ಹೋಲಿಕೆ ಮಾಡಿ ನೋಯುವುದೇಕೆ?


Team Udayavani, Sep 12, 2018, 6:00 AM IST

5.jpg

ಜೀವನದಲ್ಲಿ ನಮಗಿಂತ ಹೆಚ್ಚು ಯಶಸ್ವಿಯಾದವರನ್ನು ಕಂಡಾಗ, ನಾವೂ ಅವರಂತೆ ಇರಬೇಕಾಗಿತ್ತು ಎಂದು ಮನಸ್ಸು ಬಯಸುತ್ತದೆ. ಆದರೆ ಅದನ್ನೆಲ್ಲಾ ಪಡೆಯಲು ಅವರು ಪಟ್ಟ ಶ್ರಮ, ತಾಳ್ಮೆಯನ್ನು ನಾವೂ ಮೈಗೂಡಿಸಿಕೊಳ್ಳುವುದೂ ಅಷ್ಟೇ ಮುಖ್ಯ.

ಗೆಳತಿ ಮಧು ಪ್ರತಿ ಬಾರಿ, ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಕೆಲಸ, ಬಡ್ತಿ, ಕಾರು-ಮನೆ ಖರೀದಿ, ವಿದೇಶ ಪ್ರವಾಸ, ಹೊಸ ಮೊಬೈಲ್‌ಗ‌ಳ ಬಗ್ಗೆ ಬರೆದುಕೊಳ್ಳುವುದನ್ನು ಕಂಡು ನಿಟ್ಟುಸಿರು ಬಿಡುತ್ತಿದ್ದಳು ರಜನಿ. ಮನಸ್ಸಿನಲ್ಲಿ ಅದೇನೋ ಸಂಕಟ, ತನ್ನಿಂದ ಇದು ಸಾಧ್ಯವಾಗಲಿಲ್ಲವೇಕೆ? ನಾನೇಕೆ ಆ ದಿನ ಸೋತು ಕೆಲಸ ಬಿಡುವ ತಪ್ಪು ಮಾಡಿದೆ? ಅವಳಿಗಿಂತ ನಾನು ಯಾವುದರಲ್ಲಿಯೂ ಕಡಿಮೆಯಿರಲಿಲ್ಲವಲ್ಲ; ಆದರೂ, ಇಂದು ನಾನು ಕೇವಲ ಗೃಹಿಣಿ. ಅವಳಾದರೋ… ಮನಸ್ಸು ಒಳಗೊಳಗೇ ನೋಯತೊಡಗಿತ್ತು. ಜೊತೆಗೆ ತನ್ನ ದುರದೃಷ್ಟವನ್ನು ಹಳಿಯುತ್ತಾ ಆಕೆ ನೊಂದುಕೊಳ್ಳುತ್ತಿದ್ದಳು. 

ಮಧು ಮತ್ತು ರಜನಿ ಇಬ್ಬರೂ ಒಟ್ಟಿಗೇ ಕೆಲಸಕ್ಕೆ ಸೇರಿದವರು. ಒಟ್ಟಿಗೆ ನಾಲ್ಕು ವರ್ಷ ಕೆಲಸ ಮಾಡಿದ್ದರು. ಇಬ್ಬರೂ ಒಂದೇ ವರ್ಷ ಮದುವೆಯಾದರು ಕೂಡ. ಆದರೆ, ನಾಲ್ಕು ತಿಂಗಳ ಹೆರಿಗೆ ರಜೆಯ ನಂತರ ಮತ್ತೆ ಕೆಲಸಕ್ಕೆ ಸೇರಿಕೊಂಡಾಗ ತಾಯ್ತನ ಪ್ರತಿಕ್ಷಣವೂ ರಜನಿಯನ್ನು ಮನೆಯತ್ತ ಎಳೆಯುತ್ತಿತ್ತು. ಅಷ್ಟಲ್ಲದೆ, ಎಳೇ ಮಗುವನ್ನು ನೋಡಿಕೊಳ್ಳಲು ಅಮ್ಮ-ಅತ್ತೆಯರನ್ನು ಬೆಂಗಳೂರಿಗೆ ಬನ್ನಿ ಎಂದು ಬೇಡಿಕೊಳ್ಳಬೇಕಿತ್ತು. ಇಬ್ಬರೂ ಬೆಂಗಳೂರಿನಿಂದ ಇನ್ನೂರು ಮೈಲಿ ದೂರವಿದ್ದುದರಿಂದ ಬರುವುದಕ್ಕೆ ಪ್ರತಿಸಾರಿ ಏನೋ ಸಬೂಬು ನೀಡುವುದನ್ನು ಕಂಡು, ತಾನೇ ಮಧ್ಯೆ ಮಧ್ಯೆ ರಜೆ ತೆಗೆದುಕೊಳ್ಳುತ್ತಿದ್ದಳು. ಮನೆ-ರಜೆ- ಮಗು-ಕೆಲಸ ಎಲ್ಲವನ್ನೂ ಸರಿತೂಗಿಸುವಲ್ಲಿ ನಾಲ್ಕೈದು ತಿಂಗಳಿಗೆ ರೋಸಿಹೋಗಿದ್ದಳು ರಜನಿ. ಇದರೊಟ್ಟಿಗೆ ಗಂಡನ ಹೊತ್ತುಗೊತ್ತು ಇಲ್ಲದ ಸಾಫ್ಟ್ ವೇರ್‌ ನೌಕರಿಯಿಂದ ಇವಳಿಗೆ ಯಾವುದೇ ರೀತಿಯ ಬೆಂಬಲ ಸಿಗದೆ, ಮನೆಯಲ್ಲಿ ಯಾವಾಗಲೂ ಶೀತಲ ಸಮರ ನಡೆಯುತ್ತಿತ್ತು. ಈ ಎಲ್ಲ ಒತ್ತಡ ಸಹಿಸದೆ, ಕೆಲಸ ಬಿಟ್ಟು ಮನೆಯಲ್ಲಿ ಕೂತಳು. ಮಗುವಿಗೆ ತನ್ನ ಸಂಪೂರ್ಣ ಸಮಯ ನೀಡಿದಳು. ಜವಾಬ್ದಾರಿಗಳ ನಿರ್ವಹಣೆಯ ಬಗ್ಗೆ ಆಗುತ್ತಿದ್ದ ಗಂಡ-ಹೆಂಡಿರ ಜಗಳ ಕಡಿಮೆಯಾಗಿ ಬದುಕು ನಿಂತ ನೀರಂತೆ ಸಮಾಧಾನದಿಂದ ಸಾಗಿತ್ತು. 

