ಪಲಾವ್‌ ಎಂಬ ಫಾಸ್ಟ್‌ ಫ‌ುಡ್‌!


Team Udayavani, Sep 26, 2018, 6:00 AM IST

e-5.jpg

ಅರ್ಧ ಗಂಟೆಯಲ್ಲಿ ತಯಾರಿಸಬಹುದಾದ ರುಚಿಕರ ತಿಂಡಿ ಪಲಾವ್‌. ಮಾರ್ನಿಂಗ್‌ ಕ್ಲಾಸ್‌, ಟ್ಯೂಶನ್‌ನ ಕಾರಣಕ್ಕೆ ಮಕ್ಕಳು ಬೇಗ ಮನೆ ಬಿಡ್ತಾರೆ ಅನ್ನುವ ಸಂದರ್ಭ ಮತ್ತು ವಿಶೇಷ ದಿನಗಳಲ್ಲಿ ಫ‌ಟಾಫ‌ಟ್‌ ಅಂತ ಮಾಡಬಹುದಾದ ತಿನಿಸು ಇದು. ದೊಡ್ಡವರಿಂದ ಚಿಕ್ಕ ಮಕ್ಕಳು ಸಹ ಇಷ್ಟಪಟ್ಟು ತಿನ್ನುವ ಪಲಾವ್‌ನ ವೈವಿಧ್ಯಮಯ ರೆಸಿಪಿಗಳು ಇಲ್ಲಿವೆ.  

1.ಚನ್ನಾ ಪಲಾವ್‌
ಬೇಕಾಗುವ ಸಾಮಗ್ರಿ: ಬೇಯಿಸಿದ ಚನ್ನಾ- 1 ಕಪ್‌, ಬಾಸುಮತಿ ಅಕ್ಕಿ -1 ಕಪ್‌, ನೀರು- 2 ಕಪ್‌, ಉಪ್ಪು ರುಚಿಗೆ, ಕೊತ್ತಂಬರಿ ಸೊಪ್ಪು,  ಈರುಳ್ಳಿ -2, ಟೊಮೆಟೊ- 2, ಶುಂಠಿ- ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಜೀರಿಗೆ- 1ಚಮಚ, ಆಮ್‌ ಚೂರ್‌ ಪೌಡರ್‌- 1 ಚಮಚ, ಅರಿಶಿನ- 1/4 ಚಮಚ, ಖಾರದ ಪುಡಿ- 1ಚಮಚ, ದನಿಯ ಪುಡಿ- 1/2 ಚಮಚ, ಜೀರಿಗೆ ಪುಡಿ-1/4 ಚಮಚ, ಕಸೂರಿ ಮೇತಿ-1,  ತುಪ್ಪ/ಎಣ್ಣೆ -3 ಚಮಚ, ಪಲಾವ್‌ ಎಲೆ, ಸ್ಟಾರ್‌ ಅನೈಸ್‌, ಲವಂಗ, ಚಕ್ಕೆ.

ತಯಾರಿಸುವ ವಿಧಾನ: ಚನ್ನಾವನ್ನು ಪ್ರತ್ಯೇಕವಾಗಿ ಬೇಯಿಸಿಕೊಳ್ಳಿ. ಬಾಸುಮತಿ ಅಕ್ಕಿಯನ್ನು ಅರ್ಧ ಗಂಟೆ ನೆನೆಸಿಡಿ. ಕುಕ್ಕರ್‌ನಲ್ಲಿ ತುಪ್ಪ ಹಾಕಿ, ಬಿಸಿ ಮಾಡಿ. ಪಲಾವ್‌ ಎಲೆ, ಜೀರಿಗೆ, ಲವಂಗ, ಸ್ಟಾರ್‌ ಅನೈಸ್‌, ಚಕ್ಕೆ, ಹೆಚ್ಚಿದ ಈರುಳ್ಳಿ ಹಾಕಿ ಬಾಡಿಸಿ. ಶುಂಠಿ ಬೆಳ್ಳುಳ್ಳಿ ಪೇಸ್ಟ್, ಟೊಮ್ಯಾಟೊ ಸೇರಿಸಿ ಹುರಿಯಿರಿ. ಮಸಾಲೆ ಪದಾರ್ಥಗಳನ್ನು ಹಾಕಿ ಚೆನ್ನಾಗಿ ಬಾಡಿಸಿ. ಚನ್ನಾ ಹಾಕಿ ಮಿಶ್ರಣ ಮಾಡಿ. ಬಾಸುಮತಿ ಅಕ್ಕಿ ಹಾಕಿ ಎಲ್ಲಾ ಪದಾರ್ಥಗಳನ್ನು ಸೇರಿಸಿ ಒಂದು ನಿಮಿಷ ಹುರಿಯಿರಿ. ನಂತರ ಎರಡು ಕಪ್‌ ನೀರು ಸೇರಿಸಿ. ರುಚಿಗೆ ತಕ್ಕಷ್ಟು ಉಪ್ಪು ಹಾಕಿ,  ಎರಡು ವಿಷಲ್‌ ಆಗುವವರೆಗೆ ಕುಕ್ಕರ್‌ ಕೂಗಿಸಿ. ಕೊನೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಹಾಕಿ ಅಲಂಕರಿಸಿ.

