ನಗುವಿನೊಳಗೊಂದು ಪುಟ್ಟ ನಗು


Team Udayavani, Mar 15, 2019, 12:30 AM IST

x-53.jpg

ಗರ್ಭಿಣಿಯರು ಸದಾ ಸಕಾರಾತ್ಮಕ ಚಿಂತನೆಗಳು, ಉತ್ತಮ ಅಭಿರುಚಿಗಳು, ಹವ್ಯಾಸ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ, ಮಾನಸಿಕವಾಗಿ ಮತ್ತು ದೈಹಿಕವಾಗಿ ಉತ್ತಮ ಆರೋಗ್ಯ ಹೊಂದಿದ ಮಗುವನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ…

ನನ್ನೊಳಗೆ ಚಿಗುರೊಡೆದು ಮೃದುವಾಗಿ ಅರಳುತ್ತಿರುವ ಪುಟ್ಟಜೀವದ ಬಗ್ಗೆ ನೆನೆಸಿಕೊಂಡಾಗ ಕಣ್ತುಂಬಿ ಬರುತ್ತದೆ. ನನಗಿಷ್ಟವಾದ ಪಾನಿಪೂರಿ, ಮಸಾಲಾ ಪೂರಿ, ಬಜ್ಜಿ ಇತ್ಯಾದಿಗಳ ಸ್ಥಾನವನ್ನು ದಾಳಿಂಬೆ, ಸೇಬು, ಕಿತ್ತಳೆ ತುಂಬುತ್ತಿವೆ. ಹಾಗಂತ ನನಗೆ ಬೇಜಾರಿಲ್ಲ. ಖುಷಿಯಿದೆ. ನನ್ನ ಮುದ್ದು ಕಂದಮ್ಮನಿಗೋಸ್ಕರ ನಾಲಗೆ ಚಪಲಾನ ಒಂದಷ್ಟು ದಿನ ತ್ಯಾಗ ಮಾಡೋಕಾಗಲ್ವಾ ಅಂತ ಅನ್ನಿಸುತ್ತದೆ. ನಮ್ಮವರ ಜೊತೆಗೆ ವಾಕಿಂಗ್‌ ಹೋಗುವಾಗ ಸಿಗುವ ಮಕ್ಕಳ ಬಟ್ಟೆ ಅಂಗಡಿ ಯಾವಾಗಲೂ ನನ್ನನ್ನು ಆಕರ್ಷಿಸುತ್ತದೆ. ಪುಟ್ಟ ಪುಟ್ಟ ಅಂಗಿ, ಪ್ಯಾಂಟು, ಫ್ರಾಕು, ಟೋಪಿ ನೋಡಿದಾಗ, ಯಾವಾಗ ನನ್ನ ಮುದ್ದು ಕಂದನಿಗೆ ಇದನ್ನೆಲ್ಲ ಹಾಕೋದು ಅನಿಸುತ್ತೆ.

ಇವೆಲ್ಲ ಬರೀ ಗರ್ಭಿಣಿಯಾದ ಒಂದು ಹೆಣ್ಣುಮಗಳ ಮನಸ್ಥಿತಿಯಲ್ಲ. ತಾಯಂದಿರಾಗುವ ಎಲ್ಲರ ಮನಸ್ಥಿತಿ. ಗರ್ಭಿಣಿಯಾದಾಕೆ ಒಂದೆಡೆ ಹೀಗೆಲ್ಲಾ ಕನಸು ಕಾಣುತ್ತಿರುವ ಸಂದರ್ಭದಲ್ಲಿ ಆಕೆಯ ಯಜಮಾನರು ಮತ್ತು ತಾಯ್ತಂದೆಯರು, ಗರ್ಭಿಣಿಯ ಮಾನಸಿಕ ಆರೋಗ್ಯದ ಕುರಿತೂ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಒಳ್ಳೆಯ ಆಹಾರ ಪದ್ಧತಿಯೊಂದಿಗೆ, ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಬೇಕಾದ ಉತ್ತಮ ಜೀವನಶೈಲಿಯನ್ನು ಗರ್ಭಿಣಿಗೆ ಅಭ್ಯಾಸ ಮಾಡಿಸಬೇಕು.

ದೈಹಿಕ ಆರೋಗ್ಯಕ್ಕೆ
.ವಾಕಿಂಗ್‌, ಸರಳ ವ್ಯಾಯಾಮ ಧ್ಯಾನ ಮಾಡಬೇಕು.
.ತಾಜಾ ಆಹಾರ (ಹಣ್ಣು, ತರಕಾರಿ, ಡ್ರೈಫ್ರೂಟ್ಸ್ , ಸಿರಿಧಾನ್ಯಗಳು) ಸೇವಿಸಬೇಕು.

