ತಂಪು ತಂಪು ಸಲಾಡ್‌


Team Udayavani, Mar 22, 2019, 12:30 AM IST

dsc01616.jpg

ವಿವಿಧ ಹಣ್ಣು-ತರಕಾರಿಗಳನ್ನು ಮಿಶ್ರಮಾಡಿ ತಯಾರಿಸುವ ಸಲಾಡ್‌ ಗಳು ಹೇರಳವಾದ ನಾರಿನಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ ಇತ್ಯಾದಿ ಉತ್ತಮ ಅಂಶಗಳನ್ನೊಳಗೊಂಡಿದ್ದು ದೇಹಕ್ಕೆ ನವಚೈತನ್ಯವನ್ನು ನೀಡುವುದು. ಸಲಾಡ್ಸ್‌ಗಳಿಗೆ ಉಪ್ಪು, ಖಾರ, ಲಿಂಬೆರಸ ಸೇರಿಸದೆಯೂ ತಯಾರಿಸಬಹುದು. ಪ್ರತಿ‌ಯೊಂದು ಹಣ್ಣು, ತರಕಾರಿಗಳಿಗೂ ಅದರದೇ ಆದ ರುಚಿಯಿರುತ್ತದೆ. ಇದು ಮಿಶ್ರವಾದಾಗ ಹೊಸ ರುಚಿಯನ್ನು ನೀವು ಸವಿಯಬಹುದು. ಸಲಾಡ್ಸ್‌ಗಳನ್ನು ಎರಡು ಊಟಗಳ ನಡುವಿನ ಅವಧಿಯಲ್ಲಿ  ಹಸಿವಾದಾಗ ಸೇವಿಸಬಹುದು. ಮಧುಮೇಹಿಗಳಿಗೆ, ಹೃದಯದ ತೊಂದರೆಗಳಿರುವವರಿಗೆ, ಕೊಬ್ಬು , ಒಬೆಸಿಟಿಯಿಂದ ಬಳಲುವವರಿಗಂತೂ ಸಲಾಡ್ಸ್‌ಗಳು ವರದಾನವಾಗಿದೆ

ಸ್ವೀಟ್‌ಕಾರ್ನ್ ಸಿಹಿ ಸಲಾಡ್‌
ಬೇಕಾಗುವ ಸಾಮಗ್ರಿ
: ಸ್ವೀಟ್‌ಕಾರ್ನ್- ಆರು ಚಮಚ, ಮೊಳಕೆ ಹೆಸರುಕಾಳು- ಎಂಟು ಚಮಚ, ದಾಳಿಂಬೆ- ಎಂಟು ಚಮಚ, ಖರ್ಜೂರ- ಆರು ಚಮಚ, ತೆಂಗಿನತುರಿ-ಎರಡು ಚಮಚ, ಕೊತ್ತಂಬರಿಸೊಪ್ಪು ಮತ್ತು ಬ್ಲ್ಯಾಕ್‌ಸಾಲ್ಟ್  ರುಚಿಗೆ ಬೇಕಿದ್ದರೆ

ತಯಾರಿಸುವ ವಿಧಾನ: ಸ್ವೀಟ್‌ಕಾರ್ನ್ನ ಜೊತೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಮಾಡಿ ಖರ್ಜೂರ ಅಥವಾ ಚೆರಿಯಿಂದ ಅಲಂಕರಿಸಿ ಸರ್ವ್‌ ಮಾಡಬಹುದು.

ಚಕೋತಾ ಹಣ್ಣಿನ ಸಲಾಡ್‌
ಬೇಕಾಗುವ ಸಾಮಗ್ರಿ:
ಚಕೋತಾ ಹಣ್ಣಿನ ಎಸಳುಗಳು- ನಾಲ್ಕು ಚಮಚ, ಕ್ಯಾರೆಟ್‌ತುರಿ- ಆರು ಚಮಚ, ಸ್ವೀಟ್‌ಕಾರ್ನ್- ಆರು ಚಮಚ, ಮೊಳಕೆ ಹೆಸರುಕಾಳು- ನಾಲ್ಕು ಚಮಚ, ಸಿಪ್ಪೆ ತೆಗೆದು ಹೆಚ್ಚಿದ ಸೌತೆಕಾಯಿ- ಆರು ಚಮಚ, ತೆಂಗಿನತುರಿ- ನಾಲ್ಕು ಚಮಚ, ಕೊತ್ತಂಬರಿಸೊಪ್ಪು- ನಾಲ್ಕು ಚಮಚ, ಬ್ಲ್ಯಾಕ್‌ಸಾಲ್ಟ್  ರುಚಿಗೆ ಬೇಕಷ್ಟು, ಸಕ್ಕರೆ- ಎರಡು ಚಮಚ ಬೇಕಿದ್ದರೆ ಮಾತ್ರ, ಹೆಚ್ಚಿದ ಖರ್ಜೂರ- ನಾಲ್ಕು ಚಮಚ, ಉಪ್ಪು ರುಚಿಗೆ ಬೇಕಷ್ಟು.

