ರೊಟ್ಟಿ ಬೇಕಾ ರೊಟ್ಟಿ?


Team Udayavani, Sep 12, 2018, 6:00 AM IST

4.jpg

ಬಾದಾಮಿ ಅಂದಾಗ ತಕ್ಷಣ ನೆನಪಾಗೋದು ಅಲ್ಲಿನ ಗುಹಾಂತರ ದೇವಾಲಯ ಹಾಗೂ ವಾಸ್ತುಶಿಲ್ಪದ ಸೊಬಗು. ಅಲ್ಲಿಗೆ ಹೋದವರೆಲ್ಲ ಬನಶಂಕರಿ ದೇವಸ್ಥಾನಕ್ಕೂ ತಪ್ಪದೇ ಹೋಗುತ್ತಾರೆ. ಅಲ್ಲಿ ಬನಶಂಕರಿಯಮ್ಮನಷ್ಟೇ ಅಲ್ಲ, ಅನ್ನಪೂರ್ಣೇಶ್ವರಿಯರೂ ಇದ್ದಾರೆ. ಪ್ರತಿನಿತ್ಯ ಬರುವ ಪ್ರವಾಸಿಗಳಿಗೆ ರುಚಿಕಟ್ಟಾದ ಊಟ ಬಡಿಸುವುದೇ ಇವರ ಕಾಯಕ…

ಉತ್ತರ ಕರ್ನಾಟಕದ ಬಹುತೇಕ ದೇವಸ್ಥಾನಗಳಲ್ಲೂ ಪ್ರತಿ ನಿತ್ಯ ಅನ್ನ ದಾಸೋಹ ನಡೆಯುತ್ತದೆ. ಊಟದ ಸಮಯದಲ್ಲಿ ಬಂದ ಭಕ್ತಾದಿಗಳು ಹಸಿದ ಹೊಟ್ಟೆಯಲ್ಲಿ ಹೋದದ್ದೇ ಇಲ್ಲ. ಇದಕ್ಕೆ ಬಾದಾಮಿಯ ಬನಶಂಕರಿ ಅಮ್ಮನ ದೇವಸ್ಥಾನವೂ ಹೊರತಾಗಿಲ್ಲ. ಆದರೆ, ಇಲ್ಲಿ ಇನ್ನೊಂದು ವಿಶೇಷವಿದೆ. ದಾಸೋಹದ ಸಮಯ ಮೀರಿದರೂ ನಿಮ್ಮನ್ನು ಸತ್ಕರಿಸುವ ಅನ್ನಪೂರ್ಣೆಯರಿದ್ದಾರೆ ಅಲ್ಲಿ. ಬುಟ್ಟಿಯಲ್ಲಿ ರೊಟ್ಟಿ ಇಟ್ಟುಕೊಂಡು ಮಾರುವ ಅಮ್ಮಂದಿರು, ಅಜ್ಜಿಯರು ಕೇವಲ 20 ರೂಪಾಯಿಗೆ 2 ಖಡಕ್‌ ರೊಟ್ಟಿ, 2 ಬಗೆಯ ಕಾಳು ಪಲ್ಯ, ಚಟ್ನಿ- ಮೊಸರು, ಅನ್ನ ನೀಡುತ್ತಾರೆ. 

  ಈ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳು ಪ್ರಸಾದದ ಜೊತೆಗೆ ರೊಟ್ಟಿ ಊಟವನ್ನೂ ಮಾಡಲು ಬಯಸುತ್ತಾರೆ. ಕಾರಣ ಆ ಅಡುಗೆಯ ರುಚಿ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಈ ಮಹಿಳೆಯರು ಬಾದಾಮಿ ಸಮೀಪದ ಗ್ರಾಮದವರು. ಮನೆಯಿಂದಲೇ ಅಡುಗೆ ತಯಾರಿಸಿಕೊಂಡು ಬಂದು ದೇವಸ್ಥಾನದ ಬಳಿ ಮಾರಾಟ ಮಾಡುತ್ತಾರೆ. ದಿನಕ್ಕೆ 300- 400 ರೊಟ್ಟಿಗಳು ಇಲ್ಲಿ ಮಾರಾಟವಾಗುತ್ತವೆ. ಮನೆಯಲ್ಲಿಯೇ ಹೆಪ್ಪು ಹಾಕಿ, ಕಡೆದ ಮಜ್ಜಿಗೆಯೂ ಇವರ ಬಳಿ ಸಿಗುತ್ತದೆ. ಅವರಲ್ಲಿ ಹೆಚ್ಚಿನವರು 50-60 ವರ್ಷ ದಾಟಿದವರೇ. ಇಳಿವಯಸ್ಸಿನಲ್ಲಿಯೂ ಸ್ವಂತ ದುಡಿಮೆಯಿಂದ ಬದುಕುತ್ತಿರುವ ಇವರ ಪರಿಶ್ರಮ, ಅವರ ಬುತ್ತಿಯ ಊಟದ ರುಚಿಯನ್ನು ಹೆಚ್ಚಿಸಿದೆ. ನೀವು ಅಲ್ಲಿಗೆ ಹೋದರೆ, ರೊಟ್ಟಿ ಊಟ ಮಿಸ್‌ ಮಾಡಬೇಡಿ.

ನಮ್ಮ ಅವ್ವಾರ ಕಾಲದಿಂದಾನೂ ಈ ಕೆಲಸಾ ಮಾಡ್ಕೊಂಡ್‌ ಬಂದಿದೇನ್ರೀ. ನಮ್ಮೂರು ಬಾನಾಪುರ. ಅಲ್ಲಿಂದ ಬಂದು, ಇಲ್ಲಿ ರೊಟ್ಟಿ ಮಾರತೀನ್ರೀ. 14-15 ವರ್ಷದಾಕಿ ಇದ್ದಾಗಿಂದೂ ಇದೇ ನನ್ನ ಕೆಲಸಾರೀ.
– ನೀಲಮ್ಮಾ, ರೊಟ್ಟಿ ಊಟ ಮಾರುವಾಕೆ

ಐಶ್ವರ್ಯ ಬ ಚಿಮ್ಮಲಗಿ

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.