ಎಲೆಗಳಿಂದ ಸೌಂದರ್ಯ


Team Udayavani, Jan 19, 2018, 6:00 AM IST

Beauty-with-leaves.jpg

ಸಾಮಾನ್ಯವಾಗಿ ನಾವು ಆರೋಗ್ಯ ಮತ್ತು  ಸೌಂದರ್ಯವನ್ನು ರಕ್ಷಿಸಿಕೊಳ್ಳಲು, ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕಯುಕ್ತವಾದ ಕ್ರೀಮ್‌ಗಳಿಗೆ ಮೊರೆಹೋಗುತ್ತೇವೆ. ಆದರೆ ನಮ್ಮ ಮನೆಯಲ್ಲಿಯೇ ದೊರೆಯುವ, ನಿಸರ್ಗದತ್ತವಾದ ಎಲೆಗಳನ್ನು ಬಳಸಿ, ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. 

ಅವುಗಳಲ್ಲಿ ತುಳಸಿಎಲೆ, ಬೇವು, ಪುದೀನಾ, ವೀಳ್ಯದೆಲೆ, ಬಿಲ್ವಪತ್ರೆ, ಗೋರಂಟಿ, ಮೆಂತ್ಯದ ಎಲೆಗಳು ಆರೋಗ್ಯವನ್ನು ಮತ್ತು ಸೌಂದರ್ಯದ ರಕ್ಷಣೆಯನ್ನು ಮಾಡುತ್ತವೆ. 

ತುಳಸಿ ಎಲೆ: ಮುಖದ ಮೇಲೆ ಮೊಡವೆಗಳ ಕಾಟದಿಂದ ಒದ್ದಾಡುವವರು ತುಳಸಿ ಎಲೆಗಳನ್ನು ಜಜ್ಜಿ, ರಸಹಿಂಡಿ, ಪ್ರತಿದಿನ ಮುಖಕ್ಕೆ ಸವರಿಕೊಳ್ಳುತ್ತಿದ್ದರೆ ಎರಡು ತಿಂಗಳೊಳಗಾಗಿಯೇ ಮೊಡವೆಗಳ ಕಾಟ ನಿವಾರಣೆಯಾಗುತ್ತದೆ. 

ಬೇವು, ತುಳಸಿ, ಪುದೀನಾ ಎಲೆಗಳು: ಈ ಎಲೆಗಳನ್ನು ಒಣಗಿಸಿ ಪುಡಿ ಮಾಡಿಟ್ಟುಕೊಳ್ಳಬೇಕು, ಈ ಪುಡಿಗಳ ಮಿಶ್ರಣಕ್ಕೆ ಜೇನು, ನಿಂಬೆರಸ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳುತ್ತಿದರೆ, ಜಿಡ್ಡು ನಿವಾರಣೆಯಾಗಿ ಮುಖ ಕಾಂತಿಯುತವಾಗುತ್ತದೆ. 

ವೀಳ್ಯದೆಲೆ : ತುಟಿಗಳು ಸದಾ ಕೆಂಪಗಿದ್ದು ಹೊಳೆಯುತ್ತಿರಬೇಕೆಂದರೆ, ವೀಳ್ಯದೆಲೆಗಳು ಉಪಯುಕ್ತ. ಇವು ತುಟಿಗಳನ್ನು ಒಡೆಯಗೊಡುವುದಿಲ್ಲ. ಜೊತೆಗೆ ತುಟಿಗಳ ಕಪ್ಪನ್ನು ನಿವಾರಿಸುತ್ತದೆ. 

ಬೇವಿನೆಲೆಗಳು: ದಿನಾಲೂ ಎಳೇ ಬೇವಿನೆಲೆಗಳನ್ನು ಮೆಲ್ಲುವುದರಿಂದ ದಂತಗಳು ಆರೋಗ್ಯವಾಗಿ, ದೃಢವಾಗಿರುವುದರೊಂದಿಗೆ, ಬೆಳ್ಳಗೆ ಹೊಳೆಯತೊಡಗುತ್ತವೆ. ಹುಳುಕು ಹಲ್ಲುಗಳು ನಿವಾರಣೆಯಾಗುತ್ತವೆ. ಬೇವಿನೆಲೆಗಳ ಕಷಾಯ ಮುಖದ ಮೇಲಿನ ಮೊಡವೆಗಳನ್ನು ತಡೆಗಟ್ಟುತ್ತದೆ. ಮುಖದ ಮೇಲಿನ ಕಪ್ಪು$ಮಚ್ಚೆಗಳು, ಗುಳ್ಳೆಗಳಂಥವು ನಿವಾರಣೆಯಾಗಬೇಕೆಂದರೆ, ಬೇವಿನೆಲೆಗಳನ್ನು ಒಣಗಿಸಿ ಪುಡಿಮಾಡಿ ರೋಜ್‌ವಾಟರ್‌, ನಿಂಬೆರಸ ಬೆರೆಸಿ ಬಳಸಬೇಕು.
 
ಬಿಲ್ವಪತ್ರೆ: ಈ ಎಲೆಗಳನ್ನು ಮೆತ್ತಗೆ ರುಬ್ಬಿ ರಸ ಹಿಂಡಬೇಕು. ಸ್ನಾನ ಮಾಡುವಾಗ ರಸವನ್ನು ಮೈಗೆ ಹಚ್ಚಿಕೊಳ್ಳುವುದರಿಂದ, ಚರ್ಮದ ದುರ್ಗಂಧ ನಿವಾರಣೆಯಾಗುವುದಲ್ಲದೆ, ಚರ್ಮದ ಕಾಂತಿ ಹೆಚ್ಚುತ್ತದೆ. 

ಗೋರಂಟಿ ಎಲೆಗಳು: ಕೈಗಳಿಗೆ ಗೋರಂಟಿ ಎಲೆಗಳನ್ನು ಹಚ್ಚಿಕೊಳ್ಳುವುದರಿಂದ, ಅಂಗೈಗಳು ಅಂದವಾಗಿ ಮೃದುವಾಗುತ್ತವೆ. ಕೈ ಉಗುರುಗಳು ಬಿರುಕು ಬಿಡುವುದಿಲ್ಲ . ಅವುಗಳ ಬಿರುಸು ಕಡಿಮೆಯಾಗುತ್ತದೆ. 

ಮೆಂತ್ಯದ ಎಲೆಗಳು: ಇವುಗಳನ್ನು ಚೆನ್ನಾಗಿ ರುಬ್ಬಿ , ಸ್ವಲ್ಪ$ ನೀರಿನೊಂದಿಗೆ ಬೆರೆಸಿ, ಆ ಮಿಶ್ರಣದಿಂದ ಕೂದಲುಗಳಿಗೆ ಚೆನ್ನಾಗಿ ಮಸಾಜ್‌ ಮಾಡುವುದರಿಂದ ಕೂದಲುಗಳ ಬಿರುಸುತನ ಕಡಿಮೆಯಾಗುವುದರೊಂದಿಗೆ, ಮೃದುವಾಗಿ ಆಕರ್ಷಣೀಯವಾಗುತ್ತದೆ.

– ಸುಮಾ ಹನುಮಂತ ಭಟ್‌

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.