“ರಾಖಿ’ ದರ್ಬಾರ್‌


Team Udayavani, Aug 22, 2018, 6:00 AM IST

4.jpg

ರಾಖಿ ಕೇವಲ ಒಂದು ದಾರವಷ್ಟೇ ಅಲ್ಲ, ಅದು ಭದ್ರತೆಯ ಸಂಕೇತ, ಪ್ರೀತಿಯ ಪ್ರತೀಕ. ಸಹೋದರನ ಆಯಸ್ಸು, ಆರೋಗ್ಯ, ಸಮೃದ್ಧಿಗಾಗಿ ಆಶಿಸುತ್ತಾ, ಸೋದರಿ ಕಟ್ಟುವ ಆ ದಾರಕ್ಕೆ ವಿಶೇಷ ಮಹತ್ವವಿದೆ. ಕೆಂಪು ನೂಲನ್ನು ಕಟ್ಟುವುದರ ಮೂಲಕ ಆಚರಿಸಲ್ಪಡುತ್ತಿದ್ದ ರಕ್ಷಾಬಂಧನ ಹಬ್ಬ, ಈಗ ವರ್ಣರಂಜಿತ ರಾಖೀಗಳಿಂದ ರಾರಾಜಿಸುತ್ತಿದೆ. ಸಣ್ಣ ತಮ್ಮನಿಗೆ ಛೋಟಾ ಭೀಮ್‌ ರಾಖಿ, ಆಫೀಸಿಗೆ ಹೋಗೋ ಅಣ್ಣನಿಗೆ ಸಿಂಪಲ್‌ ರಾಖೀ, ಹೂವಿನ ರಾಖಿ, ಹೊಳೆಯುವ ರಾಖೀ… ಹೀಗೆ ನೂರಾರು ಬಣ್ಣ, ಡಿಸೈನ್‌ಗಳ ರಾಖೀಗಳು ಲಭ್ಯ ಇವೆ. ಆಗಸ್ಟ್‌ 26ರ ಈ ರಕ್ಷಾಬಂಧನದ ವೇಳೆ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಡಿಸೈನ್‌ಗಳು ಇಲ್ಲಿವೆ… 

– ಮ್ಯೂಸಿಕಲ್‌ ರಾಖಿ
ಕೈ ಮಣಿಕಟ್ಟನ್ನು ಪೂರ್ತಿಯಾಗಿ ಮುಚ್ಚುವಷ್ಟು ದೊಡ್ಡ ಇರುವ ಈ ರಾಖಿ, ನೋಡಲೂ ಅಷ್ಟೇ ಆಕರ್ಷಕ. ಮುಟ್ಟಿದರೆ ಇಂಪಾದ ಸಂಗೀತ ಹೊರ ಹೊಮ್ಮುವಂಥ ರಚನೆಯುಳ್ಳ ಈ ರಾಖೀಯನ್ನು, ಸಂಗೀತಪ್ರಿಯ ಅಣ್ಣನಿಗೆ ಕಟ್ಟಬಹುದು. 

– ಡೈಮಂಡ್‌ ರಾಖಿ
ವಜ್ರವನ್ನು ಹೋಲುವ ಹರಳುಗಳ ಈ ರಾಖಿ ನೋಡಲು ಸಿಂಪಲ್‌ ಮತ್ತು ಕ್ಲಾಸಿ ಆಗಿವೆ. ಕೆಂಪುಬಣ್ಣದ ದಾರದ ಮಧ್ಯದಲ್ಲಿ ಹೊಳೆಯುವ ಹರಳುಗಳನ್ನು ಪೋಣಿಸಿ ಮಾಡಿದ ಈ ರಾಖೀ, ಅಣ್ಣ- ತಂಗಿಯರ ಗಟ್ಟಿ ಅನುಭಂಧದ ಪ್ರತೀಕ.

– ಬ್ರೇಸ್‌ಲೆಟ್‌ ರಾಖಿ
ಇದು ಟು ಇನ್‌ ಒನ್‌ ರಾಖಿ. ಅಂದರೆ, ರಾಖೀಯೂ ಹೌದು, ಬ್ರೇಸ್‌ಲೆಟ್‌ ಕೂಡ ಹೌದು. ಸಿಲ್ವರ್‌ ಕೋಟೆಡ್‌ ಅಥವಾ ಸಂಪೂರ್ಣ ಬೆಳ್ಳಿಯದ್ದೇ ಆಗಿರುವ ಈ ರಾಖಿಯನ್ನು ರಕ್ಷಾಬಂಧನದ ನಂತರ ಬ್ರೇಸ್‌ಲೆಟ್‌ ಆಗಿಯೂ ಧರಿಸಬಹುದು. ಸಹೋದರನಿಗೆ ಯಶಸ್ಸು, ಅದೃಷ್ಟ, ಆರೋಗ್ಯ ಲಭಿಸಲಿ ಎಂದು ತಂಗಿಯರು ಈ ರಾಖಿ ಕಟ್ಟುತ್ತಾರೆ.

– ಗುಲಾಬಿ ಡಿಸೈನ್‌ ರಾಖಿ
ಗುಲಾಬಿ ಹೂವು ಪ್ರೀತಿಯ ಸಂಕೇತ. ಕೆಂಪು ಗುಲಾಬಿ ಹೂವಿನ ವಿನ್ಯಾಸದ ರಾಖಿಯನ್ನು ಸೋದರನಿಗೆ ಕಟ್ಟಿ ಪ್ರೀತಿಯನ್ನು ವ್ಯಕ್ತಪಡಿಸಬಹುದು.

