ಜಗತ್ತಿನ ಪುರಾತನ ಶ್ಯಾಂಪೂ


Team Udayavani, Sep 5, 2018, 6:00 AM IST

1.jpg

ಅಜ್ಜನ ಮನೆಯಿಂದ ಯಾರೇ ಬರುವುದಿದ್ದರೂ ಅತ್ತಿಗೆಯ ಮಗಳ ಮೊದಲ ಬೇಡಿಕೆ, “ಗೊಂಪಿನ ಕೋಲು’. ಅವಳನ್ನು ನೋಡಿದರೆ “ಅಬ್ಟಾ ಈ ಹುಡುಗಿ, ಮಾಡರ್ನ್ ಯುಗದಲ್ಲಿ ನೈಸರ್ಗಿಕವಾಗಿ ದೊರೆಯುವ ಗೊಂಪಿಗೆ ಇಷ್ಟು ಮರುಳಾಗಿದ್ದಾಳಲ್ಲ’ ಎಂದು ಹೆಮ್ಮೆಯಾಗುತ್ತದೆ…

ಅಣ್ಣ ಅತ್ತಿಗೆ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದಾರೆ. ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಅವರ ಮಗಳಿಗೆ ತಲೆಗೂದಲ ಬಗ್ಗೆ ಎಲ್ಲಿಲ್ಲದ ಕಾಳಜಿ. ಪ್ರತೀ ಬಾರಿ ಅಜ್ಜನ ಮನೆಗೆ ಬಂದಾಗಲೂ ಅಲೋವೇರಾ, ಮೆಹಂದಿ ಸೊಪ್ಪಿನ ಪೇಸ್ಟ್‌ ತಲೆಗೆ ಹಚ್ಚಿ, ಕಡ³ದಂಜಿ ಕೋಲಿನಿಂದ ತಾನೇ ತಯಾರಿಸಿದ ಗೊಂಪಿನಲ್ಲಿ ಸ್ನಾನ ಮಾಡಿ ಆರೈಕೆ ಮಾಡುವುದೆಂದರೆ ಅವಳಿಗೆ ಅಚ್ಚುಮೆಚ್ಚು. ಅಜ್ಜನ ಮನೆಯಿಂದ ಯಾರೇ ಬರುವುದಿದ್ದರೂ ಅವಳ ಮೊದಲ ಬೇಡಿಕೆ “ಗೊಂಪಿನ ಕೋಲು’. ಅವಳನ್ನು ನೋಡಿದರೆ “ಅಬ್ಟಾ ಈ ಹುಡುಗಿ, ಮಾಡರ್ನ್ ಯುಗದಲ್ಲಿ ನೈಸರ್ಗಿಕವಾಗಿ ದೊರೆಯುವ ಗೊಂಪಿಗೆ ಇಷ್ಟು ಮರುಳಾಗಿದ್ದಾಳಲ್ಲ’ ಎಂದು ಹೆಮ್ಮೆಯಾಗುತ್ತದೆ.

ಅಜ್ಜಿ, ಮುತ್ತಜ್ಜಿಯ ಕಾಲದ ನೈಸರ್ಗಿಕ ಶ್ಯಾಂಪೂ
ಹೆಣ್ಣಿನ ಅಂದಚಂದ ಹೆಚ್ಚಿಸುವಲ್ಲಿ ತಲೆಗೂದಲ ಪಾತ್ರ ಬಹು ದೊಡ್ಡದು. ನೀಳವಾಗಿರಲಿ ಅಥವಾ ಚಿಕ್ಕದಿರಲಿ ಅಂದವಾಗಿ, ಸಿಲ್ಕಿà ಹೇರ್‌ ಬೇಕೆಂಬುದು ಎಲ್ಲಾ ಹೆಣ್ಣುಮಕ್ಕಳ ಬಯಕೆ. ಅದಕ್ಕಾಗಿಯೇ ಹೇರ್‌ ಸ್ಟ್ರೇಯrನಿಂಗ್‌, ಹೇರ್‌ ಕಂಡೀಷನರ್‌ ಮುಂತಾದ ಕಸರತ್ತು ನಡೆಸುತ್ತೇವೆ. ಅದಕ್ಕಾಗಿ ಸಾವಿರಾರು ರೂಪಾಯಿ ವ್ಯಯಿಸಲೂ ಹಿಂದೆಮುಂದೆ ನೋಡುವುದಿಲ್ಲ.

  ಹಿಂದೆಲ್ಲಾ, ಈಗಿನಂತೆ ಶ್ಯಾಂಪೂ, ಹೇರ್‌ಕಂಡೀಷನರ್‌ ಇರಲಿಲ್ಲ. ಬ್ಯೂಟಿಪಾರ್ಲರ್‌ಗೆ ಹೋಗುತ್ತಿದ್ದವರ ಸಂಖ್ಯೆಯೂ ವಿರಳ. ಬದಲಾಗಿ ಮನೆಯಲ್ಲೇ ಗೊಂಪು ತಯಾರಿಸಿ ಅದರಿಂದ ತಲೆಗೂದಲನ್ನು ತೊಳೆದು ಆರೈಕೆ ಮಾಡುತ್ತಿದ್ದರು. ಇದು ಕೂದಲನ್ನು ಆರೋಗ್ಯವಾಗಿ, ನೀಳವಾಗಿ ಕಾಂತಿಯುಕ್ತವಾಗಿರುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿತ್ತು. ಆದರೆ ಕಾಲ ಸರಿದಂತೆ ನಮ್ಮ ಅಜ್ಜಿ, ಮುತ್ತಜ್ಜಿಯ ಕಾಲದಲ್ಲಿ ಬಳಸುತ್ತಿದ್ದ ಗೊಂಪು ತೆರೆಮರೆಗೆ ಸರಿದಿದೆ. 

