ನನ್ನ ಪ್ರೀತಿಯ ಚೂಡಿ


Team Udayavani, Nov 9, 2018, 6:00 AM IST

25.jpg

ತೆಳ್ಳಗಿರುವವರು, ದಪ್ಪಗಿರುವವರು, ಮಕ್ಕಳು, ಯುವತಿಯರು, ಆಂಟಿಯರು- ಹೀಗೆ ಎಲ್ಲ ವಯೋಮಾನದವರ ಮೆಚ್ಚಿನ ಉಡುಗೆ ಚೂಡಿದಾರ್‌…

ದೇಶೀ ಸಂಸ್ಕೃತಿ ಎಂದ ಕೂಡಲೇ ನೆನಪಾಗುವುದು ಉಡುಗೆ-ತೊಡುಗೆ, ಸಂಪ್ರದಾಯ, ಆಚಾರ, ಆಚರಣೆಗಳು. ಅದರಲ್ಲೂ ನಾವು ಧರಿಸುವ ದಿರಿಸಿಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ. ಕಾಲಕ್ಕೆ ತಕ್ಕಂತೆ ಉಡುಗೆ-ತೊಡುಗೆಗಳು ಬದಲಾಗುತ್ತಿರುತ್ತವೆ. ಆದರೆ, ಕೆಲವೊಂದು ಉಡುಗೆಗಳು ಯಾವತ್ತೂ ಹಳೇ ಫ್ಯಾಷನ್‌ ಆಗುವುದೇ ಇಲ್ಲ. ಸೀರೆ, ಕುರ್ತಾ, ಸಲ್ವಾರ್‌ ಕಮೀಜ್‌ನಂಥ ಉಡುಪುಗಳು ಸಾಂಪ್ರದಾಯಿಕ ಉಡುಪುಗಳೆಂದು ಕರೆಸಿಕೊಂಡರೂ, ಈಗಲೂ ತಮ್ಮ ಜನಪ್ರಿಯತೆಯನ್ನು ಉಳಿಸಿಕೊಂಡಿವೆ.

ಉತ್ತರ ಭಾರತದ ಮಹಿಳೆಯರ ಮೂಲಕ ಸಲ್ವಾರ್‌ ಕಮೀಜ್‌ ಹಾಗೂ ಕುರ್ತಾ ರೂಪದಲ್ಲಿ ಪ್ರಚಲಿತಕ್ಕೆ ಬಂದ ಚೂಡಿದಾರ್‌, ಕ್ರಮೇಣ ದಕ್ಷಿಣ ಭಾರತದ ಹೆಂಗಳೆಯರ ಮನ ಗೆದ್ದಿತು. ಇತ್ತೀಚೆಗೆ ಅತ್ಯಾಧುನಿಕ ಫ್ಯಾಷನ್‌ ಅಂಶಗಳನ್ನು ಹೊಂದಿದ ತರಹೇವಾರಿ ಚೂಡಿದಾರ್‌ಗಳು ಮಾರುಕಟ್ಟೆಗೆ ಬಂದಿವೆ. ಇವಲ್ಲದೆ, ಟಾಪ್‌, ಬಾಟಂ ಬಟ್ಟೆ, ದುಪ್ಪಟ್ಟಾಗಳಲ್ಲೂ ಹೊಸ ವಿನ್ಯಾಸದ ಟ್ರೆಂಡ್‌ ಬರುತ್ತಲೇ ಇವೆ. ವಿವಿಧ ವಿನ್ಯಾಸದ ವರ್ಕ್‌ ಮತ್ತು ಡಿಸೈನ್‌ ಇರುವ ಚೂಡಿದಾರವನ್ನು ಯುವತಿಯರು ಹೆಚ್ಚಾಗಿ ಇಷ್ಟಪಡುತ್ತಾರೆ. ಚೂಡಿದಾರ್‌, ಕುರ್ತಾ, ಟಾಪ್‌ಗ್ಳನ್ನು ಪಟಿಯಾಲ, ಲೆಗ್ಗಿನ್ಸ್‌ ಹಾಗೂ ಜೀನ್ಸ್‌ ಪ್ಯಾಂಟ್‌ ಮೇಲೂ ಧರಿಸಬಹುದು. ಯುವತಿಯರು, ಮಹಿಳೆಯರಷ್ಟೇ ಅಲ್ಲದೆ, ವಯಸ್ಸಾದ ಹಿರಿಯರೂ ಚೂಡಿದಾರವನ್ನು ಸರಳ, ಸುಂದರ, ಆರಾಮದಾಯಕ ಉಡುಗೆ ಎಂದು ಒಪ್ಪಿಕೊಂಡಿದ್ದಾರೆ.

ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಸಮವಸ್ತ್ರ ಸ್ಕರ್ಟ್‌ನಿಂದ ಚೂಡಿದಾರಕ್ಕೆ ಮಾರ್ಪಾಡಾಗಿರುವುದು ಉತ್ತಮ ಬೆಳವಣಿಗೆ. ಸ್ಕರ್ಟ್‌ಗಿಂತ ಹೆಚ್ಚು ಕಂಫ‌ರ್ಟ್‌ ನೀಡುವ, ಇಡೀ ದೇಹವನ್ನು ಸರಿಯಾಗಿ ಕವರ್‌ ಮಾಡುವ ಈ ಉಡುಪು, ಶಾಲೆ-ಕಾಲೇಜಿನಲ್ಲಿ ಧರಿಸಲು ಸುರಕ್ಷ ಭಾವವನ್ನು ನೀಡುತ್ತದೆ.

ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ
ಇತ್ತೀಚೆಗೆ, ಶಾಲಾ-ಕಾಲೇಜಿನ ಶಿಕ್ಷಕಿಯರಿಗೆ ಸಭ್ಯ ಉಡುಗೆ ತೊಡಲು ಸ್ವತಂತ್ರರು ಎಂಬ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಇದರನ್ವಯ, ಕೆಲ ಶಾಲೆಗಳಲ್ಲಿ ಸಾಂಪ್ರದಾಯಿಕ ಶೈಲಿಯ ಚೂಡಿದಾರ್‌ ಹಾಗೂ ಕುರ್ತಾ ಧರಿಸುವುದನ್ನು ಕಾಣಬಹುದು. ನೌಕರಸ್ಥರಿಗೆ ಇದೊಂದು ವರದಾನವೇ ಆಗಿದೆ. ಆರಾಮದಾಯಕ ಅಲ್ಲದೆ, ಆಗಾಗ ಸೆರಗು, ನೆರಿಗೆ ಸರಿಪಡಿಸುವ ಸಂಕಷ್ಟದಿಂದ ಹೆಣ್ಣುಮಕ್ಕಳು ಪಾರಾಗಿದ್ದಾರೆಂದು ಹೇಳಬಹುದು. ಒಂದೆಡೆ ಬೆಳಗ್ಗಿನ ಧಾವಂತದಲ್ಲಿ ಮಕ್ಕಳನ್ನೂ ರೆಡಿ ಮಾಡಿ, ತಾವೂ ತಯಾರಾಗಿ ಹೊರಡುವುದರೊಳಗೆ ಸಮಯ ಮೀರಿ ಹೋಗುತ್ತದೆ. ಇನ್ನು ಸೀರೆ ಉಡಲು ಕನಿಷ್ಠಪಕ್ಷ ಅರ್ಧ ಗಂಟೆಯಾದರೂ ಬೇಕು. ಆದರೆ, ಚೂಡಿದಾರ್‌ ಧರಿಸಲು ಸರಳ, ಸುಲಭ. ಬಹಳ ಬೇಗ ರೆಡಿಯಾಗಿ, ಸಮಯಕ್ಕೆ ಸರಿಯಾಗಿ ಕಚೇರಿ ತಲುಪಲು ಸಾಧ್ಯವೆನ್ನುತ್ತಾರೆ ಶಿಕ್ಷಕಿಯರು.

ಗೃಹಿಣಿಯರಿಗೂ ಅಚ್ಚುಮೆಚ್ಚು
ದಪ್ಪಗಿರಲಿ, ತೆಳ್ಳಗಿರಲ ಎಲ್ಲರಿಗೂ ಒಪ್ಪುವ, ಒಗ್ಗುವ ಉಡುಪು ಇದಾಗಿದೆ. ಹೊರಗೆ ಹೋಗಬೇಕೆಂದಿದ್ದರೆ ಸ್ವತಂತ್ರವಾಗಿ, ಕಿರಿಕಿರಿ ಇಲ್ಲದೆ ಆರಾಮಾಗಿ ಓಡಾಡುವುದಕ್ಕೆ ಎಲ್ಲರಿಗೂ ಸರಿ ಹೊಂದುವುದಲ್ಲದೆ, ಒಂದೆರಡು ಲೆಗ್ಗಿನ್ಸ್‌ ತೆಗೆದುಕೊಂಡರೆ ಸಾಮಾನ್ಯವಾಗಿ ಎಲ್ಲಾ ಟಾಪ್‌ಗ್ಳಿಗೂ ಮ್ಯಾಚ್‌ ಆಗುತ್ತದೆ ಎನ್ನುವುದು ಎಲ್ಲರ ಅಭಿಪ್ರಾಯ. ಅವರವರ ವಯೋಮಾನಕ್ಕೆ ತಕ್ಕಂಥ ರೆಡಿಮೇಡ್‌ ಟಾಪ್‌ ಹಾಗೂ ಪ್ಯಾಂಟ್‌ಗಳು ಸುಲಭ ಬೆಲೆಗೆ ಮಾರುಕಟ್ಟೆಯಲ್ಲಿ ಸಿಗುವುದರಿಂದ ಎಲ್ಲರಿಗೂ ಅನುಕೂಲಕರ.

ಒಟ್ಟಿನಲ್ಲಿ , ಸಾರ್ವಕಾಲಿಕ ಉಡುಪಾಗಿರುವ ಚೂಡಿದಾರ್‌ ಎಲ್ಲರಿಗೂ ಪ್ರಿಯವೇ. ಇದರ ವಿಸ್ತಾರ ಹೇಗಿದೆಯೆಂದರೆ, ಮದುವೆ ಇನ್ನಿತರ ಸಮಾರಂಭಗಳಲ್ಲಿ ಮದುಮಗ ಹಾಗೂ ಯುವಕರು, ಗಂಡಸರು ಧರಿಸುವ ಕುರ್ತಾ, ಶೇರ್ವಾನಿ, ಜುಬ್ಟಾ , ಪೈಜಾಮಗಳು ಗ್ರ್ಯಾಂಡ್‌ ಲುಕ್‌ ನೀಡುವಲ್ಲಿ ತನ್ನ ಛಾಇಪನ್ನು ಎತ್ತಿ ಹಿಡಿದಿವೆ.

ಇಂದಿರಾ ಪಿ.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.