 ದಿನಗಳು ಉರುಳಿದವು. ಮಗನಿಗೀಗ ಹದಿನಾರು ವರ್ಷ. ಫ್ರೆಂಡ್ಸ್, ಕೋಚಿಂಗ್‌ ಕ್ಲಾಸ್‌, ಓದು ಅಂತ ಯಾವಾಗಲೂ ಬ್ಯುಸಿ ಇರುತ್ತಿದ್ದ. ರಜನಿಯ ಅವಶ್ಯಕತೆ ಅವನಿಗೆ ಈಗ ಕಡಿಮೆಯಾಗಿತ್ತು. ಒಂಟಿತನದ ಕಾಟ, ಅದರೊಂದಿಗೆ ಗೆಳತಿಯ ಇಂಥ ಪೋಸ್ಟ್ಗಳು ಆಗಾಗ್ಗೆ ಅವಳನ್ನು ಕಾಡುತ್ತಲಿದ್ದವು. ಆದರೆ, ಮಿಂಚಿಹೋದ ಕಾಲಕ್ಕೆ ಚಿಂತಿಸಿ ಫ‌ಲವಿಲ್ಲ ಎಂದು ಆಕೆ ಬೇಗನೆ ಅರಿತುಕೊಂಡಳು. ತನ್ನಿಷ್ಟದ ಹವ್ಯಾಸಗಳತ್ತ ಮನಸ್ಸನ್ನು ತಿರುಗಿಸಲು ನಿರ್ಧರಿಸಿದಳು. ಆಗಲೇ ಅವಳು ಇನ್ನಿಲ್ಲದ ಓದಿಗೆ ಬಿದ್ದದ್ದು. ಕಾಲೇಜು ದಿನಗಳಲ್ಲಿದ್ದ ಕಾದಂಬರಿ ಓದುವ ಚಾಳಿಯನ್ನೂ ಮತ್ತೆ ಅಂಟಿಸಿಕೊಂಡದ್ದು. ಬದುಕನ್ನು ನೋಡುವ ದಿಕ್ಕು ಬೇರೆಯ ತಿರುವನ್ನು ತುಳಿದದ್ದು. 

ಜೀವನದಲ್ಲಿ ನಮಗಿಂತ ಹೆಚ್ಚು ಯಶಸ್ವಿಯಾದವರನ್ನು ಕಂಡಾಗ, ನಾವೂ ಅವರಂತೆ ಇರಬೇಕಾಗಿತ್ತು ಎಂದು ಮನಸ್ಸು ಬಯಸುತ್ತದೆ. ಆದರೆ ಅದನ್ನೆಲ್ಲಾ ಪಡೆಯಲು ಅವರು ಪಟ್ಟ ಶ್ರಮ, ತಾಳ್ಮೆಯನ್ನು ನಾವೂ ಮೈಗೂಡಿಸಿಕೊಳ್ಳುವುದೂ ಅಷ್ಟೇ ಮುಖ್ಯ. ಆ ನಿಟ್ಟಿನಲ್ಲಿ ನಾವು ಯಾರನ್ನು, ಯಾವಾಗ, ಎಷ್ಟರಮಟ್ಟಿಗೆ ಹೋಲಿಸಿಕೊಳ್ಳುತ್ತೇವೆ ಎಂಬುದರ ಕುರಿತು ಎಚ್ಚರವಹಿಸಿ. ನಮ್ಮನ್ನು ನಾವು ಉತ್ತಮ ಪಡಿಸಿಕೊಳ್ಳಲು, ಹೊಸದನ್ನು ಕಲಿಯಲು ಇತರರೊಂದಿಗೆ ಹೋಲಿಸಿಕೊಂಡರೆ ಸರಿ. ಆದರೆ ಹೋಲಿಕೆಯಿಂದ ನಮ್ಮ ಆತ್ಮಸ್ಥೈರ್ಯ ಕುಗ್ಗಬಾರದು. ಇದರಿಂದ, ಸಾಧನೆಯ ಹಾದಿಯಲ್ಲಿ ಸೋತಿದ್ದಕ್ಕೆ ಕೀಳರಿಮೆ- ಸ್ವಾನುಕಂಪಗಳು ನಮ್ಮನ್ನೇ ಕಾಡುತ್ತವೆ.

