಳಿದ್ದಳು.

ಅಜ್ಜಿಗೆ ಸುಮಾರು ಹದಿನೈದು ಗಂಡುಗಳು ಬಂದು ವಧುಪರೀಕ್ಷೆ ಮಾಡಿದ್ದರಂತೆ. ಜಾತಕದ ಜೊತೆಗೆ ಹುಡುಗಿಯ ಸ್ವರ ಹೇಗೆ ಎಂದು ತಿಳಿಯಲು ಹಾಡಿಸುವುದು. ಕಿವಿ, ಕೈ-ಕಾಲುಗಳ ಒಟ್ಟು ಪರೀಕ್ಷೆಗಳಾಗುತ್ತಿತ್ತು. ಅಜ್ಜಿ ಉಪಚರಿಸುವಾಗ ಪಾನಕವನ್ನು ಹುಡುಗನ ಅಪ್ಪನ ಮೇಲೆಯೇ ಚೆಲ್ಲಿ ಬಿಟ್ಟಿದ್ದಳಂತೆ. ಅದಕ್ಕಾಗಿಯೇ ಒಂದು ಹುಡುಗ ಅಜ್ಜಿಯನ್ನು ರಿಜೆಕr… ಮಾಡಿದ್ದನಂತೆ.

ಅಕ್ಕನ ಕೈ ಜ್ಯೂಸ್‌ ಬಟ್ಟಲು ಹಿಡಿದಾಗ, ಅವಳಿಗಿಂತ ಜಾಸ್ತಿ ನನಗೆ ಹೆದರಿಕೆ ಆಗುತ್ತಿತ್ತು. ಈಗ ಅಕ್ಕ ಜ್ಯೂಸ್‌ ಚೆಲ್ಲಿ ಹುಡುಗ ಒಪ್ಪಿಗೆಯಾಗದಿದ್ದರೆ ಎಂದೆಲ್ಲಾ ನೆಗೆಟಿವ್‌ ಆಲೋಚನೆಗಳು ನನ್ನ ತಲೆಯಲ್ಲಿ ತುಂಬಿದ್ದವು. ಅಂತೂ ನಾನು ಏನು ಆಲೋಚಿಸಿದ್ದೆನೋ ಅದನ್ನು ಅಕ್ಕ ಮಾಡಿಯೇ ಬಿಟ್ಟಳು. ಹುಡುಗನ ಮೇಲೆ ಜ್ಯೂಸ್‌ ಚೆಲ್ಲಿಯೇ ಬಿಟ್ಟಳು. ಅವನ ವೈಟ್‌ ಶರ್ಟ್‌ ಪೂರ್ತಿ ಬಣ್ಣವಾಗಿ ಹೋಯಿತು. 

ಅಲ್ಲಿಗೆ ಕತೆ ಮುಗಿಯಿತು ಎಂದುಕೊಂಡೆ. ಆದರೆ ಹುಡುಗನ ಅಪ್ಪ-ಅಮ್ಮ, “ನಮ್ಮ ಹುಡುಗನ ಬಾಳಲ್ಲಿ ಈಗಲೇ ಬಣ್ಣ ತುಂಬಿ ಬಿಟ್ಟೆ’ ಎಂದು ಶರ್ಟ್‌ ತೋರಿಸಿ ನಗುತ್ತಾ ವಾತಾವರಣ ತಿಳಿಗೊಳಿಸಿದರು. ಹುಡುಗ, ಅಕ್ಕನ ಜೊತೆ ಸ್ವಲ್ಪ ಏಕಾಂತದಲ್ಲಿ ಮಾತನಾಡಬೇಕು ಎಂದು ಕರೆದು, “ಹೆದರಬೇಡಿ. ನಿಮ್ಮನ್ನು ನಿಮ್ಮ ಮನೆಯವರು ನೋಡಿಕೊಂಡಂತೆ ನೋಡಿಕೊಳ್ಳುತ್ತೇನೆ.’ ಎಂದು ಸಾಂತ್ವನ ಹೇಳಿದ್ದನ್ನು ನನ್ನ ಕಳ್ಳ ಕಿವಿಗಳು ಕೇಳಿಸಿಕೊಂಡವು.

ಎಲ್ಲಾ ಒಪ್ಪಿಕೊಂಡು ಮದುವೆಯಾಗಿ ಈಗ ಐದಾರು ವರ್ಷ ಕಳೆದುಹೋಗಿದೆ. ಅಕ್ಕ ಆ ಮನೆಯಲ್ಲಿ ಸೊಸೆಯಾಗಿರದೇ ಮಗಳೇ ಆಗಿದ್ದಾಳೆ. ಈಗ ನಾಡಿದ್ದು ನನ್ನ ವಧುಪರೀಕ್ಷೆ. ಮತ್ತೆ ಅಜ್ಜಿ ಅವಳ ವಧು ಪರೀಕ್ಷೆಯ ಕಥೆಯ ಜೊತೆ ಅಕ್ಕನ ಕಥೆಯನ್ನು ಸೇರಿಸಿ ನನಗೆ ಹೇಳುತ್ತಿದ್ದಾಳೆ.

* ಪ್ರಭಾ ಹೆಗಡೆ ಭರಣಿ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.