ಮಳೆಯಲ್ಲಿ  ನಾದ-ನಿನಾದ


Team Udayavani, Sep 7, 2018, 6:00 AM IST

15.jpg

ಮಳೆಯ ಹನಿಗಳ ಧಾರೆ ಆತ್ಮವನ್ನೂ ದ್ರವಿಸುತ್ತದೆ’ ಎಂಬುದೊಂದು ಪ್ರಾಚೀನ ಹೇಳಿಕೆ. ಅಲ್ಲದೆ ಮಳೆಯ ಹನಿಯ ಧಾರೆಯೇ, ಜುಳುಜುಳು ನಾದ-ನಿನಾದವೇ ಪರಮಾನಂದದಾಯಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಯೇ ಇರಲಿ, ಪೌರಸ್ತ್ಯ ಸಂಸ್ಕೃತಿಯೇ ಇರಲಿ ಮಳೆಗಾಲ ಮತ್ತು ಸಂಗೀತದ ನಡುವೆ ಸಮ್ಮಿಳಿತವಿದೆ, ಅದೊಂದು ಅನುಸ್ವಾದನೀಯ ಅನುನಯದ ಬಂಧ- ಮಳೆ ಮತ್ತು ಸಂಗೀತದ ಅಂದ, ಆನಂದ !

ಭಾರತೀಯ ಸಂಗೀತ ವೈಭವ ಶಾಸ್ತ್ರೀಯವಿರಲಿ, ಜಾನಪದವಿರಲಿ, ತಣ್ತೀಪದಗಳಿರಲಿ, ಭಕ್ತಿರಸ ಗಾಯನವಿರಲಿ ಮಳೆ ಮತ್ತು ಮಳೆಗಾಲದಲ್ಲಿ ಕಂಡುಕೊಂಡ ರಸಪೂರ್ಣತೆ ಅತಿ ವಿಶಿಷ್ಟ. ಮಳೆಗಾಲದ ಸೌಂದರ್ಯ-ಸಂತೋಷ, ಮಳೆ ಮೋಡಗಳ ಲಾಸ್ಯ-ಲಾಲಿತ್ಯ, ಮಿಂಚು-ಗುಡುಗುಗಳ ಆರ್ಭಟ, ಗರ್ಜನೆಗಳ ಆಟ ಇವೆಲ್ಲವನ್ನೂ ಶಾಸ್ತ್ರೀಯ ಸಂಗೀತದಲ್ಲಿ ಒಂದೊಂದು ಸ್ವರಗಳಲ್ಲಿ ಆಸ್ವಾದಿಸುವಂತೆ ಹಿಡಿದಿಟ್ಟಿದ್ದಾರೆ, ಭಾರತೀಯ ಶಾಸ್ತ್ರೀಯ ಸಂಗೀತ ಕಲಾಕಾರರು. ಅದರಲ್ಲೂ ಹಿಂದೂಸ್ಥಾನಿ ಸಂಗೀತದ ಮೇರು ತಾನಸೇನ್‌ ಹಾಡಿದ “ಮಲ್ಹಾರ್‌’ ಅತೀ ಪ್ರಸಿದ್ಧ. ಮಳೆಗಾಲದ ರಾಗ ವರ್ಷಾಕಾಲವನ್ನು ಆತ್ಮನಲ್ಲಿ ದರ್ಶಿಸುವ, ಚಿತ್ರಿಸುವ, ಸ್ಪರ್ಶಿಸುವ, ಹಾಡಿಪಾಡುವ ಮಳೆ ರಾಗ !

ಮಳೆರಾಗಗಳ ಪಾರಮ್ಯ ಮಧ್ಯಕಾಲೀನ ರಜಪೂತ ರಾಜರ ಸಮಯದಲ್ಲಿ , ಮೊಗಲ್‌ ಸಾಮ್ರಾಟರ ಕಾಲದಲ್ಲಿ ಹಾಗೂ ಅನೇಕ ನವಾಬರ ಕಾಲದಲ್ಲಿ ಹಲವು ಪ್ರಾಂತ್ಯಗಳಲ್ಲಿ , ಪ್ರಾದೇಶಿಕ ರಾಜರ ಆಶ್ರಯದಲ್ಲಿ ವರ್ಧಿಸಿತು. ತಾನಸೇನ ಹೇಳುವಂತೆ “ಮಳೆ ಮೋಡಗಳು ಆಗಸದಲ್ಲಿ ಒಂದೆಡೆ ಮೇಳೈಸುವಾಗ ಉದ್ಭವವಾಗುವ ರಾಗ ಪ್ರತೀಕವೇ- ರಾಗ ಮೇಘ’ ತಾನಸೇನ ರಾಗಮೇಘ, ರಾಗ ಮಲ್ಹಾರ್‌ಗಳಲ್ಲಿ ಪರಿಪೂರ್ಣತೆಯನ್ನು ಸಾಧಿಸಿದ ಅಂದಿನ ಪ್ರಸಿದ್ಧ-ಸಿದ್ಧ ಗಾಯಕ ಎಂದೇ ಹೇಳಬಹುದು. ತನ್ನದೇ ವೈಶಿಷ್ಟéದಿಂದ ಒಡಗೂಡಿದ ಮಿಯಾಂಕೀ ಮಲ್ಹಾರ್‌ ರಾಗವನ್ನು ಹುಟ್ಟುಹಾಕಿದ್ದೂ ತಾನಸೇನ ! ಈ ರಾಗವನ್ನು ಹಾಡುತ್ತಿದ್ದರೆ, ತಾನಸೇನ ರಾಗಧಾರೆಯಲ್ಲಿ ಮುಳುಗೇಳುತ್ತಿದ್ದರೆ, ಕೇಳುಗರಿಗೆ ಸಂಗೀತ ರಸಧಾರೆಯೊಂದಿಗೆ, ಮಳೆಯ ಧಾರೆಯ ಸಿಂಚನದ ಆನಂದವೂ ದೊರೆಯುತ್ತಿತ್ತು.

