ನನ್ಮೇಲೇ ಡೌಟಾ..?


Team Udayavani, Aug 15, 2018, 6:00 AM IST

x-3.jpg

ಮದುವೆಯಾದ ಆರಂಭದಲ್ಲಿ ಎಷ್ಟೇ ಪ್ರೀತಿಯಿಂದಿದ್ದರೂ, ತದನಂತರ ಒಂದಲ್ಲಾ ಒಂದು ಮನಃಸ್ತಾಪಗಳು ಬರುತ್ತವೆ. ಅದರಲ್ಲೂ ಸಂಶಯವೇನಾದರೂ ಸಂಸಾರದೊಳಗೆ ನುಗ್ಗಿಬಿಟ್ಟರೆ, ಅಲ್ಲಿ ಕಹಿ ಅನುಭವಗಳೇ ಟಿಸಿಲೊಡೆಯುತ್ತಿರುತ್ತವೆ. ಈ ಶಂಕೆಯನ್ನು ದೂರವಿಟ್ಟು, ಸುಮಧುರ ಸಂಸಾರ ಕಂಡುಕೊಳ್ಳುವುದು ಹೇಗೆ?

ಯಾವುದೋ ಯೋಚನೆಯಲ್ಲಿ ಮುಳುಗಿದ್ದವಳಿಗೆ ಮೊಬೈಲ್‌ನಿಂದ ಆ ಕಡೆಯಿಂದ ಧ್ವನಿ ಕೇಳಿಸಿತು. “ಹೆಂಡತಿ ಜಗಳವಾಡಿ ಪತ್ರ ಬರೆದಿಟ್ಟು, ಮನೆಬಿಟ್ಟು ಹೋಗಿದ್ದಾಳೆ. ನಿಮ್ಮನೆಗೆ ಏನಾದ್ರೂ ಬಂದಿದ್ಲಾ?’ ಎಂದು. ನಾನು ಗಾಬರಿಯಲ್ಲಿ ಇಲ್ಲವೆಂದೆ. ಹತ್ತು ವರ್ಷದಲ್ಲಿ ಒಮ್ಮೆಯೂ ಅವಳು ಹೀಗೆ ಮಾಡಿರುವುದನ್ನು ಕೇಳಿರಲಿಲ್ಲ. ಇದ್ದಕ್ಕಿದ್ದ ಹಾಗೆ ಏನಾಯ್ತು ಇವಳಿಗೆ ಎಂದು ವಿಚಾರಿಸಲು ಅವರ ಮನೆಯತ್ತ ದೌಡಾಯಿಸಿದೆ, ಮನೆಗೆ ಬೀಗ ಹಾಕಿ ಎಲ್ಲರೂ ಅವಳ ಹುಡುಕಾಟದಲ್ಲಿದ್ದರು. ಸೂರ್ಯ ತನ್ನ ಮನೆ ಸೇರುವ ಹೊತ್ತಿಗೆ ಪುಟ್ಟ ಮಗುವಿನೊಂದಿಗೆ ಮನೆಬಿಟ್ಟು, ಅದೆಲ್ಲಿಗೆ ಹೋದಳು ಎಂದು ಆತಂಕವಾಗಿ ಎಲ್ಲರನ್ನೂ ವಿಚಾರಿಸಲೂ ಶುರುಮಾಡಿದೆ. ಎಲ್ಲರಿಂದ ಒಂದೇ ಉತ್ತರ: “ನಂಗೆ ಗೊತ್ತಿಲ್ಲ’!.

  ಬೆಳಗ್ಗೆ ಏಳುವಷ್ಟರಲ್ಲಿ ಮೊಬೈಲ್‌ ರಿಂಗಾದದ್ದು ನೋಡಿ, ಗಾಬರಿಯಿಂದಲೇ ಕಾಲ್‌ ರಿಸೀವ್‌ ಮಾಡಿದೆ. “ಅವಳು ಕ್ಷೇಮವಾಗಿದ್ದಾಳೆ ಏನೋ ಹೇಳಬೇಕಂತೆ ನೀನು ಬಾ’ ಎಂದು ಸ್ನೇಹಿತೆ ಹೇಳಿದಾಗ, ಅವಸರದಿಂದ ಅವಳನ್ನು ನೋಡಲು ಹೊರಟೆ.

