ಇಲ್ಲುಂಟು ಸಾರ್‌ ವೆರೈಟಿ ಸಾರೂ…


Team Udayavani, Jun 27, 2018, 6:00 AM IST

w-5.jpg

ಹಸಿವೆ ಕೆರಳಿಸುವ, ನಾಲಿಗೆಗೆ ರುಚಿಯ ಅನುಭವ ನೀಡಿ ಹೆಚ್ಚು ಆಹಾರ ಸೇವಿಸುವಂತೆ ಮಾಡುವ ಸಾರು ಯಾರಿಗೆ ಇಷ್ಟವಿಲ್ಲ? ಉಪ್ಪು, ಹುಳಿ, ಖಾರವನ್ನು ಸಮಪ್ರಮಾಣದಲ್ಲಿ ಒಳಗೊಂಡ, ಸುಲಭವಾಗಿ ಮಾಡಬಹುದಾದ ಕೆಲವೊಂದು ಸಾರುಗಳ ಪರಿಚಯ ಇಲ್ಲಿದೆ.

1.    ಕರಿಬೇವಿನ ಸಾರು
ಬೇಕಾಗುವ ಸಾಮಗ್ರಿ: ಕರಿಬೇವಿನ ಎಲೆ 10-12, ಟೊಮೇಟೊ-1/2, ಈರುಳ್ಳಿ-1, ತೆಂಗಿನತುರಿ-1/4 ಕಪ್‌, ಅಚ್ಚ ಖಾರದ ಪುಡಿ-2 ಚಮಚ, ಹುಣಸೆ ರಸ-3 ಚಮಚ, ಬೆಲ್ಲದ ತುರಿ-3 ಚಮಚ, ಉಪ್ಪು-ರುಚಿಗೆ ತಕ್ಕಷ್ಟು, ಎಣ್ಣೆ-4 ಚಮಚ, ಸಾಸಿವೆ-1 ಚಮಚ, ಇಂಗು-1/4 ಚಮಚ

ಮಾಡುವ ವಿಧಾನ : ಟೊಮೆಟೊ, ಈರುಳ್ಳಿ, ತೆಂಗಿನ ತುರಿ ಸೇರಿಸಿ ಅರೆದಿರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ ಸಾಸಿವೆ-ಇಂಗು ಹಾಕಿ ಒಗ್ಗರಣೆ ಮಾಡಿ. ಒಗ್ಗರಣೆಗೆ, ಕರಿಬೇವಿನ ಸೊಪ್ಪು ಹಾಕಿ ಬಾಡಿಸಿ. ಬಾಡಿಸಿದ ಮಿಶ್ರಣಕ್ಕೆ, ಹುಣಸೆ ರಸ, ಬೆಲ್ಲದ ತುರಿ, ಅಚ್ಚ ಖಾರದ ಪುಡಿ, ಉಪ್ಪು, ಅರೆದ ಮಿಶ್ರಣ ಹಾಕಿ ಕುದಿಸಿದರೆ, ರುಚಿಯಾದ ಕರಿಬೇವಿನ ಸಾರು ರೆಡಿ. 

2.    ಹುರುಳಿ ಸಾರು
ಬೇಕಾಗುವ ಸಾಮಗ್ರಿ : ಹುರುಳಿ ಕಾಳು-1 ಕಪ್‌, ಒಣಮೆಣಸಿನಕಾಯಿ 3-4, ಕೊತ್ತಂಬರಿ ಬೀಜ-2 ಚಮಚ, ಕಾಳುಮೆಣಸು-1/2 ಚಮಚ, ಜೀರಿಗೆ-1 ಚಮಚ, ಮೆಂತ್ಯೆ-1/2 ಚಮಚ, ಹುಣಸೆ ರಸ-3 ಚಮಚ, ಬೆಲ್ಲದ ತುರಿ-2 ಚಮಚ, ಕತ್ತರಿಸಿದ ಕೊತ್ತಂಬರಿ ಸೊಪ್ಪು-4 ಚಮಚ, ಉಪ್ಪು-ರುಚಿಗೆ ತಕ್ಕಷ್ಟು ಎಣ್ಣೆ-3 ಚಮಚ, ಸಾಸಿವೆ-1 ಚಮಚ, ಇಂಗು-1/4 ಚಮಚ.

