ಈ ಕಾವ್ಯ ಸುಶ್ರಾವ್ಯ


Team Udayavani, Jun 13, 2018, 6:00 AM IST

z-8.jpg

ಯಕ್ಷಗಾನ… ಕೇಳಲು ಹಾಗೂ ನೋಡಲು ಅದ್ಧೂರಿ ಅನ್ನಿಸುವ ಕಲೆ. ಕರಾವಳಿಯ ನರನಾಡಿಯೊಂದಿಗೆ ಬೆರೆತು ಹೋಗಿರುವ ಯಕ್ಷಗಾನ, ಗಂಡುಕಲೆಯೆಂದೇ ಹೆಸರುವಾಸಿ. ಆದರೆ, ಇತ್ತೀಚೆಗೆ ಅಲ್ಲಿಯೂ ಹೆಂಗಳೆಯರು ಛಾಪು ಮೂಡಿಸುತ್ತಿದ್ದಾರೆ. ಮುಮ್ಮೇಳದಲ್ಲಷ್ಟೇ ಅಲ್ಲ, ಕಂಚಿನ ಕಂಠದ ಹಿಮ್ಮೇಳದಲ್ಲೂ ಸೈ ಅನ್ನಿಸಿಕೊಂಡ ಬೆರಳೆಣಿಕೆಯ ಕಲಾವಿದರಲ್ಲಿ ಕಾವ್ಯಶ್ರೀ ನಾಯಕ್‌ ಅಜೇರು ಕೂಡ ಒಬ್ಬರು… 

ಈಕೆ ಮೈಕಿನ ಎದುರು ಹಾಡಲು ಕುಳಿತರೆ ವೇದಿಕೆಯಲ್ಲಿ ಮಿಂಚಿನ ಸಂಚಾರವಾದ ಅನುಭವ. ಸುಶ್ರಾವ್ಯ ಕಂಠ ಹಾಗೂ ಸ್ಪಷ್ಟ ಮಾತುಗಾರಿಕೆಯಿಂದ ಯಕ್ಷ ಪ್ರಸಂಗಗಳಿಗೆ ಜೀವ ತುಂಬುವ ಕಲೆ ಈಕೆಗೆ ಕರಗತ. ಮೂರು ಗಂಟೆ, ಆರು ಗಂಟೆ ಸತತವಾಗಿ ದಣಿವಿಲ್ಲದೆ ಯಕ್ಷಪದಗಳನ್ನು ಹಾಡಬಲ್ಲ ಕಾವ್ಯಶ್ರೀ ನಾಯಕ್‌ ಅಜೇರು, ಭಾಗವತಿಕೆಯಲ್ಲಿ ಹೆಸರು ಮಾಡುತ್ತಿರುವ ಯುವ ಪ್ರತಿಭೆ. ಪುರುಷರಿಗಷ್ಟೇ ಸೀಮಿತ ಅನಿಸಿಕೊಂಡಿದ್ದ ವಿಭಾಗದಲ್ಲಿ, ಮಹಿಳಾ ಭಾಗವತರ ಸಂಖ್ಯೆ ಕಡಿಮೆಯೇ. ಆ ಸಾಲಿನಲ್ಲಿ ಬರುವ ಕೆಲವೇ ಕೆಲವು ಹೆಸರುಗಳಲ್ಲಿ ಕಾವ್ಯಾ ಕೂಡ ಒಬ್ಬರು.
 

ಅಪ್ಪನ ಜೊತೆಗೆ ಮಗಳಿಗೂ ಕ್ಲಾಸು
ಕಾವ್ಯಾ ಹುಟ್ಟಿ, ಬೆಳೆದಿದ್ದು ಬಂಟ್ವಾಳ ತಾಲೂಕಿನ ಅಜೇರು ಗ್ರಾಮದ ಕಲಾಸಕ್ತರ ಕುಟುಂಬದಲ್ಲಿ. ಅಜ್ಜ, ಅಪ್ಪ ಇಬ್ಬರೂ ಹವ್ಯಾಸಿ ಯಕ್ಷಗಾನ ಕಲಾವಿದರು. ಹಿಮ್ಮೇಳ ಕಲಾವಿದರಾಗಿದ್ದ ತಂದೆ ಶ್ರೀಪತಿ ನಾಯಕ್‌, ಮಾಂಬಾಡಿ ಸುಬ್ರಹ್ಮಣ್ಯ ಭಟ್‌ರಿಂದ ಚಂಡೆ ಕಲಿಯುತ್ತಿದ್ದರು. ಆಗ 5ನೇ ಕ್ಲಾಸ್‌ನಲ್ಲಿದ್ದ ಕಾವ್ಯಾ ಕೂಡ ಪ್ರತಿದಿನ ತಂದೆ ಜೊತೆಗೆ ಚಂಡೆ ಕ್ಲಾಸ್‌ಗೆ ಹೋಗುತ್ತಿದ್ದಳು. ನಿತ್ಯವೂ ಅಪ್ಪನ ಜೊತೆಗೆ ಬರುವ ಹುಡುಗಿಯನ್ನು ನೋಡಿದ ಸುಬ್ರಹ್ಮಣ್ಯ ಭಟ್ಟರು, ಆಗಾಗ ಅವಳ ಕೈಯಲ್ಲಿ ಹಾಡು ಹಾಡಿಸುತ್ತಿದ್ದರು. ಕಾವ್ಯಾ ಕೂಡ ಅಷ್ಟೇ ಆಸಕ್ತಿಯಿಂದ ಹಾಡು ಹೇಳುತ್ತಿದ್ದಳು. ಅವಳ ಕಂಠ ಚೆನ್ನಾಗಿದೆ ಎಂದು ಗುರುತಿಸಿದ ಅವರು, “ನೀವು ಚಂಡೆ ಕಲಿತಿದ್ದು ಸಾಕು. ಇನ್ಮುಂದೆ ನಿಮ್ಮ ಮಗಳಿಗೆ ಹಾಡಲು ಕಲಿಸೋಣ’ ಅಂತ ಆಕೆಯ ತಂದೆಗೆ ಹೇಳಿದರು. ಅಂದಿನಿಂದ ಕಾವ್ಯಾಳ ಕಲಿಕೆ ಶುರುವಾಯಿತು. 