  ಪುಟ್ಟ ಮಗುವಿನೊಂದಿಗೆ ಸೋತ ಹೆಜ್ಜೆಗಳನ್ನು ಹಾಕುತ್ತಾ, ಕಣ್ತುಂಬಿಕೊಂಡು ಬಂದು ತನ್ನ ನೋವನ್ನು ಹಂಚಿಕೊಂಡಳು. ಮದುವೆಯಾಗಿ ಮೂರು ಮಕ್ಕಳಾದರೂ ಅವಳ ಪತಿರಾಯ ಸಂಶಯಪಡುತ್ತಾನಂತೆ. ಹತ್ತು ವರ್ಷದಿಂದ ಕಿರುಕುಳ ಸಹಿಸಿ, ಸಾಕಾಗಿ, ಒಪ್ಪತ್ತಿನ ಊಟವಿಲ್ಲದಿದ್ದರೂ ಬದುಕಬಲ್ಲೆ, ಇಂಥ ಅನುಮಾನದ ಭೂತದ ಜೊತೆ ಬಾಳಲಾರೆ ಎಂದು ಆಕೆ ನಿರ್ಧರಿಸಿ ಮನೆ ಬಿಟ್ಟಿದ್ದಳಂತೆ. ಇದನ್ನು ಕೇಳಿ, ನನಗೆ ಏನು ಹೇಳಬೇಕೋ ತೋಚಲಿಲ್ಲ. ಕೊನೆಗೆ ಸಮಾಧಾನ ಮಾಡಿ, ಮನೆಗೆ ಕರೆದೊಯ್ದೆವು.

ವಯಸ್ಸಿಗೆ ಬರುತ್ತಿದ್ದಂತೆ ಕಣ್ಣಂಚಲ್ಲಿ ನೂರೆಂಟು ಆಸೆ ಹೊತ್ತು ತನ್ನ ಕೈ ಹಿಡಿಯುವ ಹುಡುಗ ಹೀಗೆಯೇ ಇರಬೇಕು ಎಂದು ಸಾವಿರಾರು ಕನಸು ಕಾಣುವ ಹೆಣ್ಣು, ಕೊನೆಗೆ ಮನೆಯವರ ಆಸೆಯಂತೆ ಅವರಿಷ್ಟ ಪಟ್ಟ ಹುಡುಗನನ್ನೇ ಸಂಭ್ರಮದಿಂದ ಮದುವೆ ಮಾಡಿಕೊಳ್ಳುತ್ತಾಳೆ. ಮದುವೆ ಎಂಬ ಪದ ಕೇಳುತ್ತಿದ್ದ ಹಾಗೆ ಅವಳ ಮುಖ ರಂಗೇರುತ್ತೆ. ಹೊಸ ಬದುಕಿನತ್ತ ಹೆಜ್ಜೆ ಹಾಕುತ್ತೇನೆಂಬ ಖುಷಿಯಲ್ಲಿ ನಾಚಿ ನೀರಾಗುವಳು, ಸಡಗರದಿಂದ ಹೊಸ ಬಟ್ಟೆ, ಒಡವೆಗಳನ್ನು ಎಲ್ಲರಿಗೂ ತೋರಿಸುವಳು. ಪಾಪ ಅವಳಿಗೆ ಅರಿವಿಲ್ಲ, “ಮದುವೆ’ಯ ನಂತರದ ಮಹಾಸಾಗರ ಎಂಥದ್ದು ಎಂದು! ಆ ಸಾಗರದಲ್ಲಿ ಸುಂದರ ಅಲೆಗಳಿವೆ. ಅಷ್ಟೇ ದೊಡ್ಡ ಸುನಾಮಿಗಳೂ ಇವೆ. ಅವುಗಳಿಗೆ ಎದೆಗೊಟ್ಟು ಮುನ್ನುಗ್ಗುವುದೇ ಸಂಸಾರದ ಗುಟ್ಟು.