ಮಾಡುವ ವಿಧಾನ : ಹುರುಳಿ ಕಾಳನ್ನು ಆರು ಗಂಟೆ ನೀರಿನಲ್ಲಿ ನೆನೆಸಿ, ಬೇಯಿಸಿಡಿ. ಕಾಳುಗಳ ಕಟ್ಟು ತೆಗೆದು ಸಾರಿಗೆ ಉಪಯೋಗಿಸಿ. ಬೇಯಿಸಿದ ಕಾಳುಗಳಿಂದ ಪಲ್ಯ, ಕೋಸಂಬರಿ ತಯಾರಿಸಬಹುದು. ಒಣಮೆಣಸಿನಕಾಯಿ, ಕೊತ್ತಂಬರಿ ಬೀಜ, ಕಾಳುಮೆಣಸು, ಜೀರಿಗೆ, ಮೆಂತ್ಯೆಯನ್ನು  ಬೇರೆಬೇರೆಯಾಗಿ ಹುರಿದು, ಪುಡಿ ಮಾಡಿ ಸಾರಿನ ಪುಡಿ ತಯಾರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ-ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ ಹುಣಸೆ ರಸ, ಬೆಲ್ಲದ ತುರಿ, ಉಪ್ಪು ಹಾಕಿ ಕುದಿಯಲಿರಿಸಿ. ಕುದಿಯುವಾಗ ಹುರಳಿ ಕಾಳುಗಳ ಕಟ್ಟು, ಸಾರಿನ ಪುಡಿ ಹಾಕಿ. ಒಲೆಯಿಂದ ಕೆಳಗಿರಿಸಿ ಕೊತ್ತಂಬರಿ ಸೊಪ್ಪು ಹಾಕಿದರೆ, ಪುಷ್ಟಿದಾಯಕ ಹುರುಳಿ ಸಾರು ರೆಡಿ. 

3.    ಹೆಸರು ಬೇಳೆ ಸಾರು
ಬೇಕಾಗುವ ಸಾಮಗ್ರಿ : ಬೇಯಿಸಿದ ಹೆಸರು ಬೇಳೆ-1 ಕಪ್‌, ಕಾಳುಮೆಣಸು 7-8, ಉದ್ದಿನ ಬೇಳೆ-1 ಚಮಚ, ಮೆಂತ್ಯೆ-1/2 ಚಮಚ, ಒಣಮೆಣಸು 3-4, ತೆಂಗಿನ ತುರಿ-1/4 ಕಪ್‌, ಉಪ್ಪು-ರುಚಿಗೆ ತಕ್ಕಷ್ಟು, ತುಪ್ಪ-4 ಚಮಚ, ಸಾಸಿವೆ-1 ಚಮಚ, ಇಂಗು-1/4 ಚಮಚ, ಕರಿಬೇವಿನ ಎಲೆ 7-8, ಕತ್ತರಿಸಿದ ಕೊತ್ತಂಬರಿ ಸೊಪ್ಪು-3 ಚಮಚ

