ಒಂದು ಮುಸ್ಸಂಜೆ ಪಾಠ


Team Udayavani, Aug 29, 2018, 6:00 AM IST

s-2.jpg

“ನಮ್ಮಜ್ಜಿ ಹೇಳಿದ್ದನ್ನೇ ಹೇಳ್ತಾ ಇರ್ತಾರೆ. ವಟಗುಟ್ಟದೆ ಸುಮ್ನೆ ಇರೋಕೇ ಬರೋದಿಲ್ಲ ಅವ್ರಿಗೆ’, “ಅತ್ತೆ ಜೊತೆ ಅಡ್ಜಸ್ಟ್‌ ಮಾಡ್ಕೊಳ್ಳೋಕೆ ಆಗ್ತಾ ಇಲ್ಲ. ಅದಕ್ಕೇ ಬೇರೆ ಮನೆ ಮಾಡ್ತಾ ಇದೀವಿ’… ಹೆಂಗಸರು ಹೀಗೆ ಹೇಳ್ಳೋದನ್ನು ಕೇಳಿದ್ದೇವೆ ಅಥವಾ ನಮ್ಮ ಮನೆಯಲ್ಲೇ ಇಂಥ ಪ್ರಸಂಗಗಳು ನಡೆಯುತ್ತವೆ. ವಯಸ್ಸಾಯ್ತು ಅಂತ ಮೂಲೆಗೆ ತಳ್ಳಲ್ಪಟ್ಟ ಹಿರಿ ಜೀವಗಳು ಬಹುತೇಕ ಮನೆಗಳಲ್ಲಿದ್ದಾರೆ. ಆ ಹಿರಿಯರನ್ನು ಹೇಗೆ ನೋಡಿಕೊಳ್ಳಬೇಕು ಗೊತ್ತೇ?

1.  ಸಮಯ ಕೊಡಿ
ಮಗ, ಸೊಸೆ ಅಥವಾ ಮಗಳು-ಅಳಿಯ ನೌಕರಿಯೆಂದು ದಿನವೂ ಬಿಜಿ ಇದ್ದರೆ, ಮೊಮ್ಮಕ್ಕಳು ಶಾಲೆ, ಕಾಲೇಜು, ಫ್ರೆಂಡ್ಸ್‌ ಅಂತ ತಮ್ಮದೇ ಲೋಕದಲ್ಲಿರುತ್ತಾರೆ. ಆಗ ಹಿರಿಜೀವಗಳಿಗೆ ಒಂಟಿತನ ಕಾಡುವುದು ಸಹಜ. ದಿನವಿಡೀ ನಾಲ್ಕು ಗೋಡೆಯ ಮಧ್ಯೆ ಕಳೆಯುವ ಅವರಿಗೆ ನಿಮ್ಮ ದಿನದ ಒಂದೆರಡು ಗಂಟೆಯನ್ನು ಮೀಸಲಿಡಿ. ಆಫೀಸಿನಿಂದ, ಶಾಲೆಯಿಂದ ಬಂದಮೇಲೆ ಅವರ ಜೊತೆ ಕುಳಿತು ಮಾತನಾಡಿ. 

2.  ತಾಳ್ಮೆಯಿಂದ ಆಲಿಸಿ 
ವಯಸ್ಸಾದವರು ಹೇಳಿದ್ದನ್ನೇ ಪದೇ ಪದೆ ಹೇಳುತ್ತಿರುತ್ತಾರೆ. ವೃದ್ಧಾಪ್ಯಕ್ಕೆ ಮರೆವು ಜೊತೆಯಾಗುವುದರಿಂದ ಹೀಗಾಗುತ್ತದೆ. ಹೇಳಿದ್ದನ್ನೇ ಹೇಳುತ್ತಾರಲ್ಲ: ಅದರಿಂದ ನಿಮಗೆ ಕಿರಿಕಿರಿಯಾಗಬಹುದು. ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು, ತಾಳ್ಮೆಯಿಂದ ವರ್ತಿಸಿ. 

3.  ಬಾಯಿ ಚಪಲ
ಮನುಷ್ಯನಿಗೆ ವಯಸ್ಸಾದಂತೆ ಬಾಯಿ ಚಪಲ ಹೆಚ್ಚುತ್ತದೆ. ಕುರುಕಲು, ಸಿಹಿತಿಂಡಿ ತಿನ್ನಬೇಕು ಅನಿಸುತ್ತದೆ. ಹಾಗಾಗಿ, ಆರೋಗ್ಯಕ್ಕೆ ಅಷ್ಟೇನೂ ಹಾನಿಕರವಲ್ಲದ ಆಹಾರಗಳನ್ನು, ವೈದ್ಯರ ಸಲಹೆ ಮೇರೆಗೆ ಕೊಡಿ. 

