ರೇಖೆ ದಾಟುವ ಸಾಹಸ


Team Udayavani, Jan 16, 2019, 12:30 AM IST

w-9.jpg

ರಾಮ, ಸೀತೆಯರು ಒಂದಾದಾಗ ಒಟ್ಟಿಗೆ ಇದ್ದದ್ದಾದರೂ ಎಷ್ಟು ದಿನ? ಮತ್ತೆ ಪರಿತ್ಯಕ್ತೆಯಾಗಿ ಕಾಡಿನಲ್ಲಿ ಮಕ್ಕಳೊಂದಿಗೆ ಒಂಟಿ ಜೀವನ, ತನ್ನ ಪರಿಶುದ್ಧತೆಯನ್ನು ಪರೀಕ್ಷಿಸಲು ಅಗ್ನಿ ಪ್ರವೇಶ… ಇವೆಲ್ಲವೂ ಸೀತೆ ಲಕ್ಷ್ಮಣರೇಖೆ ದಾಟಿದ ಪರಿಣಾಮವೇ?

ಎರಡು ತಿಂಗಳ ಕೆಳಗೆ ನಾಸಿಕಕ್ಕೆ ಹೋದಾಗ ರಾಮಾಯಣದ ಪ್ರಸಿದ್ಧ ಪಂಚವಟಿ ನೋಡುವ ಅವಕಾಶ ಸಿಕ್ಕಿತು. ಪಂಚವಟಿ ನೋಡಲು ಹೋಗುವವರು ಒಂದೋ ಕಾಲ್ನಡಿಗೆಯಲ್ಲಿ ಹೋಗಬೇಕು, ಇಲ್ಲ ಆಟೋದಲ್ಲೇ ಹೋಗಬೇಕು. ಅಲ್ಲಿ ಬಾಡಿಗೆ ಕಾರುಗಳಿಗೆ ಪ್ರವೇಶವಿಲ್ಲ. ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಲು ಈ ವ್ಯವಸ್ಥೆ ಮಾಡಿರಬಹುದು. ಗೋದಾವರಿ, ಕದಂಬ ನದಿಗಳ ಸಂಗಮ ಸ್ಥಳದಲ್ಲಿದೆ- ಪಂಚವಟಿ. ಗೈಡ್‌ ಕಮ್‌ ಆಟೋದವನು, ಅಲ್ಲಿ ನಡೆದಿರಬಹುದಾದ ರಾಮಾಯಣದ ಹಲವು ಘಟನೆಗಳನ್ನು ನಮಗೆ ವಿವರಿಸಿದ. ಆಟೋ ಮುಂದೆ ಸಾಗುತ್ತಿರುವಾಗಲೇ ಉದ್ದಕ್ಕೆ ಅಡ್ಡಾದಿಡ್ಡಿಯಾಗಿ ಹರಿದ ಸಿಮೆಂಟಿನ ಚರಂಡಿಯನ್ನು ತೋರಿಸುತ್ತಾ, “ಇದೇ ಲಕ್ಷ್ಮಣ ರೇಖೆ’ ಎಂದ! ಇದು ಮಾತ್ರ ನನ್ನ ಊಹೆಗೂ ಮೀರಿದ್ದಾಗಿತ್ತು. ರಾಮಾಯಣ ಓದುವಾಗಲೆಲ್ಲ ಮರದ ಕೋಲಿನಿಂದ ಬರೆದ, ಕಲ್ಲಿನಿಂದ ಎಳೆದ, ರಂಗೋಲಿ ಹುಡಿಯ, ಇಷ್ಟು ಸಾಲದೆಂಬಂತೆ ಚಾಕ್‌ಪೀಸಿನಲ್ಲಿ ಬರೆದ ಲಕ್ಷ್ಮಣ ರೇಖೆಯೂ ಮನಸ್ಸಿನಲ್ಲಿ ಮೂಡಿದ್ದು ಸುಳ್ಳಲ್ಲ. ಎಲ್ಲವೂ ಆಯಾ ವಯಸ್ಸಿಗೆ ತಕ್ಕಂತೆ ಮನಸ್ಸಿನಲ್ಲಿ ಮೂಡಿದ ರೇಖೆಗಳಿವು. 