ತಯಾರಿಸುವ ವಿಧಾನ: ಮಿಕ್ಸಿಂಗ್‌ ಬೌಲ್‌ಗೆ ಚಕೋತಾ ಎಸಳು ಹಾಗೂ ಸಕ್ಕರೆ ಹಾಕಿ ಚೆನ್ನಾಗಿ ಮಿಶ್ರಮಾಡಿ. ನಂತರ, ಇದಕ್ಕೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ, ಚೆನ್ನಾಗಿ ಮಿಶ್ರಮಾಡಿ ಮೇಲಿನಿಂದ ಖರ್ಜೂರ ಹರಡಿ ಸರ್ವ್‌ ಮಾಡಬಹುದು.

ಸೀಬೆಹಣ್ಣಿನ ಸಲಾಡ್‌ 
ಬೇಕಾಗುವ ಸಾಮಗ್ರಿ:
ಬೀಜ ತೆಗೆದು ಸಣ್ಣಗೆ ಹೆಚ್ಚಿದ ಸೀಬೆ- ಆರು ಚಮಚ, ಕ್ಯಾರೆಟ್‌ತುರಿ- ಐದು ಚಮಚ, ಸ್ವೀಟ್‌ಕಾರ್ನ್- ಆರು ಚಮಚ, ಸಿಪ್ಪೆ ತೆಗೆದು ಸಣ್ಣಗೆ ಹೆಚ್ಚಿದ ಸೌತೆಕಾಯಿ- ಆರು ಚಮಚ, ಹೆಚ್ಚಿದ ಟೊಮೆಟೋ- ಒಂದು, ಕೊತ್ತಂಬರಿಸೊಪ್ಪು ಸ್ವಲ್ಪ, ಕೆಂಪುಮೆಣಸಿನ ಹುಡಿ ಮತ್ತು ಬ್ಲ್ಯಾಕ್‌ಸಾಲ್ಟ್ನ ಮಿಶ್ರಣ- ರುಚಿಗೆ ಬೇಕಷ್ಟು, ತೆಂಗಿನತುರಿ- ಮೂರು ಚಮಚ.

ತಯಾರಿಸುವ ವಿಧಾನ: ಸಣ್ಣಗೆ ಹೆಚ್ಚಿದ ಸೀಬೆಯ ಜೊತೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಮಿಕ್ಸಿಂಗ್‌ ಬೌಲ್‌ನಲ್ಲಿ ಚೆನ್ನಾಗಿ ಮಿಶ್ರಮಾಡಿ. ನಂತರ, ಸರ್ವ್‌ ಮಾಡುವಾಗ ಕೊತ್ತಂಬರಿಸೊಪ್ಪಿನಿಂದ ಅಲಂಕರಿಸಬಹುದು. ಡಯಟ್‌ ಮಾಡುವವರು ಊಟಕ್ಕಿಂತ ಮೊದಲು ಇದನ್ನು ಸೇವಿಸಿ ಉತ್ತಮ ಪ್ರಯೋಜನ ಪಡೆಯಬಹುದು.

ಮೊಳಕೆಮೆಂತೆ ವಿದ್‌ ದಾಳಿಂಬೆ ಸಲಾಡ್‌
ಬೇಕಾಗುವ ಸಾಮಗ್ರಿ
: ಮೊಳಕೆಕಟ್ಟಿದ ಮೆಂತೆ- ಆರು ಚಮಚ, ದಾಳಿಂಬೆ- ಎಂಟು ಚಮಚ, ಹೆಚ್ಚಿದ ಸೇಬು- ಆರು ಚಮಚ, ಕ್ಯಾರೆಟ್‌ತುರಿ- ಆರು ಚಮಚ, ತೆಂಗಿನತುರಿ- ನಾಲ್ಕು ಚಮಚ, ಕೊತ್ತಂಬರಿಸೊಪ್ಪು- ಎರಡು ಚಮಚ, ಲಿಂಬೆರಸ- ಒಂದು ಚಮಚ, ಉಪ್ಪು ರುಚಿಗೆ, ಹಸಿಮೆಣಸು ಅಥವಾ ವೈಟ್‌ಪೆಪ್ಪರ್‌ ರುಚಿಗೆ ಬೇಕಷ್ಟು ಬೇಕಿದ್ದರೆ ಮಾತ್ರ

ತಯಾರಿಸುವ ವಿಧಾನ: ತೆಂಗಿನ ತುರಿಗೆ ಉಪ್ಪು-ಲಿಂಬೆರಸ ಸೇರಿಸಿ ಚೆನ್ನಾಗಿ ಮಿಶ್ರಮಾಡಿ. ನಂತರ ಇದಕ್ಕೆ ಮೇಲೆ ತಿಳಿಸಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ಮಿಶ್ರಮಾಡಿ ಮೇಲಿನಿಂದ ಕೊತ್ತಂಬರಿಸೊಪ್ಪು ಹರಡಿ.

– ಗೀತಸದಾ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.