– ಹೂವಿನ ಡಿಸೈನ್‌ ರಾಖಿ
ಇದು ಎಲ್ಲೆಡೆ ಪ್ರಚಲಿತದಲ್ಲಿರುವ ರಾಖಿ. ವಿವಿಧ ಬಗೆಯ ಹೂವಿನ ಆಕಾರ ಹಾಗೂ ಬಣ್ಣದಲ್ಲಿ ಈ ರಾಖೀಗಳು ಲಭ್ಯ. ದಾರದಿಂದಲೇ ಹೂವಿನ ಚಿತ್ತಾರವನ್ನು ನೇಯ್ದು, ನಡುವೆ ಮಣಿಗಳನ್ನು ಪೋಣಿಸಿದ ರಾಖಿಗಳೂ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿವೆ. 

– ಕಮಲದ ರಾಖಿ 
ಈ ರಾಖೀಯಲ್ಲಿ, ಕೆಂಪು ದಾರದ ಮಧ್ಯದಲ್ಲಿ, ಬಂಗಾರದ ಬಣ್ಣದ ಕಮಲದ ಡಿಸೈನ್‌ ಇರುತ್ತದೆ. ಪುರಾಣಗಳಲ್ಲಿ ಕಮಲದ ಹೂವನ್ನು ಶ್ರೇಷ್ಠ ಎಂದು ಪರಿಗಣಿಸುವುದರಿಂದ, ಈ ರಾಖಿ ಪವಿತ್ರತೆಯ ಸಂಕೇತವಾಗಿದೆ. 

– ಸೂಪರ್‌ ಮ್ಯಾನ್‌ ರಾಖಿ
ಸೂಪರ್‌ಮ್ಯಾನ್‌ನ ಫ್ಯಾನ್‌ ಆಗಿರೋ ಮುದ್ದು ತಮ್ಮನಿಗೆ ಇಷ್ಟವಾಗುವ ರಾಖೀ ಇದು. ದಾರದ ಮಧ್ಯದಲ್ಲಿ ಬೇರೆ ಬೇರೆ ಡಿಸೈನ್‌ಗಳಿರುವಂತೆ, ಇದರಲ್ಲಿ ಸೂಪರ್‌ಮ್ಯಾನ್‌ನ ಸಂಕೇತವಾದ “ಎಸ್‌’ ಆಕೃತಿ ಇದೆ. 

– ನವಿಲಿನ ರಾಖಿ
ನವಿಲಿನ ಡಿಸೈನ್‌ನ ಮೆಹೆಂದಿ, ಕಿವಿಯೋಲೆ, ಸೀರೆ, ಟ್ಯಾಟೂ..ಹೀಗೆ ಫ್ಯಾಷನ್‌ ಜಗತ್ತಿನ ಫೇವರಿಟ್‌ ಪಕ್ಷಿ ನವಿಲು. ಈಗ ನವಿಲಿನ ಡಿಸೈನ್‌ನ ರಾಖೀಗಳೂ ಲಭ್ಯ. ಕಣ್‌ಸೆಳೆಯುವ ಬಣ್ಣದ ಈ ರಾಖಿ ತನ್ನದೇ ಟ್ರೆಂಡ್‌ಅನ್ನೂ ಸೃಷ್ಟಿಸಿದೆ. 

– ಚಂದನ್‌ ರಾಖಿ/ ಸ್ಯಾಂಡಲ್‌ವುಡ್‌ ರಾಖಿ
ಕೆಂಪು ದಾರದ ಮಧ್ಯದಲ್ಲಿ ಶ್ರೀಗಂಧದ ಮಣಿಗಳನ್ನು ಪೋಣಿಸಿರುವ ಈ ರಾಖಿಗಳು ಸದ್ಯ ಅತಿಹೆಚ್ಚು ಬೇಡಿಕೆಯಲ್ಲಿವೆ. ಗಂಧದ ತುಣುಕುಗಳನ್ನು ಬೇರೆ ಬೇರೆ ವಿನ್ಯಾಸದಲ್ಲಿ ಕೂಡ ಬಳಸಲಾಗುತ್ತದೆ. ಗಂಧದ ಓಂ, ಸ್ವಸ್ತಿಕ್‌ ಹಾಗೂ ದೇವರ ಚಿತ್ರವಿರುವ ರಾಖಿಗಳು ಕೂಡ ಲಭ್ಯ. ಸಮೃದ್ಧಿಯ ಸಂಕೇತವಾಗಿರುವ ಶ್ರೀಗಂಧದ ರಾಖೀಯನ್ನು ಸಹೋದರನ ಶ್ರೇಯಸ್ಸನ್ನು ಬಯಸಿ ಕಟ್ಟಲಾಗುತ್ತದೆ. 

– ಗೊಂಬೆ ಚಿತ್ರದ ರಾಖಿ
ಇದು ತಮ್ಮಂದಿರಿಗೆ ಕಟ್ಟುವ ರಾಖಿ. ಛೋಟಾ ಭೀಮ್‌, ಬಾಲ ಹನುಮಾನ್‌, ಬಾಲ ಗಣೇಶ, ಮಿಕ್ಕಿ ಮೌಸ್‌… ಹೀಗೆ ಪುಟಾಣಿಗಳಿಗೆ ಇಷ್ಟವಾಗುವ ಕಾಟೂìನ್‌ ಪಾತ್ರಗಳ ಡಿಸೈನ್‌ ಇರುವ ರಾಖಿ. ಮುದ್ದಾಗಿ ಕಾಣುವ ಮಕ್ಕಳ ರಾಖಿಯನ್ನು, ಮಗು ಮನಸ್ಸಿನ ಅಣ್ಣನಿಗೂ ಕಟ್ಟಬಹುದು. 

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.