500ಕ್ಕೂ ಹೆಚ್ಚು ಪ್ರದರ್ಶನ
6ನೇ ತರಗತಿಯಲ್ಲಿದ್ದಾಗಲೇ ತಾಳಮದ್ದಳೆ ರಂಗಪ್ರವೇಶ ಮಾಡಿದ ಕಾವ್ಯಾ, ಈಗಾಗಲೇ 500ಕ್ಕೂ ಹೆಚ್ಚು ಪ್ರದರ್ಶನ ನೀಡಿದ್ದಾಳೆ. ಮೈಸೂರು, ಹೆಗ್ಗೊàಡು, ಹುಬ್ಬಳ್ಳಿ, ಬೆಂಗಳೂರು, ಮುಂಬೈ, ಹರಿದ್ವಾರ, ಚೆನ್ನೈ, ದುಬೈ ಮುಂತಾದ ಕಡೆಗಳಲ್ಲಿ, ಹಿರಿಯ ಭಾಗವತರ ಜೊತೆಗೆ ವೇದಿಕೆ ಏರಿದ ಹೆಗ್ಗಳಿಕೆ ಈ ಯುವತಿಯದ್ದು. ಶಾಂತ ಸ್ವಭಾವದ, ಸುಮಧುರ ಕಂಠದ ಕಾವ್ಯಾ, ಪಾತ್ರದ ಸ್ವಭಾವಕ್ಕೆ ತಕ್ಕಂತೆ ಧ್ವನಿ ಬದಲಾಯಿಸಿಕೊಂಡು ಹಾಡಬಲ್ಲರು. ತೆಂಕು, ಬಡಗಿನ ಹಿರಿಯ ಭಾಗವತರ ಜತೆ ಅನೇಕ ಗಾನ ವೈಭವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅಷ್ಟೇ ಅಲ್ಲ, ಇದೀಗ ಮೇರು ಭಾಗವತರ ಜತೆಗೆ ದ್ವಂದ್ವದಲ್ಲೂ ಸೈ ಎನಿಸಿಕೊಂಡಿದ್ದಾರೆ. ನವರಸಗಳಿಗೆ ಜೀವ ತುಂಬಿ, ವೇದಿಕೆಯನ್ನು ಆವರಿಸುವ 24ರ ಈ ಯುವತಿ, ಕಲಾಸಂಗಮ ಜಿಲ್ಲಾ ಪ್ರಶಸ್ತಿ, ಸುಮ ಸೌರಭ ರಾಜ್ಯ ಪ್ರಶಸ್ತಿ, ನಾದಶ್ರೀ ಪ್ರಶಸ್ತಿ, ಕೊಂಕಣಿ ಸಾಂಸ್ಕೃತಿಕ ರಾಯಭಾರಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಿಂದ ಪುರಸ್ಕಾರ ಪಡೆದಿದ್ದಾರೆ.

   ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಕಾವ್ಯಶ್ರೀ, ಸದ್ಯ ಬಿ.ಎಡ್‌. ಓದುತ್ತಿದ್ದಾರೆ. ಯಕ್ಷಗಾನದಲ್ಲಿಯೇ ಮತ್ತಷ್ಟು ಸಾಧಿಸುವ ಹಂಬಲ ಇವರದ್ದು. 

ತುಂಬಾ ಸುಲಭದ್ದೇನಲ್ಲ…
ಹೆಣ್ಣುಮಕ್ಕಳ ಕಂಠ ಇಂಪಾಗಿರುತ್ತದೆ. ಹಾಗಾಗಿ ಹಾಡುವುದು ಅವರಿಗೆ ಸಹಜವಾಗಿಯೇ ಒಲಿಯುತ್ತದೆ ಎನ್ನುತ್ತಾರೆ. ಆದರೆ, ಯಕ್ಷಗಾನ ಭಾಗವತಿಕೆ ಎಂದರೆ ಕೇವಲ ಹಾಡುವುದಲ್ಲ. ರಂಗದ ಮೇಲೆ ನಡೆಯುವ ದೃಶ್ಯಾವಳಿಗೆ ಜೀವ ತುಂಬುವುದೇ ಭಾಗವತರ ಕೆಲಸ. ಪಾತ್ರಧಾರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತ, ಅರ್ಥ ಲೋಪವಾಗದಂತೆ ಹಾಡಬೇಕು. ನವರಸಗಳಿಗೆ ಜೀವ ತುಂಬುವ ಕಲೆ ಇದು. 
ಕಾವ್ಯಶ್ರೀ ನಾಯಕ್‌ ಅಜೇರು

ಪ್ರಿಯಾಂಕ ಎನ್‌.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.