ಮಾಡುವ ವಿಧಾನ: ಕಾಳುಮೆಣಸು, ಉದ್ದಿನ ಬೇಳೆ, ಮೆಂತ್ಯೆ, ಒಣಮೆಣಸಿನ ಕಾಯಿಯನ್ನು ಬೇರೆಬೇರೆಯಾಗಿ ಹುರಿದು, ಒಟ್ಟಿಗೆ ಸೇರಿಸಿ, ತೆಂಗಿನತುರಿಯೊಂದಿಗೆ ಅರೆದಿರಿಸಿ. ಬಾಣಲೆಯಲ್ಲಿ ತುಪ್ಪ ಕಾಯಲಿರಿಸಿ, ಸಾಸಿವೆ-ಇಂಗಿನ ಒಗ್ಗರಣೆ ಮಾಡಿ. ಒಗ್ಗರಣೆಗೆ, ಕರಿಬೇವಿನ ಎಲೆಗಳನ್ನು ಹಾಕಿ ಬಾಡಿಸಿ, ಅರೆದ ಮಸಾಲೆ, ಉಪ್ಪು, ಬೇಯಿಸಿದ  ಹೆಸರು ಬೇಳೆಯನ್ನು ಹಾಕಿ ಕುದಿಸಿ. ಒಲೆಯಿಂದ ಕೆಳಗಿರಿಸಿ, ಕೊತ್ತಂಬರಿ ಸೊಪ್ಪು ಸೇರಿಸಿ. 

4.    ಸಬ್ಬಸಿಗೆ ಸೊಪ್ಪಿನ ಸಾರು
ಬೇಕಾಗುವ ಸಾಮಗ್ರಿ : ಕತ್ತರಿಸಿದ ಸಬ್ಬಸಿಗೆ ಸೊಪ್ಪು-2 ಕಪ್‌, ಹಸಿಮೆಣಸಿನಕಾಯಿ 5-6, ಕತ್ತರಿಸಿದ ಈರುಳ್ಳಿ-1/2 ಕಪ್‌, ತೆಂಗಿನ ತುರಿ-1/4 ಕಪ್‌, ಕತ್ತರಿಸಿದ ಕೊತ್ತಂಬರಿ ಸೊಪ್ಪು-4 ಚಮಚ, ಬೇಯಿಸಿದ ತೊಗರಿ ಬೇಳೆ-2 ಕಪ್‌, ಜೀರಿಗೆ ಪುಡಿ-2 ಚಮಚ, ಕಾಳುಮೆಣಸಿನ ಪುಡಿ-1/2 ಚಮಚ, ಹುಣಸೆ ರಸ-3 ಚಮಚ, ಬೆಲ್ಲದ ತುರಿ-3 ಚಮಚ, ಉಪ್ಪು-ರುಚಿಗೆ ತಕ್ಕಷ್ಟು, ಎಣ್ಣೆ-4 ಚಮಚ, ಸಾಸಿವೆ-1 ಚಮಚ, ಇಂಗು-1/4 ಚಮಚ.

ಮಾಡುವ ವಿಧಾನ : ಸಬ್ಬಸಿಗೆ ಸೊಪ್ಪು, ಹಸಿಮೆಣಸಿನಕಾಯಿ, ಈರುಳ್ಳಿ, ತೆಂಗಿನ ತುರಿ, ಕೊತ್ತಂಬರಿ ಸೊಪ್ಪು ಸೇರಿಸಿ, ಅರೆದಿರಿಸಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ಸಾಸಿವೆ, ಇಂಗಿನ ಒಗ್ಗರಣೆ ಮಾಡಿ. ಅದಟೆR ಹುಣಸೆ ರಸ, ಬೆಲ್ಲ, ಉಪ್ಪು, ಕಾಳುಮೆಣಸಿನ ಪುಡಿ, ಜೀರಿಗೆ ಹಾಕಿ ಕುದಿಯಲಿರಿಸಿ. ಈ ಮಿಶ್ರಣಕ್ಕೆ, ಅರೆದ ತರಕಾರಿ ಮಿಶ್ರಣ, ಬೇಯಿಸಿದ ತೊಗರಿ ಬೇಳೆ ಹಾಕಿ ಕುದಿಸಿದರೆ ರುಚಿಯಾದ ಸಬ್ಬಸಿಗೆ ಸೊಪ್ಪಿನ ಸಾರು ರೆಡಿ. 

ಜಯಶ್ರೀ ಕಾಲ್ಕುಂದ್ರಿ , ಬೆಂಗಳೂರು

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.