ಬಹುಮತ ಪಡೆಯುಲು ತೆರೆಸಾ ಮೇ ವಿಫ‌ಲ; ಬ್ರಿಟನ್‌ ಸಂಸತ್ತು ತ್ರಿಶಂಕು


Team Udayavani, Jun 9, 2017, 11:50 AM IST

Teresa May-700.jpg

ಲಂಡನ್‌ : ಬ್ರಿಟಿಷ್‌ ಪ್ರಧಾನಿ ತೆರೆಸಾ ಮೇ ಅವರ ಕನ್‌ಸರ್ವೇಟಿವ್‌ ಪಕ್ಷ ಬ್ರಿಟನ್‌ ಸಂಸತ್ತಿಗೆ ನಡೆದ ದಿಢೀರ್‌  ಚುನಾವಣೆಯಲ್ಲಿ  ಬಹುಮತ ಪಡೆಯಲು ವಿಫ‌ಲವಾಗಿದೆ. ಪರಿಣಾಮವಾಗಿ ಬ್ರಿಟಿಷ್‌ ಸಂಸತ್ತು ತ್ರಿಶಂಕು ಸ್ಥಿತಿಯನ್ನು ತಲುಪಿದೆ ಎಂದು ಮಾಧ್ಯಮ ವರದಿಗಳು ಇಂದು ಶುಕ್ರವಾರತಿಳಿಸಿವೆ.

650 ಸದಸ್ಯ ಬಲದ ಬ್ರಿಟಿಷ್‌ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ 629 ಸ್ಥಾನಗಳ ಫ‌ಲಿತಾಂಶ ಬಹಿರಂಗವಾಗಿದೆ. ಆ ಪ್ರಕಾರ ಕನ್‌ಸರ್ವೇಟಿವ್‌ ಪಕ್ಷಕ್ಕೆ ಶೇ.42(+5 ಸ್ಥಾನ), ಲೇಬರ್‌ ಪಾರ್ಟಿಗೆ ಶೇ.40 (+10), ಲಿಬರಲ್‌ ಡೆಮೊಕ್ರಾಟ್ಸ್‌ಗೆ ಶೇ.7 (-1), ಸ್ಕಾಟಿಷ್‌ ನ್ಯಾಶನಲಿಸ್ಟ್‌ ಪಕ್ಷ (ಎಸ್‌ಎನ್‌ಪಿ)ಗೆ ಶೇ.3 (-2), ಯುಕೆ ಇಂಡಿಪೆಂಡೆಂಟ್‌ ಪಾರ್ಟಿಗೆ ಶೇ.2 (-11) ಮತ್ತು ಗ್ರೀನ್ಸ್‌ ಪಾರ್ಟಿಗೆ ಶೇ.2 (-2) ಪ್ರಾಪ್ತವಾಗಿವೆ ಎಂದು ಗಾರ್ಡಿಯನ್‌ ವರದಿ ಮಾಡಿದೆ. 

ತೆರೇಸಾ ಮೇ ಲೆಕ್ಕಾಚಾರ ಉಲ್ಟಾ

ಬಲವಾದ ಜನಾದೇಶವನ್ನು ಪಡೆಯಬೇಕೆಂಬ ಬ್ರಿಟನ್‌ ಪ್ರಧಾನಿ ತೆರೇಸಾ ಮೇ ಅವರ ಲೆಕ್ಕಾಚಾರ ಸಂಪೂರ್ಣವಾಗಿ ಉಲ್ಟಾ ಹೊಡೆದಿದೆ. ಪರಿಣಾಮವಾಗಿ ಆಕೆ ತನ್ನ ಹುದ್ದೆಯನ್ನು ತ್ಯಜಿಸಬೇಕೆಂಬ ಕರೆ ಈಗ ಬಲವಾಗಿ ಕೇಳಿ ಬರುತ್ತಿದೆ. 

ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿ ಇರುವಂತೆಯೇ ಬ್ರಿಟನ್‌ ಸಂಸತ್ತು ಈಗ  ಅತಂತ್ರ ಸ್ಥಿತಿಯನ್ನು ತಲುಪಿರುವ ಸೂಚನೆಗಳು ಸಿಗುತ್ತಿವೆ. ಪರಿಣಾಮವಾಗಿ ನಿರ್ಣಾಯಕ ಬ್ರೆಕ್ಸಿಟ್‌ ಮಾತುಕತೆ ಆರಂಭವು ವಿಳಂಬಗೊಳ್ಳುವುದು ಅನಿವಾರ್ಯವಾಗಿದೆ. 

