ಪನಾಮ ಪ್ರಕರಣ: ಷರೀಫ್ ವಿರುದ್ಧ ಪಾಕ್ ಸುಪ್ರೀಂ ಪಂಚಪೀಠ ಭಿನ್ನ ತೀರ್ಪು


Team Udayavani, Apr 20, 2017, 4:28 PM IST

nawaz-sharif-reuters_0.jpg

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹಾಗೂ ಕುಟುಂಬ ಭಾರೀ ಪ್ರಮಾಣದ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಮಾಹಿತಿ ಹೊರಹಾಕಿದ್ದ ಪನಾಮಾ ಪೇಪರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ ಗುರುವಾರ 3/2ರ ಬಹುಮತದಲ್ಲಿ ಷರೀಫ್ ವಿರುದ್ಧ ತನಿಖೆಗೆ ಜಂಟಿ ತನಿಖಾ ತಂಡವನ್ನು(ಜೆಐಟಿ) ರಚಿಸಿ ಆದೇಶ ನೀಡಿದೆ. 

ಪ್ರಧಾನಿ ಷರೀಫ್ ಹಾಗೂ ಭ್ರಷ್ಟಾಚಾರದ ಪ್ರಕರಣದ ಕುರಿತು ಜೆಐಟಿ(ಜಂಟಿ ತನಿಖಾ ತಂಡ) 2 ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ್ದು, ಷರೀಫ್ ಮಕ್ಕಳಾದ ಹಸನ್ ಹಾಗೂ ಹುಸೈನ್ ಕೂಡಾ ಜೆಐಟಿ ಎದುರು ಹಾಜರಾಗಬೇಕೆಂದು ಸೂಚನೆ ನೀಡಿದೆ.

ಷರೀಫ್ ಬಚಾವ್?
ಪನಾಮ ಪೇಪರ್ ಲೀಕ್ ಪ್ರಕರಣದಲ್ಲಿ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರನ್ನು ದೋಷಿಯನ್ನಾಗಿ ಮಾಡಿ, ಪ್ರಧಾನಿ ಹುದ್ದೆ ತೊರೆಯುವಂತೆ ಮಾಡಬೇಕೆಂಬ ಬಗ್ಗೆ ಸಮರ್ಪಕವಾದ ಸಾಕ್ಷ್ಯಾಧಾರ ಇಲ್ಲ ಎಂದು ಹೇಳುವ ಮೂಲಕ ಪಂಚಪೀಠ ನ್ಯಾಯಾಧೀಶರ ತೀರ್ಪು ಭಿನ್ನವಾಗಿ ಹೊರಬಿದ್ದಿದೆ.

ಜಸ್ಟೀಸ್ ಸಯೀದ್ ಖೋಸಾ, ಜಸ್ಟೀಸ್ ಗುಲ್ಜಾರ್ ಅಹ್ಮದ್, ಜಸ್ಟೀಸ್ ಎಜಾಜ್ ಅಫ್ಜಲ್ ಖಾನ್, ಜಸ್ಟೀಸ್ ಅಝಮತ್ ಸಯೀದ್ ಹಾಗೂ ಜಸ್ಟೀಸ್ ಇಜಾಝುಲ್ ಅಶಾನ್ ಅವರನ್ನೊಳಗೊಂಡ ಪಂಚ ನ್ಯಾಯಾಧೀಶರ ಪೀಠ ವಾದ, ಪ್ರತಿವಾದ ಪೂರ್ಣಗೊಂಡ ಬಳಿಕ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ನ್ಯಾಯಾಧೀಶರಲ್ಲಿ 3/2ರ ಬಹುಮತದ ಭಿನ್ನ  ತೀರ್ಪು( ಇದು 540 ಪುಟಗಳ ತೀರ್ಪು ನೀಡಿದ್ದರು. ಐವರಲ್ಲಿ ಜಸ್ಟೀಸ್ ಖೋಸಾ ಮತ್ತು ಜಸ್ಟೀಸ್ ಗುಲ್ಜಾರ್ ಅವರು ಷರೀಫ್ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಬೇಕೆಂದು ತೀರ್ಪು ನೀಡಿದ್ದರು. ಆದರೆ ಉಳಿದ ಮೂವರು ನ್ಯಾಯಾಧೀಶರು ಪ್ರಧಾನಿ ವಿರುದ್ಧ ತನಿಖೆಗೆ ಆದೇಶಿಸಿ ತೀರ್ಪು ನೀಡಿದ್ದಾರೆ.

