ಓ ಗುಲಾಬಿಯೇ…


Team Udayavani, Oct 17, 2018, 6:00 AM IST

1.jpg

ಈಜಿಪ್ತಿನ ಖ್ಯಾತ ರಾಣಿ ಕ್ಲಿಯೋಪಾತ್ರಳ ಸೌಂದರ್ಯ ಗುಲಾಬಿ ಜಲದಲ್ಲಿ ಅಡಗಿತ್ತು. ದೇಹ ಮತ್ತು ಮನಸ್ಸಿನ ಆಹ್ಲಾದ, ಆರೋಗ್ಯಕ್ಕಾಗಿ ಮೈಕೆಲೆಂಜೆಲೋ, ಗುಲಾಬಿ ಜಲದ ಚಹಾ ಸವಿಯುತ್ತಿದ್ದುದು ಚರಿತ್ರೆ. ಮೊಘಲರ ರಾಣಿಯರು ಗುಲಾಬಿ ಜಲವನ್ನು ಹಾಲು, ಜೇನು, ಸಮುದ್ರ ಉಪ್ಪು ಇತ್ಯಾದಿಗಳ ಜೊತೆ ಬಳಸಿ, ಸೌಂದರ್ಯವರ್ಧಕ ಹಾಗೂ ಸೌಂದರ್ಯ ರಕ್ಷಕಗಳನ್ನು ಬಳಸುತ್ತಿದ್ದುದು ಐತಿಹ್ಯ. ಇಂಥ ಗುಲಾಬಿ ಜಲವನ್ನು ಮನೆಯಲ್ಲಿಯೇ ತಯಾರಿಸೋದು ಹೇಗೆ ಗೊತ್ತಾ? 

ಬೇಕಾಗುವ ಸಾಮಗ್ರಿ: 8-10 ತಾಜಾ ಗುಲಾಬಿ ಹೂಗಳು, 1ರಿಂದ ಒಂದೂವರೆ ಲೀಟರ್‌ನಷ್ಟು ಡಿಸ್ಟಿಲ್ಡ್‌ ವಾಟರ್‌ (ಭಟ್ಟಿ ಇಳಿಸಿದ ಶುದ್ಧ ನೀರು)

ಮಾಡುವ ವಿಧಾನ: ಮೊದಲು ಒಂದು ಪಾತ್ರೆಯಲ್ಲಿ ಗುಲಾಬಿ ಹೂವುಗಳ ಪಕಳೆಗಳನ್ನು ತೆಗೆದುಕೊಂಡು, ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ನಂತರ, ಒಂದು ಮಣ್ಣಿನ ಗಡಿಗೆಯಲ್ಲಿ ಈ ಗುಲಾಬಿ ದಳಗಳನ್ನು ತೆಗೆದುಕೊಂಡು, ಅದರಲ್ಲಿ ನೀರು ಹಾಕಿ. ಪಾತ್ರೆಯನ್ನು ಮುಚ್ಚಿ, ಸಣ್ಣ ಉರಿಯಲ್ಲಿ ಬಿಸಿ ಮಾಡಿ. ಹೀಗೆ ಬಿಸಿಯಾದ ಗುಲಾಬಿಯ ಪಕಳೆಗಳು ಬಣ್ಣ ಕಳೆದುಕೊಳ್ಳುವವರೆಗೆ ಬಿಸಿ ಮಾಡಿ. ನಂತರ ಸೋಸಿ, ಗುಲಾಬಿ ಜಲವನ್ನು ಗಾಜಿನ ಬಾಟಲಿಯಲ್ಲಿ ಸಂಗ್ರಹಿಸಿಡಿ. 

ಸೌಂದರ್ಯವರ್ಧಕವಾಗಿ ಗುಲಾಬಿ ಜಲ
– ಮೇಕಪ್‌ ರಿಮೂವರ್‌
ಎರಡು ಚಮಚ ಗುಲಾಬಿ ಜಲಕ್ಕೆ 1 ಚಮಚ ಬಿಸಿ ಮಾಡಿದ ಕೊಬ್ಬರಿ ಎಣ್ಣೆ ಬೆರೆಸಿ, ಹತ್ತಿಯ ಉಂಡೆಯಲ್ಲಿ ಅದ್ದಿ, ಮುಖದ ಮೇಕಪ್‌ ತೆಗೆಯಲು ಉಪಯೋಗಿಸಬಹುದು. 
– ಬಾಡಿ ಮಾಯಿಶ್ಚರೈಸರ್‌
20 ಚಮಚ ಬಾದಾಮಿ ತೈಲಕ್ಕೆ, 15 ಚಮಚ ಶುದ್ಧ ಗುಲಾಬಿ ಜಲವನ್ನು ಬೆರೆಸಿ, ಮೈಗೆ ಲೇಪಿಸಿ ಮಾಲೀಶು ಮಾಡಿದರೆ, ಚರ್ಮದ ಹೊಳಪು ಮತ್ತು ಸ್ನಿಗ್ಧತೆ ವರ್ಧಿಸುತ್ತದೆ.
– ಮೊಡವೆ ನಿವಾರಕ
 10 ಚಮಚ ಗುಲಾಬಿಜಲ, 10 ಚಮಚ ಕಡಲೆಹಿಟ್ಟು, 2 ಚಮಚ ಕಿತ್ತಳೆ ರಸ, 1/2 ಚಮಚ ಗ್ಲಿಸರಿನ್‌ ಹಾಗೂ 2 ಚಿಟಿಕೆ ಅರಿಶಿನವನ್ನು ಚೆನ್ನಾಗಿ ಮಿಶ್ರಣ ಮಾಡಿ, ಫೇಸ್‌ ಕ್ರೀಮ್‌ ತಯಾರಿಸಿ. ಮಿಶ್ರಣ ದಪ್ಪವಾಗಿದ್ದರೆ ಸ್ವಲ್ಪ ಗುಲಾಬಿ ಜಲ ಬೆರೆಸಿ, ತೆಳ್ಳಗೆ ಮಾಡಿಕೊಳ್ಳಿ. ಇದನ್ನು ಮೊಡವೆಯ ಮೇಲೆ ಲೇಪಿಸಿ 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ನಂತರ ಸ್ಕಿನ್‌ ಟೋನರ್‌ ಆಗಿ ಗುಲಾಬಿ ಜಲ ಲೇಪಿಸಿದರೆ, ಮೊಡವೆ, ಕಲೆ ನಿವಾರಣೆಯಾಗುತ್ತದೆ.
– ಕಪ್ಪು ವರ್ತುಲ ನಿವಾರಣೆಗೆ
ಮೂರು ಚಮಚ ಗುಲಾಬಿ ಜಲದ ಜೊತೆಗೆ 2 ಚಮಚ ಸೌತೆಕಾಯಿ ರಸ ಹಾಗೂ 2 ಚಮಚ ಜೇನು ಬೆರೆಸಿ ಹತ್ತಿಯ ಉಂಡೆಯಲ್ಲಿ ಅದ್ದಿ ಲೇಪಿಸಿದರೆ ಕಣ್ಣಿನ ಸುತ್ತಲಿನ ಕಪ್ಪು ವರ್ತುಲ ನಿವಾರಣೆಯಾಗುತ್ತದೆ. 

 ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.