ಗುರುವಾರದ ಮತ ಎಣಿಕೆಯಲ್ಲಿ ಯಾರಿಗೂ ಸ್ಪಷ್ಟ ಬಹುಮತ ದೊರಕಿಲ್ಲ. ಪ್ರಬಲ ಜನಾದೇಶದ ನಿರೀಕ್ಷೆಯಲ್ಲಿದ್ದ ಬ್ರಿಟಿಷ್‌ ಪ್ರಧಾನಿ ತೆರೇಸಾ ಮೇ ತೀವ್ರ ನಿರಾಶೆಗೆ ಗುರಿಯಾಗಿರುವ ನಡುವೆಯೂ ತಾನು ದೇಶಕ್ಕೆ ಸ್ಥಿರತೆಯನ್ನು ಒದಗಿಸಲು ಶ್ರಮಿಸುವೆ ಎಂದಿದ್ದಾರೆ. ಲೇಬರ್‌ ಪಕ್ಷದ ಆಕೆಯ ಎದುರಾಳಿ ಜೆರೆಮಿ ಕಾರ್ಬಿನ್‌ ಅವರು “ತೆರೇಸಾ ಮೇ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕು’ ಎಂದು ಆಗ್ರಹಿಸಿದ್ದಾರೆ.

ಬಿಬಿಸಿಯ ಪರಿಷ್ಕೃತ ಅಂದಾಜಿನ ಪ್ರಕಾರ ಮೇ ಅವರ ಕನ್‌ಸರ್ವೇಟಿವ್‌ ಪಕ್ಷಕ್ಕೆ 650 ಸದಸ್ಯ ಬಲದ ಹೌಸ್‌ ಆಫ್ ಕಾಮನ್ಸ್‌ನಲ್ಲಿ 318 ಸ್ಥಾನಗಳು ಸಿಗಲಿದೆ. ಎಂದರೆ ಬಹುಮತ ಪ್ರಾಪ್ತಿಗೆ ಎಂಟು ಸ್ಥಾನಗಳ ಕೊರತೆ ಆಗುವುದು. ಎಡಪಂಥೀಯ ವಿರೋಧ ಪಕ್ಷವಾಗಿರುವ ಲೇಬರ್‌ ಪಾರ್ಟಿಗೆ 267 ಸ್ಥಾನಗಳು ದೊರಕಬಹುದು ಎನ್ನಲಾಗಿದೆ. ಪರಿಣಾಮವಾಗಿ ಬ್ರಿಟನ್‌ “ತ್ರಿಶಂಕು ಸಂಸತ್‌’ ಪಡೆಯುವುದು ಬಹುತೇಕ ನಿಶ್ಚಿತವಾದಂತಾಗಿದೆ. 

ಸ್ಕೈ ನ್ಯೂಸ್‌ “ತೆರೇಸಾ ಮೇ ತನ್ನ ಬಹುಮತ ಕಳೆದುಕೊಳ್ಳಲಿದ್ದಾರೆ’ ಎಂದು ಭವಿಷ್ಯ ನುಡಿದಿತ್ತು. ಆಕೆಯ ಪಕ್ಷಕ್ಕೆ 315ರಿಂದ 325ರ ತನಕದ ಸ್ಥಾನಗಳು ಪ್ರಾಪ್ತವಾದೀತು ಎಂದು ಅದು ಹೇಳಿತ್ತು. 

ಇದೇ ವೇಳೆ ಸ್ಕಾಟ್ಲಂಡ್‌ನ‌ಲ್ಲಿ ಸ್ವಾತಂತ್ರ್ಯ ಪರ ಸ್ಕಾಟಿಶ್‌ ನ್ಯಾಶನಲಿಸ್ಟ್‌ ಪಾರ್ಟಿ ಭಾರೀ ಹಿನ್ನಡೆಗೆ ಗುರಿಯಾಗಿದೆ. 2015ರಲ್ಲಿ ಇದು ಸ್ಕಾಟ್ಲಂಡ್‌ನ‌ 59ರಲ್ಲಿ 56 ಸ್ಥಾನಗಳನ್ನು ಪಡೆದಿತ್ತು. ಈ ಬಾರಿ ಅದರ ನಿರ್ವಹಣೆ ಅತ್ಯಂತ ಕಳಪೆಯಾಗಿದೆ. ತನ್ನ ಬಹುತೇಕ ಸ್ಥಾನಗಳನ್ನು ಅದು ಕನ್‌ಸರ್ವೇಟಿವ್‌, ಲೇಬರ್‌ ಮತ್ತು ಲಿಬರಲ್‌ ಡೆಮೊಕ್ರಾಟ್ಸ್‌ಗಳಿಗೆ ಬಿಟ್ಟುಕೊಟ್ಟಿದೆ. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.