ಮಳೆಗಾಲದ ಗರಿಗರಿ ತಿಂಡಿಗಳು


Team Udayavani, Aug 17, 2018, 6:00 AM IST

c-24.jpg

ಮಳೆಗಾಲದ ಅಬ್ಬರ ಈ ವರ್ಷ ಬಿರುಸಾಗಿದೆ. ಹೊರಗೆ ಹೊಟೇಲುಗಳಿಗೆ ಹೋಗಿ ಕರಿದ ತಿಂಡಿ ತಿನ್ನುವ ಬದಲು ಮನೆಯಲ್ಲಿಯೇ ಮಾಡಿ ತಿಂದರೆ ಆರೋಗ್ಯಕ್ಕೂ ಒಳ್ಳೆಯದು. ಮಿತವ್ಯಯವೂ ಹೌದು.

ಅಲಸಂಡೆಕಾಳು ವಡೆ
ಬೇಕಾಗುವ ಸಾಮಗ್ರಿ:
1 ಕಪ್‌ ಅಲಸಂಡೆಕಾಳು, 1/2 ಕಪ್‌ ಈರುಳ್ಳಿ ಚೂರು, 2 ಚಮಚ ಕೊತ್ತಂಬರಿಸೊಪ್ಪು , 1 ಎಸಳು ಕರಿಬೇವು, 1/2 ಚಮಚ ಜೀರಿಗೆ, 2-3 ಹಸಿಮೆಣಸು, ಕರಿಯಲು ಬೇಕಾದಷ್ಟು ಎಣ್ಣೆ , ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಅಲಸಂಡೆ ಕಾಳನ್ನು ರಾತ್ರಿಯಿಡಿ ನೆನೆಸಿ. ನಂತರ ಮಾರನೆ ದಿನ ಮಿಕ್ಸಿಗೆ ಹಾಕಿ ತೊಳೆದ ಅಲಸಂಡೆ ಕಾಳು ಹಾಕಿ ಸ್ವಲ್ಪ ತರಿ ತರಿಯಾಗಿ ರುಬ್ಬಿ. ನಂತರ ಈರುಳ್ಳಿ ಚೂರು, ಕೊತ್ತಂಬರಿ ಸೊಪ್ಪು , ಜೀರಿಗೆ, ಕರಿಬೇವಿನೆಲೆ, ಹಸಿಮೆಣಸು ಸàರಿಸಿ ತರಿಯಾಗಿ ಪುಡಿ ಮಾಡಿ. ಮೇಲಿನ ಮಿಶ್ರಣಕ್ಕೆ ಹಾಕಿ. ಉಪ್ಪು ಹಾಕಿ ಸರಿಯಾಗಿ ಬೆರೆಸಿ. ನಂತರ ಉಂಡೆ ಮಾಡಿ ವಡೆಯಂತೆ ತಟ್ಟಿ ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಹುರಿದು ತೆಗೆಯಿರಿ. ಈಗ ಗರಿ ಗರಿ ವಡೆ ಸವಿಯಲು ಸಿದ್ಧ.

ಗರಿ ಗರಿ ರವೆ ಬೋಂಡ 
ಬೇಕಾಗುವ ಸಾಮಗ್ರಿ:
1 ಕಪ್‌ ಚಿರೋಟಿ ರವೆ, 1 ಕಪ್‌ ಮೊಸರು, 1/4 ಕಪ್‌ ಈರುಳ್ಳಿ ಚೂರು, 1 ಎಸಳು ಕರಿಬೇವು, 2-3 ಹಸಿಮೆಣಸು, 2 ಚಮಚ ಕೊತ್ತಂಬರಿ ಸೊಪ್ಪು , ಚಿಟಿಕೆ ಇಂಗು, 1/4 ಚಮಚ ಶುಂಠಿ ಚೂರು, ಉಪ್ಪು ರುಚಿಗೆ ತಕ್ಕಷ್ಟು , ಕರಿಯಲು ಬೇಕಾದಷ್ಟು ಎಣ್ಣೆ.

ತಯಾರಿಸುವ ವಿಧಾನ: ಚಿರೋಟಿ ರವೆ, ಮೊಸರು, ಈರುಳ್ಳಿ ಚೂರು, ಕೊತ್ತಂಬರಿ ಸೊಪ್ಪು, ಇಂಗು ಹಾಕಿ 1/2 ಗಂಟೆ ನೆನೆಸಿ. ನಂತರ ಕರಿಬೇವು, ಹಸಿಮೆಣಸು, ಶುಂಠಿ ತರಿಯಾಗಿ ರುಬ್ಬಿ ಮೇಲಿನ ಮಿಶ್ರಣಕ್ಕೆ ಹಾಕಿ. ಉಪ್ಪು ಹಾಕಿ ಬೆರೆಸಿ ಇಡ್ಲಿಗಿಂತ ಸ್ವಲ್ಪ ಹಿಟ್ಟು ದಪ್ಪವಿರಲಿ. ನಂತರ ಕೈಯಿಂದ ಸ್ವಲ್ಪ ಸ್ವಲ್ಪವೇ ತೆಗೆದು ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಕರಿದು ತೆಗೆಯಿರಿ. ಈಗ ಗರಿಗರಿ ಬೋಂಡ ತಿನ್ನಲು ಸಿದ್ಧ.

ಗೆಣಸು ಪೋಡಿ
ಬೇಕಾಗುವ ಸಾಮಗ್ರಿ: 1 ಕಪ್‌ ಉರುಟಾಗಿ ಹೆಚ್ಚಿದ ಗೆಣಸು, ಚಿಟಿಕೆ ಇಂಗು, 1/2 ಕಪ್‌ ಖಾರದ ಪುಡಿ, 1 ಕಪ್‌ ಕಪ್‌ ಅಕ್ಕಿಹಿಟ್ಟು , ಕರಿಯಲು ಬೇಕಾದಷ್ಟು ಎಣ್ಣೆ , ಉಪ್ಪು ರುಚಿಗೆ ತಕ್ಕಷ್ಟು.