ಐಷಾರಾಮಿ ಜೀವನ, ಸುಖ, ಕಾರು, ಬಂಗಲೆ, ಇವೇ ಬದುಕಿನ ಯಶಸ್ಸಿನ ಮೌಲ್ಯಮಾಪನಗಳು ಅನ್ನುವುದು ಈಗಿನ ಕಾಲದ ನಂಬಿಕೆ. ಆದರೆ ಇದು ಕೊಳ್ಳುಬಾಕತನ ಸೃಷ್ಟಿಸಿರುವ ಮನೋಸ್ಥಿತಿ ಅಷ್ಟೆ. ಬೇರೆಯವರೊಂದಿಗೆ ಹೋಲಿಸಿಕೊಳ್ಳುವುದು ವ್ಯಕ್ತಿವಿಕಸನಕ್ಕೆ ಅಡ್ಡಿಪಡಿಸುವುದನ್ನು ಬಿಟ್ಟು ಬೇರೇನೂ ಮಾಡಲಾರದು. ನಮಗಿಂತ ಹೆಚ್ಚು ಯಶಸ್ಸು ಕಂಡವರನ್ನು ನೋಡಿದಾಗ ಅಸೂಯೆ ಸಹಜ. ಹಾಗೆಯೇ, ನಮಗಿಂತ ಹಿಂದುಳಿದವರನ್ನು ಕಂಡಾಗ ಹೆಮ್ಮೆ ಎನಿಸುವುದೂ ಸಹಜ. ಆದರೆ ಇವೆಲ್ಲವೂ ತಾತ್ಕಾಲಿಕ. 

ಸಾಮಾಜಿಕ ಜಾಲತಾಣಗಳಲ್ಲಿ ಕಾಣಸಿಗುವ ಎಲ್ಲಾ ಸಂದೇಶಗಳು ಸಂಪೂರ್ಣ ವಸ್ತುಸ್ಥಿತಿಯನ್ನು ಬಿಂಬಿಸುತ್ತವೆ ಎನ್ನುವುದು ಸುಳ್ಳು. ಹೋಲಿಸಿಕೊಳ್ಳುವ ಚಟವನ್ನು ಪ್ರತಿಯೊಬ್ಬರೂ ನಿಯಂತ್ರಣದಲ್ಲಿಡಬೇಕು. ಬದುಕೆಂಬುದು ಪ್ರತಿ ಹಂತದಲ್ಲಿಯೂ ತುಲನೆಗೊಳಪಡಿಸುವ ಸಾಮಗ್ರಿಯಲ್ಲ. ಹಾಗೆ ಮಾಡಿದರೆ ಇರುವ ಸಂತೋಷ, ನೆಮ್ಮದಿಯೂ ಕದಡಿ, ಅಸೂಯೆಯೆಂಬ ಕತ್ತಲ ಕೋಣೆಯೊಳಗೆ ನಾವೇ ಬಂಧಿಯಾಗಿಬಿಡುತ್ತೇವೆ. 

ನಮ್ಮ ನಿನ್ನೆಗಳ ಮತ್ತು ಇವತ್ತಿನ ಜೀವನದ ಬೆಳವಣಿಗೆಯನ್ನು ಅವಲೋಕಿಸುತ್ತಾ, ನಾಳೆಗಳು ನಿರ್ಣಯವಾಗಬೇಕೇ ವಿನಃ ಬೇರೆಯವರ ಜೀವನ ನಮ್ಮ ನಾಳೆಗಳನ್ನು ನಿರ್ಣಯಿಸುವಂತಾಗಬಾರದು. ಇತರರ ಯಶಸ್ಸನ್ನು ಕಂಡಾಗ ಹುಟ್ಟಬೇಕಾದುದು ಅಸೂಯೆಯಲ್ಲ, ಒಳ್ಳೆಯ ಮನಸ್ಸಿನಿಂದ ಮೆಚ್ಚಿ ಅಭಿನಂದಿಸುವ ಭಾವ. 

ಜಮುನಾ ರಾಣಿ ಹೆಚ್‌.ಎಸ್‌.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.