ಕೆಸುವು ಅಂದ್ರೆ ಹಸಿವು

ಈ ಗೆಡ್ಡೆಯಲ್ಲಿ ಅತ್ಯಧಿಕ ಫೈಬರ್‌ ಅಂಶವಿದೆ. ಇದು ಜೀರ್ಣ ಕ್ರಿಯೆಗೆ ಅನುಕೂಲ ಮಾಡುತ್ತದೆ

Team Udayavani, Oct 29, 2020, 5:00 PM IST

ಈ ಗೆಡ್ಡೆಯಲ್ಲಿ ಅತ್ಯಧಿಕ ಫೈಬರ್‌ ಅಂಶವಿದೆ. ಇದು ಜೀರ್ಣ ಕ್ರಿಯೆಗೆ ಅನುಕೂಲ ಮಾಡುತ್ತದೆ

ನಮ್ಮ ಅಡುಗೆಯಲ್ಲಿ  ಕೆಸುವಿನ ಗೆಡ್ಡೆಯ ಉಪಯೋಗ ಕಡಿಮೆ. ಆದರೆ ವಿರಳವಾಗಿ ಬಳಸುವ ಈ ಗೆಡ್ಡೆಯಲ್ಲಿ ಅತ್ಯಧಿಕ ಫೈಬರ್‌ ಅಂಶವಿದೆ. ಇದು ಜೀರ್ಣ ಕ್ರಿಯೆಗೆ ಅನುಕೂಲ ಮಾಡುತ್ತದೆ. ಕೊಬ್ಬಿನಂಶ ಇರದ ಕಾರಣ, ಮಧುಮೇಹ ಮತ್ತು ತೀವ್ರ ರಕ್ತದೊತ್ತಡ ಇರುವವರಿಗೂ ಇದು ಒಳ್ಳೆಯ ಆಹಾರ. ತೂಕ ಕಡಿಮೆ ಮಾಡುವಲ್ಲೂ ಸಹಕಾರಿ. ವಿಟಮಿನ್‌, ಫೈಬರ್‌, ಫಾಲಿಕ್‌ ಆ್ಯಸಿಡ್‌ ಹೇರಳವಾಗಿರುವ ಕೆಸುವಿನ ಗೆಡ್ಡೆಯ ಕೆಲ ರೆಸಿಪಿ ಇಲ್ಲಿದೆ.. 

1. ಕೆಸುವಿನ ಗೆಡ್ಡೆ ಗೊಜ್ಜು
ಬೇಕಾಗುವ ಸಾಮಗ್ರಿ: ಕೆಸುವಿನ ಗಡ್ಡೆ 5-6,  ಬ್ಯಾಡಗಿ ಮೆಣಸು 8, ಎಣ್ಣೆ, ಕೊತ್ತಂಬರಿ ಬೀಜ- 2 ಚಮಚ, ಕಡ್ಲೆ ಬೇಳೆ- 2 ಚಮಚ, ಮೆಂತ್ಯೆ- 1 ಚಮಚ, ಜೀರಿಗೆ -1 ಚಮಚ,  ಸಾಸಿವೆ, ಅರಿಶಿನ- 1 ಚಮಚ, ಇಂಗು, ಉಪ್ಪು ರುಚಿಗೆ ತಕ್ಕಷ್ಟು, ತೆಂಗಿನ ತುರಿ – ಅರ್ಧ ಕಪ್‌, ಹುಣಸೆ ಹಣ್ಣು- ಲಿಂಬೆ ಗಾತ್ರ,  ಬೆಲ್ಲ ರುಚಿಗೆ ತಕ್ಕಷ್ಟು, ಕರಿಬೇವು.