ಏನಿದು ಗೊಂಪು?
ಕಡ³ದಂಜಿ, ಬಣು³, ಇರುಪ್ಪೆ (ಎರಪ್ಪೆ) ಮುಂತಾದ ಸಸ್ಯಗಳಿಂದ ಇದನ್ನು ತಯಾರಿಸಲಾಗುತ್ತದೆ. ಹೆಚ್ಚಾಗಿ ಎಲ್ಲಾ ಮನೆಗಳಲ್ಲೂ ಇರುವ ದಾಸವಾಳ ಗಿಡದ ಎಲೆಗಳಿಂದಲೂ ಗೊಂಪು ತಯಾರಿಸಬಹುದು. ಕಡ³ದಂಜಿಯಿಂದ ಗೊಂಪು ತಯಾರಿಸಲು ಮೊದಲು ಈ ಸಸ್ಯದ ಕೋಲಿನ ತೊಗಟೆಯನ್ನು ತೆಗೆಯಬೇಕು. ಸಲೀಸಾಗಿ ತೆಗೆಯಬಹುದಾದ ಈ ತೊಗಟೆಯನ್ನು ಚೆನ್ನಾಗಿ ಜಜ್ಜಿ ನೀರಲ್ಲಿ ಎರಡರಿಂದ ಮೂರು ಗಂಟೆ ನೆನೆಸಿಟ್ಟರೆ ಗೊಂಪು ತಯಾರಾಗುತ್ತದೆ. ಲೋಳೆಯಂತೆ ಇರುವ ಈ ದ್ರಾವಣವನ್ನು ಬಿಸಿ ನೀರಿನೊಂದಿಗೆ ಸೇರಿಸಿ ತಲೆಗೆ ಸ್ನಾನ ಮಾಡಬೇಕು. ಬಣು³, ಇರುಪ್ಪೆ ಸಸ್ಯಗಳ ಎಲೆಗಳಿಂದಲೂ ಇದೇ ಮಾದರಿಯಲ್ಲಿ ಗೊಂಪು ತಯಾರಿಸಬಹುದು.

ಗೊಂಪು ತಂಪು ತಂಪು
– ನೈಸರ್ಗಿಕವಾದ ಈ ಗೊಂಪು ಆರೋಗ್ಯದೃಷ್ಟಿಯಿಂದ ಬಲು ಉಪಕಾರಿ. ನಿಯಮಿತವಾಗಿ ಗೊಂಪನ್ನು ಬಳಸಿ ಸ್ನಾನ ಮಾಡುವುದರಿಂದ ಡ್ಯಾಂಡ್ರಫ್, ಸೀಳುಗೂದಲು ಮುಂತಾದ ತೊಂದರೆಗಳನ್ನು ತಡೆಯಬಹುದು. 

– ಶರೀರದಲ್ಲಿನ ಉಷ್ಣತೆಯನ್ನು ನಿವಾರಿಸುತ್ತದೆ. ಕಣ್ಣಿನಆರೋಗ್ಯಕ್ಕೂ ಬಲು ಸಹಕಾರಿ ಈ ಗೊಂಪು. 

– ಬಾಣಂತಿಯರು ಗೊಂಪು ಬಳಸಿ ತಲೆಗೆ ಸ್ನಾನ ಮಾಡುವುದರಿಂದ ಉಷ್ಣದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

– ಚಿಕ್ಕ ಮಕ್ಕಳು ದೊಡ್ಡವರು ಉಪಯೋಗಿಸುವ ಗೊಂಪು ಬಳಸಿದರೆ ಶೀತವಾಗುವ ಸಾಧ್ಯತೆ ಹೆಚ್ಚು. ಹಾಗಾಗಿ ಅವರಿಗೆ ಬೆಳ್ಳಂಟೆ ಸೊಪ್ಪಿನಗೊಂಪನ್ನು ಬಳಸಬಹುದು. ಇದು ಹೆಚ್ಚು ಲೋಳೆಯಾಗುವುದಿಲ್ಲ. 

– ಕಫ‌, ಶೀತ ದೇಹ ಪ್ರವೃತ್ತಿಯವರು ಗೊಂಪನ್ನು ಬಳಸುವಾಗ ಎಚ್ಚರಿಕೆ ವಹಿಸಬೇಕು. ಗೊಂಪು ಉಷ್ಣತೆಯನ್ನು ನಿವಾರಿಸಿ ಶರೀರವನ್ನು ತಂಪು ಮಾಡುತ್ತದೆ. ಹಾಗಾಗಿ ಇಂಥವರಿಗೆ ಬಹುಬೇಗ ಶೀತವಾದೀತು.

ವಂದನಾ ಕೇವಳ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.