ಬಹುಮತ ಪಡೆಯುಲು ತೆರೆಸಾ ಮೇ ವಿಫ‌ಲ; ಬ್ರಿಟನ್‌ ಸಂಸತ್ತು ತ್ರಿಶಂಕು


Team Udayavani, Jun 9, 2017, 11:50 AM IST

Teresa May-700.jpg

ಲಂಡನ್‌ : ಬ್ರಿಟಿಷ್‌ ಪ್ರಧಾನಿ ತೆರೆಸಾ ಮೇ ಅವರ ಕನ್‌ಸರ್ವೇಟಿವ್‌ ಪಕ್ಷ ಬ್ರಿಟನ್‌ ಸಂಸತ್ತಿಗೆ ನಡೆದ ದಿಢೀರ್‌  ಚುನಾವಣೆಯಲ್ಲಿ  ಬಹುಮತ ಪಡೆಯಲು ವಿಫ‌ಲವಾಗಿದೆ. ಪರಿಣಾಮವಾಗಿ ಬ್ರಿಟಿಷ್‌ ಸಂಸತ್ತು ತ್ರಿಶಂಕು ಸ್ಥಿತಿಯನ್ನು ತಲುಪಿದೆ ಎಂದು ಮಾಧ್ಯಮ ವರದಿಗಳು ಇಂದು ಶುಕ್ರವಾರತಿಳಿಸಿವೆ.

650 ಸದಸ್ಯ ಬಲದ ಬ್ರಿಟಿಷ್‌ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ 629 ಸ್ಥಾನಗಳ ಫ‌ಲಿತಾಂಶ ಬಹಿರಂಗವಾಗಿದೆ. ಆ ಪ್ರಕಾರ ಕನ್‌ಸರ್ವೇಟಿವ್‌ ಪಕ್ಷಕ್ಕೆ ಶೇ.42(+5 ಸ್ಥಾನ), ಲೇಬರ್‌ ಪಾರ್ಟಿಗೆ ಶೇ.40 (+10), ಲಿಬರಲ್‌ ಡೆಮೊಕ್ರಾಟ್ಸ್‌ಗೆ ಶೇ.7 (-1), ಸ್ಕಾಟಿಷ್‌ ನ್ಯಾಶನಲಿಸ್ಟ್‌ ಪಕ್ಷ (ಎಸ್‌ಎನ್‌ಪಿ)ಗೆ ಶೇ.3 (-2), ಯುಕೆ ಇಂಡಿಪೆಂಡೆಂಟ್‌ ಪಾರ್ಟಿಗೆ ಶೇ.2 (-11) ಮತ್ತು ಗ್ರೀನ್ಸ್‌ ಪಾರ್ಟಿಗೆ ಶೇ.2 (-2) ಪ್ರಾಪ್ತವಾಗಿವೆ ಎಂದು ಗಾರ್ಡಿಯನ್‌ ವರದಿ ಮಾಡಿದೆ. 

ತೆರೇಸಾ ಮೇ ಲೆಕ್ಕಾಚಾರ ಉಲ್ಟಾ

ಬಲವಾದ ಜನಾದೇಶವನ್ನು ಪಡೆಯಬೇಕೆಂಬ ಬ್ರಿಟನ್‌ ಪ್ರಧಾನಿ ತೆರೇಸಾ ಮೇ ಅವರ ಲೆಕ್ಕಾಚಾರ ಸಂಪೂರ್ಣವಾಗಿ ಉಲ್ಟಾ ಹೊಡೆದಿದೆ. ಪರಿಣಾಮವಾಗಿ ಆಕೆ ತನ್ನ ಹುದ್ದೆಯನ್ನು ತ್ಯಜಿಸಬೇಕೆಂಬ ಕರೆ ಈಗ ಬಲವಾಗಿ ಕೇಳಿ ಬರುತ್ತಿದೆ. 

ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿ ಇರುವಂತೆಯೇ ಬ್ರಿಟನ್‌ ಸಂಸತ್ತು ಈಗ  ಅತಂತ್ರ ಸ್ಥಿತಿಯನ್ನು ತಲುಪಿರುವ ಸೂಚನೆಗಳು ಸಿಗುತ್ತಿವೆ. ಪರಿಣಾಮವಾಗಿ ನಿರ್ಣಾಯಕ ಬ್ರೆಕ್ಸಿಟ್‌ ಮಾತುಕತೆ ಆರಂಭವು ವಿಳಂಬಗೊಳ್ಳುವುದು ಅನಿವಾರ್ಯವಾಗಿದೆ. 