2. ಆಲೂ ಮೇತಿ ಪಲಾವ್‌
ಬೇಕಾಗುವ ಸಾಮಗ್ರಿ: ಬಾಸುಮತಿ ಅಕ್ಕಿ- ಒಂದೂವರೆ ಕಪ್‌, ಮೆಂತ್ಯೆ ಸೊಪ್ಪು-1 ಕಟ್ಟು, ಈರುಳ್ಳಿ- 2, ಟೊಮೆಟೊ- 3, ಕತ್ತರಿಸಿದ ಆಲೂಗಡ್ಡೆ – 4, ಬಟಾಣಿ- 1/2 ಕಪ್‌, ಜೀರಿಗೆ- 1 ಚಮಚ, ಕಾಳುಮೆಣಸು-10, ಪಲಾವ್‌ ಎಲೆ-1, ಏಲಕ್ಕಿ- 2, ಲವಂಗ- 4, ಸ್ಟಾರ್‌ ಅನೈಸ್‌-1, ಗರಂ ಮಸಾಲೆ- 1 ಚಮಚ, ಖಾರದ ಪುಡಿ-1/2 ಚಮಚ, ಹಸಿ ಮೆಣಸು-2, ಅರಿಶಿನ- 1/2 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಉಪ್ಪು ರುಚಿಗೆ, ನೀರು- 3 ಕಪ್‌, ತುಪ್ಪ- 4 ಚಮಚ

ತಯಾರಿಸುವ ವಿಧಾನ: ಕುಕ್ಕರ್‌ನಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ಪಲಾವ್‌ ಎಲೆ, ಜೀರಿಗೆ, ಲವಂಗ, ಏಲಕ್ಕಿ, ಕಾಳುಮೆಣಸು, ಸ್ಟಾರ್‌ ಅನೈಸ್‌, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಬಾಡಿಸಿ. ಆಲೂಗಡ್ಡೆ, ಈರುಳ್ಳಿಯನ್ನು ಕೆಂಬಣ್ಣ ಬರುವವರೆಗೆ ಹುರಿದು ಹಾಕಿ. (ಬೇಕಿದ್ದರೆ ಪಲಾವ್‌ ಬೆಂದ ಮೇಲೆ ಬೆಂದ ಆಲೂಗಡ್ಡೆಯನ್ನು ಸೇರಿಸಬಹುದು) ಟೊಮೆಟೊ ಸೇರಿಸಿ ಚೆನ್ನಾಗಿ ಹುರಿಯಿರಿ. ಬಟಾಣಿ ಮತ್ತು ಹುರಿದ ಆಲೂಗಡ್ಡೆ, ಮೆಂತ್ಯೆ ಸೊಪ್ಪನ್ನು ಹಾಕಿ ಬಾಡಿಸಿ. ನಂತರ ಗರಂ ಮಸಾಲೆ, ಅರಿಶಿನ, ಖಾರದಪುಡಿ ಹಾಕಿ ಮಿಶ್ರಣ ಮಾಡಿ. ತೊಳೆದು, ನೆನೆಸಿದ ಬಾಸುಮತಿ ಅಕ್ಕಿಯನ್ನು ಮಸಾಲೆ ಪದಾರ್ಥಗಳ ಜೊತೆಗೆ ಸೇರಿಸಿ ಒಂದು ನಿಮಿಷ ಹುರಿಯಿರಿ. ಮೂರು ಕಪ್‌ ನೀರು ಹಾಕಿ, ಉಪ್ಪನ್ನು ಸೇರಿಸಿ, ಎರಡು ವಿಷಲ್‌ ಆಗುವವರೆಗೆ ಕುಕ್ಕರ್‌ ಕೂಗಿಸಿ. ಆಲೂಗಡ್ಡೆ ಬದಲು ಪನ್ನೀರ್‌ ಕೂಡ ಹಾಕಬಹುದು. 

3.ಬಟಾಣಿ ಪಲಾವ್‌
ಬೇಕಾಗುವ ಸಾಮಗ್ರಿ: ನೆನೆಸಿದ ಬಾಸುಮತಿ ಅಕ್ಕಿ- ಒಂದೂವರೆ ಕಪ್‌, ಬಟಾಣಿ- 1 ಕಪ್‌, ಕತ್ತರಿಸಿದ ಈರುಳ್ಳಿ-2, ಟೊಮೆಟೊ-2, ಪಲಾವ್‌ ಎಲೆ, ಗೋಡಂಬಿ, ಕಾಳುಮೆಣಸು-10, ಚಕ್ಕೆ, ಸ್ಟಾರ್‌ ಅನೈಸ್‌-1, ಜೀರಿಗೆ -1, ಲವಂಗ- 4, ಗರಂಮಸಾಲೆ- 1/2 ಚಮಚ, ಖಾರದ ಪುಡಿ- 1/2 ಚಮಚ, ಅರಿಶಿನ ಪುಡಿ- 1/2 ಚಮಚ, ಉಪ್ಪು, ತುಪ್ಪ- 4 ಚಮಚ, ಹಸಿಮೆಣಸು- 2, ಶುಂಠಿ ಬೆಳ್ಳುಳ್ಳಿ ಪೇಸ್ಟ್- 1 ಚಮಚ, ನೀರು -3 ಕಪ್‌

