ವಿಮಾನದಲ್ಲಿ ಹೆಡ್‌ಫೋನ್‌ ಢಂ!


Team Udayavani, Mar 16, 2017, 11:12 AM IST

HEADPHONES-EXPLODE.jpg

ಮೆಲ್ಬೋರ್ನ್: ಮಾತನಾಡುವ ವೇಳೆಯಲ್ಲೇ ಮೊಬೈಲ್‌ ಸಿಡಿದು ಮುಖ ಸುಟ್ಟುಕೊಂಡ ವರನ್ನು ಕಂಡಿದ್ದೇವೆ. ಆದರೆ ಹೆಡ್‌ಫೋನ್‌ ಸಿಡಿದು ಗಾಯ ಮಾಡಿಕೊಂಡಿರುವ ಘಟನೆ ಗಳ ಬಗ್ಗೆ ಎಂದಾದರೂ ಕೇಳಿದ್ದೀರಾ? ಅದೂ ವಿಮಾನ ಪ್ರಯಾಣದ ವೇಳೆ ನಡೆದಿದೆ.

ಇಂಥದ್ದೊಂದು ಪ್ರಕರಣ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಹೆಡ್‌ಫೋನ್‌ ಹಾಕಿಕೊಂಡು ಹಾಡುಗಳನ್ನು ಕೇಳಿಸಿಕೊಳ್ಳುತ್ತಿದ್ದ ಮಹಿಳೆಯ ಕಿವಿ, ಕೆನ್ನೆ ಸ್ಫೋಟದಿಂದಾಗಿ ಸುಟ್ಟು ತೀವ್ರವಾದ ಗಾಯಗಳಾಗಿವೆ. ಫೆ.19ರಂದು ಬೀಜಿಂಗ್‌ನಿಂದ ಮೆಲ್ಬೋರ್ನ್ಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ಸಂಭವಿಸಿದೆ ಎಂದು ಆಸ್ಟ್ರೇಲಿಯ ಸಾರಿಗೆ ಸುರಕ್ಷತಾ ಕೇಂದ್ರ (ಎಟಿಎಸ್‌ಬಿ) ಮಾಹಿತಿ ನೀಡಿದೆ.

ವಿಮಾನ ಪ್ರಯಾಣದ ವೇಳೆ ಸಾಮಾನ್ಯ ವಾಗಿ ಬ್ಯಾಟರಿ ಚಾಲಿತ ಎಲ್ಲಾ ಇಲೆಕ್ಟ್ರಾನಿಕ್‌ ವಸ್ತುಗಳನ್ನು ಚಾಲನೆಯಲ್ಲಿ ಇಡದಂತೆ ಸುರಕ್ಷತಾ ಕ್ರಮ ಅನುಸರಿಸಲು ಹೇಳುವಾಗ ಎಚ್ಚರಿಸಿರಲಾಗುತ್ತದೆ. ಆದರೂ ಈಕೆ ಬ್ಯಾಟರಿ ಚಾಲಿತ ಹೆಡ್‌ಫೋನ್‌ ಹಾಕಿಕೊಂಡು ಹಾಡು ಗಳನ್ನು ಕೇಳಿಸಿಕೊಳ್ಳುತ್ತಲೇ ನಿದ್ದೆಗೆ ಜಾರಿದ್ದರು. 

ಎರಡು ಗಂಟೆ ಪ್ರಯಾಣದ ಬಳಿಕ ಇದ್ದಕ್ಕಿದ್ದಂತೆ ಹೆಡ್‌ಫೋನ್‌ ಸಿಡಿದಿದೆ. ಪರಿಣಾಮ ಮಹಿಳೆಯ ಮುಖ ಸುಟ್ಟಿದೆ. ತಕ್ಷಣ ಮಹಿಳೆ ಹೆಡ್‌ಫೋನನ್ನು ಕೆಳಕ್ಕೆ ಬಿಸಾಡಿದ್ದಾರೆ. ಕೆಲಕ್ಷಣ ಪ್ರಯಾಣಿಕರೂ ಗಾಬರಿಯಿಂದ ಕಂಗಾಲಾದ ಸ್ಥಿತಿ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಹಿಳೆ, “ಕೆಲ ಕ್ಷಣ ಏನಾಯಿತೆಂದು ಗೊತ್ತಾಗಲಿಲ್ಲ. ಆದರೆ ಹೆಡ್‌ಫೋನ್‌ ಬಿಸಿಯಾಗಿ ಮುಖ ಮತ್ತು ಕತ್ತಿನ ಭಾಗದಲ್ಲಿ ಸುಟ್ಟಿರುವುದು ಅನುಭವಕ್ಕೆ ಬಂತು. ತಕ್ಷಣ ಹೆಡ್‌ಫೋನ್‌ ಕಿತ್ತೆಸೆದೆ. ಹೆಡ್‌ಫೋನ್‌ನಲ್ಲಿ ಸಣ್ಣ ಪ್ರಮಾಣದ ಬೆಂಕಿಯೂ ಕಾಣಿಸಿಕೊಳ್ಳುತ್ತಿತ್ತು. ತಕ್ಷಣ ಒಂದು ಬಕೆಟ್‌ನಷ್ಟು ನೀರು ತಂದು ಅದರ ಮೇಲೆ ಸುರಿಯಲಾಯಿತು’ ಎಂದು ಎಟಿಎಸ್‌ಬಿ ವಿಚಾರಣೆ ವೇಳೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.