ಕನಸಿನಲ್ಲಿ ಮಳೆ ಬಂದರೆ ಶುಭ


Team Udayavani, Sep 21, 2018, 6:00 AM IST

z-16.jpg

ಕನಸಿನ ಸಾಮ್ರಾಜ್ಯದಲ್ಲಿ ಮಳೆಗೆ ವಿಶಿಷ್ಟ ಸ್ಥಾನವಿದೆ. ಕನಸಿನಲ್ಲಿ ಮಳೆಯನ್ನು ಕಂಡರೆ ಅದು ಕಾರ್ಯಸಿದ್ಧಿಯ ಸೂಚಕವಾಗಿರುತ್ತದೆ. ಈ ಕುರಿತು ಕಾರ್ಲ್ ಯೂಂಗ್‌ ಅವರು ಅಧ್ಯಯನ ಹಾಗೂ ಸಂಶೋಧನೆ ನಡೆಸಿ ಕುತೂಹಲಕಾರಿ ಅಂಶಗಳನ್ನು ಶ್ರುತಪಡಿಸಿದ್ದಾರೆ. ಮಳೆ ಬುವಿಗೆ ಶುದ್ಧ ನೀರನ್ನು ನೀಡುವ ಒಂದು ಮುಖ್ಯ ಜಲದ ಮೂಲ. ನೀರಿಲ್ಲದೆ ಜೀವನವಿಲ್ಲ. ಮಳೆಯ ನೀರು ಅಮೃತೋಪಮ. ಅಂತೆಯೇ ಇದು ಇಳೆಯ ಕೊಳೆಯನ್ನೆಲ್ಲ ತೊಳೆಯುವುದೂ ದಿಟ!

ಕನಸಿನಲ್ಲಿ ಮಳೆಯನ್ನು ಕಾಣುವುದು ಧನಾತ್ಮಕ ಸನ್ನಿವೇಶ ಆಗಮನದ ಪ್ರತೀಕ. ಅಲ್ಲದೆ ಚಿಂತೆಯ, ಸಮಸ್ಯೆಗಳ ನಿವಾರಣೆಯ ಸೂಚಕ. ಮಳೆ ಬಂದು ಹೇಗೆ ಬಿಸಿಲಿನ ಧಗೆಯಲ್ಲಿ ಬೆಂದ ಬುವಿಯಲ್ಲಿ ತಂಪು, ತಂಗಾಳಿ ತರುವಂತೆ, ಮರಗಿಡ ಗಳಲ್ಲಿ ಹಸಿರೊಡೆಯುವಂತೆ, ಇಡೀ ಪ್ರಕೃತಿ ಲವಲವಿಕೆಯಿಂದ ಕೂಡಿರುವಂತೆ ಮಾಡುತ್ತದೋ ಅದೇ ರೀತಿಯಲ್ಲಿ ಕನಸಿನಲ್ಲಿ ಮಳೆಯನ್ನು ಕಂಡಾಗ ಅದು ಋಣಾತ್ಮಕ ಸಂಗತಿಯ ನಿವಾರಣೆಯನ್ನೂ , ಸಮಸ್ಯೆಗೆ ಚಿಂತೆಗೆ ಪರಿಹಾರವನ್ನೂ ಸೂಚಿಸುವಂಥದ್ದಾಗಿದೆ.

ಸುಪ್ತಪ್ರಜ್ಞೆಯಲ್ಲಿ ಅಡಗಿರುವ ಭಾವನೆಗಳು, ಭೀತಿ, ಆತಂಕ, ಅಸಂತೋಷ ಮೊದಲಾದ ಭಾವಗಳ ಅಭಿವ್ಯಕ್ತಿಯಾಗಿಯೂ ಕನಸು ಕಾಣಿಸಿಕೊಳ್ಳುತ್ತದೆ.
ಮಳೆಯ ಕನಸು ಅಥವಾ ಕನಸಿನಲ್ಲಿ ಮಳೆಯನ್ನು ಕಾಣುವುದೆಂದರೆ ಋಣಾತ್ಮಕವಾದ ಇಂತಹ ಋಣಾತ್ಮಕ ಭಾವಗಳನ್ನು ಮೀರಿ, ಸುಪ್ತಪ್ರಜ್ಞೆಯಲ್ಲಿ ಧನಾತ್ಮಕ ಯೋಚನೆ, ಯೋಜನೆ, ಆನಂದ ಲಹರಿ ಕಾಣಿಸಿಕೊಳ್ಳುವುದೇ ಆಗಿದೆ. ಮಳೆಯಂತಹ ಹಲವು ಧನಾತ್ಮಕ ಅಂಶಗಳುಳ್ಳ ಕನಸುಗಳು ಪ್ರಜ್ಞೆಯು ವಿಕಸಿತವಾದುದನ್ನು ಸೂಚಿಸುವ ಸಾಂಕೇತಿಕ ತಣ್ತೀಗಳನ್ನು ಹೊಂದಿವೆ.