  ಇತ್ತೀಚಿನ ದಿನಗಳಲ್ಲಿ ಸಂಬಂಧಗಳು ಗಟ್ಟಿಯಾಗಿ ಉಳಿಯುತ್ತಿಲ್ಲ. ಎಷ್ಟೇ ಪ್ರೀತಿಯಿಂದಿದ್ದರೂ ಸ್ವಲ್ಪ ಸಮಯದ ನಂತರ ಅವರವರ ನಡುವೆ ಮನಃಸ್ತಾಪಗಳು ಶುರುವಾಗಿ, ವಿಚ್ಛೇದನದ ತನಕ ಹೋಗುವುದೂ ಇದೆ. ಇದರಲ್ಲಿ ಕೇವಲ ಪುರುಷರದ್ದೇ ತಪ್ಪು ಇರುತ್ತದೆಂದು ಹೇಳಲಾಗುವುದಿಲ್ಲ. ಮಹಿಳೆಯರೂ ಈ ವೇಳೆ ಎಡವುತ್ತಾರೆ. ಆದರೆ, ಎಷ್ಟೋ ಸಲ ಪುರುಷರ ತಪ್ಪುಗಳು ಮುಚ್ಚಿಹೋಗುತ್ತವೆ. ಸ್ತ್ರೀಯರ ಪ್ರಮಾದಗಳು ಎದ್ದು ನಿಲ್ಲುತ್ತವೆ. ಅಂತಿಮವಾಗಿ ಜೀವನ ಹಾಳಾಗುವುದು ಮಾತ್ರ ಮಹಿಳೆಯರದ್ದೇ.

  “ಅರಿತು ಬಾಳುವುದೇ ಸ್ವರ್ಗ ಸುಖ’ ಎನ್ನುವ ತತ್ವವೇ ಸುಂದರ ದಾಂಪತ್ಯದ ಗುಟ್ಟು. ಸಣ್ಣಪುಟ್ಟ ತಪ್ಪುಗಳನ್ನು ದೊಡ್ಡದು ಮಾಡದೇ, ಅಲ್ಲಿಯೇ ತಟ್ಟಿ ಮಲಗಿಸಿಬಿಟ್ಟರೆ, ಸಂಸಾರ ಇನ್ನಷ್ಟು ಸಿಹಿ. ಕ್ಷಮೆಗಳ ವಿನಿಮಯ ಆಗುತ್ತಿದ್ದರೆ, ಸಂಸಾರವೂ ಸದಾ ಕ್ಷೇಮವಾಗಿರುತ್ತದೆ.

ಎಲ್ಲದಕ್ಕೂ ಪ್ರೀತಿಯೇ ಮದ್ದು…
– ಭವಿಷ್ಯದ ಹೊಂದಾಣಿಕೆಯ ಕುರಿತು ಏನೇ ಗೊಂದಲಗಳಿದ್ದರೂ, ಮದುವೆಗೆ ಮುಂಚೆಯೇ ಮಾತಾಡಿಕೊಳ್ಳಿ.
– ಬಾಹ್ಯ ಸೌಂದರ್ಯಕ್ಕಿಂತ ವ್ಯಕ್ತಿಯ ಆಂತರಿಕ ಸೌಂದರ್ಯವನ್ನು ಗೌರವಿಸಿ.
– ಕಲ್ಪನೆಯ ಜಗತ್ತಿನಿಂದ ಆಚೆ ಬಂದು, ಸತ್ಯ ಮತ್ತು ವಾಸ್ತವತೆಯನ್ನು ಕಣ್ತೆರೆದು ನೋಡಿ.
– ಇಬ್ಬರ ನಡುವೆ ಹೊಂದಾಣಿಕೆಯಾದರಷ್ಟೇ ಮುಂದಿನ ಹೆಜ್ಜೆ ಇಡಿ.
– ಅಪ್ಪ- ಅಮ್ಮ ತಮ್ಮ ಮಗಳನ್ನು ಕಷ್ಟಪಟ್ಟು ಬೆಳೆಸಿ, ಲಕ್ಷಗಟ್ಟಲೆ ಸಾಲ ಮಾಡಿ, ಮದುವೆ ಮಾಡಿರುತ್ತಾರೆ. ಆ ಪ್ರೀತಿಗೆ ಪುರುಷರು ಬೆಲೆ ಕೊಡಬೇಕು.
– ತನ್ನ ಕುಟುಂಬವನ್ನೇ ನಂಬಿ ಬಂದವಳಿಗೆ, ಮೋಸ ಮಾಡುವ ಯತ್ನ ಬೇಡ.
– ಕೈಹಿಡಿದಾಕೆಗೆ ಮನೆಯಲ್ಲಿ ಸೇವಕಿ ಸ್ಥಾನ ಕೊಡುವ ಬದಲು, ನಿಮ್ಮ ಹೃದಯದಲ್ಲಿ ಪುಟ್ಟ ಜಾಗ ಕೊಟ್ಟರೆ ಅದೇ ಸಾಕು.

 ಮಂಜುಳಾ ಬಡಿಗೇರ್‌, ಕೊಪ್ಪಳ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.