ದೊಡ್ಡಪತ್ರೆಯ ದೊಡ್ಡ ಲಾಭಗಳು


Team Udayavani, Sep 26, 2018, 6:00 AM IST

e-3.jpg

ದೊಡ್ಡಪತ್ರೆ ಅಥವಾ ಸಂಬಾರಬಳ್ಳಿ ಸಸ್ಯವನ್ನು ನಾವು ನಮ್ಮ ಮನೆಯ ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೂ ಅಥವಾ ಹೂಕುಂಡಗಳಲ್ಲೂ ಬೆಳೆಸಬಹುದು. ಇದು ನೆಲದ ಮೇಲೆ ಪೊದೆಯಾಗಿ ಬೆಳೆಯುವ ಸಸ್ಯ. ಇದರ ಎಲೆಗಳು ಹಸಿರಾಗಿ, ದಪ್ಪವಾಗಿರುವುದರಿಂದ ಅಲಂಕಾರ ಸಸ್ಯವಾಗಿಯೂ ಕಂಗೊಳಿಸುತ್ತದೆ. ಇದರ ಎಲೆಯು ಕರ್ಪೂರ ವಾಸನೆಯನ್ನು ಹೊಂದಿರುವುದರಿಂದ ಇದನ್ನು “ಕರ್ಪೂರವಳ್ಳಿ’ ಅಂತಲೂ ಕರೆಯುತ್ತಾರೆ.

  ದೊಡ್ಡಪತ್ರೆಯ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಅಂಶ ಇರುವುದರಿಂದ ಎಲೆಗಳನ್ನು ಕೊಯ್ದು ಸ್ವಲ್ಪ ಬೆಂಕಿಯಲ್ಲಿ ಬಾಡಿಸಿ ಹಿಂಡಿದರೆ ನೀರು ಸಿಗುತ್ತದೆ. ಈ ನೀರಿನಲ್ಲಿ ಔಷಧೀಯ ಗುಣವಿರುವುದರಿಂದ ಎಳೆ ಮಕ್ಕಳಲ್ಲಿ ಕಂಡುಬರುವ ಜ್ವರ, ಶೀತ ಸೇರಿದಂತೆ ಹಲವು ಕಾಯಿಲೆಗಳಿಗೆ ಮನೆ ಮ¨ªಾಗಿ ಬಳಸಲಾಗುತ್ತದೆ. ಮಕ್ಕಳಿಗೆ ಆಗಾಗ ಅಲರ್ಜಿ, ಜ್ವರ, ಶೀತ ಬರುತ್ತಲೇ ಇರುವುದರಿಂದ ಚಿಕ್ಕಮಕ್ಕಳಿರುವ ಮನೆಗಳಲ್ಲಿ ದೊಡ್ಡಪತ್ರೆ ಇರಲೇಬೇಕು.

– ದೊಡ್ಡಪತ್ರೆ ಜ್ವರ, ಕೆಮ್ಮು, ಶೀತಕ್ಕೆ ಉತ್ತಮವಾದ ಮನೆಮದ್ದು. ಚಿಕ್ಕ ಮಕ್ಕಳಿಗೆ ದೊಡ್ಡಪತ್ರೆಯ ಎಲೆಗಳನ್ನು ಬಾಡಿಸಿ ಅದರ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ತಿನ್ನಿಸುವುದರಿಂದ ಕಟ್ಟಿದ ಮೂಗು, ಗಂಟಲು ಕಿರಿಕಿರಿ ವಾಸಿಯಾಗುತ್ತದೆ.

– ಸಂಬಾರ ಬಳ್ಳಿಯ ಎಲೆಗಳನ್ನು ಕೊಯ್ದು ಬೆಂಕಿಯಲ್ಲಿ ಬಾಡಿಸಿಕೊಂಡು ಎದೆಗೆ ಶಾಖ ಕೊಡುವುದರಿಂದಲೂ ಮಕ್ಕಳಲ್ಲಿ ಕಂಡುಬರುವ ಉಬ್ಬಸ, ಕಫ‌ಗಳ ನಿವಾರಣೆಯಾಗುತ್ತದೆ.