ಈ ಲಕ್ಷ್ಮಣ ರೇಖೆಗಳು ಬಾಲ್ಯದಲ್ಲಿ ಶಿಸ್ತಿನ ಜೀವನವನ್ನು ಕಲಿಸಿದರೆ, ದೊಡ್ಡವರಾದಂತೆ ಅದೇ ರೇಖೆಗಳು ಉಸಿರುಗಟ್ಟುವಂತೆ ಮಾಡುವುದೂ ಸುಳ್ಳಲ್ಲ. ಮನಸ್ಸೂ ವಿನಾಕಾರಣ ಎಗರಾಡುತ್ತಿರುತ್ತದೆ. ಆಸೆ, ಸಿಟ್ಟು, ದ್ವೇಷ, ದುಃಖ, ಪ್ರೀತಿ, ಅಸೂಯೆ ಎಲ್ಲವನ್ನೂ ಮೆಟ್ಟಿ ನಿಲ್ಲಬೇಕೆಂದು ಇನ್ನೊಬ್ಬರಿಗೆ ಹೇಳಿದರೂ ಉಪ್ಪು ಹುಳಿ ತಿನ್ನುವ ದೇಹದಲ್ಲಿ ಆಕಾರ, ವಿಕಾರಗಳು ಎದ್ದೇಳುವುದು ಸಹಜ. ಆದರೂ ಎಲ್ಲವೂ ಒಂದು ಹದ್ದುಬಸ್ತಿನಲ್ಲಿದ್ದರೆ ಚೆಂದ. ಅದು ಸೀಮೋಲ್ಲಂಘನ ಮಾಡಿತೋ ಆಗ ಅನಾಹುತ ತಪ್ಪಿದ್ದಲ್ಲ. 

ಲಕ್ಷ್ಮಣ, ಲಕ್ಷ್ಮಣರೇಖೆ ಎಳೆದದ್ದು ಸೀತೆಗಾಗಿ. ಅಂದರೆ ಗಂಡು ಹೆಣ್ಣಿಗೆ, ಅಪಾಯ ಅರಿತು ಎಳೆದ ರೇಖೆಯದು. ಅಂದಿನಿಂದ ಇಂದಿನವರೆಗೂ ಹೆಣ್ಣು ಸುಲಭದಲ್ಲಿ ಶಿಕಾರಿಗೆ ಬಲಿಯಾಗುತ್ತಾ ಬಂದಳು ಎಂದರೆ ತಪ್ಪಾಗಲಾರದು. ಹೆಣ್ಣು ಅರಿತೋ, ಅರಿಯದೆಯೋ ಲಕ್ಷ್ಮಣ ರೇಖೆ ದಾಟಿದಾಗ ಬೆಲೆ ತೆತ್ತಿದ್ದು ಅವಳೇ. ಅದಕ್ಕಾಗಿ ಸೀತೆ ಹಲವು ವರ್ಷಗಳ ಕಾಲ ಲಂಕೆಯ ಅಶೋಕ ವನದಲ್ಲಿ ಶೋಕ ತಪ್ತಳಾಗಿ ಕುಳಿತುಕೊಳ್ಳಬೇಕಾಗಿ ಬಂತು. ಕಡೆಗೂ ರಾಮ, ಸೀತೆಯರು ಒಂದಾದಾಗ ಒಟ್ಟಿಗೆ ಇದ್ದದ್ದಾದರೂ ಎಷ್ಟು ದಿನ? ಮತ್ತೆ ಪರಿತ್ಯಕ್ತೆಯಾಗಿ ಕಾಡಿನಲ್ಲಿ ಮಕ್ಕಳೊಂದಿಗೆ ಒಂಟಿಜೀವನ, ತನ್ನ ಪರಿಶುದ್ಧತೆಯನ್ನು ಪರೀಕ್ಷಿಸಲು ಅಗ್ನಿ ಪ್ರವೇಶ, ಇವೆಲ್ಲವೂ ಸೀತೆ ಲಕ್ಷ್ಮಣ ರೇಖೆ ದಾಟಿದ ಪರಿಣಾಮವೇ? ಸೀತೆ, ಲಕ್ಷ್ಮಣ ರೇಖೆ ದಾಟುವ ಸಾಹಸ ಮಾಡಿ¨ªಾದರೂ ಏಕೆ?