ಹೀಗೆ ಮಳೆ, ಮಳೆ ಮತ್ತು ಗುಡುಗು ಮಿಂಚು, ಮಳೆ ಮತ್ತು ರಭಸದ ಗಾಳಿ ಇವೇ ಮೊದಲಾದವುಗಳ ಕನಸಿನ ಅಭಿವ್ಯಕ್ತತೆಯ ಕುರಿತು ಕಾರ್ಲ್ ಯೂಂಗ್‌ ಅಧ್ಯಯನ ಮಾಡಿದಂತೆ, ತದನಂತರ ಕ್ರಿಶ್ಚಿಯಾನಾ ಸ್ಪಾನಿಯಸ್‌ ಅಧ್ಯಯನ ಮಾಡಿ ಈ ಕುರಿತು ಮಾನವನ ಮನಸ್ಸಿಗೆ ಚಿಕಿತ್ಸಕವಾದ ತಣ್ತೀಗಳನ್ನು , ಪ್ರಯೋಗಗಳನ್ನು ಮಾಡಿದರು. ಮಳೆ ಮತ್ತು ಮೋಡ ಮುಸುಕಿದ ಕಗ್ಗತ್ತಲೆಯ ವಾತಾವರಣ ಹೊಂದಿರುವ ಕನಸು ಮನೋವಸಾದ ಅಥವಾ ಬೇಸರ, ಖನ್ನತೆ ರೋಗ ಚಿಹ್ನೆ ಅಥವಾ ಸನ್ನಿವೇಶಗಳನ್ನು ಸೂಚಿಸುವುದು.

ಮಳೆಗಿಂತಲೂ ಅಧಿಕ ಮಿಂಚು, ಗುಡುಗುಗಳ ಕನಸು ಕಂಡಿತೆಂದರೆ ಮನಸ್ಸಿನಲ್ಲಿ ಕೋಪಕ್ಕೆ ಕಾರಣವಾಗಿರುವ ಸನ್ನಿವೇಶದ ಪ್ರಭಾವವನ್ನು ಅಂತಹ ಕನಸು ಸೂಚಿಸುತ್ತದೆ. ಮಳೆಯೊಂದಿಗೆ, ಮಳೆಬಿಲ್ಲು ಅಥವಾ ಕಾಮನಬಿಲ್ಲಿನ ಕನಸು ಸಂತಸದ ಸನ್ನಿವೇಶದ ಸೂಚಕ. ಮಳೆಯಲ್ಲಿ ಛತ್ರಿ ಅಥವಾ ಕೊಡೆ ಹಿಡಿದಿರುವ ಕನಸು ಮನಸ್ಸಿನ ಅಭದ್ರತೆಯ ನಿವಾರಣೆಯನ್ನು ಸಾಂಕೇತಿಕವಾಗಿ ಸೂಚಿಸುತ್ತದೆ.

ಮಳೆಯ ಕನಸಿನ ಆಧ್ಯಾತ್ಮಿಕ ಮೋಹ
ಮಳೆಯನ್ನು ಕನಸಲ್ಲಿ ಕಂಡರೆ ಅಥವಾ ಮಳೆಸದ್ದು ಕೇಳಿಸಿಕೊಂಡರೆ ಅದು ಕ್ಷಮಾಸೂಚಕ, ಆಶೀರ್ವಾದದ ಪ್ರತೀಕವಾಗಿದೆ.
ಅಂತೆಯೇ ಮಳೆಹನಿಗಳಲ್ಲಿ ಮೀಯುವ ಕನಸು, ದುಃಖ ಅಥವಾ ಕಣ್ಣೀರು ಹರಿದು, ಮನಸ್ಸು ಶುಭ್ರ ಹಾಗೂ ಸಂತಸ ಭರಿತವಾಗುವ ಸೂಚಕ.
ಬುವಿಗೆ ತಂಪನ್ನೀಯಲು ಮಳೆ ನೀಡುವಂತೆ ಋಗ್ವೇದದಲ್ಲಿ ಯಂತ್ರಗಳು (ಪರ್ಜನ್ಯ ಮಂತ್ರಗಳು) ಹಲವಾರು ಇವೆ. ಅಂತೆಯೇ ಅಧಿಕ ಮಳೆಯಿಂದ ಅತಿವೃಷ್ಟಿಯಿಂದ ಆಗುವ ಅನಾಹುತವನ್ನು ತಪ್ಪಿಸುವಂತೆಯೂ ಪ್ರಾರ್ಥಿಸುವ ಮಂತ್ರಗಳಿವೆ.

ಇಸ್ಲಾಂನಲ್ಲಿ ಮಳೆಯ ಕನಸು, ಉತ್ತಮ ಬೆಳೆ, ಇಳೆಯ ಸಂತೃಪ್ತಿ, ಜನಜೀವನ ಸುಗಮತೆ ಮತ್ತು ಸಂತೋಷವನ್ನು ಸೂಚಿಸುತ್ತದೆ.
ಆಯುರ್ವೇದ ಶಾಸ್ತ್ರದಲ್ಲೂ ಬತ್ತಿದ ಜಲಾಶಯ, ನೀರಿಲ್ಲದ ಕೆರೆ-ಬಾವಿ ತಟಾಕಗಳ ಕನಸು ದೇಹವನ್ನು ಕ್ಷೀಣಿಸುವಂತಹ ಕಾಯಿಲೆ (ಕ್ಷಯರೋಗವೇ) ಮುಂತಾದವುಗಳ ಸೂಚಕ ಎಂದು ತಿಳಿಸಲಾಗಿದೆ. ಕಾಲೇ ವರ್ಷತು ಪರ್ಜನ್ಯಃ ಪೃಥಿವೀಂ ಸಸ್ಯ ಶಾಲಿನೀಂ ಎಂದು ಶಾಂತಿಮಂತ್ರದಲ್ಲಿ ತಿಳಿಸಿರುವಂತೆ ಕಾಲಕಾಲಕ್ಕೆ ಮಳೆಯಾಗಲಿ.

ಡಾ. ಅನುರಾಧಾ ಕಾಮತ್‌

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.