ಮಾಡುವ ವಿಧಾನ: ಕೆಸುವಿನ ಗೆಡ್ಡೆಯನ್ನು ತೊಳೆದು ಕುಕ್ಕರ್‌ನಲ್ಲಿ ಎರಡು ವಿಷಲ್‌ ಕೂಗಿಸಿ. ಬೆಂದ ಕೆಸುವಿನ ಗೆಡ್ಡೆಯ ಸಿಪ್ಪೆ ತೆಗೆದು ಎರಡು ಭಾಗ ಮಾಡಿ. ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ, ಕಡ್ಲೆಬೇಳೆ, ಉದ್ದಿನ ಬೇಳೆ, ಮೆಂತ್ಯೆ, ಜೀರಿಗೆ, ಸಾಸಿವೆ, ಮೆಣಸಿನಕಾಯಿಯನ್ನು ಒಂದೊಂದೇ ಹಾಕಿ ಫ್ರೈ ಮಾಡುತ್ತಾ ಬನ್ನಿ. ಸ್ವಲ್ಪ ಫ್ರೈ ಆದ ಮೇಲೆ, ಕರಿಬೇವು ಹಾಕಿ ಹೊಂಬಣ್ಣ ಬರುವವರೆಗೆ ಫ್ರೈ ಮಾಡಿ. ಈಗ ಕೊತ್ತಂಬರಿ ಬೀಜ ಹಾಕಿ. ನಂತರ ಮಿಕ್ಸಿಗೆ ಕಾಯಿತುರಿ ಹಾಕಿ, ಫ್ರೈ ಮಾಡಿದ ಮಸಾಲೆ ಮಿಕ್ಸ್ ಮಾಡಿ, ನೀರು ಹಾಕಿ ಸ್ವಲ್ಪ ತರಿತರಿಯಾಗಿ ರುಬ್ಬಿ. ಈಗ ಮಸಾಲೆ ರೆಡಿ.
ಇನ್ನೊಂದು ಬಾಣಲೆಗೆ ಸ್ವಲ್ಪ ಜಾಸ್ತಿ ಎಣ್ಣೆ ಹಾಕಿ ಇದಕ್ಕೆ ಬಿಡಿಸಿಟ್ಟ ಕೆಸುವಿನ ಗೆಡ್ಡೆ ಹಾಕಿ ಫ್ರೈ ಮಾಡಿ. ಫ್ರೈ ಮಾಡುವಾಗಲೇ ಅರಿಶಿನ ಮತ್ತು ಹುಣಸೆಹಣ್ಣು ಹಾಕಿ. ಕೆಸುವಿನ ಲೋಳೆ ಅಂಶ ಹೋಗುವವರೆಗೆ ಫ್ರೈ ಆಗಲಿ. ನಂತರ ರುಬ್ಬಿದ ಮಸಾಲೆ, ನೀರು ಹಾಕಿ. ಹದ ಸ್ವಲ್ಪ ಗಟ್ಟಿಯಾಗೇ ಇರಲಿ. ಈಗ ರುಚಿಗೆ ತಕ್ಕಷ್ಟು ಉಪ್ಪು, ಬೆಲ್ಲ ಹಾಕಿ ಚೆನ್ನಾಗಿ ಕುದಿಸಿ. ಸಾಸಿವೆ ಇಂಗಿನ ಒಗ್ಗರಣೆ ಕೊಡಬಹುದು.

2. ಕೆಸುವಿನ ಗೆಡ್ಡೆಯ ಖಾರದ ಕಡ್ಡಿ
ಬೇಕಾಗುವ ಸಾಮಗ್ರಿ:
ಕೆಸುವಿನ ಗೆಡ್ಡೆ 10, ಅಕ್ಕಿ ಹಿಟ್ಟು 1 ಕಪ್‌, ಜೀರಿಗೆ ಪುಡಿ 1 ಚಮಚ, ಉಪ್ಪು, ಇಂಗು, ಅಚ್ಚ ಖಾರದ ಪುಡಿ, ಎಣ್ಣೆ.

ಮಾಡುವ ವಿಧಾನ: ಕೆಸುವಿನ ಗೆಡ್ಡೆಯನ್ನು ತೊಳೆದು ಕುಕ್ಕರ್‌ನಲ್ಲಿ ಬೇಯಿಸಿ. ಬೆಂದ ಕೆಸುವಿನ ಗೆಡ್ಡೆಯ ಸಿಪ್ಪೆ ತೆಗೆದು ನುರಿದು, ಅದಕ್ಕೆ ಜೀರಿಗೆ ಪುಡಿ, ಇಂಗು, ಅಚ್ಚ ಖಾರದ ಪುಡಿ, ಉಪ್ಪು ಹಾಕಿ ಮಿಕ್ಸ್ ಮಾಡಿ. ಈಗ ಅಕ್ಕಿ ಹಿಟ್ಟು ಹಾಕಿ ಕಲಸಿ. ಕೆಸುವಿನ ಗೆಡ್ಡೆಯಲ್ಲಿ ನೀರಿನ ಅಂಶ ಇರುವುದರಿಂದ ಪುನಃ ನೀರು ಹಾಕುವುದು ಬೇಡ. ಎಷ್ಟು ಅಕ್ಕಿ ಹಿಟ್ಟು ಹಿಡಿಯುತ್ತದೋ ಅಷ್ಟು ಹಾಕಿ, ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಈಗ ಚಕ್ಕುಲಿ ಒರಳಿಗೆ ಸ್ವಲ್ಪ ಎಣ್ಣೆ ಸವರಿ ಹಿಟ್ಟನ್ನು ಒಳಗೆ ತುಂಬಿ ಕಾದ ಎಣ್ಣೆಯಲ್ಲಿ ಹೊಂಬಣ್ಣ ಬರುವವರೆಗೆ ಕರಿಯಿರಿ.

3. ಕೆಸುವಿನ ಗೆಡ್ಡೆಯ ಡ್ರೈ ಪಲ್ಯ
ಬೇಕಾಗುವ ಸಾಮಗ್ರಿ:
ಕೆಸುವಿನ ಗೆಡ್ಡೆ 10, ಖಾರದ ಪುಡಿ 2 ಚಮಚ, ಜೀರಿಗೆ ಮತ್ತು ದನಿಯಾ ಪುಡಿ 1 ಚಮಚ, ಇಂಗು, ಅರಿಶಿನ, ಉಪ್ಪು, ಅಕ್ಕಿ ಹಿಟ್ಟು 2 ದೊಡ್ಡ ಚಮಚ, ಹುಳಿ ಪುಡಿ (ಆಮ್‌ಚೂರ್‌ ಪುಡಿ) ಮೊಸರು, ಎಣ್ಣೆ.