ಕೆಲವೊಂದು ವಿಚಾರಗಳು ಒಂದು ಕಾಲದಲ್ಲಿ ಸೀಮೋಲ್ಲಂಘನ ಎಂದು ಸಮಾಜದಲ್ಲಿ ಬಹಿಷ್ಕಾರ ಎದುರಿಸಬೇಕಾಗಿ ಬಂದರೂ ಕಾಲ ಕಳೆದಂತೆ ಸಮಾಜದಲ್ಲಿ ಅದೂ ಆಗಬೇಕಾದ ಸುಧಾರಣೆ ಅನ್ನಿಸಿ ಮನ್ನಣೆ ಸಿಕ್ಕಿದ್ದೂ ಇದೆ. ಒಂದು ಕಾಲದಲ್ಲಿ ಹೆಣ್ಣಿಗೆ 10 ವರ್ಷಕ್ಕೇ ಮದುವೆಯಾಗಿ 11ಕ್ಕೆ ಗಂಡ ತೀರಿಕೊಂಡರೂ ತಲೆ ಕೂದಲು ಕತ್ತರಿಸಿ, ಕೆಂಪು ಸೀರೆ ಉಡಿಸಿ ಲಕ್ಷ್ಮಣ ರೇಖೆ ಎಳೆದು ಒಳಗೇ ಕೂರಿಸುತ್ತಿದ್ದರು. ಅವಳ ಜೀವನ ನಾಲ್ಕು ಗೋಡೆಯ ಮಧ್ಯೆ ಮಾತ್ರ. ಅವಳು ಎಲ್ಲಾದರೂ ಲಕ್ಷ್ಮಣ ರೇಖೆ ದಾಟಿ ಹೊರಬಂದು ಅಪ್ಪಿತಪ್ಪಿ ಬಸಿರಾದರೆ ಸಂಕಷ್ಟ ತಪ್ಪಿದ್ದಲ್ಲ. ಸೀರೆ ಮುಳ್ಳಿನ ಮೇಲೆ ಬಿದ್ದರೂ, ಮುಳ್ಳು ಸೀರೆ ಮೇಲೆ ಬಿದ್ದರೂ ಹರಿಯುವುದು ಸೀರೆ ತಾನೇ? ಆದರೆ, ಈಗ ಇಂಥ ವಿಷಯಗಳಲ್ಲಿ ಲಕ್ಷ್ಮಣ ರೇಖೆ ಪೂರ್ಣವಾಗಿ ಅಳಿಸದಿದ್ದರೂ ಪರಿಧಿ ದೊಡ್ಡದಾಗಿದೆ ಎನ್ನಬಹುದು. ಹೆಣ್ಣಿಗೆ ವಿದ್ಯೆ, ಉದ್ಯೋಗ, ಪ್ರಾಯ ಪೂರ್ತಿಯಾದ ಮೇಲೆಯೇ ಮದುವೆ ಮತ್ತು ಅನಾಹುತವಾದಾಗ ಮರು ಮದುವೆಯನ್ನು ಸಮಾಜ ಒಪ್ಪಿಕೊಳ್ಳುತ್ತಿದೆ ಅನ್ನಿಸುತ್ತಿದೆ. ಆದರೂ ಕೆಲವೊಂದು ಕಡೆ ಆಗಬೇಕಾದದ್ದು ಬಹಳವಿದೆ.

ಲಕ್ಷ್ಮಣ ರೇಖೆ ಯಾವತ್ತೂ ಗಂಡು ಹೆಣ್ಣಿಗೆ ಎಳೆದ ರೇಖೆಯೇ? ಹಾಗೆ ಸೂಕ್ಷ್ಮವಾಗಿ ಗಮನಿಸಿದರೆ ಹೆಣ್ಣು ಹೆಣ್ಣಿಗೆ ಎಳೆದ ರೇಖೆಗಳೇ ಅಧಿಕವೇನೋ! ಹೆಣ್ಣು ಅಕ್ಕನಾಗಿ, ಅಮ್ಮನಾಗಿ, ಅತ್ತೆಯಾಗಿ, ಅತ್ತಿಗೆಯಾಗಿ ಎಳೆದ ರೇಖೆಗಳೂ ಹಲವಿದೆ. ನೋಡು ಹೊರಗೆ ಕತ್ತಲು, ಗುಮ್ಮನಿದ್ದಾನೆ, ಯಾರಾದರೂ ಏನಾದರೂ ಅಂದಾರು, ಅದು ನಮ್ಮ ಸಂಪ್ರದಾಯ ಎನ್ನುತ್ತಲೇ ಗೆರೆಗಳನ್ನು ಎಳೆಯುತ್ತಿಲ್ಲವೆ? ಇಂತಹ ರೇಖೆಗಳು ಕಂಡೂ ಕಾಣದಂತಿದ್ದರೂ ಹೆಣ್ಣಿನ ಸ್ವಾತಂತ್ರ್ಯವಂತೂ ಹರಣವಾದದ್ದಿದೆ. ಅದರೊಳಗೆ ಸಿಕ್ಕಿ ಹಾಕಿಕೊಂಡು ಮೂಕವಾಗಿ ವಿಲವಿಲ ಒದ್ದಾಡಿದವರ ಸಂಖ್ಯೆಯೂ ಸಾಕಷ್ಟಿದೆ. 

