ಆರೋಗ್ಯಕರ ಕಡಲೆಪುರಿ (ಮಂಡಕ್ಕಿ)


Team Udayavani, Aug 17, 2018, 6:00 AM IST

c-20.jpg

ಉಪ್ಪು , ಖಾರ, ಈರುಳ್ಳಿ ಬೆರೆಸಿದ ಮಂಡಕ್ಕಿಯನ್ನು ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಪುರಿ ಬಹಳ ಹಗುರವಾಗಿದ್ದು, ತಿಂದರೂ ತಿಂದಿಲ್ಲವೇನೋ ಎನ್ನಿಸುವ ಆಹಾರ. ಅಲ್ಲದೆ, ಇದರಿಂದ ಎಷ್ಟೋ ಆರೋಗ್ಯ ಪ್ರಯೋಜನಗಳಿವೆ. ಇದರಲ್ಲಿ ಕೊಬ್ಬಿನ ಅಂಶ, ಕ್ಯಾಲೋರಿ ಬಹಳ ಕಡಿಮೆ. ಪುರಿ ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಆಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

ಪುರಿ ಬಹಳ ಹಗುರವಾದ ಆಹಾರ. ಇದರಲ್ಲಿ ನಾರಿನಂಶ ಹೆಚ್ಚಾಗಿದೆ. ಹಾಗಾಗಿಯೇ ಜೀರ್ಣಿಸಿಕೊಳ್ಳಲು ತುಂಬ ಸುಲಭ. ಒಳ್ಳೆಯ ಜೀರ್ಣಕಾರಿಯಾಗಿರುವುದರಿಂದ ಮಲಬದ್ಧತೆಯನ್ನು ನಿವಾರಿಸುತ್ತದೆ. ಕರುಳಿನ ಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಆದ್ದರಿಂದ ಜೀರ್ಣಕ್ರಿಯೆ ವೇಗವಾಗಿ ತಿಂದಂತೆಯೇ ಇಲ್ಲದೆ ಹಗುರವಾಗಿರುತ್ತದೆ.

ಪುರಿಯಲ್ಲಿ ವಿಟಮಿನ್‌ “ಡಿ’, ವಿಟಮಿನ್‌ “ಬಿ’ ಕಾಂಪ್ಲೆಕ್ಸ್‌ ನಲ್ಲಿರುವ ರೈಬೋ ಪ್ಲೇವಿನ್‌, ಥಯಾಮಿನ್‌ ಹೆಚ್ಚಾಗಿದೆ. ಜೊತೆಗೆ ಕ್ಯಾಲ್ಸಿಯಂ, ಐರನ್‌ ಕೂಡ ಹೆಚ್ಚಾಗಿ ಇದೆ. ಹಾಗಾಗಿ ಇವು ಮೂಳೆ, ಹಲ್ಲುಗಳನ್ನು ಬಲಶಾಲಿಯಾಗಿರುವಂತೆ ಮಾಡುತ್ತದೆ. ಇದು ಆಸ್ಟಿಯೋಪೋರೋಸಿಸ್ಸನ್ನು ನಿವಾರಿಸುತ್ತದೆ. ಇದು ಚರ್ಮಕ್ಕೆ ಒಳ್ಳೆಯದು. ಜತೆಗೆ, ಒಳ್ಳೆಯ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.

ಪುರಿಯಲ್ಲಿ ಕಾಬೋಹೈಡ್ರೇಟ್ಸ್‌ ಹೆಚ್ಚಾಗಿದೆ. ಆದ್ದರಿಂದ ಸ್ವಲ್ಪವೇ ತಿಂದರೂ ದೇಹವು ಹಗುರವಾಗಿರುವುದೇ ಅಲ್ಲದೆ ಹೆಚ್ಚು ಶಕ್ತಿ ಸಿಗುವಂತೆ ಮಾಡುತ್ತದೆ. ಕೆಲವರು ಕೆಲಸ ಚುರುಕಾಗಿ ಮಾಡಬೇಕೆಂದುಕೊಂಡಾಗ ಬ್ರೇಕ್‌ಫಾಸ್ಟ್‌ಗೆ ಇದನ್ನು ಉಪಯೋಗಿಸುತ್ತಾರೆ. ಇದು ಮೆದುಳಿಗೆ ಚುರುಕುತನವನ್ನು ಕೊಡುತ್ತದೆ. ಜೊತೆಗೆ ನರಮಂಡಲವನ್ನು ಉತ್ತೇಜನಗೊಳಿಸುತ್ತದೆ. 

ಪುರಿ ಬುದ್ಧಿಶಕ್ತಿಯನ್ನು, ಕಲಿಯುವ ಶಕ್ತಿಯನ್ನೂ ಬೆಳೆಸುತ್ತದೆ. ಪುರಿಯಲ್ಲಿರುವ ಶಕ್ತಿಯುತವಾದ ಆ್ಯಂಟಿ ಆಕ್ಸಿಡೆಂಟ್ಸ್‌ಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕು ಬಾರದಂತೆ ತಡೆಯುತ್ತದೆ. ಕ್ಯಾನ್ಸರ್‌ಗೆ ಕಾರಣವಾಗುವ ಪ್ರೀರ್ಯಾಡಿಕಲ್ಲನ್ನು ನಿವಾರಿಸುತ್ತದೆ. ಇದರಲ್ಲಿ ಕಾಬೋì ಹೈಡ್ರೇಟ್ಸ್‌ ಹೆಚ್ಚಿಗೆ ಇರುವುದರಿಂದ ಡಯಾಬಿಟಿಸ್‌ ಇರುವವರು ಇದನ್ನು ಮಿತವಾಗಿ ತಿನ್ನಬೇಕು. ತೂಕ ಇಳಿಸಬೇಕೆಂದುಕೊಂಡವರಿಗೆ ಪುರಿಯಿಂದ ಮಾಡಿದ ಸ್ನ್ಯಾಕ್ಸ್‌ ಒಳ್ಳೆಯದು. ಅಕ್ಕಿಯಂತೆಯೇ ಪುರಿಯಲ್ಲಿ ಕಾಬೋìಹೈಡ್ರೇಡ್ಸ್‌ ಹೆಚ್ಚಾಗಿದೆ.

ಪುರಿ ಹಗುರವಾಗಿರುತ್ತದೆ ಎಂದುಕೊಂಡು ಅದನ್ನು ಹೆಚ್ಚಿಗೆ ತಿನ್ನದೆ ಮಿತವಾಗಿ ತಿನ್ನುವುದು ಒಳ್ಳೆಯದು. ಪುರಿಯನ್ನು ಬೆಲ್ಲ ಸೇರಿಸಿ ಉಂಡೆಯನ್ನೂ ತಯಾರಿಸುತ್ತಾರೆ.

ಸುಮ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.