ಪಾಕ್ ದರ್ಗಾದಲ್ಲಿ ನರಮೇಧ: 20 ಜನರ ಇರಿದು ಬರ್ಬರ ಹತ್ಯೆ
Team Udayavani, Apr 2, 2017, 3:25 PM IST
ಇಸ್ಲಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಹಮದ್ ಅಲಿ ಗುಜ್ಜರ್ ಎಂಬ ದರ್ಗಾದಲ್ಲಿ 20 ಮಂದಿ ಭಕ್ತರನ್ನು ಮಾನಸಿಕ ಖಿನ್ನತೆಗೊಳಾಗಿದ್ದ ಮೇಲ್ವಿಚಾರಕ ಸಹಚರರೊಂದಿಗೆ ಸೇರಿ ಬರ್ಬರವಾಗಿ ಇರಿದು ಕೊಲೆಗೈದು ಮಾರಣ ಹೋಮ ನಡೆಸಿದ ಭೀಕರ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ದರ್ಗಾಕ್ಕೆ ಬಂದವರಿಗೆ ಅಮಲು ಪದಾರ್ಥ ನೀಡಿ ಪ್ರಜ್ಞೆ ತಪ್ಪಿಸಿ, ಆ ಬಳಿಕ ಬಡಿಗೆಗಳಿಂದ ಬಡಿದು, ಚೂರಿಯಿಂದ ಬರ್ಬರವಾಗಿ ಇರಿದು ಕೊಲೆಗೈಯಲಾಗಿದೆ.
ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿ ಸೇರಿದ್ದು, ಆ ಪೈಕಿ ಇಬ್ಬರು ಮಹಿಳೆಯರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದರ್ಗಾದಲ್ಲಿ ಮೇಲ್ವಿಚಾರಕರ 2 ಗಂಪುಗಳ ನಡುವೆ ಜಗಳ ನಡೆದು ಆ ಬಳಿಕ ಭಕ್ತರನ್ನು ಹತ್ಯೆಗೈಯಲಾಗಿದೆ ಎಂದು ಪ್ರತ್ಯಕ್ಷ ದರ್ಶಿಯಾಗಿರುವ ಗಾಯಾಳು ತಿಳಿಸಿದ್ದಾನೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವ ದರ್ಗಾ ಮೇಲ್ವಿಚಾರಕ ವಾಹೀದ್ ಎಂಬಾತ ಈ ಕೃತ್ಯ ನಡೆಸಿದ್ದಾನೆ ಎಂದು ಹೇಳಲಾಗಿದೆ.
ಈಗಾಗಲೇ ವಾಹಿದ್ ಸೇರಿ ಐವರು ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