ಸಿಹಿಕುಂಬಳ ವೈವಿಧ್ಯ


Team Udayavani, Dec 8, 2017, 3:49 PM IST

08-34.jpg

ಸಿಹಿಕುಂಬಳ, ಚೀನಿಕಾಯಿ, ಕೆಂಬುಡೆ ಇತ್ಯಾದಿ ಹೆಸರುಗಳಿಂದ ಕರೆಯುವ ಈ ತರಕಾರಿಯು ಉತ್ತಮ ತೇವಾಂಶ, ನಾರಿನಂಶ, ಕಾಬೋìಹೈಡ್ರೆಟ್ಸ್‌ , ಖನಿಜಾಂಶ ಇತ್ಯಾದಿ ಹಲವಾರು ಉತ್ತಮ ಅಂಶಗಳನ್ನೊಳಗೊಂಡಿದ್ದು ತಂಪುಕಾರಕ ಮತ್ತು ರಕ್ತ ಶುದ್ಧೀಕರಿಸುವ ಗುಣವನ್ನು ಹೊಂದಿದೆ. ಆಹಾರವಾಗಿ ಅಡುಗೆಯಲ್ಲಿ ಹಲವಾರು ರೀತಿಯಲ್ಲಿ ಬಳಸಬಹುದಾಗಿದೆ.

ಚೀನೀಕಾಯಿ ರಾಯತ 
ಬೇಕಾಗುವ ಸಾಮಗ್ರಿ:
ಸಣ್ಣಗೆ ಹೆಚ್ಚಿದ ಚೀನೀಕಾಯಿ- ಎರಡು ಕಪ್‌, ತೆಂಗಿನ ತುರಿ- ಒಂದು ಕಪ್‌, ಹುಣಸೆಹುಳಿ- ಕಾಲು ಚಮಚ, ಕೆಂಪು ಮೆಣಸಿನಹುಡಿ- ಅರ್ಧ ಚಮಚ, ಬೆಲ್ಲದ ಪುಡಿ- ಎರಡು ಚಮಚ, ಹಸಿಮೆಣಸು- ಒಂದು, ಜೀರಿಗೆ- ಒಂದು ಚಮಚ ಬೇಕಿದ್ದರೆ, ಹೆಚ್ಚಿದ ಕೊತ್ತಂಬರಿ ಸೊಪ್ಪು – ಆರು ಚಮಚ, ಮೊಸರ‌ು- ಒಂದು ಕಪ್‌, ಹಸಿಮೆಣಸು- ಒಂದು, ಅರಸಿನ- ಕಾಲು ಚಮಚ, ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ:  ಚೀನಿಕಾಯಿ ಹೋಳುಗಳಿಗೆ ಮೆಣಸಿನಪುಡಿ, ಉಪ್ಪು, ಹುಳಿ, ಬೆಲ್ಲ ಸೇರಿಸಿ, ಬೇಯಿಸಿ, ಆರಲು ಬಿಡಿ. ತೆಂಗಿನತುರಿಗೆ ಅರಸಿನ, ಹಸಿಮೆಣಸು ಮತ್ತು ಜೀರಿಗೆ ಸೇರಿಸಿ ನುಣ್ಣಗೆ ರುಬ್ಬಿ ಮೊದಲೇ ಬೇಯಿಸಿಟ್ಟ ಚೀನಿಕಾಯಿಗೆ ಸೇರಿಸಿ. ನಂತರ, ಇದಕ್ಕೆ ಮೊಸರು ಮತ್ತು ಕೊತ್ತಂಬರಿಸೊಪ್ಪು ಸೇರಿಸಿ ಬೇಕಷ್ಟು ನೀರು ಸೇರಿಸಿಕೊಂಡು ಹದ ಮಾಡಿಕೊಳ್ಳಿ. ಈಗ ತಯಾರಾದ ರಾಯತಕ್ಕೆ ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಕರಿಬೇವಿನಜೊತೆ ನೀಡಿ. ಚೀನಿಕಾಯಿಯನ್ನು ತುರಿದು ಬೇಯಿಸದೆಯೂ ಮೇಲೆ ತಿಳಿಸಿದ ರೀತಿಯಲ್ಲಿ ರಾಯತ ತಯಾರಿಸಬಹುದು.

ಚೀನಿಕಾಯಿ ಹಲ್ವ 
ಬೇಕಾಗುವ ಸಾಮಗ್ರಿ: ತುರಿದ ಚೀನಿಕಾಯಿ- ನಾಲ್ಕು ಕಪ್‌, ಸಕ್ಕರೆ- ಎರಡು ಕಪ್‌, ಹಾಲು- ಎರಡು ಕಪ್‌, ತುಪ್ಪ- ಅರ್ಧ ಕಪ್‌, ತುಪ್ಪದಲ್ಲಿ ಹುರಿದ ಗೋಡಂಬಿ ಚೂರುಗಳು- ಎಂಟು ಚಮಚ, ಏಲಕ್ಕಿ ಸುವಾಸನೆಗಾಗಿ.

