ಆಡಿ ಬಾ ಎನ ಕಂದ…


Team Udayavani, Nov 28, 2018, 6:00 AM IST

c-3.jpg

ಮೂರು ವರ್ಷದ ಮಗು ಮನೆಯಲ್ಲೇ ತನಗೆ ಬೇಕಾದ ಹಾಗೆ ಆಡಿಕೊಂಡು, ಬೋರ್‌ ಆದಾಗ  ತನಗೆ ಬೇಕಾದ ಕಾರ್ಟೂನ್‌ ನೋಡಿಕೊಂಡು, ಹಸಿವಾದಾಗ ತಿಂದುಕೊಂಡು, ಅಮ್ಮನ ಮಡಿಲಲ್ಲಿ ಮಲಗಿಕೊಂಡು ಸಮಯ ಕಳೆಯುತ್ತದೆ. ಆದರೆ, ಸಡನ್‌ ಆಗಿ ಅವರನ್ನು ಪ್ಲೇಹೋಮ್‌ ಕಳಿಸಬೇಕು ಅಂದಾಗ ಅವರ ಮನಸ್ಸು ಒಪ್ಪಿಕೊಳ್ಳುವುದಿಲ್ಲ. ಇನ್ನು ಆ ಮುದ್ದು ಮಗುವಿನ ಮನವೊಲಿಸಿ ಅವರನ್ನು ಪ್ಲೇಹೋಮ್‌ಗೆ ಕಳಿಸುವುದು ಕಷ್ಟದ ಕೆಲಸ…

ಬೆಳಗ್ಗಿನ ಸಮಯ. ಮನೆಯಲ್ಲಿ ಒಂದೇ ಸಮನೇ ಗಲಾಟೆ. ನನ್ನ ಮಗಳು ಪ್ಲೇ ಹೋಮ್‌ಗೆ ಹೋಗೋದಿಲ್ಲ ಅಂತ ಹಠ ಮಾಡಿ ಕೂತಿದ್ದಳು. ನಾನು ಅವಳನ್ನು ಸಮಾಧಾನ ಮಾಡಿದ್ದೇ ಮಾಡಿದ್ದು. ಏನೂ ಪ್ರಯೋಜನ ಆಗಲಿಲ್ಲ. ಅವಳಿಷ್ಟದ ಚಾಕೋಲೆಟ್‌, ಕೇಕ್‌ ತಂದು ಕೊಡುತ್ತೇನೆ, ಮುದ್ದಾದ ಬಾರ್ಬಿ ಗೊಂಬೆ ತಗೆದುಕೊಡುತ್ತೇನೆ ಎಂದು ಪ್ರೀತಿಯ ಆಮಿಷವೊಡ್ಡಿದರೂ ಒಪ್ಪಲಿಲ್ಲ. ಇವತ್ತು ಅಂತೂ ಹೋಗೋದೇ ಇಲ್ಲ ಅಂತ ಕೂತೇ ಬಿಟ್ಟಳು. ನಾಳೆ ಕೂಡ ಹೋಗದಿದ್ದರೆ ಏನ್‌ ಮಾಡೋದಪ್ಪಾ ಅಂತ ಚಿಂತಿಸುತ್ತಾ ಕೂತೆ. ಮಾರನೇ ದಿನ ಅವಳಿಗೆ ಪೂಸಿ ಹೊಡೆದೆ. “ಸ್ಕೂಲ್‌ನಲ್ಲಿ ನಿನಗೆ ತುಂಬಾ ಫ್ರೆಂಡ್ಸ್‌ ಸಿಗ್ತಾರೆ. ಅಲ್ಲಿ ಟೀಚರ್‌ ನಿಂಗೆ ಡ್ಯಾನ್ಸ್‌, ಸಾಂಗ್ಸ್‌, ರೈಮ್ಸ್‌, ಗೇಮ್ಸ್‌ ಎಲ್ಲಾನೂ ಹೇಳಿಕೊಡ್ತಾರೆ’ ಎಂದೆಲ್ಲಾ ಹೇಳಿದ ನಂತರ ಕಡೆಗೂ ಮಗಳು ಪ್ಲೇಹೋಮ್‌ಗೆ ಹೋಗಲು ಒಪ್ಪಿದಳು.