ಮಾಡುವ ವಿಧಾನ: ಕೆಸುವಿನ ಗೆಡ್ಡೆಯನ್ನು ಕುಕ್ಕರ್‌ನಲ್ಲಿ ಸ್ವಲ್ಪ ಗಟ್ಟಿಯಾಗಿ ಬೇಯಿಸಿಕೊಳ್ಳಿ. ನಂತರ ಸಿಪ್ಪೆ ತೆಗೆದು ಗೋಲಾಕಾರದ ಸ್ಲೆ„ಸ್‌ ಮಾಡಿ. ಇನ್ನೊಂದು ಪಾತ್ರೆಯಲ್ಲಿ ಖಾರದ ಪುಡಿ, ಜೀರಿಗೆ, ದನಿಯಾ ಪುಡಿ, ಇಂಗು, ಉಪ್ಪು, ಹಳದಿ, ಹುಳಿಪುಡಿ, ಅಕ್ಕಿ ಹಿಟ್ಟು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಅದಕ್ಕೆ ಸ್ವಲ್ಪ ಮೊಸರು ಹಾಕಿ. ಕೆಸುವಿನ ಗೆಡ್ಡೆಯ ಸ್ಲೆ„ಸ್‌ ಅನ್ನು ಮಿಶ್ರಣದಲ್ಲಿ ಉರುಳಿಸಿ. ಈಗ ತವಾದಲ್ಲಿ ಎಣ್ಣೆ ಹಾಕಿ, ಸಣ್ಣ ಉರಿಯಲ್ಲಿ ಎರಡೂ ಕಡೆ ಎಣ್ಣೆ ಹಾಕುತ್ತಾ ಬೇಯಿಸಿ. ಇದನ್ನು ಊಟದ ಜೊತೆಗೆ ಸೈಡ್‌ ಡಿಶ್‌ ಆಗಿ ಮೆಲ್ಲಬಹುದು.

4. ಕೆಸುವಿನ ಗೆಡ್ಡೆ ಬೋಂಡ
ಬೇಕಾಗುವ ಸಾಮಗ್ರಿ:
ಕೆಸುವಿನ ಗೆಡ್ಡೆ 10, ಈರುಳ್ಳಿ 2, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ಇಂಗು, ಉಪ್ಪು, ಕಡಲೆ ಹಿಟ್ಟು 1/2 ಕಪ್‌,  ಅಕ್ಕಿ ಹಿಟ್ಟು 1/2ಕಪ್‌,  ಓಮ, ಜೀರಿಗೆ ಪುಡಿ, ಖಾರದ ಪುಡಿ, ಕರಿಯಲು ಎಣ್ಣೆ.

ಮಾಡುವ ವಿಧಾನ: ಮೊದಲು ಕೆಸುವಿನ ಗೆಡ್ಡೆಯನ್ನು ಬೇಯಿಸಿ, ಸಿಪ್ಪೆ ತೆಗೆದು, ಸಣ್ಣದಾಗಿ ಹೆಚ್ಚಿ. ನಂತರ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪನ್ನು ಹೆಚ್ಚಿಟ್ಟುಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ, ಉದ್ದಿನ ಬೇಳೆ, ಸಾಸಿವೆ, ಇಂಗು ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು ಹಾಕಿ ಫ್ರೈ  ಮಾಡಿ. ಅದಕ್ಕೆ ಉಪ್ಪು ಮತ್ತು ಹುಳಿಪುಡಿಯನ್ನು ಮಿಕ್ಸ್ ಮಾಡಿ, ಸ್ವಲ್ಪ ಎಣ್ಣೆ ಹಾಕಿ ಫ್ರೈ ಮಾಡಿ. ಕೆಸುವಿನ ಗೆಡ್ಡೆಯ ಲೋಳೆ ಅಂಶ ಹೋಗಲಿ. ಸ್ವಲ್ಪ ಆರಿದ ಮೇಲೆ ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿ. ಇನ್ನೊಂದು ಪಾತ್ರೆಗೆ ಅಕ್ಕಿಹಿಟ್ಟು, ಕಡಲೆಹಿಟ್ಟು, ಓಮ, ಜೀರಿಗೆ ಪುಡಿ,ಉಪ್ಪು, ಖಾರದ ಪುಡಿ ಹಾಕಿ ಮಿಕ್ಸ್ ಮಾಡಿ. ದೋಸೆ ಹಿಟ್ಟಿನ ಹದಕ್ಕೆ ನೀರು ಹಾಕಿ ಅರ್ಧ ಗಂಟೆ ಬಿಡಿ. ನಂತರ ಮೇಲೆ ಮಾಡಿಟ್ಟ ಉಂಡೆಗಳನ್ನು ಈ ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕರಿಯಿರಿ.

ಪ್ರೇಮಾ ಲಿಂಗದಕೋಣ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.