ತಯಾರಿಸುವ ವಿಧಾನ: ಕುಕ್ಕರ್‌ನಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ಜೀರಿಗೆ, ಪಲಾವ್‌ ಎಲೆ, ಚಕ್ಕೆ, ಕಾಳುಮೆಣಸು, ಲವಂಗ, ಹಸಿಮೆಣಸು, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಬಾಡಿಸಿ. ನಂತರ ಈರುಳ್ಳಿ ಹಾಕಿ ಕೆಂಬಣ್ಣ ಬರುವವರೆಗೆ ಹುರಿದು, ಟೊಮೆಟೊ ಸೇರಿಸಿ ಬಾಡಿಸಿ ನಂತರ ಬಟಾಣಿ ಸೇರಿಸಿ. ಖಾರದ ಪುಡಿ, ಅರಿಶಿನ ಪುಡಿ, ಗರಂ ಮಸಾಲೆ ಜೊತೆಗೆ ಅಕ್ಕಿ ಹಾಕಿ ಅರ್ಧ ನಿಮಿಷ ಹುರಿಯಿರಿ. ಅದಕ್ಕೆ ನೀರು ಸೇರಿಸಿ. ಉಪ್ಪು ಹಾಕಿ, ಎರಡು ವಿಷಲ್‌ ಕೂಗಿಸಿದರೆ ಬಟಾಣಿ ಪಲಾವ್‌ ರೆಡಿ. 

4. ವೆಜ್‌ ಪಲಾವ್‌
ಬೇಕಾಗುವ ಸಾಮಗ್ರಿ:
ನೆನೆಸಿದ ಬಾಸುಮತಿ ಅಕ್ಕಿ- ಒಂದೂವರೆ ಕಪ್‌, ತುಪ್ಪ -3 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್- 1 ಚಮಚ, ಹಾಲು- 1 ಕಪ್‌, ನೀರು- 2 ಕಪ್‌, ಉಪ್ಪು, ಕಾಳುಮೆಣಸು- 10, ಗೋಡಂಬಿ, ಪಲಾವ್‌ ಎಲೆ, ಲವಂಗ, ಏಲಕ್ಕಿ, ಚಕ್ಕೆ,  ಸ್ಟಾರ್‌ ಅನೈಸ್‌, ಈರುಳ್ಳಿ- 2, ಹಸಿಮೆಣಸು- 3, ಕ್ಯಾರೆಟ್‌- 1, ಬೀನ್ಸ್‌- 5, ಆಲೂಗಡ್ಡೆ- 2, ಬಟಾಣಿ- 1/2 ಕಪ್‌, ಕ್ಯಾಪ್ಸಿಕಂ- 1 (ತರಕಾರಿಗಳನ್ನು ಒಂದೇ ರೀತಿಯಲ್ಲಿ ಹೆಚ್ಚಿಕೊಳ್ಳಿ)

ತಯಾರಿಸುವ ವಿಧಾನ: ಕುಕ್ಕರ್‌ನಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ಪಲಾವ್‌ ಎಲೆ, ಸ್ಟಾರ್‌ ಅನೈಸ್‌, ಲವಂಗ, ಏಲಕ್ಕಿ, ಕಾಳುಮೆಣಸು ಹಾಕಿ. ಗೋಡಂಬಿ ಸೇರಿಸಿ ಕೆಂಬಣ್ಣ ಬರುವರೆಗೆ ಹುರಿಯಿರಿ. ಈರುಳ್ಳಿ, ಹಸಿಮೆಣಸು, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ, ಹಸಿ ವಾಸನೆ ಹೋಗುವವರೆಗೆ ಹುರಿಯಿರಿ. ತರಕಾರಿಗಳನ್ನು ಸೇರಿಸಿ ಎರಡು ನಿಮಿಷ ಹುರಿದು, ಅಕ್ಕಿ ಹಾಕಿ, ಸ್ವಲ್ಪ ಹುರಿಯಿರಿ. ನಂತರ ಉಪ್ಪು, ನೀರು ಮತ್ತು ಹಾಲನ್ನು ಸೇರಿಸಿ ಕುಕ್ಕರ್‌ ಕೂಗಿಸಿ.

ವೇದಾವತಿ ಹೆಚ್‌. ಎಸ್‌.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.