ಗಲಾಟೆ ಮಾಡೋದೇ ನನ್‌ ಬ್ಯುಸಿನೆಸ್ಸು…
ಮೂರು ವರ್ಷದ ಮಗು ಮನೆಯಲ್ಲೇ ತನಗೆ ಬೇಕಾದ ಹಾಗೆ ಆಡಿಕೊಂಡು, ಬೋರ್‌ ಆದಾಗ  ತನಗೆ ಬೇಕಾದ ಕಾಟೂìನ್‌ ನೋಡಿಕೊಂಡು, ಹಸಿವಾದಾಗ ತಿಂದುಕೊಂಡು, ಅಮ್ಮನ ಮಡಿಲಲ್ಲಿ ಮಲಗಿಕೊಂಡು ಸಮಯ ಕಳೆಯುತ್ತದೆ. ಆದರೆ, ಸಡನ್‌ ಆಗಿ ಅವರನ್ನು ಪ್ಲೇಹೋಮ್‌ ಕಳಿಸಬೇಕು ಅಂದಾಗ ಅವರ ಮನಸ್ಸು ಒಪ್ಪಿಕೊಳ್ಳುವುದಿಲ್ಲ. ಇನ್ನು ಆ ಮುದ್ದು ಮಗುವಿನ ಮನವೊಲಿಸಿ ಅವರನ್ನು ಪ್ಲೇಹೋಮ್‌ಗೆ ಕಳಿಸುವುದು ಕಷ್ಟದ ಕೆಲಸ.

ಮಗು ತನ್ನ ಮನೆಯನ್ನು ಬಿಟ್ಟರೆ ಹೊರಗೆ ತುಂಬಾ ಹೊತ್ತು ಕಳೆಯುವ ಜಾಗ ಎಂದರೆ ಪ್ಲೇಸ್ಕೂಲ್‌. ಮೊದಲನೇ ಸಲ ಮಗು ಹೆತ್ತವರನ್ನು, ಹೆಚ್ಚಾಗಿ ಸದಾಕಾಲ ಜೊತೆಗಿರುವ ಅಮ್ಮನನ್ನು ಬಿಟ್ಟು ಹಗಲು ಪೂರ್ತಿ ಕಳೆಯುವ ಜಾಗ ಪ್ಲೇಹೋಮ್‌. ಆದುದರಿಂದ ಪ್ಲೇಹೋಮ್‌ ಆರಿಸಿಕೊಳ್ಳುವಾಗ ಜಾಗ್ರತೆ ವಹಿಸಬೇಕಾದುದು ಅಗತ್ಯ. ಮಗು ಮನೆಯಲ್ಲಿ ಗಲಾಟೆ ಮಾಡುತ್ತದೆ ಎಂಬ ಕಾರಣಕ್ಕೆ ಮಗುವನ್ನು ಪ್ಲೇಹೋಮ್‌ಗೆ ಸೇರಿಸುವುದು ಔಚಿತ್ಯವಲ್ಲ. ಅಳು, ಕಿರುಚಾಟ, ಹಠ ಇವೆಲ್ಲಾ ಮಗುವಿನ ಸ್ವಭಾವ. ಅದನ್ನು ನಿರ್ವಹಿಸಲು ಕಲಿಯಬೇಕೇ ಹೊರತು, ಪಲಾಯನ ಮಾಡುವುದನ್ನಲ್ಲ.