4.  ಆರೋಗ್ಯ ತಪಾಸಣೆ 
“ನನಗೇನಾಗಿದೆ? ಚೆನ್ನಾಗಿಯೇ ಇದ್ದೇನಲ್ಲಾ?’… ಇದು ವೃದ್ಧರು ಹೇಳುವ ಮಾತು. ಈಗಲೂ ಕೆಲಸ ಮಾಡುತ್ತೇನೆ, ಬೆಳಗ್ಗೆ ವಾಕ್‌ ಹೋಗುತ್ತೇನೆ, ಬಿಪಿ-ಶುಗರ್‌ ಇಲ್ಲ ಅಂತೆಲ್ಲಾ ಹೇಳಿ ಆಸ್ಪತ್ರೆಗೆ ಹೋಗುವುದಿಲ್ಲ. ಅವರ ಮನವೊಲಿಸಿ, ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಕರೆದೊಯ್ಯಿರಿ. 

5.  ಸಮವಯಸ್ಕರೊಡನೆ ಬೆರೆಯಲು ಬಿಡಿ
ತಮ್ಮದೇ ವಯಸ್ಸಿನವರೊಂದಿಗೆ ಹರಟೆ ಹೊಡೆಯುವುದರಿಂದ ಹಿರಿಯರಿಗೆ ಖುಷಿ ಸಿಗುತ್ತದೆ. ಸಮವಯಸ್ಕರ ಕ್ಲಬ್‌, ಸಂಘಟನೆ ಅಥವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿರ್ಬಂಧ ಹೇರಬೇಡಿ. ಹಳೆಯ ನೆನಪುಗಳನ್ನು ಮೆಲುಕು ಹಾಕಲು ಅವರಿಗೆ ಅವಕಾಶ ಮಾಡಿಕೊಡಿ. 

6.  ರಿಮೋಟ್‌ ಅವರಿಗೂ ಸಿಗಲಿ 
ಹಿರಿಯರಿಗೆ ಯೋಗ, ಪೌರಾಣಿಕ ಸಿನಿಮಾ, ಅಧ್ಯಾತ್ಮ ಪ್ರವಚನದಂಥ ಕಾರ್ಯಕ್ರಮಗಳು ಇಷ್ಟವಾಗುತ್ತವೆ. ಟಿವಿ ನೋಡುವ ಸಮಯದಲ್ಲಿ ಕೆಲಹೊತ್ತು ಅವರಿಗೂ ಆಯ್ಕೆಯ ಸ್ವಾತಂತ್ರ್ಯ ನೀಡಿ.

7. ಧಾರ್ಮಿಕ ಕ್ಷೇತ್ರಗಳ ಭೇಟಿ
ದೇವಾಲಯಕ್ಕೆ, ಅಧ್ಯಾತ್ಮ ಕೇಂದ್ರಗಳಿಗೆ ಭೇಟಿ ನೀಡಿದರೆ ವೃದ್ಧರ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಜೀವನದ ಇಳಿಸಂಜೆಯಲ್ಲಿ ಅವರ ಒಲವು ಅಧ್ಯಾತ್ಮದ ಕಡೆ ವಾಲುವುದು ಸಾಮಾನ್ಯ. ಹಾಗಾಗಿ ಪ್ರಯಾಣಕ್ಕೆ ಆಯಾಸದಾಯಕವಲ್ಲದ ಧಾರ್ಮಿಕ ಕ್ಷೇತ್ರಗಳಿಗೆ ಅವರೊಂದಿಗೆ ಭೇಟಿ ಕೊಡಿ.

8. ಸಲಹೆ ಕೇಳಿ 
ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳುವಾಗ, ವಯಸ್ಸಾಗಿದೆಯೆಂಬ ಕಾರಣ ನೀಡಿ ಹಿರಿಯರನ್ನು ನಿರ್ಲಕ್ಷಿಸಬೇಡಿ. ಬದಲಿಗೆ, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರಲ್ಲಿ ಸಲಹೆ ಕೇಳಿ. ಅವರ ಅನುಭವಕ್ಕೆ ಬೆಲೆ ಕೊಡಿ.

ಮಾಲಾ ಮ. ಅಕ್ಕಿಶೆಟ್ಟಿ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.