ಗುರುವಾರದ ಮತ ಎಣಿಕೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ದೊರಕಿಲ್ಲ. ಪ್ರಬಲ ಜನಾದೇಶದ ನಿರೀಕ್ಷೆಯಲ್ಲಿದ್ದ ಬ್ರಿಟಿಷ್‌ ಪ್ರಧಾನಿ ತೆರೇಸಾ ಮೇ ತೀವ್ರ ನಿರಾಶೆಗೆ ಗುರಿಯಾಗಿರುವ ನಡುವೆಯೂ ತಾನು ದೇಶಕ್ಕೆ ಸ್ಥಿರತೆಯನ್ನು ಒದಗಿಸಲು ಶ್ರಮಿಸುವೆ ಎಂದಿದ್ದಾರೆ. ಲೇಬರ್‌ ಪಕ್ಷದ ಆಕೆಯ ಎದುರಾಳಿ ಜೆರೆಮಿ ಕಾರ್ಬಿನ್‌ ಅವರು “ತೆರೇಸಾ ಮೇ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕು’ ಎಂದು ಆಗ್ರಹಿಸಿದ್ದಾರೆ.

ಬಿಬಿಸಿಯ ಪರಿಷ್ಕೃತ ಅಂದಾಜಿನ ಪ್ರಕಾರ ಮೇ ಅವರ ಕನ್‌ಸರ್ವೇಟಿವ್‌ ಪಕ್ಷಕ್ಕೆ 650 ಸದಸ್ಯ ಬಲದ ಹೌಸ್‌ ಆಫ್ ಕಾಮನ್ಸ್‌ನಲ್ಲಿ 318 ಸ್ಥಾನಗಳು ಸಿಗಲಿದೆ. ಎಂದರೆ ಬಹುಮತ ಪ್ರಾಪ್ತಿಗೆ ಎಂಟು ಸ್ಥಾನಗಳ ಕೊರತೆ ಆಗುವುದು. ಎಡಪಂಥೀಯ ವಿರೋಧ ಪಕ್ಷವಾಗಿರುವ ಲೇಬರ್‌ ಪಾರ್ಟಿಗೆ 267 ಸ್ಥಾನಗಳು ದೊರಕಬಹುದು ಎನ್ನಲಾಗಿದೆ. ಪರಿಣಾಮವಾಗಿ ಬ್ರಿಟನ್‌ “ತ್ರಿಶಂಕು ಸಂಸತ್‌’ ಪಡೆಯುವುದು ಬಹುತೇಕ ನಿಶ್ಚಿತವಾದಂತಾಗಿದೆ. 

ಸ್ಕೈ ನ್ಯೂಸ್‌ “ತೆರೇಸಾ ಮೇ ತನ್ನ ಬಹುಮತ ಕಳೆದುಕೊಳ್ಳಲಿದ್ದಾರೆ’ ಎಂದು ಭವಿಷ್ಯ ನುಡಿದಿತ್ತು. ಆಕೆಯ ಪಕ್ಷಕ್ಕೆ 315ರಿಂದ 325ರ ತನಕದ ಸ್ಥಾನಗಳು ಪ್ರಾಪ್ತವಾದೀತು ಎಂದು ಅದು ಹೇಳಿತ್ತು. 

ಇದೇ ವೇಳೆ ಸ್ಕಾಟ್ಲಂಡ್‌ನ‌ಲ್ಲಿ ಸ್ವಾತಂತ್ರ್ಯ ಪರ ಸ್ಕಾಟಿಶ್‌ ನ್ಯಾಶನಲಿಸ್ಟ್‌ ಪಾರ್ಟಿ ಭಾರೀ ಹಿನ್ನಡೆಗೆ ಗುರಿಯಾಗಿದೆ. 2015ರಲ್ಲಿ ಇದು ಸ್ಕಾಟ್ಲಂಡ್‌ನ‌ 59ರಲ್ಲಿ 56 ಸ್ಥಾನಗಳನ್ನು ಪಡೆದಿತ್ತು. ಈ ಬಾರಿ ಅದರ ನಿರ್ವಹಣೆ ಅತ್ಯಂತ ಕಳಪೆಯಾಗಿದೆ. ತನ್ನ ಬಹುತೇಕ ಸ್ಥಾನಗಳನ್ನು ಅದು ಕನ್‌ಸರ್ವೇಟಿವ್‌, ಲೇಬರ್‌ ಮತ್ತು ಲಿಬರಲ್‌ ಡೆಮೊಕ್ರಾಟ್ಸ್‌ಗಳಿಗೆ ಬಿಟ್ಟುಕೊಟ್ಟಿದೆ. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.