ಲಂಡನ್: ಬಾಲಕನ ಕೊಲೆಗೈದ ಭಾರತೀಯ ಮೂಲದ ವ್ಯಕ್ತಿ ಸೆರೆ
Team Udayavani, Mar 20, 2017, 4:03 PM IST
ಲಂಡನ್ : ಉತ್ತರ ಪ್ರದೇಶದ ಫಿನ್ಸ್ಬರಿ ಪಾರ್ಕ್ ಪ್ರದೇಶದಲ್ಲಿ ಒಂದು ವರ್ಷದ ಬಾಲಕನನ್ನು ಕೊಂದು ಆತನ ಅವಳಿ ಸಹೋದರಿಯ ಮೇಲೆ ಹಲ್ಲೆಗೈದ ಆರೋಪದ ಮೇಲೆ ಭಾರತೀಯ ಮೂಲದ, 33 ವರ್ಷ ಪ್ರಾಯದ ವಿದ್ಯಾಸಾಗರ ದಾಸ್ ಎಂಬಾತನನ್ನು ಸ್ಕಾಟ್ಲಂಡ್ ಯಾರ್ಡ್ ಪೊಲೀಸರು ಬಂಧಿಸಿದ್ದಾರೆ.
ಕೊಲೆ ಆರೋಪಿ ವಿದ್ಯಾ ಸಾಗರ ದಾಸ್ ಕೂಡ ಫಿನ್ಸ್ಬರಿ ಪಾರ್ಕ್ ಪ್ರದೇಶದ ನಿವಾಸಿಯಾಗಿದ್ದಾನೆ. ಹೊಟೇಲ್ ಒಂದರಲ್ಲಿ ರಾತ್ರಿ ಶಿಫ್ಟ್ನಲ್ಲಿ ದುಡಿಯುತ್ತಿದ್ದ ಈತ ಈಚೆಗೆ ತನ್ನ ಉದ್ಯೋಗವನ್ನು ತೊರೆದಿದ್ದ.
ಕೊಲೆ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ವಿದ್ಯಾಸಾಗರ್ ದಾಸ್ ಫಿನ್ಸ್ಬರಿಯಿಂದ ಆರು ಕಿ.ಮೀ.ದೂರದ ಹ್ಯಾಕ್ನೇ ಲಂಡನ್ ಬರೋದಲ್ಲಿ ಪತ್ತೆಯಾದ. ಸ್ಕಾಟ್ಲಂಡ್ ಯಾರ್ಡ್ ಪೊಲೀಸರು ಈ ಕೊಲೆ ಪ್ರಕರಣದ ರಹಸ್ಯವನ್ನು ಭೇದಿಸಿದ್ದಾರೆ. ಇದು ಕೌಟುಂಬಿಕ ಕಾರಣದಿಂದ ನಡೆದಿರುವ ಕೊಲೆ ಕೃತ್ಯವೆಂದು ಪೊಲೀಸರು ಹೇಳಿದ್ದಾರೆ.
ಬಾಲಕನ ತಲೆಗೆ ಸುತ್ತಿಗೆಯಿಂದ ಬಲವಾದ ಏಟು ಕೊಟ್ಟು ಸಾಯಿಸಿದ್ದ ಕೊಲೆ ಆರೋಪಿ ವಿದ್ಯಾಸಾಗರ್ ದಾಸ್ ಅನಂತರ ಆ ಬಾಲಕನ ಅವಳಿ ಸಹೋದರಿಯ ಮೇಲೂ ಮಾರಣಾಂತಿಕ ಹಲ್ಲೆ ಎಸಗಿದ್ದ. ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