ಪ್ಲೇಹೋಮ್‌ ಮೇಲೆ ಪ್ರೀತಿ ಹುಟ್ಟಿಸಿ…
“ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ?’ ಎಂಬ ಗಾದೆ ಇದೆ. ಗಿಡವಾಗಿದ್ದಾಗ ಬೇಕಾದ ಆಕಾರಕ್ಕೆ ಬದಲಿಸಬಹುದು, ಒಮ್ಮೆ ಮರವಾದ ನಂತರ ಏನೇ ಮಾಡಿದರೂ ಅಲುಗಾಡಿಸಲು ಸಾಧ್ಯವಿಲ್ಲ ಎನ್ನುವುದು ಅದರರ್ಥ. ಅಂತೆಯೇ ಚಿಕ್ಕಂದಿನಲ್ಲಾದ ಗಾಯ ದೊಡ್ಡವರಾದ ಮೇಲೂ ಮಕ್ಕಳನ್ನು ಕಾಡಬಲ್ಲುದು. ಹೀಗಾಗಿ ಮಗುವಿನ ಮನಸ್ಸಿಗೆ ಘಾಸಿಯಾಗದಂತೆ ನೋಡಿಕೊಳ್ಳುವುದು ಪಾಲಕರ ಕರ್ತವ್ಯ.  ಪ್ಲೇಹೋಮ್‌ಗೆ ಸೇರಿಸುವಾಗಲೂ ಈ ವಿಚಾರ ಗಮನದಲ್ಲಿಟ್ಟುಕೊಳ್ಳಬೇಕು. ಒಂದು ವೇಳೆ ಪ್ಲೇಹೋಮ್‌ ಬಗ್ಗೆ ತಿರಸ್ಕಾರ ಭಾವನೆ ಒಂದು ಸಲ ಮೂಡಿದರೆ ಅದನ್ನು ಬೇಗ ಅಳಿಸಲು ಸಾಧ್ಯವಿಲ್ಲ. ಮುಂದೆ ಶಾಲೆಗೆ ಸೇರಿಸುವಾಗಲೂ ತೊಂದರೆ ಎದುರಾಗಬಹುದು. ಹೀಗಾಗಿ ಪ್ಲೇಹೋಮ್‌ ಎಂದರೆ ಸಜೆಯಲ್ಲ, ಅದೊಂದು ಮಜಭರಿತ ಜಾಗ ಎಂಬ ಭಾವನೆ ಅವರಲ್ಲಿ ಮೂಡಿಸಬೇಕು. ಅದು ಸಾಧ್ಯವಾದಾಗ ಮಕ್ಕಳ ಬಾಲ್ಯ ಸುಂದರವೂ ಸುಮಧುರವೂ ಆಗುವುದು.

ತಂಟೆ ತಪ್ಪಿಸಲು ಪ್ಲೇಹೋಂ ದಾರಿಯಲ್ಲ…
ಮನೆಯಲ್ಲಿದ್ದರೆ ಯಾವ ಕೆಲಸವನ್ನೂ ಮಾಡಲು ಬಿಡುವುದಿಲ್ಲವೆಂದೋ, ತುಂಟಾಟ ಸಹಿಸಲಾಗದು ಎಂಬ ಕಾರಣಕ್ಕೋ ಮಗುವನ್ನು ಕಣ್ಮುಚ್ಚಿ ಪ್ಲೇ ಹೋಂಗೆ ಸೇರಿಸುವುದು ಸರಿಯಲ್ಲ. 

ಪ್ಲೇಹೋಮ್‌ ಸೇರಿಸುವ ಮೊದಲು 
– ಪ್ಲೇಹೋಮ್‌ನಲ್ಲಿ ಮಕ್ಕಳಿಗೆ ಭದ್ರತೆ, ಸುರಕ್ಷತೆ ಇದೆಯಾ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳಬೇಕು 
– ಅಲ್ಲಿನ ಚಟುವಟಿಕೆಗಳು ಮಗುವಿನ ಬೆಳವಣಿಗೆಗೆ ಪೂರಕವಾಗಿದೆಯೇ ಎಂದು ಗಮನಿಸಬೇಕು. 
– ಶಿಕ್ಷಕರು ಮಗುವಿಗೆ ಕಲಿಸುವ ರೀತಿ ತಿಳಿಯಬೇಕು. 
– ಮಗು ಇತರೆ ಮಕ್ಕಳೊಡನೆ ಹೇಗೆ ಹೊಂದಿಕೊಳ್ಳುತ್ತದೆ ಎಂಬುದನ್ನು ತಿಳಿದಿರಬೇಕು. 

– ಸುಲಭಾ ಆರ್‌. ಭಟ್‌

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.