ಮಾನಸಿಕ ಆರೋಗ್ಯಕ್ಕೆ
ಒಳ್ಳೆಯ ಅಭಿರುಚಿಗಳನ್ನು ರೂಢಿಸಿಕೊಳ್ಳುವುದು. ಉದಾಹರಣೆಗೆ: ಸಂಗೀತ, ಪೇಟಿಂಗ್‌, ಒಳ್ಳೆ ಪುಸ್ತಕಗಳನ್ನು ಓದುವುದು, ಕುಟುಂಬದವರ ಜೊತೆ ಹೆಚ್ಚು ಸಮಯ ಕಳೆಯುವುದು ಉತ್ತಮ.

ಮನೆಯವರಿಗೆ ಕಿವಿಮಾತು
ಗರ್ಭಿಣಿಯ ಮಾನಸಿಕ ಆರೋಗ್ಯಕ್ಕೂ , ಮಗುವಿನ ದೈಹಿಕ ಬೆಳವಣಿಗೆಗೂ ನೇರ ನಂಟಿದೆ. ತಾಯಂದಿರ ನಕಾರಾತ್ಮಕ ಭಾವನೆಗಳು, ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕುಂದುಂಟು ಮಾಡುತ್ತವೆ. ಹಾಗಾಗಿ, ಜಗಳ, ಹಿಂಸಾತ್ಮಕ ದೃಶ್ಯಗಳು, ತೀವ್ರ ನೋವುಂಟು ಮಾಡುವ ಸಂಭಾಷಣೆಗಳು, ಅನವಶ್ಯಕ ಗದ್ದಲದಿಂದ ಗರ್ಭಿಣಿ ದೂರವಿರುವಂತೆ ನೋಡಿಕೊಳ್ಳ ಬೇಕು. ಆಕೆ ಸದಾ ಹಿತನುಡಿಗಳನ್ನು ಕೇಳುತ್ತ, ನಗು ನಗುತ್ತ ಇರುವಂಥ ವಾತಾವರಣ ರೂಪಿಸಬೇಕು. ಪ್ರತಿಕ್ಷಣವೂ ಆಕೆಯ ಕುರಿತು ಕಾಳಜಿ ತೋರುವುದು, ಧೈರ್ಯ ಹೇಳುವುದು ಪೋಷಕರ ಕರ್ತವ್ಯವಾಗಬೇಕು. ಮಮತೆ, ಕಾಳಜಿಯನ್ನು ವ್ಯಕ್ತಪಡಿಸುವುದು ಅತ್ಯವಶ್ಯಕ.

ಚಿಕಿತ್ಸೆ ಅಗತ್ಯ
ಗರ್ಭಾವಸ್ಥೆಯ ಸಮಯದಲ್ಲಿ ಮಾನಸಿಕ ಅಸ್ವಸ್ಥತೆಗೆ ಸೂಕ್ತ ಚಿಕಿತ್ಸೆ ಸಿಗದಿದ್ದಲ್ಲಿ, ತಾಯಿ ಹಾಗೂ ಮಗುವಿನ ಮಾನಸಿಕ ವಿಕಾಸಕ್ಕೆ ದುಷ್ಪರಿಣಾಮ ಉಂಟಾಗುವುದು ಖಂಡಿತ.

ಸಮಸ್ಯೆಯ ಲಕ್ಷಣಗಳು
ಗರ್ಭಿಣಿಯರಲ್ಲಿ ಈ ಬದಲಾವಣೆ ಕಾಣಿಸಿದರೆ, ಸೂಕ್ತ ಚಿಕಿತ್ಸೆ ಕೊಡಿಸುವುದು ಒಳಿತು.
.ಆಹಾರ ಸೇವನೆಯಲ್ಲಿ ತೀವ್ರ ಏರುಪೇರು
.ತೀವ್ರ ದುಃಖ, ಸಾಂದ್ರತೆಯ ಸಮಸ್ಯೆ.
.ಅತೀ ಹೆಚ್ಚು ಅಥವಾ ಅತೀ
 ಕಡಿಮೆ ನಿದ್ರೆ.
.ನಿರಾಸಕ್ತಿ, ವಿನಾಕಾರಣ ಆತಂಕ.

ಡಾ. ಸುಹಾಸಿನಿ ರಾಮ್‌

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.