ಟ್ರಂಪ್‌ ಶ್ವೇತ ಭವನದೊಳಗೆ ಸುರಕ್ಷಿತರಲ್ಲ: ಮಾಜಿ ಸೀಕ್ರೆಟ್‌ ಏಜಂಟ್‌


Team Udayavani, Mar 18, 2017, 4:49 PM IST

Trump-700.jpg

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಶ್ವೇತ ಭವನದೊಳಗೇ ಸುರಕ್ಷಿತರಾಗಿಲ್ಲ. ಶ್ವೇತ ಭವನದ ಮೇಲೆ ಒಂದೊಮ್ಮೆ ಭಯೋತ್ಪಾದಕ ದಾಳಿ ನಡೆದಲ್ಲಿ  ಸೀಕ್ರೆಟ್‌ ಸರ್ವಿಸ್‌ ದಳಕ್ಕೆ  ಕೂಡ ಟ್ರಂಪ್‌ ಅವರನ್ನು ರಕ್ಷಿಸಲು ಸಾಧ್ಯವಾಗದು ಎಂದು ಅಮೆರಿಕದ ಮಾಜಿ ಸೀಕ್ರೆಟ್‌ ಸರ್ವಿಸ್‌ ಏಜಂಟ್‌ ಡ್ಯಾನ್‌ ಬಾಂಗಿನೋ ಎಚ್ಚರಿಸಿದ್ದಾರೆ.

ಈಚೆಗೆ ವ್ಯಕ್ತಿಯೋರ್ವ ಅತ್ಯಂತ ಬಿಗಿ ಭದ್ರತೆಯ ಶ್ವೇತ ಭವನ ಆವರಣದ ಗೋಡೆ ಹಾರಿ ಒಳಬಂದು ಸುಮಾರು 15 ನಿಮಿಷಗಳ ಕಾಲ ಶ್ವೇತ ಭವನ ಆವರಣದ ತುಂಬೆಲ್ಲ ಓಡಾಡಿದ್ದು ಅದಾಗಿ ವಾರದ ಬಳಿಕ ಡ್ಯಾನ್‌ ಬಾಂಗಿನೋ  ಅವರು ಈ ಎಚ್ಚರಿಕೆಯನ್ನು ಕೊಟ್ಟಿರುವುದು ಗಮನಾರ್ಹವಾಗಿದೆ.

“ಆಗಂತುಕನು ಶ್ವೇತ ಭವನ ಆವರಣದ ಗೋಡೆ ಹಾರಿ ಒಳಪ್ರವೇಶಿಸಿ ಬಳಿಕ ಹಲವು ಹಂತಗಳ ಎಚ್ಚರಿಕೆಯ ಗಂಟೆ ಸದ್ದು ಮಾಡಿದೆ. ಈ ಆಗಂತುಕನನ್ನು  ಶ್ವೇತ ಭವನದ ಭದ್ರತಾ ಅಧಿಕಾರಿಗಳು ಕಂಡಿದ್ದಾರೆ. ಆದರೂ ಅವರು ಇದನ್ನು ಶ್ವೇತ ಭವನಕ್ಕೆ ಒದಗಿರುವ ಅಪಾಯದ ಮುನ್ನೆಚ್ಚರಿಕೆ ಎಂದು ತಿಳಿದಿಲ್ಲ; ಇದು ನಿಜಕ್ಕೂ ಒಂದು ದೊಡ್ಡ ಸಂಗತಿ’ ಎಂದು ಡ್ಯಾನ್‌ ಹೇಳಿರುವುದನ್ನು ಫಾಕ್ಸ್‌ ನ್ಯೂಸ ವರದಿ ಮಾಡಿದೆ.

ಬಾಂಗಿನೋ ಅವರು ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್‌ ಒಬಾಮಾ ಮತ್ತು ಜಾರ್ಜ್‌ ಡಬ್ಲ್ಯು ಬುಶ್‌ ಅವರಿಗೆ ಸೇವೆ ಸಲ್ಲಿಸಿದ್ದ ಸೀಕ್ರೆಟ್‌ ಸರ್ವಿಸ್‌ ಏಜಂಟ್‌ ಆಗಿದ್ದರು. 

“ಶ್ವೇತ ಭವನದ ಆವರಣ ಗೋಡೆ  ಹಾರಿ ಒಳ ಪ್ರವೇಶಿಸಿದ ಒಬ್ಬ ವ್ಯಕ್ತಿಯನ್ನು ಮಟ್ಟ ಹಾಕಲು ಸೀಕ್ರೆಟ್‌ ಸರ್ವಿಸ್‌ಗೆ ಸಾಧ್ಯವಾಗಿಲ್ಲ ಎಂದಾದರೆ 40 ಭಯೋತ್ಪಾದಕರು ಶ್ವೇತ ಭವನದ ಮೇಲೆ ದಾಳಿ ಮಾಡಿದರೆ ಅವರದನ್ನು ಹೇಗೆ ನಿಭಾಯಿಸಲು ಸಾಧ್ಯ ? ನನ್ನನ್ನು ನೀವು ನಂಬುವುದಾದರೆ, ನಾನು ಹೇಳುತ್ತೇನೆ, ಭಯೋತ್ಪಾದಕರು ಈಗಾಗಲೇ ಆ ರೀತಿಯಲ್ಲಿ  ಶ್ವೇತ ಭವನದ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದಾರೆ’ ಎಂದು ಬಾಂಗಿನೋ ಹೇಳಿದರು. 

26ರ ಹರೆಯದ ಕ್ಯಾಲಿಫೋರ್ನಿಯದ ಜೊನಾಥನ್‌ ಟಿ ಟ್ರಾನ್‌ ಎಂಬಾತ ಶ್ವೇತಭವನದ ಪೂರ್ವ ಭಾಗದಲ್ಲಿರುವ ಎಕ್ಸಿಕ್ಯುಟಿವ್‌ ಅವೆನ್ಯೂ ಮತ್ತು ಟ್ರೆಜರಿ ಡಿಪಾರ್ಟ್‌ಮೆಂಟ್‌ ಸಂಕೀರ್ಣದ ಬಳಿಯಿಂದ, ಗೋಡೆ ಹಾರಿ ಒಳಬಂದಿದ್ದ ರಾತ್ರಿ 11.21ರ ಹೊತ್ತಿಗೆ ಮತ್ತು ಆತ ಬಂಧಿಸಲ್ಪಟ್ಟ 11.38ರ ಹೊತ್ತಿಗೆ ಟ್ರಂಪ್‌ ಅವರು ಶ್ವೇತ ಭವನದ ತಮ್ಮ ನಿವಾಸದಲ್ಲಿದ್ದರು.

ಒಬಾಮಾ ಅವರು ಅಮೆರಿಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲೂ ಶ್ವೇತಭವನದ ಆವರಣದ ಗೋಡೆ ಹಾರಿ ಆಗಂತುಕರು ಒಳಬಂದ ಹಲವು ಪ್ರಕರಣಗಳು ನಡೆದಿದ್ದು ಆ ಮೂಲಕ ಶ್ವೇತ ಭವನದ ಭದ್ರತಾ ಲೋಪಗಳು ಬಹಿರಂಗವಾಗಿದ್ದವು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.