ತಯಾರಿಸುವ ವಿಧಾನ: ತುರಿದ ಚೀನಿಕಾಯಿಗೆ ಹಾಲು ಮತ್ತು ಸ್ವಲ್ಪ ನೀರು ಸೇರಿಸಿ ದಪ್ಪ ತಳದ ಬಾಣಲೆಯಲ್ಲಿ ಬೇಯಲು ಇಡಿ. ಚೆನ್ನಾಗಿ ಬೆಂದ ಮೇಲೆ, ಇದಕ್ಕೆ ಸಕ್ಕರೆ ಸೇರಿಸಿ ತಳ ಹಿಡಿಯದಂತೆ ಸೌಟಿನಿಂದ ಮಗುಚುತ್ತಾ ಇದ್ದು ನಂತರ, ತುಪ್ಪ ಸೇರಿಸಿ ತಳ ಬಿಡುವವರೆಗೂ ಮಗುಚುತ್ತಾ ಇರಬೇಕು. ತಳ ಬಿಡುತ್ತಿದ್ದಂತೆ ಗೋಡಂಬಿ, ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಗುಚಿ ಇಳಿಸಿ.

ಚೀನೀಕಾಯಿ ತಿರುಳಿನ ಗೊಜ್ಜು
ಬೇಕಾಗುವ ಸಾಮಗ್ರಿ:
ಚೀನೀಕಾಯಿ ತಿರುಳು- ಒಂದು ಕಪ್‌, ತೆಂಗಿನ ತುರಿ- ಒಂದು ಕಪ್‌, ಕೆಂಪುಮೆಣಸು-  ಮೂರು, ಹುಣಸೆಹುಳಿ- ಕಾಲು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಚೀನೀಕಾಯಿ ತಿರುಳಿಗೆ ಉಪ್ಪು$, ಹುಳಿ ಮತ್ತು ಕೆಂಪುಮೆಣಸು ಸೇರಿಸಿ ಬೇಯಲು ಇಡಿ. ಚೆನ್ನಾಗಿ ಬೆಂದು ಇದು ಆರಿದ ಮೇಲೆ ತೆಂಗಿನತುರಿ ಸೇರಿಸಿ ನುಣ್ಣಗೆ ರುಬ್ಬಿ ಸರ್ವಿಂಗ್‌ ಬೌಲ್‌ನಲ್ಲಿ ಹಾಕಿ. ಈಗ ಇದಕ್ಕೆ ತುಪ್ಪದಲ್ಲಿ ಇಂಗು ಸೇರಿಸಿದ ಸಾಸಿವೆ ಒಗ್ಗರಣೆಯನ್ನು ಕರಿಬೇವಿನ ಜೊತೆ ನೀಡಿ.

ಚೀನೀಕಾಯಿ ಪಾಯಸ 
ಬೇಕಾಗುವ ಸಾಮಗ್ರಿ:
ಸಣ್ಣಗೆ ಹೆಚ್ಚಿದ ಚೀನಿಕಾಯಿ- ಮೂರು ಕಪ್‌, ಬೆಲ್ಲದ ಪುಡಿ- ಒಂದೂವರೆ ಕಪ್‌, ಅಕ್ಕಿಹಿಟ್ಟು – ಅರ್ಧ ಕಪ್‌, ತೆಂಗಿನಹಾಲು- ಎರಡು ಕಪ್‌, ಏಲಕ್ಕಿ ಪು- ಕಾಲು ಚಮಚ, ಉಪ್ಪು ರುಚಿಗೆ.

ತಯಾರಿಸುವ ವಿಧಾನ: ಚೀನೀಕಾಯಿ ಹೋಳುಗಳನ್ನು ಸ್ವಲ್ಪ ತೆಂಗಿನಹಾಲು ಮತ್ತು ನೀರು ಸೇರಿಸಿ ಬೇಯಲು ಇಡಿ. ಬೆಂದ ತರಕಾರಿಗೆ ಬೆಲ್ಲ ಮತ್ತು ಉಪ್ಪು ಸೇರಿಸಿ ಕುದಿಸಿ. ಇದು ಕುದಿಯುತ್ತಿರುವಾಗ ಅರ್ಧ ಕಪ್‌ ತೆಂಗಿನ ಹಾಲು ಮತ್ತು ನುಣ್ಣಗೆ ರುಬ್ಬಿದ ಅಕ್ಕಿಹಿಟ್ಟನ್ನು ಸ್ವಲ್ಪ ನೀರು ಸೇರಿಸಿ ತೆಳ್ಳಗೆ ಮಾಡಿ ಸೇರಿಸಿ, ತಳ ಹಿಡಿಯದಂತೆ ಸೌಟಿನಿಂದ ಮಗುಚುತ್ತಾ ಕುದಿಸಿ. ನಂತರ, ಇದಕ್ಕೆ ಉಳಿದ ತೆಂಗಿನಹಾಲು ಮತ್ತು ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಒಲೆಯಿಂದ ಕೆಳಗಿಳಿಸಿ.

ಗೀತಸದಾ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.