ಷರೀಫ್ ಹಾಗೂ ಕುಟುಂಬ ಪನಾಮ ಪೇಪರ್ ಹೊರ ಹಾಕಿರುವ ಮಾಹಿತಿ ಆಧಾರದಂತೆ ಲಂಡನ್ ನಲ್ಲಿ ಕಾನೂನು ಬಾಹಿರವಾಗಿ ಆಸ್ತಿಯನ್ನು ಹೊಂದಿರುವುದಾಗಿ ಆರೋಪಿಸಿ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಸುಪ್ರೀಂಕೋರ್ಟ್ ನಲ್ಲಿ ದಾವೆ ಹೂಡಿದ್ದರು.

ಏನಿದು ಪನಾಮ ಪೇಪರ್ ಕೇಸ್?
“ಪನಾಮ ಪೇಪರ್’ ಎಂಬುದು ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದರಿಂದ ಬಿಡುಗಡೆಗೊಂಡ ದಾಖಲೆಗಳು. ಕೆಲವು ಮೂಲಗಳಿಂದ ತಮಗೆ ಈ ಅಮೂಲ್ಯ ದಾಖಲೆಗಳು ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್‌ ಫೋನ್ಸೆಕಾದಿಂದ ಗುಪ್ತವಾಗಿ ಲಭ್ಯವಾಗಿತ್ತು.

ದಾಖಲೆಗಳಲ್ಲಿ ಏನಿತ್ತು?
ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಬಿಲಿಯನೇರ್‌ಗಳು, ಸೆಲೆಬ್ರಿಟಿಗಳು ಇತ್ಯಾದಿ ರಹಸ್ಯವಾಗಿ ವಿವಿಧೆಡೆ ಹಣ ಸಂಗ್ರಹಿಸಿಟ್ಟಿರುವ ಬಗ್ಗೆ ಇದರಲ್ಲಿ ಮಾಹಿತಿ ಇದೆ. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

ತೆರಿಗೆ ಕಳ್ಳರ ಸ್ವರ್ಗ ಪನಾಮ
ಪನಾಮ ಉತ್ತರ ಮತ್ತು ದಕ್ಷಿಣ ಅಮೆರಿಕದ ನಡುವೆ ಇರುವ ಒಂದು ಪುಟ್ಟ ದೇಶ. ಅಂತಾರಾಷ್ಟ್ರೀಯ ವ್ಯವಹಾರ, ಹಡಗು ಮಾರ್ಗಕ್ಕೆ ಹೆಸರಾದ ದೇಶ. ಸ್ವಿಜರ್ಲೆಂಡ್‌ ರೀತಿ ಪನಾಮ ಕೂಡ ತೆರಿಗೆ ಕಳ್ಳರ ಸ್ವರ್ಗ. ವಿವಿಧ ದೇಶಗಳ ಕಂಪನಿಗಳು, ಉದ್ಯಮಿಗಳು, ಸೆಲೆಬ್ರೆಟಿಗಳು ಇಲ್ಲಿನ ಬ್ಯಾಂಕ್‌ಗಳಲ್ಲಿ ತೆರಿಗೆ ವಂಚಿಸಿ ಹಣ ಕೂಡಿಟ್ಟ ಉದಾಹರಣೆಗಳಿವೆ. ವಿಶೇಷವಾಗಿ ಅಮೆರಿಕದ ಕಂಪನಿಗಳು, ಉದ್ಯಮಿಗಳು ಪನಾಮದ ಬ್ಯಾಂಕ್‌ ಗಳಲ್ಲಿ ಹಣ ಕೂಡಿಟ್ಟಿದ್ದಾರೆ ಎನ್ನಲಾಗಿದೆ. ಇದರ ಮೊತ್ತ ಶತಕೋಟಿ ಮೌಲ್ಯಕ್ಕೂ ಮೀರಿದೆ. 3 ಲಕ್ಷಕ್ಕೂ ಮೀರಿ ನಕಲಿ ಕಂಪನಿಗಳನ್ನೂ ಇಲ್ಲಿ ಸೃಷ್ಟಿಸಿ ವ್ಯವಹಾರ ನಡೆಸಿದ್ದಾಗಿ ಹೇಳಲಾಗಿತ್ತು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.