ಹಾಂ! ಮಳೆರಾಗಗಳಲ್ಲಿ ವೈವಿಧ್ಯತೆ ಮತ್ತು ಪ್ರಸಿದ್ಧಿ ಹೆಚ್ಚಿದ್ದು ಭಾರತೀಯ ಸುವರ್ಣ ಯುಗದಲ್ಲಿ. ಸಂತ ಸೂರದಾಸ ಮಳೆರಾಗ ಸೂರ ಮಲ್ಹಾರ್‌ ಸೃಜಿಸಿದ. ಸೂರದಾಸ ಇಹವನ್ನೇ ಮರೆತು ಕೃಷ್ಣನ ಭಜನೆ ಸಂಕೀರ್ತನೆಯಲ್ಲಿ ತೊಡಗಿರುತ್ತಿದ್ದರೆ, ಸಾಕ್ಷಾತ್‌ ಬಾಲಕೃಷ್ಣನೇ ಕುಳಿತು ಆಸ್ವಾದಿಸುತ್ತಿದ್ದನೆಂಬ ಐತಿಹ್ಯವಿದೆ. ಸೂರದಾಸರ ತಂದೆ, ಅಂದಿನ ಶ್ರೇಷ್ಠ ಸಂಗೀತಗಾರರಲ್ಲೋರ್ವರಾದ ರಾಮದಾಸರೂ ಸಹ ರಾಮದಾಸೀ ಮಲ್ಹಾರ್‌ ಎಂಬ ಮಳೆರಾಗವನ್ನು ಸೃಜಿಸಿ ಹಾಡಿ ರಂಜಿಸುತ್ತಿದ್ದರು.

ಈ ಮುಖ್ಯ ಮಳೆಯ ರಾಗಗಳೊಂದಿಗೆ ಮೇಳೈಸಿ ಜನಮನವನ್ನು ಅಂದಿನಿಂದ ಇಂದಿನವರೆಗೂ ರಂಜಿಸುತ್ತಿರುವ ಇತರ ಮಳೆರಾಗಗಳೆಂದರೆ ಗೌಡ ಮಲ್ಹಾರ್‌, ಮಿಶ್ರಮೇಘ ಮಲ್ಹಾರ್‌, ಧುಲಿಯಾ ಮಲ್ಹಾರ್‌, ಮಧು ಮಲ್ಹಾರ್‌. ಮಲ್‌+ಹರ್‌ ಅಥವಾ ಮಲ+ಹರೀ ಎಂಬ ವುÂತ್ಪತ್ತಿಯೊಂದಿಗೆ ಮಲ್ಹರ್‌ ಶಬ್ದ ಉತ್ಪತ್ತಿಯಾಗಿದೆ. ಮಲ್‌ಹರ್‌ ಅಥವಾ ಮಲಹರೀ ಎಂದರೆ ಅರ್ಥ ಮಲ ಅಥವಾ ಕೊಳೆಯನ್ನು ತೊಳೆಯುವಂಥದ್ದು! 

ಹೌದು, ಮಳೆಯು ಇಳೆಯ ಕೊಳೆಯನ್ನು ತೊಳೆಯುವಂತೆ, ಮಳೆರಾಗ ಮಲ್ಹಾರ್‌ ಮುಂತಾದವು ಮನಸ್ಸಿನ ಕೊಳೆ ನಿವಾರಣೆ ಮಾಡಿ ಚಿತ್ತಶುದ್ಧಿ , ಸಣ್ತೀ ಸಂಶುದ್ಧಿ ಉಂಟುಮಾಡುತ್ತದೆ. ರಾಗ್‌ಮೇಘ, ರಾಗ್‌ ಮಲ್ಹಾರ್‌ ಮುಂತಾದವುಗಳಂತೆ, ರಾಗಮಾಲ ಕೌಂಸ್‌, ರಾಗ್‌ ಸಾರಂಗ್‌ ಹಾಗೂ ಅವುಗಳೊಂದಿಗಿನ ವೈವಿಧ್ಯಮಯ ರಾಗಗಳು ಮಳೆಗಾಲದಲ್ಲಿ ಮನಸ್ಸನ್ನು ಮೀಯಿಸುವ ಇತರ ಮಳೆರಾಗಗಳಾಗಿವೆ.

ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.