ಇನ್ನು ರಾಮಾಯಣಕ್ಕೆ ಪುನಃ ಬರೋಣ. ಸೀತೆಗೆ ಚಿನ್ನದ ಜಿಂಕೆಯನ್ನು ನೋಡುತ್ತಲೇ ಅದು ತನಗೆ ಬೇಕೆಂಬ ಆಸೆ ಬಂದು ಲಕ್ಷ್ಮಣನನ್ನು ಒತ್ತಾಯಿಸದಿದ್ದರೆ ಲಕ್ಷ್ಮಣನಿಗೆ ರೇಖೆ ಎಳೆಯುವ ಸಂದರ್ಭ ಬರುತ್ತಿರಲಿಲ್ಲ. ಇನ್ನೂ ಹಿಂದಕ್ಕೆ ಹೋದರೆ ಶೂರ್ಪನಖೀಗೆ ರಾಮ, ಲಕ್ಷ್ಮಣರ ಮೇಲೆ ಆಸೆ, ಮೋಹ ಬಾರದಿದ್ದರೆ ಶೂರ್ಪನಖೀ ಮೂಗು ಕಳೆದುಕೊಳ್ಳುತ್ತಿರಲಿಲ್ಲ. ಕೈಕೇಯಿಗೆ ತನ್ನ ಮಗ ಭರತನ ಮೇಲಿನ ಅತಿಯಾದ ಮೋಹವೇ ರಾಮನನ್ನು ಕಾಡಿಗೆ ಅಟ್ಟುವಂತೆ ಮಾಡಿತು. ಇದರರ್ಥ ಎಷ್ಟೋ ಸಲ ಆಸೆ-ಮೋಹಗಳು ಲಕ್ಷ್ಮಣ ರೇಖೆ ದಾಟಿದಾಗ ರಾಮಾಯಣ, ಮಹಾಭಾರತಕ್ಕೆ ಕಾರಣವಾಯಿತೆನ್ನಬಹುದೆ? 

ಮಧ್ಯ ರಾತ್ರಿಯ ಹೆಣ್ಣಿನ ಒಂಟಿ ತಿರುಗಾಟದಲ್ಲಿ ನಡೆದಿರುವ ಅತ್ಯಾಚಾರವನ್ನು ಗಮನಿಸಿದರೆ ಎಲ್ಲಿಯವರೆಗೆ ಗುಮ್ಮ, ರಾವಣ, ದುಶ್ಯಾಸನರು ಹೊರಗೆ ಆರಾಮಾಗಿ ತಿರುಗಾಡುತ್ತಿರುತ್ತಾರೋ, ಅಲ್ಲಿಯವರೆಗೆ ಹೆಣ್ಣು ತನಗೆ ತಾನೇ ಲಕ್ಷ್ಮಣ ರೇಖೆಯ ಒಳಗಿರುವುದೇ ಸರಿ ಅನ್ನಿಸದಿರುವುದಿಲ್ಲವೆ? ಸ್ವಾತಂತ್ರ್ಯದ ಹೆಸರಲ್ಲಿ ಬಿಯರು, ಬಾರ್‌ಗಳಲ್ಲಿ ನಲಿದಾಟ, ಫ್ಯಾಷನ್ನಿನ ಹೆಸರಲ್ಲಿ ಬಿಚ್ಚಾಟ ಮಾಡುವುದು ಎಷ್ಟು ಸರಿ? ಇಲ್ಲಿ ಸಂಸ್ಕೃತಿಯ ಚೌಕಟ್ಟಿನ ಲಘು ಲಕ್ಷ್ಮಣ ರೇಖೆ ಒಳ್ಳೆಯದು. 