ತಯಾರಿಸುವ ವಿಧಾನ: ಅಕ್ಕಿಹಿಟ್ಟು, ಖಾರದ ಪುಡಿ, ಇಂಗು, ಉಪ್ಪು , ಸ್ವಲ್ಪ ನೀರು ಹಾಕಿ ಪೋಡಿ ಹಿಟ್ಟಿನ ಹದಕ್ಕೆ ಕಲಸಿ. ಗೆಣಸನ್ನು ತೊಳೆದು ತೆಳ್ಳಗೆ ಉರುಟಾಗಿ ತುಂಡು ಮಾಡಿ. ನಂತರ ಮಾಡಿಟ್ಟ ಹಿಟ್ಟಿನ ಮಿಶ್ರಣದಲ್ಲಿ ಅದ್ದಿ ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಕರಿದು ತೆಗೆಯಿರಿ. ಈಗ ರುಚಿಯಾದ ಪೋಡಿಯನ್ನು ಸವಿದು ನೋಡಿ.

ಸ್ವೀಟ್‌ಕಾರ್ನ್ ಅಂಬೊಡೆ 
ಬೇಕಾಗುವ ಸಾಮಗ್ರಿ:
1 ಕಪ್‌ ಸಿಹಿ ಜೋಳ, 1-2 ಹಸಿಮೆಣಸು, 1 ಕಪ್‌ ಕಡಲೆಹಿಟ್ಟು , 2 ಚಮಚ ಅಕ್ಕಿಹಿಟ್ಟು , 1/4 ಕಪ್‌ ತೆಂಗಿನತುರಿ, 1 ಚಮಚ ಕೊತ್ತಂಬರಿಸೊಪ್ಪು , 1/4 ಚಮಚ ಶುಂಠಿ ಪೇಸ್ಟ್‌ , ರುಚಿಗೆ ತಕ್ಕಷ್ಟು ಉಪ್ಪು , ಕರಿಯಲು ಬೇಕಾದಷ್ಟು ಎಣ್ಣೆ.

ತಯಾರಿಸುವ ವಿಧಾನ: ಸಿಹಿ ಜೋಳ, ಹಸಿಮೆಣಸು ಮಿಕ್ಸಿಗೆ ಹಾಕಿ ತರಿಯಾಗಿ ರುಬ್ಬಿ. ನಂತರ ಕಡಲೆಹಿಟ್ಟು , ಅಕ್ಕಿಹಿಟ್ಟು, ತೆಂಗಿನತುರಿ, ಕೊತ್ತಂಬರಿ ಸೊಪ್ಪು , ಶುಂಠಿ ಪೇಸ್ಟ್‌ , ಉಪ್ಪು ಸೇರಿಸಿ ಸರಿಯಾಗಿ ಬೆರೆಸಿ. ನಂತರ ಉಂಡೆ ಮಾಡಿ. ನಂತರ ಅಂಬೊಡೆಯಂತೆ ಮಾಡಿ ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಗರಿ ಗರಿಯಾದ ಅಂಬೊಡೆ ನಮ್ಮ ಬಾಯಿ ರುಚಿ ಹೆಚ್ಚಿಸಲು ಸಿದ್ಧ.

ಮದ್ದೂರು ವಡೆ 
ಬೇಕಾಗುವ ಸಾಮಗ್ರಿ:
1 ಕಪ್‌ ಅಕ್ಕಿಹಿಟ್ಟು , 1/4 ಕಪ್‌ ಚಿರೋಟಿ ರವೆ, ತರಿಯಾಗಿ ಪುಡಿಮಾಡಿದ 2 ಚಮಚ ನೆಲಗಡಲೆ ಬೀಜ, 1/4 ಚಮಚ ಓಮ, ಚಿಟಿಕೆ ಇಂಗು, 1-2 ಹಸಿಮೆಣಸು, 1/4 ಕಪ್‌ ಈರುಳ್ಳಿ ಚೂರು, 1 ಚಮಚ ಕೊತ್ತಂಬರಿಸೊಪ್ಪು , ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಸುವ ವಿಧಾನ: ಬೌಲ್‌ಗೆ ಅಕ್ಕಿಹಿಟ್ಟು, ಚಿರೋಟಿ ರವೆ, ಹುರಿದು ತರಿಯಾಗಿ ಮಾಡಿದ ನೆಲಗಡಲೆ ಬೀಜ, ಉಪ್ಪು , ಓಮ, ಹಸಿಮೆಣಸು, ಇಂಗು, ನೀರುಳ್ಳಿ ಚೂರು, ಕೊತ್ತಂಬರಿ ಸೊಪ್ಪು , ಸ್ವಲ್ಪ ಬಿಸಿ ಮಾಡಿದ 3-4 ಚಮಚ ಎಣ್ಣೆ , ಸ್ವಲ್ಪ ನೀರು ಹಾಕಿ ಗಟ್ಟಿಯಾಗಿ ಕಲಸಿ. ನಂತರ ಉಂಡೆ ಮಾಡಿ ವಡೆಯಂತೆ ತಟ್ಟಿ ಕಾದ ಎಣ್ಣೆಗೆ ಹಾಕಿ ಹದ ಉರಿಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈಗ ರುಚಿಯಾದ ಮದ್ದೂರು ವಡೆಯನ್ನು ಸವಿಯಿರಿ.

ಸರಸ್ವತಿ ಎಸ್‌. ಭಟ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.