– ದೊಡ್ಡಪತ್ರೆ ಎಲೆಗಳ ರಸ ಸೇವಿಸುವುದರಿಂದ ಮಲಬದ್ಧತೆ ನಿವಾರಣೆಯಾಗಿ ಜೀರ್ಣಕ್ರಿಯೆಯನ್ನು ಉತ್ತೇಜಸುತ್ತದೆ.

– ಇದರ ಎಲೆಗಳನ್ನು ಶುಂಠಿರಸದಲ್ಲಿ ಬೆರೆಸಿ, ಬೆಚ್ಚಗಿನ ತಾಪಮಾನದಲ್ಲಿ ಸುಟ್ಟು ತಣ್ಣಗಾದ ಮೇಲೆ ತಲೆಗೆ ಪಟ್ಟು ಹಾಕಿಕೊಳ್ಳಬೇಕು. ಇದರಿಂದ ತಲೆನೋವು ಕಡಿಮೆಯಾಗುತ್ತದೆ. ಅಲ್ಲದೇ, ಎಳ್ಳೆಣ್ಣೆಗೆ ದೊಡ್ಡಪತ್ರೆ ರಸವನ್ನು ಸೇರಿಸಿ ತಲೆಗೆ ಹಚ್ಚುವುದರಿಂದ ತಲೆ ತಂಪಾಗುವುದಲ್ಲದೆ ಕಣ್ಣುರಿಯೂ ಕಡಿಮೆಯಾಗುತ್ತದೆ.

– ದೊಡ್ಡಪತ್ರೆಯ ಎಲೆಗಳನ್ನು 5ರಿಂದ 10 ನಿಮಿಷಗಳ ಕಾಲ ಬಿಸಿನೀರಿನಲ್ಲಿ ಕುದಿಸಿ ಆ ನೀರನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಬಳಿಕ ಶಾಂಪೂ ಹಾಕಿ ತೊಳೆದರೆ ತಲೆಹೊಟ್ಟು ದೂರವಾಗುತ್ತದೆ.

– ತುರಿಕೆ, ಕಜ್ಜಿಯಾದಾಗ ದೊಡ್ಡಪತ್ರೆ ಎಲೆ, ಅರಿಶಿನ ಪುಡಿ ಸೇರಿಸಿ ಬೆಣ್ಣೆಯಲ್ಲಿ ಅರೆದು ಚೆನ್ನಾಗಿ ಕಲೆಸಿ ಮುಲಾಮು ಮಾಡಿಟ್ಟುಕೊಂಡು ದಿನಕ್ಕೆ ಒಂದೆರಡು ಬಾರಿ ಹಚ್ಚುತ್ತಾ ಬಂದರೆ ತುರಿಕೆ ಮಾಯವಾಗುತ್ತದೆ. ಅಲ್ಲದೇ, ದೊಡ್ಡಪತ್ರೆಯ ಎಲೆಗಳನ್ನು ಸುಟ್ಟುಕೊಂಡು ಯಾವುದೇ ಕೀಟಗಳ ಕಡಿತ, ಜೇನುನೊಣದ ಕುಟುಕುಗಳಿಗೆ ಇಲ್ಲವೇ ಯಾವುದೇ ಕೀಟ ಕಡಿತ, ಚರ್ಮದ ಉರಿಯೂತದ ನೋವು ಮತ್ತು ಗಾಯಗಳನ್ನು ಗುಣಪಡಿಸುತ್ತದೆ.

– ಸಂಬಾರಬಳ್ಳಿ ಎಲೆಗಳನ್ನು ಬಾಡಿಸಿ ಚಟ್ನಿ, ತಂಬುಳಿ ತಯಾರಿಸಿ ಊಟದಲ್ಲಿ ಸೇವಿಸಬಹುದು. ಶುಂಠಿ, ಬೆಳ್ಳುಳ್ಳಿ, ಹಸಿಮೆಣಸು, ಲಿಂಬೆರಸ ಸೇರಿಸಿ ಅರೆದರೆ ಚಟ್ನಿಯಾಗಿಯೂ ಮಜ್ಜಿಗೆ ಬೆರೆಸಿದರೆ ಊಟಕ್ಕೆ ತಂಪು ಹುಳಿಯಾಗಿಯೂ ತಯಾರಾಗುತ್ತದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.