ಇನ್ನು ಸದ್ಯಕ್ಕೆ ದೇಶದ ಉದ್ದಗಲಕ್ಕೂ ದೊಡ್ಡ ಬಿರುಗಾಳಿಯಂತೆ ಹಬ್ಬುತ್ತಿರುವ “ಮೀ ಟೂ’ ಮೂವ್‌ಮೆಂಟ್‌ ಅನ್ನೇ ಗಮನಿಸಿದರೆ, ಗಂಡು- ಹೆಣ್ಣಿನ ಮಧ್ಯೆ ಇರಬೇಕಾದ ಲಕ್ಷ್ಮಣ ರೇಖೆ ದಾಟಿ ದಾಂಧಲೆ ಎಬ್ಬಿಸಿದ ದುಶ್ಯಾಸನರತ್ತ ಲೋಕದ ಚಿತ್ತ ಸೆಳೆಯುತ್ತಿರುವ ದ್ರೌಪದಿಯರ ಕಣ್ಣೀರಿನ ಕತೆಗಳಿವು. ಎದ್ದ ಬಿರುಗಾಳಿ ಹಲವರನ್ನು ಬೇರು ಸಮೇತ ಕಿತ್ತೆಸೆಯುತ್ತಿವೆ, ರಾಮ- ಧರ್ಮರಾಯ ಎನಿಸಿಕೊಂಡವರ ಮುಖವಾಡ ಕಳಚುತ್ತಿದೆ. ರಾಮನೆಂದು ಪೂಜಿಸಿದವರ ಹಿಂದಿರುವುದು ರಾವಣನೆಂದು ಗೊತ್ತಾದಾಗ ಪ್ರಶ್ನೆಗಳು ಏಳುತ್ತವೆ, ಇಲ್ಲಿ ರಾಮ ಯಾರು? ರಾವಣನಾರು? ತಪ್ಪು ತಪ್ಪೇ, ಎಷ್ಟು ದಿನ ಇಂಥ ತಪ್ಪುಗಳನ್ನು ಮುಚ್ಚಿಡಬಹುದು? ಅನ್ಯಾಯಕ್ಕೇ ಯಾವತ್ತೂ ಜಯವೇ? ಲಕ್ಷ್ಮಣ ರೇಖೆ ದಾಟಿದವರಿಗೆ ದಂಡನೆ ಬೇಡವೇ? ಆದರೆ, ದ್ರೌಪದಿ ಕಣ್ಣೀರು ಸುರಿಸುವಾಗ ಪ್ರಶ್ನೆಗಳೂ ಏಳುತ್ತವೆ. ದ್ರೌಪದಿಯ ವರ್ಷಗಳ ಮೌನಕ್ಕೆ ಕಾರಣವೇನು? ಸೀತೆ ಮಾಯಾಮೃಗಕ್ಕೆ ಆಸೆ ಪಟ್ಟಿದ್ದಾದರೂ ಏಕೆ? ಅದು ಮಾಯಾಮೃಗವೆಂದು ಆಕೆಗೆ ತಿಳಿದಿರಲಿಲ್ಲವೇ? ಈಗ ಬೂದಿ ಮುಚ್ಚಿದ ಕೆಂಡವು ಬೆಂಕಿಯಾಗಿ ಹತ್ತಿ ಉರಿಯುತ್ತಿದೆ. ಕೆಲವರು ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದ್ದಾರೆ. ಮೌನವಾಗಿ ಅಳುತ್ತಿದ್ದವರೀಗ ಸ್ವರ ಏರಿಸಿ ಅಳುತ್ತಿದ್ದಾರೆ. 

 ಎಲ್ಲವೂ ಆಯಾಯ ಚೌಕಟ್ಟಿನಲ್ಲಿ, ಅಂದರೆ ಲಕ್ಷ್ಮಣ ರೇಖೆಯೊಳಗೆ ಇದ್ದರೆ ಚೆಂದ. ಪರಿಮಿತಿ ದಾಟಿದರೆ ವಿಕೃತ, ಅನಾಹುತ ತಪ್ಪಿದ್ದಲ್ಲ. 

ಗೀತಾ ಕುಂದಾಪುರ

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.